Homeಮುಖಪುಟತಿಹಾರ್‌ ಜೈಲಿನಿಂದ ಬಿಡುಗಡೆಯಾದ ಬಾರಾಮುಲ್ಲಾ ಸಂಸದ ಇಂಜಿನಿಯರ್ ರಶೀದ್ 

ತಿಹಾರ್‌ ಜೈಲಿನಿಂದ ಬಿಡುಗಡೆಯಾದ ಬಾರಾಮುಲ್ಲಾ ಸಂಸದ ಇಂಜಿನಿಯರ್ ರಶೀದ್ 

- Advertisement -
- Advertisement -

ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಮಾಡಲು ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಅಕ್ಟೋಬರ್ 2 ರವರೆಗೆ ಮಧ್ಯಂತರ ಜಾಮೀನು ಪಡೆದ ಒಂದು ದಿನದ ನಂತರ, ಬುಧವಾರ ಸಂಜೆ ಬಾರಾಮುಲ್ಲಾ ಸಂಸದ ಇಂಜಿನಿಯರ್ ರಶೀದ್ ತಿಹಾರ್ ಜೈಲಿನಿಂದ ಹೊರನಡೆದರು.

2017 ರ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದ ನಂತರ ಇಂಜಿನಿಯರ್ ರಶೀದ್ 2019 ರಿಂದ ಜೈಲಿನಲ್ಲಿದ್ದಾರೆ. ಅವರನ್ನು ಸಂಜೆ 4.15ಕ್ಕೆ ಜೈಲಿನಿಂದ ಬಿಡುಗಡೆ ಮಾಡಲಾಯಿತು ಎಂದು ಜೈಲಿನ ಹಿರಿಯ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇಂಜಿನಿಯರ್ ರಶೀದ್ ಎಂದೇ ಜನಪ್ರಿಯರಾಗಿರುವ ಶೇಖ್ ಅಬ್ದುಲ್ ರಶೀದ್ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಬಾರಾಮುಲ್ಲಾದಲ್ಲಿ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಜೈಲಿನಿಂದಲೇ ಸ್ಪರ್ಧಿಸಿ ಸೋಲಿಸಿದರು.

ಇಂಜಿನಿಯರ್ ರಶೀದ್ ಅವರ ಅವಾಮಿ ಇತ್ತೆಹಾದ್ ಪಾರ್ಟಿ (ಎಐಪಿ) ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಅವರು ನಿನ್ನೆ ₹2 ಲಕ್ಷದ ವೈಯಕ್ತಿಕ ಬಾಂಡ್ ಮತ್ತು ಅಂತಹ ಮೊತ್ತದ ಒಂದು ಶ್ಯೂರಿಟಿಯ ಮೇಲೆ ಮಧ್ಯಂತರ ಜಾಮೀನಿನ ಪಡೆದು ರಶೀದ್ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದರು. ಅಲ್ಲದೇ ಪ್ರಕರಣದ ಕುರಿತು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ ಎಂಬುದೂ ಸೇರಿದಂತೆ ಕೆಲ ಷರತ್ತುಗಳನ್ನು ವಿಧಿಸಿದ್ದಾರೆ.

ಮೋದಿಯವರ ನಯಾ ಕಾಶ್ಮೀರದ ನಿರೂಪಣೆಯ ವಿರುದ್ಧ ಹೋರಾಡುತ್ತೇನೆ

ಜೈಲಿನಿಂದ ಬಿಡುಗಡೆಯಾದ ನಂತರ ಮಾತನಾಡಿದ ಸಂಸದ ರಶೀದ್, ಪ್ರಧಾನಿ ನರೇಂದ್ರ ಮೋದಿಯವರ ‘ನಯಾ ಕಾಶ್ಮೀರ’ದ ದೃಷ್ಟಿಕೋನವನ್ನು ಸವಾಲು ಮಾಡುವ ತಮ್ಮ ಬದ್ಧತೆಯನ್ನು ಘೋಷಿಸಿದರು, “ಇದನ್ನು ಜಮ್ಮು ಮತ್ತು ಕಾಶ್ಮೀರದ ಜನರು ತಿರಸ್ಕರಿಸಿದ್ದಾರೆ” ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಧ್ವನಿಯೆತ್ತಿರುವ ರಶೀದ್, ಪಿಎಂ ಮೋದಿ ಮತ್ತು ಅವರ ಆಡಳಿತದ ನಿರೂಪಣೆಯನ್ನು ಟೀಕಿಸಿದರು. “ನಾನು ನನ್ನ ಜನರನ್ನು ನಿರಾಸೆಗೊಳಿಸುವುದಿಲ್ಲ. ಜೆ-ಕೆನಲ್ಲಿ ವಿಫಲವಾಗಿರುವ ‘ನಯಾ ಕಾಶ್ಮೀರದ’ ಪ್ರಧಾನಿ ಮೋದಿಯವರ ನಿರೂಪಣೆಯ ವಿರುದ್ಧ ನಾನು ಹೋರಾಡುತ್ತೇನೆ ಎಂದು ನಾನು ಪ್ರತಿಜ್ಞೆ ಮಾಡುತ್ತೇನೆ. 2019 ರ ಆಗಸ್ಟ್ 5 ರಂದು ಏನು ಮಾಡಿದ್ದರೂ ಜನರು ತಿರಸ್ಕರಿಸಿದ್ದಾರೆ” ಎಂದ ಅವರು,  ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370 ನೇ ವಿಧಿಯನ್ನು ರದ್ದುಗೊಳಿಸುವುದನ್ನು ಉಲ್ಲೇಖಿಸಿದರು.

ಕಾಶ್ಮೀರ ಪರವಾದ ನಿಲುವಿಗೆ ಹೆಸರುವಾಸಿಯಾಗಿರುವ ಸಂಸದರು, ತಮ್ಮ ಹೋರಾಟವು ಕೇವಲ ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಮೀರಿದೆ ಎಂದು ಒತ್ತಿ ಹೇಳಿದರು. “ಒಮರ್ ಅಬ್ದುಲ್ಲಾ ಹೇಳುವುದಕ್ಕಿಂತ ನನ್ನ ಹೋರಾಟ ದೊಡ್ಡದು. ಅವರ ಹೋರಾಟ ಕುರ್ಚಿಗಾಗಿ; ನನ್ನ ಹೋರಾಟವು ಜನರಿಗಾಗಿ ಮತ್ತು ನಾನು ನನ್ನ ಕ್ಷೇತ್ರದ ಏಜೆಂಟ್” ಎಂದು ರಶೀದ್ ಅವರು ಬಿಜೆಪಿಯ ವಿಭಜಕ ನೀತಿಗಳ ವಿರುದ್ಧ ಸಾಮಾನ್ಯ ಜನರ ರಕ್ಷಕನಾಗಿ ಕೆಲಸ ಮಾಡುತ್ತೇನೆ ಎಂದು ಪ್ರತಿಜ್ಞೆ ಮಾಡಿದರು.

“ನಾನು ಬಿಜೆಪಿಯ ಬಲಿಪಶು; ನನ್ನ ಕೊನೆಯ ಉಸಿರು ಇರುವವರೆಗೂ ಪ್ರಧಾನಿ ಮೋದಿಯವರ ಸಿದ್ಧಾಂತದ ವಿರುದ್ಧ ಹೋರಾಡುತ್ತೇನೆ. ಅವರ ಹೇಳಿಕೆಗಳು ಈ ಪ್ರದೇಶಕ್ಕೆ ಕೇಂದ್ರ ಸರ್ಕಾರದ ವಿಧಾನದ ಬಗ್ಗೆ ಆಳವಾದ ಅಸಮಾಧಾನವನ್ನು ಸೂಚಿಸುತ್ತವೆ. ನಾನು ಕಾಶ್ಮೀರಕ್ಕೆ ಬರುತ್ತಿರುವುದು ನನ್ನ ಜನರನ್ನು ಒಗ್ಗೂಡಿಸಲು, ಅವರನ್ನು ವಿಭಜಿಸಲು ಅಲ್ಲ” ಎಂದರು.

ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ರಶೀದ್ ಅವರಿಗೆ ಅಕ್ಟೋಬರ್ 2 ರವರೆಗೆ ಮಧ್ಯಂತರ ಜಾಮೀನು ನೀಡಿ ದೆಹಲಿ ನ್ಯಾಯಾಲಯವು ಇಂದು ತಿಹಾರ್ ಜೈಲಿನಿಂದ ಹೊರನಡೆದರು. 2024 ರ ಚುನಾವಣೆಯಲ್ಲಿ ಬಾರಾಮುಲ್ಲಾ ಪರವಾಗಿ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಸೋಲಿಸುವ ಮೂಲಕ ಪ್ರಾಮುಖ್ಯತೆಯನ್ನು ಗಳಿಸಿದ ರಶೀದ್, ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಜಾಮೀನು ಕೋರಿದರು. ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದ ನಂತರ ಅವರು 2019 ರಿಂದ ತಿಹಾರ್ ಜೈಲಿನಲ್ಲಿದ್ದಾರೆ. ಪಟಿಯಾಲ ಹೌಸ್ ಕೋರ್ಟ್ ಅವರ ಸಾಮಾನ್ಯ ಜಾಮೀನು ಅರ್ಜಿಯ ನಿರ್ಧಾರವನ್ನು ಅಕ್ಟೋಬರ್ 5 ರವರೆಗೆ ಮುಂದೂಡಿದೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗಳು ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ನಡೆಯಲಿವೆ; ಫಲಿತಾಂಶವನ್ನು ಅಕ್ಟೋಬರ್ 8 ರಂದು ಪ್ರಕಟಿಸಲಾಗುವುದು.

ಇದನ್ನೂ ಓದಿ; ಜಮ್ಮು ಕಾಶ್ಮೀರ ಚುನಾವಣೆ : ಸಂಸದ ಇಂಜಿನಿಯರ್ ರಶೀದ್‌ಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...