Homeಮುಖಪುಟವಿವರಗಳನ್ನು ತಪ್ಪಾಗಿ ದಾಖಲಿಸಿದ ಬರೋಡಾ ಬ್ಯಾಂಕ್; ರೈತರಿಗೆ ಫಸಲ್ ಭೀಮಾ ವಿಮೆಯ ನಿರಾಕರಣೆ

ವಿವರಗಳನ್ನು ತಪ್ಪಾಗಿ ದಾಖಲಿಸಿದ ಬರೋಡಾ ಬ್ಯಾಂಕ್; ರೈತರಿಗೆ ಫಸಲ್ ಭೀಮಾ ವಿಮೆಯ ನಿರಾಕರಣೆ

ನಿಜವಾಗಿಯೂ ಭೂಮಿ ಇರುವುದು ಟ್ಯೂಬ್‌ವೆಲ್-ನೀರಾವರಿ ಪ್ರದೇಶದಲ್ಲಿ, ಆದರೆ ಪಾಲಿಸಿ-ಡಾಕುಮೆಂಟ್‌ಗಳು ಕಾಲುವೆ-ನೀರಾವರಿ ಪ್ರದೇಶ ಎಂದು ತಪ್ಪಾಗಿ ದಾಖಲಿಸಿವೆ.

- Advertisement -
- Advertisement -

ರಾಜಸ್ತಾನದ ಶ್ರೀ ಗಂಗಾನಗರ ಜಿಲ್ಲೆಯ ಕಿಸಾನ್ ಕಾರ್ಡ್ ಹೊಂದಿರುವ ರೈತರು 2019 ರ ’ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ’ಯ ವಿಮಾ ಹಣ ಪಡೆಯಲು ಪರದಾಡುತ್ತಿದ್ದಾರೆ. ವಿಮಾ ಪಾಲಿಸಿಯಲ್ಲಿ ಬ್ಯಾಂಕ್ ಆಫ್ ಬರೋಡ ರೈತರ ಭೂ ವಿವರಗಳನ್ನು ತಪ್ಪಾಗಿ ದಾಖಲಿಸಿರುವುದೇ ಇದಕ್ಕೆ ಕಾರಣ.

ಶ್ರೀ ಗಂಗಾನಗರ ಜಿಲ್ಲೆಯ ಸುರತ್‌ಘರ್ ಹೋಬಳಿಯ ರಾಕೇಶ್ ಕುಮಾರ್ ಎಂಬ ರೈತರು ಕೌನ್‌ಪಲ್ಸಾರ್ ಎಂಬ ಗ್ರಾಮದಲ್ಲಿ ಜಮೀನು ಹೊಂದಿದ್ದಾರೆ. ತಹಸೀಲ್ದಾರ್ ನೀಡಿರುವ ಭೂ ದಾಖಲೆ ಇದನ್ನು ಪುಷ್ಟಿಕರಿಸುತ್ತದೆ.
ಆದರೆ ರಾಕೇಶ್ ಅವರ ಫಸಲ್ ಭೀಮಾ ಪಾಲಿಸಿ (2019 ರ ಮುಂಗಾರು ಮತ್ತು ಹಿಂಗಾರು)ಗಳಲ್ಲಿ ಜಮೀನು ಎರಡು ಗ್ರಾಮಗಳಲ್ಲಿ ಇದೆಯೆಂದು ದಾಖಲಾಗಿದೆ. ಮುಂಗಾರು ಅವಧಿಯ ಪಾಲಿಸಿಯಲ್ಲಿ ಜಮೀನು 16 ಎಸ್‌ಎಲ್‌ಡಿ ಎಂಬ ಗ್ರಾಮದಲ್ಲಿ ಇರುವುದಾಗಿ, ಹಿಂಗಾರು ಅವಧಿಯ ಪಾಲಿಸಿಯಲ್ಲಿ ಜಮೀನು ತಿಲಾವಳಿ ಗ್ರಾಮದಲ್ಲಿ ಇರುವುದಾಗಿ ನಮೂದಿತವಾಗಿದೆ.

ಈ ಬದಲಾವಣೆಯ ಕಾರಣಕ್ಕೆ ರಾಕೇಶ್ ಅವರಿಗೆ ವಿಮಾ ಹಣ ಪಡೆಯಲು ಸಾಧ್ಯವಾಗುತ್ತಿಲ್ಲ. ’ಪರಿಹಾರ ಒದಗಿಲಸಲು ವಿಮಾ ಕಂಪನಿಗಳು ಇನ್ನು ಮುಂದೆ ಜವಾಬ್ದಾರರಾಗಿರುವುದಿಲ್ಲ. ಅವು ತಮ್ಮ ಲಾಭವನ್ನು ಗರಿಷ್ಠಗೊಳಿಸುವುದಕ್ಕೆ ಯತ್ನಿಸಲಿವೆ. ಇದಕ್ಕೆ ಪೂರಕವಾಗಿ ಬ್ಯಾಂಕ್ ಉದ್ದೇಶಪೂರ್ವಕವಾಗಿಯೇ ತಪ್ಪಾದ ವಿವರಗಳನ್ನು ನಮೂದಿಸಿದೆ’ ಎಂದು ರಾಕೇಶ್ ಆರೋಪಿಸಿದ್ದಾರೆ.

ಇದನ್ನೂ ಓದಿ: ರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

’ರೈತರ ಜಮೀನುಗಳು ಬಾವಿ ಆಶ್ರಯಿತ ನೀರಾವರಿ ಪ್ರದೇಶದಲ್ಲಿವೆ ಎಂದು ಬ್ಯಾಂಕ್ ತೋರಿಸುತ್ತಿದೆ. ಈ ಪ್ರದೇಶದಲ್ಲಿ ಸಾಮಾನ್ಯವಾಗಿ ಒಳ್ಳೆ ಫಸಲು ಬರುವುದರಿಂದ, ಬೆಳೆ ನಷ್ಟಕ್ಕೆ ನೀಡಲ್ಪಡುವ ಪರಿಹಾರ/ವಿಮಾಹಣ ತುಂಬ ನಗಣ್ಯವಾಗಿರುತ್ತದೆ’ ಎಂದು ರಾಕೇಶ್ ಹೇಳುತ್ತಾರೆ. ’ನನ್ನ ಜಮೀನಿನ ವಿಷಯಕ್ಕೆ ಬಂದರೆ ಅದು ಇರುವುದು ಟ್ಯೂಬ್‌ವೆಲ್ ನೀರಾವರಿ ಪ್ರದೇಶದಲ್ಲಿ. ಆದರೆ ಬ್ಯಾಂಕ್ ಅದನ್ನು ಕಾಲುವೆ-ನೀರಾವರಿ ಪ್ರದೇಶದ ಹಳ್ಳಿಯಲ್ಲಿದೆ ಎಂದು ತಪ್ಪಾದ ಗ್ರಾಮವನ್ನು ನಮೂದು ಮಾಡಿದೆ’ ಎಂದು ಅವರು ಆಕ್ರೋಶ ವ್ಯಕಶಪಡಿಸಿದ್ದಾರೆ.

ಟ್ಯೂಬ್‌ವೆಲ್ ನೀರಾವರಿ ಪ್ರದೇಶದಲ್ಲಿ ಅನುಕೂಲಕರವಲ್ಲದ ಹೊತ್ತಿನಲ್ಲಿ ನೀರು ಬಿಡುವುದು ಮತ್ತು ವಿದ್ಯುತ್‌ನ ಅಸಮರ್ಪಕ ಸರಬರಾಜು ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದು ಅವರ ಫಸಲನ್ನು ಬಾಧಿಸಿ, ಅವರಿಗೆ ನಷ್ಟವುಂಟು ಮಾಡುತ್ತದೆ. ಈ ನಷ್ಟವನ್ನು ವಿಮಾ ಪರಿಹಾರದಲ್ಲಿ ಪಡೆಯಲು ರೈತರು ಬಯಸುತ್ತಿದ್ದಾರೆ.

’ಚಲಿಗಾಲ ಆರಂಭವಾದ ಕೂಡಲೇ ರಾತ್ರಿ 9 ರಿಂದ ಬೆಳಗಿನ 3 ರವರೆಗೆ ವಿದ್ಯುತ್ ಸರಬರಾಜು ಮಾಡುವುದರಿಂದ ನೀರು ಹಾಯಿಸಲು ರೈತರಿಗೆ ಕಷ್ಟವಾಗುತ್ತಿದೆ ಎಂದು ರಾಕೇಶ್ ಹೇಳುತ್ತಾರೆ. ಸುರತ್‌ಘರ್ ‌ಹೋಬಳಿಯಲ್ಲಿ ಬಹುಪಾಲು ರೈತರು ಟ್ಯೂಬ್‌ವೆಲ್‌ಗಳಿಂದ ಪಡೆಯುವ ನೀರನ್ನು ಹನಿ ನೀರಾವರಿ ಪದ್ಧತಿ ಬಳಸಿ ನೀರಾವರಿ ಮಾಡುತ್ತಾರೆ. ರಾತ್ರಿ ಸಂದರ್ಭದಲ್ಲಿ ವಿದ್ಯುತ್ ಸರಬರಾಜು ಮಾಡುವುದರಿಂದ ಆ ಚಳಿಯಲ್ಲಿ ಡ್ರಿಪ್ ಪೈಪ್‌ಗಳನ್ನು ಆ ಕಡೆಯಿಂದ ಈ ಕಡೆಗೆ ಶಿಫ್ಟ್‌ ಮಾಡುವುದು ಕಷ್ಟ. ಈ ನಡುವೆ ನೀರು ಸೋರಿಕೆಯಾಗಿದೆಯಾ ಎಂದು ಪರೀಕ್ಷಿಸುತ್ತಿರಬೇಕು. ಹೆಚ್ಚು ಪ್ರಮಾಣದ ಅಥವಾ ಕಡಿಮೆ ಪ್ರಮಾಣದ ನೀರನ್ನು ಬೆಳೆಗಳಿಗೆ ಹಾಯಿಸಿದರೆ ಅದು ಫಸಲಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ಸುರತ್‌ಘರ್ ರೈತರು ವಿದ್ಯುತ್ ಮಂಡಳಿ ಕಚೇರಿ ವಿರುದ್ಧ ಆಗಾಗ ಪ್ರತಿಭಟನೆ ನಡೆಸಿ ವಿದ್ಯುತ್ ಸರಬರಾಜು ಸಮಯವನ್ನು ಹಗಲಿನಲ್ಲಿ ನಿಗದಿಪಡಿಸಿ ಎಂದ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಟ್ಯೂಬ್-ವೆಲ್ ನೀರಾವರಿಯ ಕಷ್ಟಗಳು ಕಾಲುವೆ-ನೀರಾವರಿಯಲ್ಲಿ ಅಷ್ಟಾಗಿ ಇಲ್ಲ. ಕಾಲುವೆ ನೀರು ನೇರವಾಗಿ ಜಮೀನು ತಲುಪತ್ತದೆ. ವಿದ್ಯುತ್‌ನ ಹಂಗೂ ಇರುವುದಿಲ್ಲ.ಇಂತಹ ಸಂದರ್ಭದಲ್ಲೇ ಟ್ಯೂಬ್‌ವೆಲ್ ನೀರಾವರಿ ಪ್ರದೇಶವನ್ನು ಕಾಲುವೆ-ನೀರಾವರಿ ಪ್ರದೇಶ ಎಂದು ತೋರಿಸಿದ ಬ್ಯಾಂಕ್ ರೈತರಿಗೆ ವಿಮಾ ಪರಿಹಾರ ನಿರಾಕರಿಸುತ್ತಿದೆ.

ದಿ ವೈರ್ ಜೊತೆ ಮಾತನಾಡಿರುವ ಸುರತ್‌ಘರ್ ಬರೋಡಾ ಬ್ಯಾಂಕ್ ಫೀಲ್ಡ್ ಆಫೀಸರ್ ಕಾಲ್ರಾಮ್, “2019 ಕ್ಕೆ ಸಂಬಂಧಿಸಿದಂತೆ ವ್ಯವಸ್ಥೆಯಲ್ಲಿ ಸಮಸ್ಯೆಯಾಗಿದೆ. ನಾವು ಆಧಾರ್ ವಿವರಗಳನ್ನು ಎಂಟ್ರಿ ಮಾಡಿದಾಗ, ಅದು ಹಿಂದಿನ ವರ್ಷದ ವಿವರಗಳನ್ನೇ ತೆಗೆದುಕೊಂಡ ಪರಿಣಾಮ ಮಿಸ್‌ಮ್ಯಾಚ್ ಸಂಭವಿಸಿದೆ. ಈಗ ಮ್ಯಾನುವಲ್ ಆಗಿ ವಿವರ ಸೇರಿಸುತ್ತಿದ್ದು, ಅಂತಹ ಸಮಸ್ಯೆ ಮತ್ತೆ ಸಂಭವಿಸದು’ ಎನ್ನುತ್ತಾರೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಗಾಂಧಿ- ಅಂಬೇಡ್ಕರ್ ವಿಚಾರಗಳು

ಫಸಲ್ ಬೀಮಾ ಯೋಜನೆಯ ಪೋರ್ಟಲ್‌ನಲ್ಲೇ ಹಲವಾರು ಸಮಸ್ಯೆಗಳಿದ್ದು, ಅದರ ಪರಿಣಾಮಗಳನ್ನು ರೈತರು ಅನುಭವಿಸುತ್ತಿದ್ದಾರೆ. ಹಿರಿಯ ಕೃಷಿ ವಿಜ್ಞಾನಿಯೊಬ್ಬರ ಪ್ರಕಾರ, ಈ ಪೋರ್ಟಲ್‌ನ ಡ್ರಾಪ್ ಬಾಕ್ಸ್‌ನಲ್ಲಿ ನೂರಾರು ಗ್ರಾಮಗಳ ಹೆಸರು ಗೋಚರಿಸುವುದೇ ಇಲ್ಲ. ಹೀಗಾಗಿ ಸಮೀಪದ ಯಾವುದೋ ಗ್ರಾಮದ ಹೆಸರು ನಮೂದಿತಗೊಂಡು ರೈತರು ಪರಿತಪಿಸಬೇಕಾಗಿದೆ’ ಎಂದಿದ್ದಾರೆ.

2018 ರ ಸೆಪ್ಟೆಂಬರ್‌ನಲ್ಲಿ ಹನುಮಾನಘರ್ ಜಿಲ್ಲೆಯ ಹಲವು ಗ್ರಾಮಗಳ ರೈತರಿಗೆ ವಿಮಾ ಪರಿಹಾರ ನಿರಾಕರಿಸಲ್ಪಟ್ಟಿತ್ತು. ಅಲ್ಲಿನ ಎಸ್‌ಬಿಐ ಶಾಖೆಯು ರೈತರ ಪ್ರಿಮಿಯಂ ಹಣವನ್ನು ಬಜಾಜ್ ಅಲಾಯನ್ಸ್ ವಿಮಾ ಕಂಪನಿಗೆ ಕಟ್ಟದಿದುದೇ ಇದಕ್ಕೆ ಕಾರಣವಾಗಿತ್ತು. ಈ ವಿಮಾ ಕಂಪನಿಗೆ ಪ್ರಿಮಿಯಂ ಕಟ್ಟುವ ಬದಲು ಅಗ್ರಿಕಲ್ಚರಲ್ ಇನ್ಸುರನ್ಸ್ ಕಂಪನಿಗೆ ಪ್ರಿಮಿಯಂ ಹಣವನ್ನು ಎಸ್‌ಬಿಐ ಶಾಖೆ ವರ್ಗಾಯಿಸಿತ್ತು! ಈ ವಿಮಾ ಕಂಪನಿ ಹಣ ವಾಪಸ್ ಮಾಡಿತಾದರೂ ಅಷ್ಟು ಹೊತ್ತಿಗೆ ಪಾವತಿಸುವ ಅವಧಿ ಮುಗಿದಿತ್ತು.

2019 ರ ಏಪ್ರಿಲ್‌ನಲ್ಲಿ ಹನುಮಾನ್‌ಘರ್ ಹೋಬಳಿಯ ನೊಹಾರ್ ಹೋಬಳಿಯ 135 ಕಿಸಾನ್ ಕಾರ್ಡುದಾರ ರೈತರಿಗೆ ವಿಮಾ ಹಣ ನಿರಾಕರಿಸಲಾಗಿತು. ಅವರ 2017ರ ಪ್ರಿಮಿಯಂ ಹಣವನ್ನು ಆಕ್ಸಿಸ್ ಬ್ಯಾಂಕ್ ಆ ರೈತರು ಬೆಳೆಯದೇ ಇದ್ದ ಹತ್ತಿ ಬೆಳೆಗೆ ವರ್ಗಾಯಿಸಿತ್ತು!

ಇದನ್ನೂ ಓದಿ: ಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....