Homeಕರ್ನಾಟಕಮನುವಾದಿ ಮೀಸಲಾತಿ ಧಿಕ್ಕರಿಸಿ ಮಾನವತಾವಾದಿ ಮೀಸಲಾತಿ ಜಾರಿಗೆ ತಂದಿದ್ದೇವೆ: ಬರಗೂರು ರಾಮಚಂದ್ರಪ್ಪ

ಮನುವಾದಿ ಮೀಸಲಾತಿ ಧಿಕ್ಕರಿಸಿ ಮಾನವತಾವಾದಿ ಮೀಸಲಾತಿ ಜಾರಿಗೆ ತಂದಿದ್ದೇವೆ: ಬರಗೂರು ರಾಮಚಂದ್ರಪ್ಪ

- Advertisement -
- Advertisement -

ಶತಮಾನಗಳಿಂದ ನಮ್ಮ ಮೇಲೆ ಹೇರಲ್ಪಟ್ಟ ಮನುವಾದಿ ಮೀಸಲಾತಿಯನ್ನು ಧಿಕ್ಕರಿಸಿ ಮಾನವತಾವಾದಿ ಮೀಸಲಾತಿ ಜಾರಿಗೆ ತಂದಿದ್ದೇವೆ. ಸ್ವತಂತ್ರ ಭಾರತದಲ್ಲಿ ಮೀಸಲಾತಿಗೆ ಶಾಸನಬದ್ಧತೆಯನ್ನು ತಂದು ಕೊಟ್ಟವರು ಅಂಬೇಡ್ಕರ್‌ರವರು ಎಂದು ನಾಡೋಜ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.

ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಬಂಡಾಯ ಸಾಹಿತ್ಯ ಸಂಘಟನೆ ಆಯೋಜಿಸಿದ್ದ, ’ಮೀಸಲಾತಿ ನೂರು ವರ್ಷ’ ಕುರಿತ ರಾಜ್ಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಕೆಲವರು ಸಂವಿಧಾನ ಎಂದರೆ ಮೀಸಲಾತಿ, ಮೀಸಲಾತಿ ಎಂದರೆ ಸಂವಿಧಾನ ಎಂದು ತಪ್ಪಾಗಿ ಭಾವಿಸಿದ್ದಾರೆ. ಮೀಸಲಾತಿ ಸಂವಿಧಾನದ ಒಂದು ಅಂಶವೇ ಹೊರತು ಮೀಸಲಾತಿಯೇ ಸಂವಿಧಾನವಲ್ಲ. ಸಂವಿಧಾನ ಆಡಳಿತಕ್ಕೆ ಬೇಕಾದಂತ ಎಲ್ಲಾ ತಾಂತ್ರಿಕ ಮತ್ತು ತಾತ್ವಿಕ ಚೌಕಟ್ಟನ್ನು ಒದಗಿಸಿದೆ. ಸಂವಿಧಾನ ಶಾಸ್ತ್ರಕ್ಕೆ ಸಿಗದ ಸಂವೇದನೆ. ಇಲ್ಲಿ ಸಂವೇದನೆ ಎಂದರೆ ಸಾಮಾಜಿಕ ನ್ಯಾಯದ ಆಶಯ, ಸಮಾನತೆಯ ಆಶಯವಾಗಿದೆ ಎಂದರು.

ಮೀಸಲಾತಿಯಿಂದ ಪ.ಜಾತಿ/ಪ.ಪಂಗಡದವರಿಗೆ ಮಾತ್ರ ಉದ್ಯೋಗ ಸಿಕ್ಕಿದೆ ಎಂದು ಬಹಳಷ್ಟು ಜನರಿಗೆ ಅಸಮಾಧಾನವಿದೆ. ಮೀಸಲಾತಿಯಿಂದ ಅನೇಕ ಸುಧಾರಣೆಗಳು ನಡೆದಿವೆ ನಿಜ, ಆದರೆ ಮೀಸಲಾತಿಯ ಕುರಿತು ಅಸಹನೆ ವ್ಯಕ್ತಪಡಿಸುವಷ್ಟು ಉನ್ನತ ಉದ್ಯೋಗಗಳು ದಲಿತರಿಗೆ ಸಿಕ್ಕಿವೆ ಎನ್ನುವುದು ಸತ್ಯವಲ್ಲ. ಯೋಗೇಂದ್ರಯಾದವ್ ಅವರ ಸಮೀಕ್ಷೆಯ ವರದಿ ಮತ್ತು ಕೇಂದ್ರ ಸರ್ಕಾರದ ಅಂಕಿ ಅಂಶಗಳನ್ನು ನೋಡಿದರೆ ದೊಡ್ಡ ದೊಡ್ಡ ಸಂಸ್ಥೆಗಳಾದ ಐಐಎಂ, ಐಐಟಿಗಳಲ್ಲಿ ಎಷ್ಟು ಎಸ್ಸಿ ಎಸ್ಟಿಯ ಪ್ರಾಧ್ಯಾಪಕರು ತೀರಾ ಕಡಿಮೆ ಸಂಖ್ಯೆಯಲ್ಲಿದ್ದಾರೆ ಎಂದರು.

ಆದರೆ ಮೀಸಲಾತಿ ಮೆರಿಟ್‌ಗೆ ವಿರುದ್ಧ ಎನ್ನುವವರಿದ್ದಾರೆ. ದೇಶದ ಎಲ್ಲಾ ಉನ್ನತ ವಿವಿಗಳಲ್ಲಿ ಹಾಗು ಶಿಕ್ಷಣ ಸಂಸ್ಥೆಗಳಲ್ಲಿ ಸಾಮಾನ್ಯ ವರ್ಗದ ಪ್ರಾಧ್ಯಾಪಕರೆ ಇದ್ದಾರೆ. ಆದರೂ ಜಗತ್ತಿನ ಉತ್ತಮ ವಿವಿಗಳ ಪಟ್ಟಿಯಲ್ಲಿ ಭಾರತದ ಒಂದು ವಿವಿ ಇಲ್ಲ ಯಾಕೆ ಎಂದು ಪ್ರಶ್ನಿಸಿದ ಅವರು, ಮೆರಿಟ್ ಎಂಬ ಮಿಥ್ಯೆ ಇಟ್ಟುಕೊಂಡು ಮೀಸಲಾತಿ ವಿರೋಧ ಮಾಡುವ ಪ್ರವೃತ್ತಿ ಅಪ್ಪಟ ಹುಸಿತನದ್ದು ಎಂದರು.

ಇನ್ನು ಮೀಸಲಾತಿ ವಿಚಾರಕ್ಕೆ ಬಂದರೆ, ಜಾತಿವಾದ ಎಲ್ಲಿಯವರೆಗೆ ಇರುತ್ತೋ ಅಲ್ಲಿಯವರೆಗೆ ಮೀಸಲಾತಿ ಇರಬೇಕು. ಮೀಸಲಾತಿಯನ್ನು ಅಸಹನೀಯವಾಗಿ ಬಿಂಬಿಸುವ ವ್ಯಕ್ತಿಗಳು ನಮ್ಮ ಮಧ್ಯೆ ಇದ್ದಾರೆ. ಆದರೆ ಅವರಿಗೆ ತಿಳಿದಿರಲಿ, ಹತ್ತಾರು ಶತಮಾನಗಳಿಂದ ಮೀಸಲಾತಿ ಜಾರಿಯಲ್ಲಿದೆ. ಶಿಕ್ಷಣ, ದೇವಾಲಯ ಪ್ರವೇಶ, ಮನೆ, ಬಾವಿ ನೀರು, ಕೆರೆ, ಬೀದಿಗಳು ಕೆಲವರಿಗೆ ಮೀಸಲಾಗಿತ್ತು. ಅಷ್ಟೇ ಅಲ್ಲದೆ, ಸ್ಪರ್ಶ ಸಹ ಮೀಸಲಾಗಿತ್ತು. ಆದರೆ, ಇದನ್ನು ನಾವು ಧಿಕ್ಕರಿಸಿದ ಕಾರಣ, ಕೆಲವರು ಇಂದಿಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆಯಾದ ಮೀಸಲಾತಿಯನ್ನು ಟೀಕಿಸುತ್ತಾರೆ ಎಂದರು.

ಗೋಡ್ಸೆ ಕೊಲೆಗಾರ ಎನ್ನಲು ಹಿಂದೇಟು ಏಕೆ?:

ಕರ್ನಾಟಕ ಶಿಕ್ಷಣ ಇಲಾಖೆಯ ಕೈಪಿಡಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಒಬ್ಬರೇ, ಸಂವಿಧಾನ ಬರೆದಿಲ್ಲ ಎಂದಿರುವುದು ಅವರ ವಿಕೃತ ಮನಸ್ಥಿತಿಯನ್ನು ತಿಳಿಸುತ್ತದೆ. ಅಷ್ಟೇ ಅಲ್ಲದೆ, ಒರಿಸ್ಸಾದ ಪಠ್ಯವೊಂದರಲ್ಲಿ ಮಹಾತ್ಮ ಗಾಂಧಿ ಅವರು ಅವಘಡದಿಂದಾಗಿ ಮೃತಪಟ್ಟಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಗಾಂಧಿಯನ್ನು ಹತ್ಯೆಗೈದವನು ಗೋಡ್ಸೆ ಎಂದು ಹೇಳಲು ಹಿಂಜರಿಕೆ ಏಕೆ ಎಂದು ಪ್ರಶ್ನಿಸಿದರು. 2018ರ ಆಗಸ್ಟ್‌ನಲ್ಲಿ ದೆಹಲಿಯ ಜಂತರ್ ಮಂತರ್ ಅಲ್ಲಿ ಭಾರತೀಯ ಸಂವಿಧಾನವನು ಸುಟ್ಟು ಅಂಬೇಡ್ಕರ್ ವಿರುದ್ಧ ದಿಕ್ಕಾರ ಕೂಗುವ ಘಟನೆ ನಡೆಯುತ್ತದೆ. 2019 ಜನವರಿಯಲ್ಲಿ ಗಾಂಧೀಜಿಯವರ ಭಾವಚಿತ್ರದಲ್ಲಿ ಅವರ ಎದೆಗೆ ಅಣಕು ಗುಂಡನ್ನು ಹಾರಿಸಿ ವಿಕಾರ ಸಂಭ್ರಮ ಪಡುವ ಘಟನೆ ನಡೆಯುತ್ತದೆ. ಇವೆಲ್ಲವೂ ದೇಶದ ಸಂವಿಧಾನವನ್ನು ಮರೆಮಾಚುವ ಹುನ್ನಾರ ಎಂದರು.

ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಅವರ ನಡುವೆ ತಾರ್ಕಿಕ ಭಿನ್ನಾಭಿಪ್ರಾಯಗಳು ಮಾತ್ರ ಇದ್ದವು. ಅದನ್ನೇ ನೆಪವಾಗಿಟ್ಟುಕೊಂಡು ಅವರ ಅನುಯಾಯಿಗಳ ನಡುವೆ ಅಸಹನೆ ಹೆಚ್ಚಾಗಿದೆ ಎಂದ ಅವರು, ಗಾಂಧಿ ಮತ್ತು ಅಂಬೇಡ್ಕರ್ ನಮಗೆ ಮುಖ್ಯವಾಗಬೇಕು. ಇದೀಗ ಮೂಲಭೂತವಾದಿಗಳು ಗಾಂಧಿಯನ್ನು ತಳ್ಳುತ್ತಾ, ಅಂಬೇಡ್ಕರ್ ಅವರನ್ನು ವಶಪಡೆಸಿಕೊಳ್ಳುತ್ತಿರುವ ಪ್ರಕ್ರಿಯಲ್ಲಿ ನಿರತರಾಗಿರುವಾಗ ನಾವು ಎಚ್ಚೆತ್ತುಕೊಳ್ಳಬೇಕು ಎಂದರು.

ಸಮಾವೇಶದ ಅಧ್ಯಕ್ಷತೆಯನ್ನು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್, ಡಾ.ಕಿರಣ್ ಗಾಜನೂರು, ಡಾ.ರಾಜಪ್ಪ ದಳವಾಯಿ ಸಂಘಟನೆ ಸಂಚಾಲಕರಾದ ಡಾ.ರಾಜು ಗುಂಡಾಪುರ, ಬಿ.ರಾಜಶೇಖರ ಮೂರ್ತಿ ಸೇರಿದಂತೆ ಪ್ರಮುಖರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಇವತ್ತಿನ ಸ್ವಸ್ಥ ಸಮಸಮಾಜ ನಿರ್ಮಾಣ ದಲ್ಲಿ ಗೌರಿ ಮೇಡಮ್ ರವರ ಪತ್ರಿಕೆ ತುಂಬಾ ಆವಶ್ಯಕವಾದುದು.

  2. ಪಂಗಡ,ಪಂಗಡಗಳೊಳಗೆ ಹಣಕಾಸು ಮಾನದಂಡದಡಿಯಲ್ಲಿ ಶೇ.ನೂರು ಮೀಸಲಾತಿ ಒದಗಿಸುವುದೊಂದೇ ಮೀಸಲಾತಿ ಕಗ್ಗಂಟಿಗಿರುವ ಪರಿಹಾರ.
    ಶೆ.ಅಯ್ವತ್ತರ ಮಿತಿಯನ್ನು ತಕ್ಕ ತಿದ್ದುಪಡಿ ಮಾಡಿ ಸಡಿಲಮಾಡಬೇಕಾಗಿದೆ

  3. ಮೀಸಲಾತಿ ನೆರವಿನಿಂದ ಮೇಲೆ ಬಂದ ಪ.ಪ/ಪ.ಬುಡಕಟ್ಟು ಮಂದಿ ತನ್ನದೇ ಪಂಗಡದ ವಂಚಿತ ಮಂದಿಗೆ ತಕ್ಕ ಪಾಲು ಸಿಗುವಂತೆ ಹೆಜ್ಜೆ ಇಡಬೇಕು. ಇಲ್ಲವಾದರೆ, ಮೀಸಲಾತಿ ಒಪ್ಪದವರ ಎದುರು ದಾಳಿಗೆ ಪದೇಪದೇ ತುತ್ತಾಗಬೇಕಾಗುತ್ತೆ. ಇದು ಮತ್ತೆ ಕೆಲವರ ಎಲೆಕ್ಶನ್ ಇಶ್ಯೂ ಆಗಿ ಒಡಕಿಗೆ ಎಡಮಾಡಲಿದೆ.
    ಮೀಸಲಾತಿಯಿಂದ ಒಂದು ಬಗೆಯ ಹತೋಟಿ ಕೂಟ ಮೂಡಿರುವುದನ್ನೂ ಕೂಡ ಕಡೆಗಣಿಸಬಾರದು.

  4. ಈಗ ಹೆಚ್ಚುಮಂದಿಗೆ ಅನುಕೂಲವಾಗುತ್ತಿರುವ ಮೀಸಲಾತಿ ಏರ್ಪಾಡಿಗಿಂತ ಹತೋಟಿಕೂಟ ಬಡ್ತಿಯಲ್ಲಿ ತನಗೆ ಸಿಗಬೇಕಾದ ಹೆಚ್ಚಿನಪಾಲಿಗೆ ಹಾತೊರೆಯುತ್ತಿರುವ ಬೆಳವಣಿಗೆಯನ್ನು ಎಚ್ಚರಿಕೆಯಿಂದ ಬಗೆಹರಿಸಿಕೊಳ್ಳಬೇಕುಉ.
    ಒಳಮೀಸಲಾತಿಯನ್ನು ಪಡೆಯಲು ಮೂಡುತ್ತಿರುವ ದಿಟವಾಗಿಯೂ ತುಳಿತಕ್ಕೊಳಗಾದವರ ಹೋರಾಟವನ್ನು ಮೀಸಲಾತಿ ಒಪ್ಪುವವರು ಬೆಂಬಲಿಸಲು ಯಾವುದೇ ನೆಪ ಹೇಳಬಾರದು.

  5. ಸದಾಶಿವ ರಿಪೋರ್ಟ್, ಸೋಸಿಯೋ ಎಕಾನಮಿಕ್ ಸರ್ವೆ ರಿಪೋರ್ಟ್ ಅನ್ನು ಬಯಲುಗೊಳಿಸಲು ಒತ್ತಾಯಿಸಬೇಕು.

  6. ಈ ಬಗ್ಗೆ ಹೆಚ್ಚಿನ ಒರೆತಮಾಡಿ ತಕ್ಕ ತಿದ್ದುಪಡಿಗೆ ಎಡೆಮಾಡಿಕೊಡಬೇಕು.

  7. ಮೀಸಲಾತಿ ಬಗೆಗೆ ಗಣಿತದಂತೆ ಪಕ್ಕಾ ಪಾರ್ಮುಲ ತಂದರೆ, ಏಳಿಗೆಗೆ ಇರುವ ದಾರಿಯತ್ತ ದಾಪುಗಾಲಿಡಬಹುದು.

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...