Homeಮುಖಪುಟವಿವರಗಳನ್ನು ತಪ್ಪಾಗಿ ದಾಖಲಿಸಿದ ಬರೋಡಾ ಬ್ಯಾಂಕ್; ರೈತರಿಗೆ ಫಸಲ್ ಭೀಮಾ ವಿಮೆಯ ನಿರಾಕರಣೆ

ವಿವರಗಳನ್ನು ತಪ್ಪಾಗಿ ದಾಖಲಿಸಿದ ಬರೋಡಾ ಬ್ಯಾಂಕ್; ರೈತರಿಗೆ ಫಸಲ್ ಭೀಮಾ ವಿಮೆಯ ನಿರಾಕರಣೆ

ನಿಜವಾಗಿಯೂ ಭೂಮಿ ಇರುವುದು ಟ್ಯೂಬ್‌ವೆಲ್-ನೀರಾವರಿ ಪ್ರದೇಶದಲ್ಲಿ, ಆದರೆ ಪಾಲಿಸಿ-ಡಾಕುಮೆಂಟ್‌ಗಳು ಕಾಲುವೆ-ನೀರಾವರಿ ಪ್ರದೇಶ ಎಂದು ತಪ್ಪಾಗಿ ದಾಖಲಿಸಿವೆ.

- Advertisement -
- Advertisement -

ರಾಜಸ್ತಾನದ ಶ್ರೀ ಗಂಗಾನಗರ ಜಿಲ್ಲೆಯ ಕಿಸಾನ್ ಕಾರ್ಡ್ ಹೊಂದಿರುವ ರೈತರು 2019 ರ ’ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ’ಯ ವಿಮಾ ಹಣ ಪಡೆಯಲು ಪರದಾಡುತ್ತಿದ್ದಾರೆ. ವಿಮಾ ಪಾಲಿಸಿಯಲ್ಲಿ ಬ್ಯಾಂಕ್ ಆಫ್ ಬರೋಡ ರೈತರ ಭೂ ವಿವರಗಳನ್ನು ತಪ್ಪಾಗಿ ದಾಖಲಿಸಿರುವುದೇ ಇದಕ್ಕೆ ಕಾರಣ.

ಶ್ರೀ ಗಂಗಾನಗರ ಜಿಲ್ಲೆಯ ಸುರತ್‌ಘರ್ ಹೋಬಳಿಯ ರಾಕೇಶ್ ಕುಮಾರ್ ಎಂಬ ರೈತರು ಕೌನ್‌ಪಲ್ಸಾರ್ ಎಂಬ ಗ್ರಾಮದಲ್ಲಿ ಜಮೀನು ಹೊಂದಿದ್ದಾರೆ. ತಹಸೀಲ್ದಾರ್ ನೀಡಿರುವ ಭೂ ದಾಖಲೆ ಇದನ್ನು ಪುಷ್ಟಿಕರಿಸುತ್ತದೆ.
ಆದರೆ ರಾಕೇಶ್ ಅವರ ಫಸಲ್ ಭೀಮಾ ಪಾಲಿಸಿ (2019 ರ ಮುಂಗಾರು ಮತ್ತು ಹಿಂಗಾರು)ಗಳಲ್ಲಿ ಜಮೀನು ಎರಡು ಗ್ರಾಮಗಳಲ್ಲಿ ಇದೆಯೆಂದು ದಾಖಲಾಗಿದೆ. ಮುಂಗಾರು ಅವಧಿಯ ಪಾಲಿಸಿಯಲ್ಲಿ ಜಮೀನು 16 ಎಸ್‌ಎಲ್‌ಡಿ ಎಂಬ ಗ್ರಾಮದಲ್ಲಿ ಇರುವುದಾಗಿ, ಹಿಂಗಾರು ಅವಧಿಯ ಪಾಲಿಸಿಯಲ್ಲಿ ಜಮೀನು ತಿಲಾವಳಿ ಗ್ರಾಮದಲ್ಲಿ ಇರುವುದಾಗಿ ನಮೂದಿತವಾಗಿದೆ.

ಈ ಬದಲಾವಣೆಯ ಕಾರಣಕ್ಕೆ ರಾಕೇಶ್ ಅವರಿಗೆ ವಿಮಾ ಹಣ ಪಡೆಯಲು ಸಾಧ್ಯವಾಗುತ್ತಿಲ್ಲ. ’ಪರಿಹಾರ ಒದಗಿಲಸಲು ವಿಮಾ ಕಂಪನಿಗಳು ಇನ್ನು ಮುಂದೆ ಜವಾಬ್ದಾರರಾಗಿರುವುದಿಲ್ಲ. ಅವು ತಮ್ಮ ಲಾಭವನ್ನು ಗರಿಷ್ಠಗೊಳಿಸುವುದಕ್ಕೆ ಯತ್ನಿಸಲಿವೆ. ಇದಕ್ಕೆ ಪೂರಕವಾಗಿ ಬ್ಯಾಂಕ್ ಉದ್ದೇಶಪೂರ್ವಕವಾಗಿಯೇ ತಪ್ಪಾದ ವಿವರಗಳನ್ನು ನಮೂದಿಸಿದೆ’ ಎಂದು ರಾಕೇಶ್ ಆರೋಪಿಸಿದ್ದಾರೆ.

ಇದನ್ನೂ ಓದಿ: ರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

’ರೈತರ ಜಮೀನುಗಳು ಬಾವಿ ಆಶ್ರಯಿತ ನೀರಾವರಿ ಪ್ರದೇಶದಲ್ಲಿವೆ ಎಂದು ಬ್ಯಾಂಕ್ ತೋರಿಸುತ್ತಿದೆ. ಈ ಪ್ರದೇಶದಲ್ಲಿ ಸಾಮಾನ್ಯವಾಗಿ ಒಳ್ಳೆ ಫಸಲು ಬರುವುದರಿಂದ, ಬೆಳೆ ನಷ್ಟಕ್ಕೆ ನೀಡಲ್ಪಡುವ ಪರಿಹಾರ/ವಿಮಾಹಣ ತುಂಬ ನಗಣ್ಯವಾಗಿರುತ್ತದೆ’ ಎಂದು ರಾಕೇಶ್ ಹೇಳುತ್ತಾರೆ. ’ನನ್ನ ಜಮೀನಿನ ವಿಷಯಕ್ಕೆ ಬಂದರೆ ಅದು ಇರುವುದು ಟ್ಯೂಬ್‌ವೆಲ್ ನೀರಾವರಿ ಪ್ರದೇಶದಲ್ಲಿ. ಆದರೆ ಬ್ಯಾಂಕ್ ಅದನ್ನು ಕಾಲುವೆ-ನೀರಾವರಿ ಪ್ರದೇಶದ ಹಳ್ಳಿಯಲ್ಲಿದೆ ಎಂದು ತಪ್ಪಾದ ಗ್ರಾಮವನ್ನು ನಮೂದು ಮಾಡಿದೆ’ ಎಂದು ಅವರು ಆಕ್ರೋಶ ವ್ಯಕಶಪಡಿಸಿದ್ದಾರೆ.

ಟ್ಯೂಬ್‌ವೆಲ್ ನೀರಾವರಿ ಪ್ರದೇಶದಲ್ಲಿ ಅನುಕೂಲಕರವಲ್ಲದ ಹೊತ್ತಿನಲ್ಲಿ ನೀರು ಬಿಡುವುದು ಮತ್ತು ವಿದ್ಯುತ್‌ನ ಅಸಮರ್ಪಕ ಸರಬರಾಜು ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದು ಅವರ ಫಸಲನ್ನು ಬಾಧಿಸಿ, ಅವರಿಗೆ ನಷ್ಟವುಂಟು ಮಾಡುತ್ತದೆ. ಈ ನಷ್ಟವನ್ನು ವಿಮಾ ಪರಿಹಾರದಲ್ಲಿ ಪಡೆಯಲು ರೈತರು ಬಯಸುತ್ತಿದ್ದಾರೆ.

’ಚಲಿಗಾಲ ಆರಂಭವಾದ ಕೂಡಲೇ ರಾತ್ರಿ 9 ರಿಂದ ಬೆಳಗಿನ 3 ರವರೆಗೆ ವಿದ್ಯುತ್ ಸರಬರಾಜು ಮಾಡುವುದರಿಂದ ನೀರು ಹಾಯಿಸಲು ರೈತರಿಗೆ ಕಷ್ಟವಾಗುತ್ತಿದೆ ಎಂದು ರಾಕೇಶ್ ಹೇಳುತ್ತಾರೆ. ಸುರತ್‌ಘರ್ ‌ಹೋಬಳಿಯಲ್ಲಿ ಬಹುಪಾಲು ರೈತರು ಟ್ಯೂಬ್‌ವೆಲ್‌ಗಳಿಂದ ಪಡೆಯುವ ನೀರನ್ನು ಹನಿ ನೀರಾವರಿ ಪದ್ಧತಿ ಬಳಸಿ ನೀರಾವರಿ ಮಾಡುತ್ತಾರೆ. ರಾತ್ರಿ ಸಂದರ್ಭದಲ್ಲಿ ವಿದ್ಯುತ್ ಸರಬರಾಜು ಮಾಡುವುದರಿಂದ ಆ ಚಳಿಯಲ್ಲಿ ಡ್ರಿಪ್ ಪೈಪ್‌ಗಳನ್ನು ಆ ಕಡೆಯಿಂದ ಈ ಕಡೆಗೆ ಶಿಫ್ಟ್‌ ಮಾಡುವುದು ಕಷ್ಟ. ಈ ನಡುವೆ ನೀರು ಸೋರಿಕೆಯಾಗಿದೆಯಾ ಎಂದು ಪರೀಕ್ಷಿಸುತ್ತಿರಬೇಕು. ಹೆಚ್ಚು ಪ್ರಮಾಣದ ಅಥವಾ ಕಡಿಮೆ ಪ್ರಮಾಣದ ನೀರನ್ನು ಬೆಳೆಗಳಿಗೆ ಹಾಯಿಸಿದರೆ ಅದು ಫಸಲಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ಸುರತ್‌ಘರ್ ರೈತರು ವಿದ್ಯುತ್ ಮಂಡಳಿ ಕಚೇರಿ ವಿರುದ್ಧ ಆಗಾಗ ಪ್ರತಿಭಟನೆ ನಡೆಸಿ ವಿದ್ಯುತ್ ಸರಬರಾಜು ಸಮಯವನ್ನು ಹಗಲಿನಲ್ಲಿ ನಿಗದಿಪಡಿಸಿ ಎಂದ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಟ್ಯೂಬ್-ವೆಲ್ ನೀರಾವರಿಯ ಕಷ್ಟಗಳು ಕಾಲುವೆ-ನೀರಾವರಿಯಲ್ಲಿ ಅಷ್ಟಾಗಿ ಇಲ್ಲ. ಕಾಲುವೆ ನೀರು ನೇರವಾಗಿ ಜಮೀನು ತಲುಪತ್ತದೆ. ವಿದ್ಯುತ್‌ನ ಹಂಗೂ ಇರುವುದಿಲ್ಲ.ಇಂತಹ ಸಂದರ್ಭದಲ್ಲೇ ಟ್ಯೂಬ್‌ವೆಲ್ ನೀರಾವರಿ ಪ್ರದೇಶವನ್ನು ಕಾಲುವೆ-ನೀರಾವರಿ ಪ್ರದೇಶ ಎಂದು ತೋರಿಸಿದ ಬ್ಯಾಂಕ್ ರೈತರಿಗೆ ವಿಮಾ ಪರಿಹಾರ ನಿರಾಕರಿಸುತ್ತಿದೆ.

ದಿ ವೈರ್ ಜೊತೆ ಮಾತನಾಡಿರುವ ಸುರತ್‌ಘರ್ ಬರೋಡಾ ಬ್ಯಾಂಕ್ ಫೀಲ್ಡ್ ಆಫೀಸರ್ ಕಾಲ್ರಾಮ್, “2019 ಕ್ಕೆ ಸಂಬಂಧಿಸಿದಂತೆ ವ್ಯವಸ್ಥೆಯಲ್ಲಿ ಸಮಸ್ಯೆಯಾಗಿದೆ. ನಾವು ಆಧಾರ್ ವಿವರಗಳನ್ನು ಎಂಟ್ರಿ ಮಾಡಿದಾಗ, ಅದು ಹಿಂದಿನ ವರ್ಷದ ವಿವರಗಳನ್ನೇ ತೆಗೆದುಕೊಂಡ ಪರಿಣಾಮ ಮಿಸ್‌ಮ್ಯಾಚ್ ಸಂಭವಿಸಿದೆ. ಈಗ ಮ್ಯಾನುವಲ್ ಆಗಿ ವಿವರ ಸೇರಿಸುತ್ತಿದ್ದು, ಅಂತಹ ಸಮಸ್ಯೆ ಮತ್ತೆ ಸಂಭವಿಸದು’ ಎನ್ನುತ್ತಾರೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಗಾಂಧಿ- ಅಂಬೇಡ್ಕರ್ ವಿಚಾರಗಳು

ಫಸಲ್ ಬೀಮಾ ಯೋಜನೆಯ ಪೋರ್ಟಲ್‌ನಲ್ಲೇ ಹಲವಾರು ಸಮಸ್ಯೆಗಳಿದ್ದು, ಅದರ ಪರಿಣಾಮಗಳನ್ನು ರೈತರು ಅನುಭವಿಸುತ್ತಿದ್ದಾರೆ. ಹಿರಿಯ ಕೃಷಿ ವಿಜ್ಞಾನಿಯೊಬ್ಬರ ಪ್ರಕಾರ, ಈ ಪೋರ್ಟಲ್‌ನ ಡ್ರಾಪ್ ಬಾಕ್ಸ್‌ನಲ್ಲಿ ನೂರಾರು ಗ್ರಾಮಗಳ ಹೆಸರು ಗೋಚರಿಸುವುದೇ ಇಲ್ಲ. ಹೀಗಾಗಿ ಸಮೀಪದ ಯಾವುದೋ ಗ್ರಾಮದ ಹೆಸರು ನಮೂದಿತಗೊಂಡು ರೈತರು ಪರಿತಪಿಸಬೇಕಾಗಿದೆ’ ಎಂದಿದ್ದಾರೆ.

2018 ರ ಸೆಪ್ಟೆಂಬರ್‌ನಲ್ಲಿ ಹನುಮಾನಘರ್ ಜಿಲ್ಲೆಯ ಹಲವು ಗ್ರಾಮಗಳ ರೈತರಿಗೆ ವಿಮಾ ಪರಿಹಾರ ನಿರಾಕರಿಸಲ್ಪಟ್ಟಿತ್ತು. ಅಲ್ಲಿನ ಎಸ್‌ಬಿಐ ಶಾಖೆಯು ರೈತರ ಪ್ರಿಮಿಯಂ ಹಣವನ್ನು ಬಜಾಜ್ ಅಲಾಯನ್ಸ್ ವಿಮಾ ಕಂಪನಿಗೆ ಕಟ್ಟದಿದುದೇ ಇದಕ್ಕೆ ಕಾರಣವಾಗಿತ್ತು. ಈ ವಿಮಾ ಕಂಪನಿಗೆ ಪ್ರಿಮಿಯಂ ಕಟ್ಟುವ ಬದಲು ಅಗ್ರಿಕಲ್ಚರಲ್ ಇನ್ಸುರನ್ಸ್ ಕಂಪನಿಗೆ ಪ್ರಿಮಿಯಂ ಹಣವನ್ನು ಎಸ್‌ಬಿಐ ಶಾಖೆ ವರ್ಗಾಯಿಸಿತ್ತು! ಈ ವಿಮಾ ಕಂಪನಿ ಹಣ ವಾಪಸ್ ಮಾಡಿತಾದರೂ ಅಷ್ಟು ಹೊತ್ತಿಗೆ ಪಾವತಿಸುವ ಅವಧಿ ಮುಗಿದಿತ್ತು.

2019 ರ ಏಪ್ರಿಲ್‌ನಲ್ಲಿ ಹನುಮಾನ್‌ಘರ್ ಹೋಬಳಿಯ ನೊಹಾರ್ ಹೋಬಳಿಯ 135 ಕಿಸಾನ್ ಕಾರ್ಡುದಾರ ರೈತರಿಗೆ ವಿಮಾ ಹಣ ನಿರಾಕರಿಸಲಾಗಿತು. ಅವರ 2017ರ ಪ್ರಿಮಿಯಂ ಹಣವನ್ನು ಆಕ್ಸಿಸ್ ಬ್ಯಾಂಕ್ ಆ ರೈತರು ಬೆಳೆಯದೇ ಇದ್ದ ಹತ್ತಿ ಬೆಳೆಗೆ ವರ್ಗಾಯಿಸಿತ್ತು!

ಇದನ್ನೂ ಓದಿ: ಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...