Homeಮುಖಪುಟಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; 'ನನ್ನ ಮಗನ ಶವ ನನಗೆ ಬೇಡ' ಎಂದ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

- Advertisement -
- Advertisement -

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ ಮುಂಜಾನೆ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾನೆ. ಆದರೆ, ಈ ಘಟನೆಯ ನಂತರ ಆತನ ಹೆತ್ತ ತಾಯಿ ನೀಡಿರುವ ಹೇಳಿಕೆ ಹಾಗೂ ಆಕೆಯ ನಿರ್ಧಾರ ಇಡೀ ದೇಶವನ್ನೇ ದಿಗ್ಭ್ರಮೆಗೊಳಿಸಿದೆ. “ನನ್ನ ಮಗ ಮಾಡಿದ ರಾಕ್ಷಸ ಕೃತ್ಯಕ್ಕೆ ಆತನಿಗೆ ಸೂಕ್ತ ಶಿಕ್ಷೆಯಾಗಿದೆ. ನಾನು ಆತನ ಮೃತದೇಹವನ್ನು ಸ್ವೀಕರಿಸುವುದಿಲ್ಲ” ಎಂದು ತಾಯಿ ಸಂಧ್ಯಾ ಮಂಡಲ್ ದೃಢವಾಗಿ ಹೇಳಿದ್ದು, ಕ್ರೂರ ಅಪರಾಧವೆಸಗಿದ ಮಗನಿಂದ ಸಂಪೂರ್ಣವಾಗಿ ಅಂತರ ಕಾಯ್ದುಕೊಂಡಿದ್ದಾರೆ.

ಬರುಯಿಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಪಲಾಶ್ ಚಂದ್ರ ದಾಲಿ ನೀಡಿದ ಮಾಹಿತಿಯಂತೆ, ಬುಧವಾರ ಮುಂಜಾನೆ ಸುಮಾರು 12:45ರ ವೇಳೆಗೆ ಪ್ರಕರಣದ ತನಿಖೆಯ ಭಾಗವಾಗಿ ಅಪರಾಧ ನಡೆದ ಸ್ಥಳದ (ಸೂರ್ಯಪುರ) ಪುನರ್ನಿರ್ಮಾಣ (Reconstruction of crime scene) ಕಾರ್ಯಕ್ಕಾಗಿ ಆರೋಪಿ ಪ್ರಭಾಸ್ ಮೊಂಡೋಲ್‌ನನ್ನು ಕರೆದೊಯ್ಯಲಾಗಿತ್ತು. ಈ ಸಂದರ್ಭದಲ್ಲಿ ಆರೋಪಿಯು ತನಿಖೆಗೆ ಸಹಕರಿಸದೆ ಅಧಿಕಾರಿಗಳನ್ನು ದಾರಿತಪ್ಪಿಸಲು ಯತ್ನಿಸಿದ್ದನು.

ಸ್ಥಳಕ್ಕೆ ತಲುಪುತ್ತಿದ್ದಂತೆಯೇ, ಪ್ರಭಾಸ್ ದಿಢೀರನೆ ಪೊಲೀಸ್ ಅಧಿಕಾರಿಯೊಬ್ಬರ ಸೇವಾ ಪಿಸ್ತೂಲನ್ನು ಕಸಿದುಕೊಂಡು, ಪೊಲೀಸ್ ತಂಡದ ಮೇಲೆ ಒಂದು ಸುತ್ತು ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಪ್ರತಿಯಾಗಿ ಗುಂಡು ಹಾರಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಗಂಭೀರವಾಗಿ ಗಾಯಗೊಂಡ ಪ್ರಭಾಸ್‌ನನ್ನು ತಕ್ಷಣವೇ ಬರುಯಿಪುರ ಸಬ್-ಡಿವಿಷನಲ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

‘ಶವ ಮನೆಗೆ ತರಲ್ಲ, ಏನು ಬೇಕಾದರೂ ಮಾಡಿ’: ತಾಯಿಯ ಪ್ರತಿಕ್ರಿಯೆ

ಮಗನ ಎನ್‌ಕೌಂಟರ್ ಸುದ್ಧಿ ತಿಳಿದ ನಂತರ ಪ್ರಮುಖ ಆರೋಪಿ ಪ್ರಭಾಸ್‌ನ ತಾಯಿ ಸಂಧ್ಯಾ ಮಂಡಲ್ ಸುದ್ದಿ ಸಂಸ್ಥೆ (ANI) ಜೊತೆ ಮಾತನಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬುಧವಾರ ಬೆಳಿಗ್ಗೆ ನಾನು ಎಚ್ಚರಗೊಳ್ಳುತ್ತಿದ್ದಂತೆಯೇ ಇಬ್ಬರು ಪೊಲೀಸರು ಮನೆಗೆ ಬಂದರು. ‘ನಿಮ್ಮ ಮಗ ಸತ್ತಿದ್ದಾನೆ, ಆಸ್ಪತ್ರೆಗೆ ಬರುತ್ತೀರಾ?’ ಎಂದು ಕೇಳಿದರು. ನನ್ನ ಪತಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ, ನಾನು ಬರುವ ಸ್ಥಿತಿಯಲ್ಲಿಲ್ಲ ಎಂದು ಹೇಳಿದೆ. ಆತ ಯಾವುದೇ ಒಳ್ಳೆಯ ಕೆಲಸ ಮಾಡಿಲ್ಲ. ಆತ ಎಸಗಿದ ಭಯಾನಕ ಅಪರಾಧಕ್ಕೆ ಆತನಿಗೆ ತಕ್ಕ ಶಿಕ್ಷೆಯಾಗಿದೆ. ನಾನು ಆತನ ಮೃತದೇಹವನ್ನು ಮನೆಗೆ ತರುವುದಿಲ್ಲ ಮತ್ತು ಸ್ವೀಕರಿಸುವುದೂ ಇಲ್ಲ. ಆತನ ಶವವನ್ನು ಪೊಲೀಸರು ಏನು ಬೇಕಾದರೂ ಮಾಡಿಕೊಳ್ಳಲಿ, ನನಗೆ ಯಾವುದೇ ಅಭ್ಯಂತರವಿಲ್ಲ” ಎಂದು ಅತ್ಯಂತ ಕಠಿಣ ಧ್ವನಿಯಲ್ಲಿ ಸಂಧ್ಯಾ ಮಂಡಲ್ ಪ್ರತಿಪಾದಿಸಿದ್ದಾರೆ.

ಈ ಪ್ರಕರಣವು ಪಶ್ಚಿಮ ಬಂಗಾಳ ಮಾತ್ರವಲ್ಲದೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಕಳೆದ ಶನಿವಾರ (ಜುಲೈ 4) ಕಾಣೆಯಾಗಿದ್ದ 12 ವರ್ಷದ ಅಪ್ರಾಪ್ತ ಬಾಲಕಿಯ ಮೃತದೇಹವು ಭಾನುವಾರ ಬೆಳಿಗ್ಗೆ ಬರುಯಿಪುರದ ಸೂರ್ಯಪುರ ಹಾಟ್ ಬಳಿಯ ಕೊಳವೊಂದರಲ್ಲಿ ಪತ್ತೆಯಾಗಿತ್ತು.

ಬಾಲಕಿಯ ಶವ ಸಿಗುತ್ತಿದ್ದಂತೆಯೇ ಸ್ಥಳೀಯರು ರೊಚ್ಚಿಗೆದ್ದು, ರಸ್ತೆ ತಡೆ ನಡೆಸಿ, ಪೊಲೀಸ್ ವಾಹನಗಳನ್ನು ಜಖಂಗೊಳಿಸಿ ತೀವ್ರ ಪ್ರತಿಭಟನೆ ನಡೆಸಿದ್ದರು.

ಆಸ್ಪತ್ರೆಯಿಂದ ಬಂದ ಪ್ರಥಮ ಮರಣೋತ್ತರ ಪರೀಕ್ಷೆಯ (Autopsy) ವರದಿಯು ಅಪರಾಧದ ಕ್ರೂರತೆಯನ್ನು ಬಿಚ್ಚಿಟ್ಟಿತ್ತು. ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಆಕೆಯ ದೇಹಕ್ಕೆ ಸುಟ್ಟ ಗಾಯಗಳನ್ನು ಉಂಟುಮಾಡಿ, ತಲೆಯ ಹಿಂಭಾಗಕ್ಕೆ ಬಲವಾದ ವಸ್ತುವಿನಿಂದ ಹೊಡೆದು ಹಿಂಸಿಸಲಾಗಿತ್ತು. ಅಷ್ಟೇ ಅಲ್ಲದೆ, ಬಾಲಕಿ ಜೀವಂತವಾಗಿದ್ದಾಗಲೇ ಆಕೆಯನ್ನು ಕೊಳಕ್ಕೆ ಎಸೆಯಲಾಗಿತ್ತು ಎಂಬುದು ಆಕೆಯ ಶ್ವಾಸಕೋಶದಲ್ಲಿ ಸಿಕ್ಕ ಕೆಸರು ನೀರಿನಿಂದ ದೃಢಪಟ್ಟಿತ್ತು. ಅತಿಯಾದ ರಕ್ತಸ್ರಾವ ಮತ್ತು ನೀರಿನಲ್ಲಿ ಮುಳುಗಿದ್ದೇ ಬಾಲಕಿಯ ಸಾವಿಗೆ ಕಾರಣವೆಂದು ವೈದ್ಯರು ದೃಢಪಡಿಸಿದ್ದರು.

ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಬಾಲಕಿ ಕಾಣೆಯಾಗುವ ಮೊದಲು ಆಕೆಯೊಂದಿಗೆ ಪ್ರಭಾಸ್ ಮೊಂಡೋಲ್ ಇರುವುದು ಕಂಡುಬಂದಿತ್ತು. ಪೊಲೀಸರು ತಕ್ಷಣವೇ ಆತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ, ಇತರ ಸಹ-ಆರೋಪಿಗಳಾದ ಆನಂದ್ ಸರ್ದಾರ್, ದಿವಾಕರ್ ಸರ್ದಾರ್ ಮತ್ತು ಕಬೀರ್ ಮೊಲ್ಲಾ ಎಂಬುವವರ ಹೆಸರುಗಳು ಹೊರಬಂದಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪೋಕ್ಸೋ (POCSO) ಕಾಯ್ದೆ, ಸಾಮೂಹಿಕ ಅತ್ಯಾಚಾರ, ಕೊಲೆ ಮತ್ತು ಸಾಕ್ಷ್ಯ ನಾಶದ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಶೇಷ ತನಿಖಾ ತಂಡವನ್ನು (SIT) ರಚಿಸಿದ್ದರು.

ಈ ಎನ್‌ಕೌಂಟರ್ ಘಟನೆಯು ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲೂ ಭಾರಿ ಸಂಚಲನ ಮೂಡಿಸಿದೆ. ರಾಜ್ಯ ಸರ್ಕಾರವು ಅಪರಾಧಗಳ ವಿರುದ್ಧ ‘ಝೀರೋ ಟಾಲರೆನ್ಸ್’ ನೀತಿ ಅನುಸರಿಸುವುದಾಗಿ ಸ್ಪಷ್ಟಪಡಿಸಿದ್ದರೆ, ಮತ್ತೊಂದೆಡೆ ಎನ್‌ಕೌಂಟರ್ ಪ್ರಕ್ರಿಯೆಯ ಕುರಿತು ಪರ-ವಿರೋಧ ಚರ್ಚೆಗಳು ಆರಂಭವಾಗಿವೆ.

ತನ್ನ ಮಗನೇ ಆದರೂ ಆತ ಎಸಗಿದ ಮನುಷ್ಯತ್ವವಿಲ್ಲದ ಕೃತ್ಯಕ್ಕೆ ಆತನ ಹೆತ್ತ ತಾಯಿಯೇ ಮೃತದೇಹವನ್ನು ನಿರಾಕರಿಸಿ, ಶಿಕ್ಷೆಯನ್ನು ಬೆಂಬಲಿಸಿರುವುದು ಸಮಾಜದಲ್ಲಿ ಅಪರಾಧಿಗಳ ವಿರುದ್ಧ ವ್ಯಕ್ತವಾಗುತ್ತಿರುವ ತೀವ್ರ ಆಕ್ರೋಶಕ್ಕೆ ಸಾಕ್ಷಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...