Homeಕರ್ನಾಟಕಯತ್ನಾಳ್ ಬೆದರಿಕೆಗೆ ಮಣಿದ ಯಡಿಯೂರಪ್ಪ ಸರ್ಕಾರ; ವಿಜಯಪುರಕ್ಕೆ ಅನುದಾನ ಬಿಡುಗಡೆ!

ಯತ್ನಾಳ್ ಬೆದರಿಕೆಗೆ ಮಣಿದ ಯಡಿಯೂರಪ್ಪ ಸರ್ಕಾರ; ವಿಜಯಪುರಕ್ಕೆ ಅನುದಾನ ಬಿಡುಗಡೆ!

ವಿಜಯಪುರಕ್ಕೆ ಬಿಡುಗಡೆಯಾಗಿದ್ದ ಅನುದಾನ ಹಿಂಪಡೆದಿದ್ದಕ್ಕೆ 'ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದರು.

- Advertisement -
- Advertisement -

ಬಸನಗೌಡ ಪಾಟೀಲ್ ಯತ್ನಾಳ್ ಕಳೆದ ತಿಂಗಳು ಯಡಿಯೂರಪ್ಪನವರ ವಿರುದ್ಧ ವಾಗ್ದಾಳಿ ನಡೆಸಿ, ತಮ್ಮ ಕ್ಷೇತ್ರಕ್ಕೆ ಬಿಡುಗಡೆ ಮಾಡಿರುವ ಅನುದಾನವನ್ನು ಹಿಂಪಡೆದುಕೊಂಡಿದ್ದಕ್ಕೆ ಗರಂ ಆಗಿ ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ವಿಜಯಪುರ ಮಹಾನಗರ ಪಾಲಿಕೆಗೆ ಅನುದಾನ ಬಿಡುಗಡೆ ಮಾಡಿದೆ.

ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುರ್ಚಿಯ ಬಗ್ಗೆ ಭವಿಷ್ಯ ನುಡಿದಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, “ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ” ಎಂದು ಹೇಳಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.

ಹಾಗಾಗಿ ರಾಜ್ಯ ಸರ್ಕಾರ ಯತ್ನಾಳ್ ಅವರನ್ನು ತಣ್ಣಗಾಗಿಸಲು ಸುಮಾರು 50 ಕೊಟಿ ಹಣವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿರುವುದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ’ಮಿಸ್ಟರ್‌ ಯಡಿಯೂರಪ್ಪ ನೀವು ಪ್ರಜಾಪ್ರಭುತ್ವವಾದಿಯಲ್ಲ, ಸರ್ವಾಧಿಕಾರಿ’!: ಕೋಡಿಹಳ್ಳಿ ಚಂದ್ರಶೇಖರ್ ಸಂದರ್ಶನ

ಮುನಿಸಿಕೊಂಡಿದ್ದ ಯತ್ನಾಳ್ ಅವರನ್ನು ಒಲಿಸಿಕೊಳ್ಳಲು ರಾಜ್ಯ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಹಲವರು ಹೇಳಿದ್ದಾರೆ. ಇನ್ನುಮುಂದೆ ತಮ್ಮ ಕ್ಷೇತ್ರಕ್ಕೆ ಅನುದಾನ ಬರಬೇಕು ಎಂದರೆ ಮುಖ್ಯಮಂತ್ರಿ ವಿರುದ್ಧ ಮಾತನಾಡ ಬೇಕು ಎಂದು ಕೆಲವರು ವ್ಯಂಗ್ಯವಾಡಿದ್ದಾರೆ.

ವಿಜಯಪುರದ ಕಾರ್ಯಕ್ರಮವೊಂದರಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು, “ಉಮೇಶ್ ಕತ್ತಿ ಮೊನ್ನೆ ಮಾತನಾಡುತ್ತಾ, ಯಡಿಯೂರಪ್ಪ ಏನ್ ಶಿವಮೊಗ್ಗದ ಮುಖ್ಯಮಂತ್ರಿಯೋ ಅಥವಾ ಕರ್ನಾಟಕದ ಮುಖ್ಯಮಂತ್ರಿಯೋ ಎಂದು ಪ್ರಶ್ನಿಸಿದ್ದರು. ವಿಜಯಪುರಕ್ಕೆ ಬಿಡುಗಡೆಯಾಗಿದ್ದ 125 ಕೋಟಿ ಹಣವನ್ನು ಹಿಂದಕ್ಕೆ ಪಡೆದಿದ್ದಾರೆ. ಸಿಎಂ ಎಲ್ಲಾ ಅನುದಾನವನ್ನೂ ಶಿವಮೊಗ್ಗಕ್ಕೆ ಒಯ್ಯುತ್ತಿದ್ದಾರೆ. ಇನ್ನೇನು ಬಹಳ ದಿನ ಯಡಿಯೂರಪ್ಪ ಅಧಿಕಾರದಲ್ಲಿ ಉಳಿಯುವುದಿಲ್ಲ. ಅವರದೂ ಬಂದೈತೆ. ಮೇಲಿನವರಿಗೂ ಅವರು ಸಾಕಾಗಿದ್ದಾರೆ. ಯಡಿಯೂರಪ್ಪನವರ ನಂತರ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿಯಾಗಲಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ! ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...