Homeಚಳವಳಿಹತ್ರಾಸ್ ದಲಿತ ಯುವತಿಯ ಬರ್ಬರ ಅತ್ಯಾಚಾರ-ಕೊಲೆ: ಪ್ರಕರಣ ನಡೆದುಬಂದು ಹಾದಿ

ಹತ್ರಾಸ್ ದಲಿತ ಯುವತಿಯ ಬರ್ಬರ ಅತ್ಯಾಚಾರ-ಕೊಲೆ: ಪ್ರಕರಣ ನಡೆದುಬಂದು ಹಾದಿ

- Advertisement -
- Advertisement -

ದೇಶದ ಜನರ ಆತ್ಮಸಾಕ್ಷಿ ಕಲಕಿದ್ದ ಉತ್ತರ ಪ್ರದೇಶದ ಹತ್ರಾಸ್ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ, ಕೊಲೆ ಘಟನೆಯ ತನಿಖೆಯ ಕುರಿತು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಮೂವರು ಆರೋಪಿಗಳನ್ನು ಖುಲಾಸೆಗೊಳಿಸುವ ಮೂಲಕ ಅದು ಸಾಮೂಹಿಕ ಅತ್ಯಾಚಾರವಲ್ಲ ಎಂಬ ಸಂದೇಶ ನೀಡಿದೆ. ತೀವ್ರ ನೋವು ನೀಡಿದ್ದ ಈ ಪ್ರಕರಣ ನಡೆದು ಬಂದ ಹಾದಿಯನ್ನು ಇಲ್ಲಿ ನೆನಪಿಸಿಕೊಳ್ಳಲಾಗಿದೆ.

ಸೆಪ್ಟಂಬರ್ 14, 2020: ಅಮಾನುಷ ಅತ್ಯಾಚಾರ – ಹಲ್ಲೆ

ಅಂದು ಉತ್ತರ ಪ್ರದೇಶ ರಾಜ್ಯದ ಹತ್ರಾಸ್ ಜಿಲ್ಲೆಯ ಮನೀಶ ಎಂಬ 19 ವರ್ಷದ ದಲಿತ ಹೆಣ್ಣುಮಗಳು ಹುಲ್ಲು ತರಲು ಕುಟುಂಬದೊಂದಿಗೆ ಹೊಲಕ್ಕೆ ಹೋಗಿದ್ದರು. ಸವರ್ಣೀಯ ಠಾಕೂರ್ ಸಮುದಾಯದ ನಾಲ್ವರು ಯುವಕರು ಆಕೆಯನ್ನು ಅಪಹರಿಸಿ ಅಮಾನು‍ಷವಾಗಿ ಅತ್ಯಾಚಾರವೆಸಗಿ, ತೀವ್ರವಾಗಿ ಹಲ್ಲೆ ನಡೆಸಿದ್ದರು. ಕುತ್ತಿಗೆಯ ಮೂರು ಮೂಳೆಗಳು ಮುರಿದಿದ್ದವು. ನಾಲಿಗೆ ತುಂಡಾಗಿದ್ದು, ಉಸಿರಾಡಲು ತೊಂದರೆಯಾಗುತ್ತಿತ್ತು ಎಂದು ಮೃತ ಯುವತಿಯ ಸಹೋದರ ತಿಳಿಸಿದ್ದಾರೆ. ಗಾಯಗಳು, ಮೂಳೆ ಮುರಿತ ಮತ್ತು ಯುವತಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಳು. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಯುವತಿಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಬೇಕೆಂದು ವೈದ್ಯರು ಸಲಹೆ ನೀಡಿದ್ದರು. ಆದರೆ ಯುವತಿಯನ್ನು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಸೇರಿಸಲಾಯಿತು. ಆರಂಭದಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಲು ನಿರಾಕರಿಸಿದ ಪೊಲೀಸರು ಕೊಲೆಯತ್ನ ಪ್ರಕರಣ ಮಾತ್ರ ದಾಖಲಿಸಿದ್ದರು. ತದನಂತರ ಯುವತಿಯು ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಹೇಳಿಕೆ ನೀಡಿದ ನಂತರವಷ್ಟೇ ಅತ್ಯಾಚಾರ ಮತ್ತು ಜಾತಿ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.

ಸೆಪ್ಟಂಬರ್ 29, 2020: ಯುವತಿಯ ಸಾವು – ಪೊಲೀಸರಿಂದ ಅನಧಿಕೃತ ಅಂತ್ಯಸಂಸ್ಕಾರ

ತೀವ್ರ ಗಾಯಗಳಿಂದ ನರಳಿದ್ದ ಮನೀಶ ಸೆಪ್ಟಂಬರ್ 29ರಂದು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಪೊಲೀಸರು ಮೃತದೇಹವನ್ನು ಕುಟುಂಬ ಸದಸ್ಯರಿಗೆ ಒಪ್ಪಿಸದೆ ಅಥವಾ ಅವರ ಅನುಮತಿ ಪಡೆಯದೆ ಸುಟ್ಟು ಹಾಕಿದರು. ದೇಶದ ಅಂತಃಸಾಕ್ಷಿಯನ್ನು ಕಲಕಿದ ಈ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ ದೇಶಾದ್ಯಂತ ನೋವು, ಸಂಕಟ ವ್ಯಕ್ತವಾಯಿತು. ಅದರಲ್ಲಿಯೂ ಪೊಲೀಸರ ವರ್ತನೆ ಮತ್ತಷ್ಟು ಅನುಮಾನ ಮತ್ತು ಆಕ್ರೋಶ ಹುಟ್ಟು ಹಾಕಿತು. ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಚಿತ್ರನಟರಾದ ಅಕ್ಷಯ್ ಕುಮಾರ್ ಸೇರಿದಂತೆ ಕೋಟ್ಯಾಂತರ ಜನರು ನೋವು ವ್ಯಕ್ತಪಡಿಸಿದರು.

ಸೆಪ್ಟಂಬರ್ 30, 2020: ಆರೋಪಿಗಳನ್ನು ಬಿಡುವುದಿಲ್ಲ – ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರು, “ಹತ್ರಾಸ್‌ನಲ್ಲಿ ಹೆಣ್ಣು ಮಗುವಿಗೆ ಸಂಭವಿಸಿದ ಅಹಿತಕರ ಘಟನೆಯ ಅಪರಾಧಿಗಳನ್ನು ಬಿಡುವುದಿಲ್ಲ. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಈ ತಂಡ ಮುಂದಿನ ಏಳು ದಿನಗಳಲ್ಲಿ ವರದಿ ಸಲ್ಲಿಸಲಿದೆ. ತ್ವರಿತ ನ್ಯಾಯವನ್ನು ಖಚಿತಪಡಿಸಿಕೊಳ್ಳಲು, ಪ್ರಕರಣವನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗುವುದು” ಎಂದು ಟ್ವೀಟ್ ಮಾಡಿದರು.

ಅಕ್ಟೋಬರ್ 1, 2020: ನಿಷೇದಾಜ್ಞೆ ಜಾರಿ, ರಾಜಕೀಯ ಮುಖಂಡು ಹತ್ರಾಸ್ ಪ್ರವೇಶಿಸದಂತೆ ತಡೆ

ದಲಿತ ಯುವತಿಯ ಸಾವಿಗೆ ನ್ಯಾಯಕ್ಕೆ ಒತ್ತಾಯಿಸಿ ಪ್ರತಿಭಟಿಸಲು ದೇಶಾದ್ಯಂತ ಹಲವಾರು ರಾಜಕೀಯ ನಾಯಕರು, ಹೋರಾಟಗಾರರು ಹತ್ರಾಸ್ ಕಡೆಗೆ ಹೊರಟರು. ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮತ್ತಿತತರನ್ನು ಯುಪಿ ಪೊಲೀಸರು ಹತ್ರಾಸ್ ಪ್ರವೇಶಿಸದಂತೆ ತಡೆದರು. ತಳ್ಳಾಟ ನೂಕಾಟ ನಡೆಯಿತು. ರಾಜಕೀಯ ಮುಖಂಡರನ್ನು ಪೊಲೀಸರು ಹೀನಾಯವಾಗಿ ನಡೆಸಿಕೊಂಡರು. ಹತ್ರಾಸ್‌ನಲ್ಲಿ ಒಂದು ತಿಂಗಳ ಕಾಲ ನಿಷೇದಾಜ್ಞೆ ಹೇರಲಾಯಿತು.

ಹತ್ರಾಸ್‌‌ನಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ, ಕೊಲೆ ಹಾಗೂ ನಂತರ ಯುವತಿಯ ಮೃತದೇಹವನ್ನು ಕುಟುಂಬವರಿಗೆ ನೀಡದೇ ತಾವೇ ರಾತ್ರೋರಾತ್ರಿ ಸುಟ್ಟು ಹಾಕಿದ್ದು ದೇಶದಾದ್ಯಂತ ಹಲವು ಅನುಮಾನ ಹಾಗೂ ತೀವ್ರ ಆಕ್ರೋಶಗಳಿಗೆ ಕಾರಣವಾಗಿದೆ. ಇಂತಹ ಸಮಯದಲ್ಲೇ ಹತ್ರಾಸ್ ಡಿಎಂ (ಜಿಲ್ಲಾಧಿಕಾರಿ) ಯುವತಿಯ ತಂದೆಯ ಬಳಿ ಹೋಗಿ ಹೇಳಿಕೆಯನ್ನು ಬದಲಾಯಿಸುವಂತೆ ಧಮಕಿ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು.

ಬಲವಂತದ ಶವಸಂಸ್ಕಾರ ಮತ್ತು ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ, ಅಕ್ಟೋಬರ್ 1, 2020ರಂದು ಅಲಾಹಾಬಾದ್‌ ಉಚ್ಚ ನ್ಯಾಯಾಲಯ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಿತ್ತು.

ಅಕ್ಟೋಬರ್ 3, 2020 : ಹತ್ರಾಸ್‌ಗೆ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಭೇಟಿ

ಕೊನೆಗೂ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಹತ್ರಾಸ್ ತಲುಪಿ ಸಂತ್ರಸ್ತ ಯುವತಿಯ ತಂದೆ ತಾಯಿಯನ್ನು ಭೇಟಿಯಾದರು. ಅವರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದರು. ಸಂತ್ರಸ್ತೆಯ ಸಹೋದರ ಪೊಲೀಸರು ನಮಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದರು.

ಅಕ್ಟೋಬರ್ 4, 2020 : ಆರೋಪಿಗಳ ಪರ ಪ್ರತಿಭಟನೆ

ರಾಷ್ಟ್ರೀಯ ಸವರ್ಣ ಪರಿಷತ್” ಎಂಬ ಸಂಘಟನೆ ಆರೋಪಿಗಳ ಬೆಂಬಲಕ್ಕೆ ನಿಂತಿತ್ತು. ಅಕ್ಟೋಬರ್ 4 ರಂದು ಬಿಜೆಪಿಯ ಮಾಜಿ ಶಾಸಕರಾದ ರಾಜವೀರ್ ಸಿಂಗ್ ಪೆಹೆಲ್ವಾನ್ ಆರೋಪಿಗಳನ್ನು ಬೆಂಬಲಿಸಿ ರ್‍ಯಾಲಿ ನಡೆಸಿದ್ದರು. ಈ ರ್‍ಯಾಲಿಯಲ್ಲಿ ನಾಲ್ವರು ಆರೋಪಿಗಳ ಕುಟುಂಬ ಸದಸ್ಯರು ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು. ಜೊತೆಗೆ ಈ ಸಭೆಯಲ್ಲಿ ಆರ್‌ಎಸ್‌ಎಸ್, ಕರ್ಣಿ ಸೇನೆ ಮತ್ತು ಬಜರಂಗದಳದಂತಹ ಬಲಪಂಥೀಯ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು. ಈ ಸದಸ್ಯರು ಕ್ಷತ್ರಿಯ ಮಹಾಸಭಾ, ರಾಷ್ಟ್ರೀಯ ಸವರ್ಣ ಸಂಘಟನೆ ಮುಂತಾದವುಗಳನ್ನು ಒಳಗೊಂಡಂತೆ ವಿವಿಧ ಮೇಲ್ಜಾತಿಯ ಸಂಘಟನೆಗಳ ಭಾಗವಾಗಿದ್ದರು.

ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಬೆನ್ನಲ್ಲಿ ಹತ್ರಾಸ್ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ಸಿಬಿಐ ತನಿಖೆಗೆ ವಹಿಸಿತು.

ಅಕ್ಟೋಬರ್ 5, 2020: ವರದಿ ಮಾಡಲು ತೆರಳಿದ ಪತ್ರಕರ್ತ ಸಿದ್ದಿಕ್ ಕಪ್ಪನ್ ಬಂಧನ

ಹತ್ರಾಸ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ವರದಿ ಮಾಡಲು ಹೊರಟಿದ್ದ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್, ಅವರ ಕಾರು ಚಾಲಕ ಸೇರಿ ನಾಲ್ವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. ಅವರ ಮೇಲೆ ಯುಎಪಿಎ, ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಲಾಗಿತ್ತು. ಇತ್ತೀಚಿಗಷ್ಟೇ ಅವರಿಗೆ ಜಾಮೀನು ದೊರಕಿದ್ದು, 28 ತಿಂಗಳ ಜೈಲು ವಾಸದ ನಂತರ ಬಿಡುಗಡೆಯಾಗಿದ್ದಾರೆ.

ಅಕ್ಟೋಬರ್ 6, 2020: ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಹತ್ರಾಸ್‌ನಲ್ಲಿ ನಡೆದ ದಲಿತ ಯುವತಿಯ ಮೇಲಿನ ಅತ್ಯಾಚಾರ ಮತ್ತು ಹತ್ಯೆಯನ್ನು ಸುಪ್ರೀಂ ಕೋರ್ಟ್ “ಅಸಾಧಾರಣ ಮತ್ತು ಆಘಾತಕಾರಿ” ಎಂದು ಕರೆದಿದ್ದು, ಪ್ರಕರಣದಲ್ಲಿ ಸಾಕ್ಷಿಗಳನ್ನು ಹೇಗೆ ರಕ್ಷಿಸಲಾಗುತ್ತಿದೆ ಎಂಬ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ.

ಅಕ್ಟೋಬರ್ 7, 2020: ಆರೋಪಿಗಳ ಪರ ಹೇಳಿಕೆ

ನವಾಬ್‌ಗಂಜ್ ಪುರಸಭೆಯ ಮಾಜಿ ಅಧ್ಯಕ್ಷರಾಗಿರುವ ಬಿಜೆಪಿ ಮುಖಂಡ ರಂಜೀತ್ ಶ್ರೀವಾಸ್ತವ (67) “ಈ ಘಟನೆಯಲ್ಲಿ ಅತ್ಯಾಚಾರ ನಡೆದಿಲ್ಲ, ಯುವತಿಯೇ ತನ್ನ ಗೆಳೆಯನನ್ನು ಹೊಲಕ್ಕೆ ಕರೆಸಿಕೊಂಡಿರಬೇಕು, ಈ ಸಮಯದಲ್ಲಿ ಅವರು ಸಿಕ್ಕಿಬಿದ್ದಿರಬಹುದು” ಎಂದು ಹೇಳಿಕೆ ನೀಡಿ ಆರೋಪಿಗಳ ಪರ ವಕಾಲತ್ತು ವಹಿಸಿದ್ದರು.

ಅಕ್ಟೋಬರ್ 16, 2020: ಅಲಹಾಬಾದ್ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಅಲಹಾಬಾದ್ ಹೈಕೋರ್ಟ್ ಮೇಲ್ವಿಚಾರಣೆ ನಡೆಸಲಿದೆ ಎಂದು ಸುಪ್ರೀಂಕೋರ್ಟ್ ಸೂಚಿಸಿತ್ತು.

ನವೆಂಬರ್ 22, 2020: ಸಂತ್ರಸ್ತರ ಕುಟುಂಬ ಭಯದಲ್ಲಿ

ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ಥೆಯ ಕುಟುಂಬ ಸದಸ್ಯರು ಗೃಹಬಂಧನಕ್ಕೆ ಸಮಾನವಾದ ಪರಿಸ್ಥಿತಿಗಳಲ್ಲಿ ವಾಸಿಸುತ್ತಿದ್ದಾರೆ. ಅವರಿಗೆ ನೀಡಿದ್ದ ಸಿಆರ್‌ಪಿಎಫ್‌ ಭದ್ರತೆ ಹಿಂತೆಗೆದುಕೊಂಡ ನಂತರ, ಕುಟುಂಬ ಸದಸ್ಯರು ಜೀವಭಯಕ್ಕೆ ಒಳಗಾಗಿದ್ದಾರೆ. ನಿರ್ಭಯಾ ನಿಧಿಯ ಮೂಲಕ ಹತ್ರಾಸ್ ಸಂತ್ರಸ್ತ ಕುಟುಂಬಕ್ಕೆ ಭದ್ರತೆ ಮತ್ತು ಪುನರ್ವಸತಿ ಕಲ್ಪಿಸಬೇಕು ಎಂದು ಎಂದು PUCL ತನ್ನ ಸತ್ಯಶೋಧನಾ ವರದಿ ಬಿಡುಗಡೆ ಮಾಡಿತ್ತು.

ಡಿಸೆಂಬರ್ 19, 2020: ಜಾರ್ಜ್ ಶೀಟ್ ಸಲ್ಲಿಕೆ

2020 ಡಿಸೆಂಬರ್ 19 ರಂದು, ಸಿಬಿಐ ಹತ್ರಾಸ್‌ನ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದೆ. ನಾಲ್ಕು ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪಗಳನ್ನು ಹೊರಿಸಲಾಗಿದೆ. ಸಂತ್ರಸ್ತೆಯ ಹೇಳಿಕೆಯನ್ನು ಲಿಖಿತವಾಗಿ ದಾಖಲಿಸುವುದರಲ್ಲಿ ತೋರಿದ ವಿಳಂಬ ಮತ್ತು ಯುವತಿಯ ವೈದ್ಯಕೀಯ ಪರೀಕ್ಷೆಯಲ್ಲಿ ಯುಪಿ ಪೊಲೀಸರ ಲೋಪದೋಷಗಳನ್ನೂ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.

ಮಾರ್ಚ್ 5, 2021 : ಸಂತ್ರಸ್ತ ಕುಟುಂಬ ಮತ್ತು ವಕೀಲರಿಗೆ ನ್ಯಾಯಾಲಯದಲ್ಲೇ ಬೆದರಿಕೆ!

2021ರ ಮಾರ್ಚ್ 5 ರಂದು ಹತ್ರಾಸ್ ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ವೇಳೆ ವಕೀಲರು ಸೇರಿದಂತೆ ಜನರ ದೊಡ್ಡ ಗುಂಪು ನ್ಯಾಯಾಲಯದ ಕೋಣೆಗೆ ಪ್ರವೇಶಿಸಿ ಅರ್ಜಿದಾರರನ್ನು ಮತ್ತು ದೂರುದಾರರ ಸಲಹೆಗಾರರನ್ನು ಸುತ್ತುವರಿದು ಅವರಿಗೆ ಬೆದರಿಕೆ ಹಾಕಿದೆ. ಸಂತ್ರಸ್ತ ಕುಟುಂಬಕ್ಕೆ ನ್ಯಾಯಾಲಯದಲ್ಲೇ ಬೆದರಿಕೆ ಹಿನ್ನೆಲೆ, ಸದ್ಯ ಪ್ರಕರಣದ ವಿಚಾರಣೆಯನ್ನು ಪಶ್ಚಿಮ ಯುಪಿ ಜಿಲ್ಲೆಯಿಂದ ಸ್ಥಳಾಂತರಿಸುವ ಬಗ್ಗೆ ಯೋಚಿಸುವುದಾಗಿ ನ್ಯಾಯಪೀಠ ಹೇಳಿತ್ತು.

ಮಾರ್ಚ್ 13, 2021: ಪ್ರತಿಭಟನಾಕಾರರಿಗೆ ಪೊಲೀಸ್ ನೋಟಿಸ್

ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ದೌರ್ಜನ್ಯದ ವಿರುದ್ಧದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದ 10 ಮಹಿಳಾ ನಾಯಕಿಯರಿಗೆ ಉತ್ತರ ಪ್ರದೇಶ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ಈ ಮಹಿಳಾ ನಾಯಕಿಯವರು ಸಿಎಎ ವಿರುದ್ಧ ಕೂಡ ಪ್ರತಿಭಟನೆ ನಡೆಸಿದ್ದರು.

ಮಾರ್ಚ್ 10, 2022: ಹತ್ರಾಸ್‌ನಲ್ಲಿ ಬಿಜೆಪಿಗೆ ಜಯ

2022ರ ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಹತ್ರಾಸಿನಲ್ಲಿ ಮತ್ತೆ ಬಿಜೆಪಿ ಅಭ್ಯರ್ಥಿ ಒಂದೂವರೆ ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದರು. ಠಾಕೂರ್ ಸಮುದಾಯದ ಅಭ್ಯರ್ಥಿಯನ್ನೇ ಬಿಜೆಪಿ ಕಣಕ್ಕಿಳಿಸಿತ್ತು. ಇಡೀ ಮೇಲ್ಜಾತಿಗಳು ಠಾಕೂರರೊಂದಿಗೆ ಸೇರಿ, ದಲಿತ ಯುವತಿಯನ್ನು ಅತ್ಯಾಚಾರಗೈದು ಕೊಲೆ ಮಾಡಿದ್ದಲ್ಲದೆ, ಸಾಕ್ಷಿನಾಶಕ್ಕಾಗಿ ಅಮಾನವೀಯವಾಗಿ ಶವಸಂಸ್ಕಾರ ಮಾಡಿದ ಬಿಜೆಪಿಯ ಆದಿತ್ಯನಾಥ್ ಸರ್ಕಾರದ ಪರವಾಗಿ ಓಟು ಚಲಾಯಿಸಿ ದಲಿತರನ್ನು ಮತ್ತೆ ಸೋಲಿಸಿದ್ದಾರೆ.

ಫೆಬ್ರವರಿ 02, 2023: ಸಿದ್ದಿಕ್ ಕಪ್ಪನ್ ಬಿಡುಗಡೆ

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣದಲ್ಲಿ 28 ತಿಂಗಳುಗಳಿಂದ ಬಂಧನದಲ್ಲಿದ್ದ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್‌ ಕೊನೆಗೂ ಇಂದು ಲಕ್ನೋ ಜೈಲಿನಿಂದ ಹೊರಬಂದರು.

ಮಾರ್ಚ್ 02, 2023: ಮೂವರು ಆರೋಪಿಗಳ ಖುಲಾಸೆ

ಇನ್ನೂ ಮಾಸದ ಆ ದುರ್ಘಟನೆ ನಡೆದು ಸುಮಾರು ಎರಡೂವರೆ ವರ್ಷದ ನಂತರ ಉತ್ತರ ಪ್ರದೇಶದ ವಿಶೇಷ ನ್ಯಾಯಾಲಯ ಗುರುವಾರ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿ, ಒಬ್ಬನನ್ನು ಮಾತ್ರ ದೋಷಿ ಎಂದು ತೀರ್ಪು ನೀಡಿದೆ. ಆರೋಪಿಗಳಾದ ರಾಮು, ಲವಕುಶ್ ಮತ್ತು ರವಿ ಅವರನ್ನು ಖುಲಾಸೆಗೊಳಿಸಲಾಗಿದ್ದು, ಆರೋಪಿ ಸಂದೀಪ್‌ಗೆ ಕೊಲೆಗೆ ಸಮನಲ್ಲದ ನರಹತ್ಯೆ ಮತ್ತು ಎಸ್‌ಸಿ/ಎಸ್‌ಟಿ ಕಾಯಿದೆಯಡಿಯ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅಪರಾಧಿಗಳನ್ನು ಬಿಡುವುದಿಲ್ಲ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದರು. ಆದರೆ ಆಗಿದ್ದೇನು? ಮೂವರು ಆರೋಪಿಗಳು ದೋಷಮುಕ್ತರಾಗಿದ್ದಾರೆ. “ನನ್ನ ಸಹೋದರಿಯ ಆತ್ಮಕ್ಕೆ ವಿಶ್ರಾಂತಿ ಸಿಕ್ಕಿಲ್ಲ” ಎಂದು ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಸಹೋದರ ನೋವು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನನ್ನ ಸಹೋದರಿಯ ಆತ್ಮಕ್ಕೆ ವಿಶ್ರಾಂತಿ ಸಿಕ್ಕಿಲ್ಲ; ಆರೋಪಿಗಳ ಖುಲಾಸೆ ಬಳಿಕ ಹತ್ರಾಸ್‌ ಅತ್ಯಾಚಾರ ಸಂತ್ರಸ್ತೆಯ ಸಹೋದರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...