Homeಕರ್ನಾಟಕಮನುವಾದಿ ಮೀಸಲಾತಿ ಧಿಕ್ಕರಿಸಿ ಮಾನವತಾವಾದಿ ಮೀಸಲಾತಿ ಜಾರಿಗೆ ತಂದಿದ್ದೇವೆ: ಬರಗೂರು ರಾಮಚಂದ್ರಪ್ಪ

ಮನುವಾದಿ ಮೀಸಲಾತಿ ಧಿಕ್ಕರಿಸಿ ಮಾನವತಾವಾದಿ ಮೀಸಲಾತಿ ಜಾರಿಗೆ ತಂದಿದ್ದೇವೆ: ಬರಗೂರು ರಾಮಚಂದ್ರಪ್ಪ

- Advertisement -
- Advertisement -

ಶತಮಾನಗಳಿಂದ ನಮ್ಮ ಮೇಲೆ ಹೇರಲ್ಪಟ್ಟ ಮನುವಾದಿ ಮೀಸಲಾತಿಯನ್ನು ಧಿಕ್ಕರಿಸಿ ಮಾನವತಾವಾದಿ ಮೀಸಲಾತಿ ಜಾರಿಗೆ ತಂದಿದ್ದೇವೆ. ಸ್ವತಂತ್ರ ಭಾರತದಲ್ಲಿ ಮೀಸಲಾತಿಗೆ ಶಾಸನಬದ್ಧತೆಯನ್ನು ತಂದು ಕೊಟ್ಟವರು ಅಂಬೇಡ್ಕರ್‌ರವರು ಎಂದು ನಾಡೋಜ ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.

ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಬಂಡಾಯ ಸಾಹಿತ್ಯ ಸಂಘಟನೆ ಆಯೋಜಿಸಿದ್ದ, ’ಮೀಸಲಾತಿ ನೂರು ವರ್ಷ’ ಕುರಿತ ರಾಜ್ಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಕೆಲವರು ಸಂವಿಧಾನ ಎಂದರೆ ಮೀಸಲಾತಿ, ಮೀಸಲಾತಿ ಎಂದರೆ ಸಂವಿಧಾನ ಎಂದು ತಪ್ಪಾಗಿ ಭಾವಿಸಿದ್ದಾರೆ. ಮೀಸಲಾತಿ ಸಂವಿಧಾನದ ಒಂದು ಅಂಶವೇ ಹೊರತು ಮೀಸಲಾತಿಯೇ ಸಂವಿಧಾನವಲ್ಲ. ಸಂವಿಧಾನ ಆಡಳಿತಕ್ಕೆ ಬೇಕಾದಂತ ಎಲ್ಲಾ ತಾಂತ್ರಿಕ ಮತ್ತು ತಾತ್ವಿಕ ಚೌಕಟ್ಟನ್ನು ಒದಗಿಸಿದೆ. ಸಂವಿಧಾನ ಶಾಸ್ತ್ರಕ್ಕೆ ಸಿಗದ ಸಂವೇದನೆ. ಇಲ್ಲಿ ಸಂವೇದನೆ ಎಂದರೆ ಸಾಮಾಜಿಕ ನ್ಯಾಯದ ಆಶಯ, ಸಮಾನತೆಯ ಆಶಯವಾಗಿದೆ ಎಂದರು.

ಮೀಸಲಾತಿಯಿಂದ ಪ.ಜಾತಿ/ಪ.ಪಂಗಡದವರಿಗೆ ಮಾತ್ರ ಉದ್ಯೋಗ ಸಿಕ್ಕಿದೆ ಎಂದು ಬಹಳಷ್ಟು ಜನರಿಗೆ ಅಸಮಾಧಾನವಿದೆ. ಮೀಸಲಾತಿಯಿಂದ ಅನೇಕ ಸುಧಾರಣೆಗಳು ನಡೆದಿವೆ ನಿಜ, ಆದರೆ ಮೀಸಲಾತಿಯ ಕುರಿತು ಅಸಹನೆ ವ್ಯಕ್ತಪಡಿಸುವಷ್ಟು ಉನ್ನತ ಉದ್ಯೋಗಗಳು ದಲಿತರಿಗೆ ಸಿಕ್ಕಿವೆ ಎನ್ನುವುದು ಸತ್ಯವಲ್ಲ. ಯೋಗೇಂದ್ರಯಾದವ್ ಅವರ ಸಮೀಕ್ಷೆಯ ವರದಿ ಮತ್ತು ಕೇಂದ್ರ ಸರ್ಕಾರದ ಅಂಕಿ ಅಂಶಗಳನ್ನು ನೋಡಿದರೆ ದೊಡ್ಡ ದೊಡ್ಡ ಸಂಸ್ಥೆಗಳಾದ ಐಐಎಂ, ಐಐಟಿಗಳಲ್ಲಿ ಎಷ್ಟು ಎಸ್ಸಿ ಎಸ್ಟಿಯ ಪ್ರಾಧ್ಯಾಪಕರು ತೀರಾ ಕಡಿಮೆ ಸಂಖ್ಯೆಯಲ್ಲಿದ್ದಾರೆ ಎಂದರು.

ಆದರೆ ಮೀಸಲಾತಿ ಮೆರಿಟ್‌ಗೆ ವಿರುದ್ಧ ಎನ್ನುವವರಿದ್ದಾರೆ. ದೇಶದ ಎಲ್ಲಾ ಉನ್ನತ ವಿವಿಗಳಲ್ಲಿ ಹಾಗು ಶಿಕ್ಷಣ ಸಂಸ್ಥೆಗಳಲ್ಲಿ ಸಾಮಾನ್ಯ ವರ್ಗದ ಪ್ರಾಧ್ಯಾಪಕರೆ ಇದ್ದಾರೆ. ಆದರೂ ಜಗತ್ತಿನ ಉತ್ತಮ ವಿವಿಗಳ ಪಟ್ಟಿಯಲ್ಲಿ ಭಾರತದ ಒಂದು ವಿವಿ ಇಲ್ಲ ಯಾಕೆ ಎಂದು ಪ್ರಶ್ನಿಸಿದ ಅವರು, ಮೆರಿಟ್ ಎಂಬ ಮಿಥ್ಯೆ ಇಟ್ಟುಕೊಂಡು ಮೀಸಲಾತಿ ವಿರೋಧ ಮಾಡುವ ಪ್ರವೃತ್ತಿ ಅಪ್ಪಟ ಹುಸಿತನದ್ದು ಎಂದರು.

ಇನ್ನು ಮೀಸಲಾತಿ ವಿಚಾರಕ್ಕೆ ಬಂದರೆ, ಜಾತಿವಾದ ಎಲ್ಲಿಯವರೆಗೆ ಇರುತ್ತೋ ಅಲ್ಲಿಯವರೆಗೆ ಮೀಸಲಾತಿ ಇರಬೇಕು. ಮೀಸಲಾತಿಯನ್ನು ಅಸಹನೀಯವಾಗಿ ಬಿಂಬಿಸುವ ವ್ಯಕ್ತಿಗಳು ನಮ್ಮ ಮಧ್ಯೆ ಇದ್ದಾರೆ. ಆದರೆ ಅವರಿಗೆ ತಿಳಿದಿರಲಿ, ಹತ್ತಾರು ಶತಮಾನಗಳಿಂದ ಮೀಸಲಾತಿ ಜಾರಿಯಲ್ಲಿದೆ. ಶಿಕ್ಷಣ, ದೇವಾಲಯ ಪ್ರವೇಶ, ಮನೆ, ಬಾವಿ ನೀರು, ಕೆರೆ, ಬೀದಿಗಳು ಕೆಲವರಿಗೆ ಮೀಸಲಾಗಿತ್ತು. ಅಷ್ಟೇ ಅಲ್ಲದೆ, ಸ್ಪರ್ಶ ಸಹ ಮೀಸಲಾಗಿತ್ತು. ಆದರೆ, ಇದನ್ನು ನಾವು ಧಿಕ್ಕರಿಸಿದ ಕಾರಣ, ಕೆಲವರು ಇಂದಿಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆಯಾದ ಮೀಸಲಾತಿಯನ್ನು ಟೀಕಿಸುತ್ತಾರೆ ಎಂದರು.

ಗೋಡ್ಸೆ ಕೊಲೆಗಾರ ಎನ್ನಲು ಹಿಂದೇಟು ಏಕೆ?:

ಕರ್ನಾಟಕ ಶಿಕ್ಷಣ ಇಲಾಖೆಯ ಕೈಪಿಡಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಒಬ್ಬರೇ, ಸಂವಿಧಾನ ಬರೆದಿಲ್ಲ ಎಂದಿರುವುದು ಅವರ ವಿಕೃತ ಮನಸ್ಥಿತಿಯನ್ನು ತಿಳಿಸುತ್ತದೆ. ಅಷ್ಟೇ ಅಲ್ಲದೆ, ಒರಿಸ್ಸಾದ ಪಠ್ಯವೊಂದರಲ್ಲಿ ಮಹಾತ್ಮ ಗಾಂಧಿ ಅವರು ಅವಘಡದಿಂದಾಗಿ ಮೃತಪಟ್ಟಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಗಾಂಧಿಯನ್ನು ಹತ್ಯೆಗೈದವನು ಗೋಡ್ಸೆ ಎಂದು ಹೇಳಲು ಹಿಂಜರಿಕೆ ಏಕೆ ಎಂದು ಪ್ರಶ್ನಿಸಿದರು. 2018ರ ಆಗಸ್ಟ್‌ನಲ್ಲಿ ದೆಹಲಿಯ ಜಂತರ್ ಮಂತರ್ ಅಲ್ಲಿ ಭಾರತೀಯ ಸಂವಿಧಾನವನು ಸುಟ್ಟು ಅಂಬೇಡ್ಕರ್ ವಿರುದ್ಧ ದಿಕ್ಕಾರ ಕೂಗುವ ಘಟನೆ ನಡೆಯುತ್ತದೆ. 2019 ಜನವರಿಯಲ್ಲಿ ಗಾಂಧೀಜಿಯವರ ಭಾವಚಿತ್ರದಲ್ಲಿ ಅವರ ಎದೆಗೆ ಅಣಕು ಗುಂಡನ್ನು ಹಾರಿಸಿ ವಿಕಾರ ಸಂಭ್ರಮ ಪಡುವ ಘಟನೆ ನಡೆಯುತ್ತದೆ. ಇವೆಲ್ಲವೂ ದೇಶದ ಸಂವಿಧಾನವನ್ನು ಮರೆಮಾಚುವ ಹುನ್ನಾರ ಎಂದರು.

ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಅವರ ನಡುವೆ ತಾರ್ಕಿಕ ಭಿನ್ನಾಭಿಪ್ರಾಯಗಳು ಮಾತ್ರ ಇದ್ದವು. ಅದನ್ನೇ ನೆಪವಾಗಿಟ್ಟುಕೊಂಡು ಅವರ ಅನುಯಾಯಿಗಳ ನಡುವೆ ಅಸಹನೆ ಹೆಚ್ಚಾಗಿದೆ ಎಂದ ಅವರು, ಗಾಂಧಿ ಮತ್ತು ಅಂಬೇಡ್ಕರ್ ನಮಗೆ ಮುಖ್ಯವಾಗಬೇಕು. ಇದೀಗ ಮೂಲಭೂತವಾದಿಗಳು ಗಾಂಧಿಯನ್ನು ತಳ್ಳುತ್ತಾ, ಅಂಬೇಡ್ಕರ್ ಅವರನ್ನು ವಶಪಡೆಸಿಕೊಳ್ಳುತ್ತಿರುವ ಪ್ರಕ್ರಿಯಲ್ಲಿ ನಿರತರಾಗಿರುವಾಗ ನಾವು ಎಚ್ಚೆತ್ತುಕೊಳ್ಳಬೇಕು ಎಂದರು.

ಸಮಾವೇಶದ ಅಧ್ಯಕ್ಷತೆಯನ್ನು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್, ಡಾ.ಕಿರಣ್ ಗಾಜನೂರು, ಡಾ.ರಾಜಪ್ಪ ದಳವಾಯಿ ಸಂಘಟನೆ ಸಂಚಾಲಕರಾದ ಡಾ.ರಾಜು ಗುಂಡಾಪುರ, ಬಿ.ರಾಜಶೇಖರ ಮೂರ್ತಿ ಸೇರಿದಂತೆ ಪ್ರಮುಖರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಇವತ್ತಿನ ಸ್ವಸ್ಥ ಸಮಸಮಾಜ ನಿರ್ಮಾಣ ದಲ್ಲಿ ಗೌರಿ ಮೇಡಮ್ ರವರ ಪತ್ರಿಕೆ ತುಂಬಾ ಆವಶ್ಯಕವಾದುದು.

  2. ಪಂಗಡ,ಪಂಗಡಗಳೊಳಗೆ ಹಣಕಾಸು ಮಾನದಂಡದಡಿಯಲ್ಲಿ ಶೇ.ನೂರು ಮೀಸಲಾತಿ ಒದಗಿಸುವುದೊಂದೇ ಮೀಸಲಾತಿ ಕಗ್ಗಂಟಿಗಿರುವ ಪರಿಹಾರ.
    ಶೆ.ಅಯ್ವತ್ತರ ಮಿತಿಯನ್ನು ತಕ್ಕ ತಿದ್ದುಪಡಿ ಮಾಡಿ ಸಡಿಲಮಾಡಬೇಕಾಗಿದೆ

  3. ಮೀಸಲಾತಿ ನೆರವಿನಿಂದ ಮೇಲೆ ಬಂದ ಪ.ಪ/ಪ.ಬುಡಕಟ್ಟು ಮಂದಿ ತನ್ನದೇ ಪಂಗಡದ ವಂಚಿತ ಮಂದಿಗೆ ತಕ್ಕ ಪಾಲು ಸಿಗುವಂತೆ ಹೆಜ್ಜೆ ಇಡಬೇಕು. ಇಲ್ಲವಾದರೆ, ಮೀಸಲಾತಿ ಒಪ್ಪದವರ ಎದುರು ದಾಳಿಗೆ ಪದೇಪದೇ ತುತ್ತಾಗಬೇಕಾಗುತ್ತೆ. ಇದು ಮತ್ತೆ ಕೆಲವರ ಎಲೆಕ್ಶನ್ ಇಶ್ಯೂ ಆಗಿ ಒಡಕಿಗೆ ಎಡಮಾಡಲಿದೆ.
    ಮೀಸಲಾತಿಯಿಂದ ಒಂದು ಬಗೆಯ ಹತೋಟಿ ಕೂಟ ಮೂಡಿರುವುದನ್ನೂ ಕೂಡ ಕಡೆಗಣಿಸಬಾರದು.

  4. ಈಗ ಹೆಚ್ಚುಮಂದಿಗೆ ಅನುಕೂಲವಾಗುತ್ತಿರುವ ಮೀಸಲಾತಿ ಏರ್ಪಾಡಿಗಿಂತ ಹತೋಟಿಕೂಟ ಬಡ್ತಿಯಲ್ಲಿ ತನಗೆ ಸಿಗಬೇಕಾದ ಹೆಚ್ಚಿನಪಾಲಿಗೆ ಹಾತೊರೆಯುತ್ತಿರುವ ಬೆಳವಣಿಗೆಯನ್ನು ಎಚ್ಚರಿಕೆಯಿಂದ ಬಗೆಹರಿಸಿಕೊಳ್ಳಬೇಕುಉ.
    ಒಳಮೀಸಲಾತಿಯನ್ನು ಪಡೆಯಲು ಮೂಡುತ್ತಿರುವ ದಿಟವಾಗಿಯೂ ತುಳಿತಕ್ಕೊಳಗಾದವರ ಹೋರಾಟವನ್ನು ಮೀಸಲಾತಿ ಒಪ್ಪುವವರು ಬೆಂಬಲಿಸಲು ಯಾವುದೇ ನೆಪ ಹೇಳಬಾರದು.

  5. ಸದಾಶಿವ ರಿಪೋರ್ಟ್, ಸೋಸಿಯೋ ಎಕಾನಮಿಕ್ ಸರ್ವೆ ರಿಪೋರ್ಟ್ ಅನ್ನು ಬಯಲುಗೊಳಿಸಲು ಒತ್ತಾಯಿಸಬೇಕು.

  6. ಈ ಬಗ್ಗೆ ಹೆಚ್ಚಿನ ಒರೆತಮಾಡಿ ತಕ್ಕ ತಿದ್ದುಪಡಿಗೆ ಎಡೆಮಾಡಿಕೊಡಬೇಕು.

  7. ಮೀಸಲಾತಿ ಬಗೆಗೆ ಗಣಿತದಂತೆ ಪಕ್ಕಾ ಪಾರ್ಮುಲ ತಂದರೆ, ಏಳಿಗೆಗೆ ಇರುವ ದಾರಿಯತ್ತ ದಾಪುಗಾಲಿಡಬಹುದು.

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...