Homeಮುಖಪುಟತಿಹಾರ್‌ ಜೈಲಿನಿಂದ ಬಿಡುಗಡೆಯಾದ ಬಾರಾಮುಲ್ಲಾ ಸಂಸದ ಇಂಜಿನಿಯರ್ ರಶೀದ್ 

ತಿಹಾರ್‌ ಜೈಲಿನಿಂದ ಬಿಡುಗಡೆಯಾದ ಬಾರಾಮುಲ್ಲಾ ಸಂಸದ ಇಂಜಿನಿಯರ್ ರಶೀದ್ 

- Advertisement -
- Advertisement -

ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಮಾಡಲು ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಅಕ್ಟೋಬರ್ 2 ರವರೆಗೆ ಮಧ್ಯಂತರ ಜಾಮೀನು ಪಡೆದ ಒಂದು ದಿನದ ನಂತರ, ಬುಧವಾರ ಸಂಜೆ ಬಾರಾಮುಲ್ಲಾ ಸಂಸದ ಇಂಜಿನಿಯರ್ ರಶೀದ್ ತಿಹಾರ್ ಜೈಲಿನಿಂದ ಹೊರನಡೆದರು.

2017 ರ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದ ನಂತರ ಇಂಜಿನಿಯರ್ ರಶೀದ್ 2019 ರಿಂದ ಜೈಲಿನಲ್ಲಿದ್ದಾರೆ. ಅವರನ್ನು ಸಂಜೆ 4.15ಕ್ಕೆ ಜೈಲಿನಿಂದ ಬಿಡುಗಡೆ ಮಾಡಲಾಯಿತು ಎಂದು ಜೈಲಿನ ಹಿರಿಯ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇಂಜಿನಿಯರ್ ರಶೀದ್ ಎಂದೇ ಜನಪ್ರಿಯರಾಗಿರುವ ಶೇಖ್ ಅಬ್ದುಲ್ ರಶೀದ್ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಬಾರಾಮುಲ್ಲಾದಲ್ಲಿ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಜೈಲಿನಿಂದಲೇ ಸ್ಪರ್ಧಿಸಿ ಸೋಲಿಸಿದರು.

ಇಂಜಿನಿಯರ್ ರಶೀದ್ ಅವರ ಅವಾಮಿ ಇತ್ತೆಹಾದ್ ಪಾರ್ಟಿ (ಎಐಪಿ) ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಅವರು ನಿನ್ನೆ ₹2 ಲಕ್ಷದ ವೈಯಕ್ತಿಕ ಬಾಂಡ್ ಮತ್ತು ಅಂತಹ ಮೊತ್ತದ ಒಂದು ಶ್ಯೂರಿಟಿಯ ಮೇಲೆ ಮಧ್ಯಂತರ ಜಾಮೀನಿನ ಪಡೆದು ರಶೀದ್ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದರು. ಅಲ್ಲದೇ ಪ್ರಕರಣದ ಕುರಿತು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ ಎಂಬುದೂ ಸೇರಿದಂತೆ ಕೆಲ ಷರತ್ತುಗಳನ್ನು ವಿಧಿಸಿದ್ದಾರೆ.

ಮೋದಿಯವರ ನಯಾ ಕಾಶ್ಮೀರದ ನಿರೂಪಣೆಯ ವಿರುದ್ಧ ಹೋರಾಡುತ್ತೇನೆ

ಜೈಲಿನಿಂದ ಬಿಡುಗಡೆಯಾದ ನಂತರ ಮಾತನಾಡಿದ ಸಂಸದ ರಶೀದ್, ಪ್ರಧಾನಿ ನರೇಂದ್ರ ಮೋದಿಯವರ ‘ನಯಾ ಕಾಶ್ಮೀರ’ದ ದೃಷ್ಟಿಕೋನವನ್ನು ಸವಾಲು ಮಾಡುವ ತಮ್ಮ ಬದ್ಧತೆಯನ್ನು ಘೋಷಿಸಿದರು, “ಇದನ್ನು ಜಮ್ಮು ಮತ್ತು ಕಾಶ್ಮೀರದ ಜನರು ತಿರಸ್ಕರಿಸಿದ್ದಾರೆ” ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಧ್ವನಿಯೆತ್ತಿರುವ ರಶೀದ್, ಪಿಎಂ ಮೋದಿ ಮತ್ತು ಅವರ ಆಡಳಿತದ ನಿರೂಪಣೆಯನ್ನು ಟೀಕಿಸಿದರು. “ನಾನು ನನ್ನ ಜನರನ್ನು ನಿರಾಸೆಗೊಳಿಸುವುದಿಲ್ಲ. ಜೆ-ಕೆನಲ್ಲಿ ವಿಫಲವಾಗಿರುವ ‘ನಯಾ ಕಾಶ್ಮೀರದ’ ಪ್ರಧಾನಿ ಮೋದಿಯವರ ನಿರೂಪಣೆಯ ವಿರುದ್ಧ ನಾನು ಹೋರಾಡುತ್ತೇನೆ ಎಂದು ನಾನು ಪ್ರತಿಜ್ಞೆ ಮಾಡುತ್ತೇನೆ. 2019 ರ ಆಗಸ್ಟ್ 5 ರಂದು ಏನು ಮಾಡಿದ್ದರೂ ಜನರು ತಿರಸ್ಕರಿಸಿದ್ದಾರೆ” ಎಂದ ಅವರು,  ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370 ನೇ ವಿಧಿಯನ್ನು ರದ್ದುಗೊಳಿಸುವುದನ್ನು ಉಲ್ಲೇಖಿಸಿದರು.

ಕಾಶ್ಮೀರ ಪರವಾದ ನಿಲುವಿಗೆ ಹೆಸರುವಾಸಿಯಾಗಿರುವ ಸಂಸದರು, ತಮ್ಮ ಹೋರಾಟವು ಕೇವಲ ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಮೀರಿದೆ ಎಂದು ಒತ್ತಿ ಹೇಳಿದರು. “ಒಮರ್ ಅಬ್ದುಲ್ಲಾ ಹೇಳುವುದಕ್ಕಿಂತ ನನ್ನ ಹೋರಾಟ ದೊಡ್ಡದು. ಅವರ ಹೋರಾಟ ಕುರ್ಚಿಗಾಗಿ; ನನ್ನ ಹೋರಾಟವು ಜನರಿಗಾಗಿ ಮತ್ತು ನಾನು ನನ್ನ ಕ್ಷೇತ್ರದ ಏಜೆಂಟ್” ಎಂದು ರಶೀದ್ ಅವರು ಬಿಜೆಪಿಯ ವಿಭಜಕ ನೀತಿಗಳ ವಿರುದ್ಧ ಸಾಮಾನ್ಯ ಜನರ ರಕ್ಷಕನಾಗಿ ಕೆಲಸ ಮಾಡುತ್ತೇನೆ ಎಂದು ಪ್ರತಿಜ್ಞೆ ಮಾಡಿದರು.

“ನಾನು ಬಿಜೆಪಿಯ ಬಲಿಪಶು; ನನ್ನ ಕೊನೆಯ ಉಸಿರು ಇರುವವರೆಗೂ ಪ್ರಧಾನಿ ಮೋದಿಯವರ ಸಿದ್ಧಾಂತದ ವಿರುದ್ಧ ಹೋರಾಡುತ್ತೇನೆ. ಅವರ ಹೇಳಿಕೆಗಳು ಈ ಪ್ರದೇಶಕ್ಕೆ ಕೇಂದ್ರ ಸರ್ಕಾರದ ವಿಧಾನದ ಬಗ್ಗೆ ಆಳವಾದ ಅಸಮಾಧಾನವನ್ನು ಸೂಚಿಸುತ್ತವೆ. ನಾನು ಕಾಶ್ಮೀರಕ್ಕೆ ಬರುತ್ತಿರುವುದು ನನ್ನ ಜನರನ್ನು ಒಗ್ಗೂಡಿಸಲು, ಅವರನ್ನು ವಿಭಜಿಸಲು ಅಲ್ಲ” ಎಂದರು.

ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ರಶೀದ್ ಅವರಿಗೆ ಅಕ್ಟೋಬರ್ 2 ರವರೆಗೆ ಮಧ್ಯಂತರ ಜಾಮೀನು ನೀಡಿ ದೆಹಲಿ ನ್ಯಾಯಾಲಯವು ಇಂದು ತಿಹಾರ್ ಜೈಲಿನಿಂದ ಹೊರನಡೆದರು. 2024 ರ ಚುನಾವಣೆಯಲ್ಲಿ ಬಾರಾಮುಲ್ಲಾ ಪರವಾಗಿ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಸೋಲಿಸುವ ಮೂಲಕ ಪ್ರಾಮುಖ್ಯತೆಯನ್ನು ಗಳಿಸಿದ ರಶೀದ್, ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಜಾಮೀನು ಕೋರಿದರು. ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದ ನಂತರ ಅವರು 2019 ರಿಂದ ತಿಹಾರ್ ಜೈಲಿನಲ್ಲಿದ್ದಾರೆ. ಪಟಿಯಾಲ ಹೌಸ್ ಕೋರ್ಟ್ ಅವರ ಸಾಮಾನ್ಯ ಜಾಮೀನು ಅರ್ಜಿಯ ನಿರ್ಧಾರವನ್ನು ಅಕ್ಟೋಬರ್ 5 ರವರೆಗೆ ಮುಂದೂಡಿದೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗಳು ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ನಡೆಯಲಿವೆ; ಫಲಿತಾಂಶವನ್ನು ಅಕ್ಟೋಬರ್ 8 ರಂದು ಪ್ರಕಟಿಸಲಾಗುವುದು.

ಇದನ್ನೂ ಓದಿ; ಜಮ್ಮು ಕಾಶ್ಮೀರ ಚುನಾವಣೆ : ಸಂಸದ ಇಂಜಿನಿಯರ್ ರಶೀದ್‌ಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಪರ್ಮಿಟ್ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಜನವರಿ 23 ರಂದು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದು, ಬೈಕ್ ಟ್ಯಾಕ್ಸಿ ಸಂಗ್ರಾಹಕರು, ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ಮುಖ್ಯ...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 22 ಮಂದಿ ಅಸ್ವಸ್ಥ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಕನಿಷ್ಠ 22 ಜನರು ಅಸ್ವಸ್ಥರಾಗಿದ್ದಾರೆ. ಕೆಲವೇ ವಾರಗಳ ಹಿಂದೆ ಕಲುಷಿತ ನೀರಿನಿಂದ ಹರಡುವ ರೋಗಗಳಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು....

ರಾಜ್ಯಪಾಲರ ಭಾಷಣ ಪದ್ಧತಿ ಕೊನೆಗೊಳಿಸುವ ಸಮಯ ಬಂದಿದೆ: ಮುಖ್ಯಮಂತ್ರಿ ಸ್ಟಾಲಿನ್

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಸದನವನ್ನು ಉದ್ದೇಶಿಸಿ ಸಂಪೂರ್ಣ ಸಾಂಪ್ರದಾಯಿಕ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಿರುವುದು ಇದೀಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ...