Homeಕರ್ನಾಟಕಮನುವಾದಿ ಮೀಸಲಾತಿ ಧಿಕ್ಕರಿಸಿ ಮಾನವತಾವಾದಿ ಮೀಸಲಾತಿ ಜಾರಿಗೆ ತಂದಿದ್ದೇವೆ: ಬರಗೂರು ರಾಮಚಂದ್ರಪ್ಪ

ಮನುವಾದಿ ಮೀಸಲಾತಿ ಧಿಕ್ಕರಿಸಿ ಮಾನವತಾವಾದಿ ಮೀಸಲಾತಿ ಜಾರಿಗೆ ತಂದಿದ್ದೇವೆ: ಬರಗೂರು ರಾಮಚಂದ್ರಪ್ಪ

- Advertisement -
- Advertisement -

ಶತಮಾನಗಳಿಂದ ನಮ್ಮ ಮೇಲೆ ಹೇರಲ್ಪಟ್ಟ ಮನುವಾದಿ ಮೀಸಲಾತಿಯನ್ನು ಧಿಕ್ಕರಿಸಿ ಮಾನವತಾವಾದಿ ಮೀಸಲಾತಿ ಜಾರಿಗೆ ತಂದಿದ್ದೇವೆ. ಸ್ವತಂತ್ರ ಭಾರತದಲ್ಲಿ ಮೀಸಲಾತಿಗೆ ಶಾಸನಬದ್ಧತೆಯನ್ನು ತಂದು ಕೊಟ್ಟವರು ಅಂಬೇಡ್ಕರ್‌ರವರು ಎಂದು ನಾಡೋಜ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.

ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಬಂಡಾಯ ಸಾಹಿತ್ಯ ಸಂಘಟನೆ ಆಯೋಜಿಸಿದ್ದ, ’ಮೀಸಲಾತಿ ನೂರು ವರ್ಷ’ ಕುರಿತ ರಾಜ್ಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಕೆಲವರು ಸಂವಿಧಾನ ಎಂದರೆ ಮೀಸಲಾತಿ, ಮೀಸಲಾತಿ ಎಂದರೆ ಸಂವಿಧಾನ ಎಂದು ತಪ್ಪಾಗಿ ಭಾವಿಸಿದ್ದಾರೆ. ಮೀಸಲಾತಿ ಸಂವಿಧಾನದ ಒಂದು ಅಂಶವೇ ಹೊರತು ಮೀಸಲಾತಿಯೇ ಸಂವಿಧಾನವಲ್ಲ. ಸಂವಿಧಾನ ಆಡಳಿತಕ್ಕೆ ಬೇಕಾದಂತ ಎಲ್ಲಾ ತಾಂತ್ರಿಕ ಮತ್ತು ತಾತ್ವಿಕ ಚೌಕಟ್ಟನ್ನು ಒದಗಿಸಿದೆ. ಸಂವಿಧಾನ ಶಾಸ್ತ್ರಕ್ಕೆ ಸಿಗದ ಸಂವೇದನೆ. ಇಲ್ಲಿ ಸಂವೇದನೆ ಎಂದರೆ ಸಾಮಾಜಿಕ ನ್ಯಾಯದ ಆಶಯ, ಸಮಾನತೆಯ ಆಶಯವಾಗಿದೆ ಎಂದರು.

ಮೀಸಲಾತಿಯಿಂದ ಪ.ಜಾತಿ/ಪ.ಪಂಗಡದವರಿಗೆ ಮಾತ್ರ ಉದ್ಯೋಗ ಸಿಕ್ಕಿದೆ ಎಂದು ಬಹಳಷ್ಟು ಜನರಿಗೆ ಅಸಮಾಧಾನವಿದೆ. ಮೀಸಲಾತಿಯಿಂದ ಅನೇಕ ಸುಧಾರಣೆಗಳು ನಡೆದಿವೆ ನಿಜ, ಆದರೆ ಮೀಸಲಾತಿಯ ಕುರಿತು ಅಸಹನೆ ವ್ಯಕ್ತಪಡಿಸುವಷ್ಟು ಉನ್ನತ ಉದ್ಯೋಗಗಳು ದಲಿತರಿಗೆ ಸಿಕ್ಕಿವೆ ಎನ್ನುವುದು ಸತ್ಯವಲ್ಲ. ಯೋಗೇಂದ್ರಯಾದವ್ ಅವರ ಸಮೀಕ್ಷೆಯ ವರದಿ ಮತ್ತು ಕೇಂದ್ರ ಸರ್ಕಾರದ ಅಂಕಿ ಅಂಶಗಳನ್ನು ನೋಡಿದರೆ ದೊಡ್ಡ ದೊಡ್ಡ ಸಂಸ್ಥೆಗಳಾದ ಐಐಎಂ, ಐಐಟಿಗಳಲ್ಲಿ ಎಷ್ಟು ಎಸ್ಸಿ ಎಸ್ಟಿಯ ಪ್ರಾಧ್ಯಾಪಕರು ತೀರಾ ಕಡಿಮೆ ಸಂಖ್ಯೆಯಲ್ಲಿದ್ದಾರೆ ಎಂದರು.

ಆದರೆ ಮೀಸಲಾತಿ ಮೆರಿಟ್‌ಗೆ ವಿರುದ್ಧ ಎನ್ನುವವರಿದ್ದಾರೆ. ದೇಶದ ಎಲ್ಲಾ ಉನ್ನತ ವಿವಿಗಳಲ್ಲಿ ಹಾಗು ಶಿಕ್ಷಣ ಸಂಸ್ಥೆಗಳಲ್ಲಿ ಸಾಮಾನ್ಯ ವರ್ಗದ ಪ್ರಾಧ್ಯಾಪಕರೆ ಇದ್ದಾರೆ. ಆದರೂ ಜಗತ್ತಿನ ಉತ್ತಮ ವಿವಿಗಳ ಪಟ್ಟಿಯಲ್ಲಿ ಭಾರತದ ಒಂದು ವಿವಿ ಇಲ್ಲ ಯಾಕೆ ಎಂದು ಪ್ರಶ್ನಿಸಿದ ಅವರು, ಮೆರಿಟ್ ಎಂಬ ಮಿಥ್ಯೆ ಇಟ್ಟುಕೊಂಡು ಮೀಸಲಾತಿ ವಿರೋಧ ಮಾಡುವ ಪ್ರವೃತ್ತಿ ಅಪ್ಪಟ ಹುಸಿತನದ್ದು ಎಂದರು.

ಇನ್ನು ಮೀಸಲಾತಿ ವಿಚಾರಕ್ಕೆ ಬಂದರೆ, ಜಾತಿವಾದ ಎಲ್ಲಿಯವರೆಗೆ ಇರುತ್ತೋ ಅಲ್ಲಿಯವರೆಗೆ ಮೀಸಲಾತಿ ಇರಬೇಕು. ಮೀಸಲಾತಿಯನ್ನು ಅಸಹನೀಯವಾಗಿ ಬಿಂಬಿಸುವ ವ್ಯಕ್ತಿಗಳು ನಮ್ಮ ಮಧ್ಯೆ ಇದ್ದಾರೆ. ಆದರೆ ಅವರಿಗೆ ತಿಳಿದಿರಲಿ, ಹತ್ತಾರು ಶತಮಾನಗಳಿಂದ ಮೀಸಲಾತಿ ಜಾರಿಯಲ್ಲಿದೆ. ಶಿಕ್ಷಣ, ದೇವಾಲಯ ಪ್ರವೇಶ, ಮನೆ, ಬಾವಿ ನೀರು, ಕೆರೆ, ಬೀದಿಗಳು ಕೆಲವರಿಗೆ ಮೀಸಲಾಗಿತ್ತು. ಅಷ್ಟೇ ಅಲ್ಲದೆ, ಸ್ಪರ್ಶ ಸಹ ಮೀಸಲಾಗಿತ್ತು. ಆದರೆ, ಇದನ್ನು ನಾವು ಧಿಕ್ಕರಿಸಿದ ಕಾರಣ, ಕೆಲವರು ಇಂದಿಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆಯಾದ ಮೀಸಲಾತಿಯನ್ನು ಟೀಕಿಸುತ್ತಾರೆ ಎಂದರು.

ಗೋಡ್ಸೆ ಕೊಲೆಗಾರ ಎನ್ನಲು ಹಿಂದೇಟು ಏಕೆ?:

ಕರ್ನಾಟಕ ಶಿಕ್ಷಣ ಇಲಾಖೆಯ ಕೈಪಿಡಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಒಬ್ಬರೇ, ಸಂವಿಧಾನ ಬರೆದಿಲ್ಲ ಎಂದಿರುವುದು ಅವರ ವಿಕೃತ ಮನಸ್ಥಿತಿಯನ್ನು ತಿಳಿಸುತ್ತದೆ. ಅಷ್ಟೇ ಅಲ್ಲದೆ, ಒರಿಸ್ಸಾದ ಪಠ್ಯವೊಂದರಲ್ಲಿ ಮಹಾತ್ಮ ಗಾಂಧಿ ಅವರು ಅವಘಡದಿಂದಾಗಿ ಮೃತಪಟ್ಟಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಗಾಂಧಿಯನ್ನು ಹತ್ಯೆಗೈದವನು ಗೋಡ್ಸೆ ಎಂದು ಹೇಳಲು ಹಿಂಜರಿಕೆ ಏಕೆ ಎಂದು ಪ್ರಶ್ನಿಸಿದರು. 2018ರ ಆಗಸ್ಟ್‌ನಲ್ಲಿ ದೆಹಲಿಯ ಜಂತರ್ ಮಂತರ್ ಅಲ್ಲಿ ಭಾರತೀಯ ಸಂವಿಧಾನವನು ಸುಟ್ಟು ಅಂಬೇಡ್ಕರ್ ವಿರುದ್ಧ ದಿಕ್ಕಾರ ಕೂಗುವ ಘಟನೆ ನಡೆಯುತ್ತದೆ. 2019 ಜನವರಿಯಲ್ಲಿ ಗಾಂಧೀಜಿಯವರ ಭಾವಚಿತ್ರದಲ್ಲಿ ಅವರ ಎದೆಗೆ ಅಣಕು ಗುಂಡನ್ನು ಹಾರಿಸಿ ವಿಕಾರ ಸಂಭ್ರಮ ಪಡುವ ಘಟನೆ ನಡೆಯುತ್ತದೆ. ಇವೆಲ್ಲವೂ ದೇಶದ ಸಂವಿಧಾನವನ್ನು ಮರೆಮಾಚುವ ಹುನ್ನಾರ ಎಂದರು.

ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಅವರ ನಡುವೆ ತಾರ್ಕಿಕ ಭಿನ್ನಾಭಿಪ್ರಾಯಗಳು ಮಾತ್ರ ಇದ್ದವು. ಅದನ್ನೇ ನೆಪವಾಗಿಟ್ಟುಕೊಂಡು ಅವರ ಅನುಯಾಯಿಗಳ ನಡುವೆ ಅಸಹನೆ ಹೆಚ್ಚಾಗಿದೆ ಎಂದ ಅವರು, ಗಾಂಧಿ ಮತ್ತು ಅಂಬೇಡ್ಕರ್ ನಮಗೆ ಮುಖ್ಯವಾಗಬೇಕು. ಇದೀಗ ಮೂಲಭೂತವಾದಿಗಳು ಗಾಂಧಿಯನ್ನು ತಳ್ಳುತ್ತಾ, ಅಂಬೇಡ್ಕರ್ ಅವರನ್ನು ವಶಪಡೆಸಿಕೊಳ್ಳುತ್ತಿರುವ ಪ್ರಕ್ರಿಯಲ್ಲಿ ನಿರತರಾಗಿರುವಾಗ ನಾವು ಎಚ್ಚೆತ್ತುಕೊಳ್ಳಬೇಕು ಎಂದರು.

ಸಮಾವೇಶದ ಅಧ್ಯಕ್ಷತೆಯನ್ನು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್, ಡಾ.ಕಿರಣ್ ಗಾಜನೂರು, ಡಾ.ರಾಜಪ್ಪ ದಳವಾಯಿ ಸಂಘಟನೆ ಸಂಚಾಲಕರಾದ ಡಾ.ರಾಜು ಗುಂಡಾಪುರ, ಬಿ.ರಾಜಶೇಖರ ಮೂರ್ತಿ ಸೇರಿದಂತೆ ಪ್ರಮುಖರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಇವತ್ತಿನ ಸ್ವಸ್ಥ ಸಮಸಮಾಜ ನಿರ್ಮಾಣ ದಲ್ಲಿ ಗೌರಿ ಮೇಡಮ್ ರವರ ಪತ್ರಿಕೆ ತುಂಬಾ ಆವಶ್ಯಕವಾದುದು.

  2. ಪಂಗಡ,ಪಂಗಡಗಳೊಳಗೆ ಹಣಕಾಸು ಮಾನದಂಡದಡಿಯಲ್ಲಿ ಶೇ.ನೂರು ಮೀಸಲಾತಿ ಒದಗಿಸುವುದೊಂದೇ ಮೀಸಲಾತಿ ಕಗ್ಗಂಟಿಗಿರುವ ಪರಿಹಾರ.
    ಶೆ.ಅಯ್ವತ್ತರ ಮಿತಿಯನ್ನು ತಕ್ಕ ತಿದ್ದುಪಡಿ ಮಾಡಿ ಸಡಿಲಮಾಡಬೇಕಾಗಿದೆ

  3. ಮೀಸಲಾತಿ ನೆರವಿನಿಂದ ಮೇಲೆ ಬಂದ ಪ.ಪ/ಪ.ಬುಡಕಟ್ಟು ಮಂದಿ ತನ್ನದೇ ಪಂಗಡದ ವಂಚಿತ ಮಂದಿಗೆ ತಕ್ಕ ಪಾಲು ಸಿಗುವಂತೆ ಹೆಜ್ಜೆ ಇಡಬೇಕು. ಇಲ್ಲವಾದರೆ, ಮೀಸಲಾತಿ ಒಪ್ಪದವರ ಎದುರು ದಾಳಿಗೆ ಪದೇಪದೇ ತುತ್ತಾಗಬೇಕಾಗುತ್ತೆ. ಇದು ಮತ್ತೆ ಕೆಲವರ ಎಲೆಕ್ಶನ್ ಇಶ್ಯೂ ಆಗಿ ಒಡಕಿಗೆ ಎಡಮಾಡಲಿದೆ.
    ಮೀಸಲಾತಿಯಿಂದ ಒಂದು ಬಗೆಯ ಹತೋಟಿ ಕೂಟ ಮೂಡಿರುವುದನ್ನೂ ಕೂಡ ಕಡೆಗಣಿಸಬಾರದು.

  4. ಈಗ ಹೆಚ್ಚುಮಂದಿಗೆ ಅನುಕೂಲವಾಗುತ್ತಿರುವ ಮೀಸಲಾತಿ ಏರ್ಪಾಡಿಗಿಂತ ಹತೋಟಿಕೂಟ ಬಡ್ತಿಯಲ್ಲಿ ತನಗೆ ಸಿಗಬೇಕಾದ ಹೆಚ್ಚಿನಪಾಲಿಗೆ ಹಾತೊರೆಯುತ್ತಿರುವ ಬೆಳವಣಿಗೆಯನ್ನು ಎಚ್ಚರಿಕೆಯಿಂದ ಬಗೆಹರಿಸಿಕೊಳ್ಳಬೇಕುಉ.
    ಒಳಮೀಸಲಾತಿಯನ್ನು ಪಡೆಯಲು ಮೂಡುತ್ತಿರುವ ದಿಟವಾಗಿಯೂ ತುಳಿತಕ್ಕೊಳಗಾದವರ ಹೋರಾಟವನ್ನು ಮೀಸಲಾತಿ ಒಪ್ಪುವವರು ಬೆಂಬಲಿಸಲು ಯಾವುದೇ ನೆಪ ಹೇಳಬಾರದು.

  5. ಸದಾಶಿವ ರಿಪೋರ್ಟ್, ಸೋಸಿಯೋ ಎಕಾನಮಿಕ್ ಸರ್ವೆ ರಿಪೋರ್ಟ್ ಅನ್ನು ಬಯಲುಗೊಳಿಸಲು ಒತ್ತಾಯಿಸಬೇಕು.

  6. ಈ ಬಗ್ಗೆ ಹೆಚ್ಚಿನ ಒರೆತಮಾಡಿ ತಕ್ಕ ತಿದ್ದುಪಡಿಗೆ ಎಡೆಮಾಡಿಕೊಡಬೇಕು.

  7. ಮೀಸಲಾತಿ ಬಗೆಗೆ ಗಣಿತದಂತೆ ಪಕ್ಕಾ ಪಾರ್ಮುಲ ತಂದರೆ, ಏಳಿಗೆಗೆ ಇರುವ ದಾರಿಯತ್ತ ದಾಪುಗಾಲಿಡಬಹುದು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...