Homeಚಳವಳಿಸಿಎಂ ಬೊಮ್ಮಾಯಿ ಹೇಳಿಕೆಗೆ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ: ಮುಖಾಮುಖಿ ಮಾತುಕತೆಗೆ ಒತ್ತಾಯ

ಸಿಎಂ ಬೊಮ್ಮಾಯಿ ಹೇಳಿಕೆಗೆ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ: ಮುಖಾಮುಖಿ ಮಾತುಕತೆಗೆ ಒತ್ತಾಯ

ಕೆಂಪೇಗೌಡರ ಬಗ್ಗೆ ಮುಖ್ಯಮಂತ್ರಿಯವರು ತಿಳಿಸಿರುವ ಹೊಸಪಾಠವನ್ನು ಎಲ್ಲಿ ಸೇರಿಸಿದ್ದಾರೆಂದು ಸ್ಪಷ್ಟವಿಲ್ಲ- ಬರಗೂರು

- Advertisement -
- Advertisement -

ಪಠ್ಯ ವಿವಾದಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಸಿಎಂ ಬಸವರಾಜ ಬೊಮ್ಮಾಯಿಯವರು ನೀಡಿದರು ಪತ್ರಿಕಾ ಹೇಳಿಕೆಗೆ ಪ್ರೊ. ಬರಗೂರು ರಾಮಚಂದ್ರಪ್ಪನವರು ಸ್ಪಷ್ಟನೆ ನೀಡಿದ್ದು, ಮುಖಾಮುಖಿ ಚರ್ಚೆಗೆ ಒತ್ತಾಯಿಸಿದ್ದಾರೆ.

ಈ ಕುರಿತು 4 ಅಂಶಗಳ ಹೇಳಿಕೆ ಬಿಡುಗಡೆ ಮಾಡಿರುವ ಅವರು,  ಬಸವಣ್ಣನವರ ಕುರಿತು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯು ಹಲವು ಅಂಶಗಳನ್ನು ಕೈಬಿಟ್ಟಿದೆ ಎಂದು ಪ್ರತಿಪಾದಿಸಿದ್ದಾರೆ.

ಶ್ರೀ ಪಂಡಿತಾರಾಧ್ಯ ಸ್ವಾಮೀಜಿಯವರು ಮತ್ತು ನಾಡಿನ ಇತರೆ ಸ್ವಾಮೀಜಿಯವರು ಬಸವಣ್ಣನವರ ವಿಷಯದಲ್ಲಿ ಎತ್ತಿದ ಪ್ರಶ್ನೆಗೆ ‘ಪ್ರೊ.ಬರಗೂರು ರಾಮಚಂದ್ರಪ್ಪ ಇವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯ ಅಂಶಗಳಿವೆ’ ಎಂದು ಸಿಎಂ ಹೇಳಿದ್ದಾರೆ. ಆದರೆ ವಾಸ್ತವ ಹೀಗಿದೆ : 6ನೇ ತರಗತಿಯ ಸಮಾಜ ವಿಜ್ಞಾನ ಭಾಗ-2ರಲ್ಲಿ ನಾವು ಅಳವಡಿಸಿದ್ದ ವಿವರಗಳಲ್ಲಿ ಅಲ್ಪ ಸ್ವಲ್ಪ ಬದಲಾವಣೆ ಮಾಡಿ ಮರುಪರಿಷ್ಕರಣೆಯಲ್ಲಿ ಉಳಿಸಿಕೊಂಡಿದ್ದರೂ 9ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರಲ್ಲಿದ್ದ ಬಸವಣ್ಣನವರ ವಿವರಗಳಲ್ಲಿ ಕೆಲವು ಮುಖ್ಯ ಸಂಗತಿಗಳನ್ನು ಬಿಡಲಾಗಿದೆ. ಮರುಪರಿಷ್ಕರಣೆಯ ಪಠ್ಯದಲ್ಲಿ ಬಸವಣ್ಣನವರು ವೈದಿಕ ಮೂಲ ಮೌಲ್ಯಾಚರಣೆಗಳನ್ನು ವಿರೋಧಿಸಿದ್ದು, ಯಜ್ಞೋಪವೀತವನ್ನು ಕಿತ್ತೆಸೆದದ್ದು, ಉನ್ನತಾಧಿಕಾರದಲ್ಲಿದ್ದರೂ ಚಳವಳಿ ಕಟ್ಟಿದ್ದು, ‘ದೇಹವೇ ದೇಗುಲ’ ಎಂಬ ಹೊಚ್ಚ ಹೊಸ ಪರಿಕಲ್ಪನೆ ನೀಡಿದ್ದು, ಜನಸಾಮಾನ್ಯರಿಗೆ ತಲುಪುವ ಸರಳ ಕನ್ನಡದಲ್ಲಿ ವಚನಕಾರರು ಬರೆದದ್ದು-ಮುಂತಾದ ವಿಷಯಗಳನ್ನು ಮರುಪರಿಷ್ಕರಣೆಯಲ್ಲಿ ಬಿಡಲಾಗಿದೆ. ನಾವು ಪರಿಷ್ಕರಣೆ ಮಾಡಿದಾಗ ಕನ್ನಡ ಪ್ರಥಮ ಭಾಷೆ ಪಠ್ಯಪುಸ್ತಕಕ್ಕೆ ‘ಬಸವಣ್ಣನವರ ಜೀವನ ದರ್ಶನ’ ಕುರಿತ ಹೊಸ ಪಾಠವನ್ನು ಸೇರಿಸಿದ್ದೆವು ಎಂಬ ವಿಷಯವನ್ನು ಇಲ್ಲಿ ತಿಳಿಸಬಯಸುತ್ತೇನೆ ಎಂದು ಬರಗೂರು ಹೇಳಿದ್ದಾರೆ.

ರಾಷ್ಟ್ರಕವಿ ಕುವೆಂಪು ಅವರ ಹತ್ತು ರಚನೆಗಳು ಮರುಪರಿಷ್ಕರಣೆಯ ಒಟ್ಟು ಕನ್ನಡ ಭಾಷಾ ಪಠ್ಯಗಳಲ್ಲಿ ಇರುವುದು ನಿಜ, ನಾವು ಪರಿಷ್ಕರಣೆ ಮಾಡಿದಾಗ ಮೂಲ ಪಠ್ಯಪುಸ್ತಕದಲ್ಲಿ ಇಲ್ಲದ ಕೆಲವು ಮುಖ್ಯ ಸಾಹಿತಿಗಳ ಪಾಠ ಸೇರಿಸುವುದಕ್ಕಾಗಿ ಸಾಮಾನ್ಯ ಮಾನದಂಡವನ್ನು ರೂಪಿಸಿಕೊಂಡೆವು. ರಾಷ್ಟ್ರಕವಿ ಕುವೆಂಪು ಅವರ ಅಪೂರ್ವ ಸಾಧನೆಗೆ ಚ್ಯುತಿಯುಂಟು ಮಾಡದೆ, ಮೂಲ ಪಠ್ಯಪುಸ್ತಕಗಳಲ್ಲಿ ಇಲ್ಲದೆ ಇದ್ದ, ಕಲ್ಯಾಣ ಕರ್ನಾಟಕದ ಸಿಂಪಿ ಲಿಂಗಣ್ಣ, ಶಾಂತರಸ, ಚೆನ್ನಣ್ಣ ವಾಲೀಕಾರ ಅವರಲ್ಲದೆ ಮಾಸ್ತಿ ವೆಂಕಟೇಶ ಅಯ್ಯಂಗಾರ್, ಗೋಪಾಲಕೃಷ್ಣ ಅಡಿಗ, ಗೊರೂರು ರಾಮಸ್ವಾಮಿ ಅಯ್ಯಂಗಾರ್ ಮತ್ತು ಕೆಲವು ಲೇಖಕಿಯರ ಪಾಠಗಳನ್ನು ಸೇರಿಸಿದೆವು. ಈ ನಮ್ಮ ನಡೆಯು ಕುವೆಂಪು ಅವರ ಅಖಂಡ ಕರ್ನಾಟಕ ಪರಿಕಲ್ಪನೆ ಮತ್ತು ಸಾಮಾಜಿಕ ನ್ಯಾಯ ಕಲ್ಪನೆಗೆ ಅನುಗುಣವಾಗಿತ್ತು ಎಂದು ಬರಗೂರು ಹೇಳಿದ್ದಾರೆ.

ಮುಂದುವರೆದು ಕುವೆಂಪು ಅವರ ಪಠ್ಯ ಹೆಚ್ಚು ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರು ನೀಡಿದ ಸಂಖ್ಯಾ ಮಾಹಿತಿಯಿಂದ, ನಾಡಗೀತೆ, ನಾಡಧ್ವಜ, ಕನ್ನಡ ಭಾಷೆಗಳಿಗೆ ಮಾಡಿದ ಅವಮಾನಕ್ಕೆ ಖಂಡಿತ ರಿಯಾಯಿತಿ ಸಿಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ನಿರ್ಮಾಪಕ ಕೆಂಪೇಗೌಡರ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರು ಹೊಸದಾಗಿ ಪಾಠ ಸೇರಿಸಿರುವುದಾಗಿ ಹೇಳಿದ್ದಾರೆ. ವಾಸ್ತವವೆಂದರೆ, 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರಲ್ಲಿ ‘ಯಲಹಂಕ ನಾಡಪ್ರಭುಗಳು’ ಎಂಬ ಪಾಠವನ್ನು ನಮ್ಮ ಪರಿಷ್ಕರಣೆಯ ಕಾಲದಲ್ಲೇ ಸೇರಿಸಿದ್ದೇವೆ, ಕೆಂಪೇಗೌಡರ ವಂಶಾವಳಿ ಮತ್ತು ಆಳ್ವಿಕೆಯ ವಿವರಗಳನ್ನು ನೀಡಿದ್ದೇವೆ ಆದರೆ ಮರುಪರಿಷ್ಕರಣೆಯಲ್ಲಿ ನಾವು ಕೊಟ್ಟಿದ್ದ ವಿವರಗಳನ್ನು ಕಡಿತ ಮಾಡಲಾಗಿದೆ. ಜೊತೆಗೆ ಯಲಹಂಕ ನಾಡಪ್ರಭುಗಳ ಆಳ್ವಿಕೆಯ ವಿಸ್ತೀರ್ಣವನ್ನು ಬೆಂಗಳೂರು ಜಿಲ್ಲೆಗೆ ಮಾತ್ರ ಸೀಮಿತಗೊಳಿಸಲಾಗಿದೆ. ನಮ್ಮ ಪರಿಷ್ಕರಣೆ ಪಠ್ಯದಲ್ಲಿ ಬೆಂಗಳೂರು, ರಾಮನಗರ, ತುಮಕೂರು, ಅವಿಭಜಿತ ಕೋಲಾರ ಜಿಲ್ಲೆಗಳು ಕೂಡ ನಾಡಪ್ರಭು ಕೆಂಪೇಗೌಡರ ಆಳ್ವಿಕೆಗೆ ಒಳಪಟ್ಟಿದ್ದನ್ನು ವಿವರಿಸಲಾಗಿತ್ತು. ಇದನ್ನು ಮರುಪರಿಷ್ಕರಣೆಯಲ್ಲಿ ಬಿಟ್ಟಿದ್ದಾರೆ. ಮಾನ್ಯ ಮುಖ್ಯಮಂತ್ರಿಯವರು ತಿಳಿಸಿರುವ ಹೊಸಪಾಠವನ್ನು ಎಲ್ಲಿ ಸೇರಿಸಿದ್ದಾರೆಂದು ಸ್ಪಷ್ಟವಿಲ್ಲ ಎಂದು ಬರಗೂರು ಹೇಳಿದ್ದಾರೆ.

ಇದನ್ನೂ ಓದಿ; ಬಹುತ್ವಕ್ಕೆ ಮಾರಕವಾದ ಪಠ್ಯ ಹೇರಲು ಕಾಂಗ್ರೆಸ್ ಬಿಡುವುದಿಲ್ಲ: ರಾಹುಲ್ ಗಾಂಧಿ

ಪರಿಷ್ಕರಣೆ ಎಂದಾಗ ಕೆಲವನ್ನು ಬಿಡುವುದು ಮತ್ತು ಸೇರಿಸುವುದು ಇರುತ್ತದೆ. ಆದರೆ ಈ ಕ್ರಿಯೆಗೆ ನ್ಯಾಯಸಮ್ಮತ ಮಾನದಂಡವನ್ನು ರೂಪಿಸಿಕೊಳ್ಳಬೇಕಾಗುತ್ತದೆ. ಇಂಥದೊಂದು ನ್ಯಾಯಸಮ್ಮತ ಮಾನದಂಡವು ಮರುಪರಿಷ್ಕರಣೆಯಲ್ಲಿ ಕಾಣಿಸುವುದಿಲ್ಲ. ಕನ್ನಡ ಭಾಷಾ ಪಠ್ಯಗಳಲ್ಲಿ ದೇವನೂರರನ್ನು ಹೊರತುಪಡಿಸಿ ಎಲ್ಲಾ ದಲಿತ ಮೂಲದ ಸಾಹಿತಿಗಳ ರಚನೆಗಳನ್ನು ತೆಗೆಯಲಾಗಿದೆ. ಬಹುಪಾಲು ಮಹಿಳಾ ಸಾಹಿತಿಗಳ ರಚನೆಗಳನ್ನು ಬಿಡಲಾಗಿದೆ. ಬುದ್ಧ, ಅಂಬೇಡ್ಕರ್ ಅಂಥವರ ವಸ್ತುವುಳ್ಳ ಕವನಗಳನ್ನು ಕೈಬಿಡಲಾಗಿದೆ. 6ನೇ ತರಗತಿಯ ಸಮಾಜ ವಿಜ್ಞಾನದಿಂದ ಬೌದ್ಧಧರ್ಮ ಮತ್ತು ಜೈನಧರ್ಮದ ವಿವರಗಳನ್ನು ತೆಗೆಯಲಾಗಿದೆ. ನಾವು ಹೊಸದಾಗಿ ಸೇರಿಸಿದ್ದ ಸಾವಿತ್ರಿಬಾಯಿ ಫುಲೆ ಮುಂತಾದ ಸುಧಾರಕಿಯರ ಪಾಠಕ್ಕೆ ಕೊಕ್ ಕೊಡಲಾಗಿದೆ. ಅಂಬೇಡ್ಕರ್ ಅವರ ಮಹಾಡ್ ಸತ್ಯಾಗ್ರಹ, ನಾಸಿಕ್ ದೇವಾಲಯ ಪ್ರವೇಶದಂತಹ ಅನೇಕ ಸಾಲುಗಳು ಮರುಪರಿಷ್ಕರಣೆಯಲ್ಲಿ ಇಲ್ಲವಾಗಿವೆ. ನಾವು ಸೇರಿಸಿದ್ದ ನಾರಾಯಣ ಗುರು ಕುರಿತ ಪಾಠವನ್ನು ಬಿಟ್ಟಿದ್ದು ಮತ್ತೆ ಸೇರಿಸುವುದಾಗಿ ಹೇಳುತ್ತಿದ್ದಾರೆ. ಇಲ್ಲಿ ತೆಗೆದದ್ದು, ಸೇರಿಸಿದ್ದು ಯಾರನ್ನು ಮತ್ತು ಎಂಥ ಪಾಠವನ್ನು ಎಂಬುದನ್ನು ಪರಿಶೀಲಿಸಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ದಲಿತ ವಿರೋಧಿ, ಮಹಿಳಾ ವಿರೋಧಿ ಮತ್ತು ಸಂವಿಧಾನಾತ್ಮಕ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ವಿರೋಧಿ ಕ್ರಮವಾಗಿದೆ. ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಗೌಣವಾಗಿದೆ. ಅಷ್ಟೇ ಅಲ್ಲ, ಬಸವಣ್ಣ, ಕುವೆಂಪು ಅವರ ಆದರ್ಶಕ್ಕೂ ವಿರುದ್ಧವಾಗಿದೆ. ಮಾನ್ಯ ಮುಖ್ಯಮಂತ್ರಿಯವರು ಪ್ರತಿರೋಧಿಸುತ್ತಿರುವ ಸಂಸ್ಥೆ ಹಾಗೂ ವ್ಯಕ್ತಿಗಳನ್ನು ಕರೆದು ಮಾತಾಡಿ ತೀರ್ಮಾನಕ್ಕೆ ಬರುವುದು ಪ್ರಜಾಸತ್ತಾತ್ಮಕ ಸರ್ಕಾರದ ಜವಾಬ್ದಾರಿ. ಇಲ್ಲದಿದ್ದರೆ ಏಕಪಕ್ಷೀಯವಾಗುತ್ತದೆ ಎಂದು ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸುಳ್ಳು ಹೇಳುವುದು ಹೇಗೆ ಎಂಬುದನ್ನು ಮನುವಾದಿಗಳು ಮುಖ್ಯ ಮಂತ್ರಿ ಬೊಮ್ಮಾಯಿಯವರಿಗೆ ಬಹಳ ಚೆನ್ನಾಗಿ ಹೇಳಿಕೊಟ್ಟಿರುವಂತಿದೆ.

  2. ಎಲ್ಲಾ ಕಡೆಗಳಿಂದಲೂ ವಿರೋಧ ಬಂದಿದ್ದರೂ, ಬೊಮ್ಮಾಯಿ ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿ ಯಂತೆ ಸ್ಪಷ್ಟನೆ ನೀಡದೆ ಜಾರಿಕೆ,ಬೇಜಾವ್ದಾರಿ ಹಾರಿಕೆ ಉತ್ತರ ಕೊಟ್ಟಿರುವುದು ನೋಡಿದರೆ ,ಇವರೆಲ್ಲಾ ವೈದಿಕ ಸಮುದಾಯದ ಗುಲಾಮರಷ್ಟೇ.

  3. ಜಟ್ಟಿ ಕೆಳಗೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲಾ ಅಂತ ಅಂದುಕೊಂಡಂನಂತೆ, ಆದರೆ ಮುಖವೆಲ್ಲಾ ಮಣ್ಣಾಆಗಿತ್ತಂತೆ, ಹಾಗಾಗಿದೆ ಸರ್ಕಾರದ ಸ್ಥಿತಿ.

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...