Homeಕರ್ನಾಟಕಬಿಎಸ್​ವೈ ವಿರುದ್ಧ ಮತ್ತೆ ಅಪಸ್ವರ ಎತ್ತಿದ ಯತ್ನಾಳ್​; ಸಿಎಂ ಕಾರ್ಯವೈಖರಿ ಖಂಡಿಸಿ ಕಟೀಲ್​ಗೆ ಪತ್ರ

ಬಿಎಸ್​ವೈ ವಿರುದ್ಧ ಮತ್ತೆ ಅಪಸ್ವರ ಎತ್ತಿದ ಯತ್ನಾಳ್​; ಸಿಎಂ ಕಾರ್ಯವೈಖರಿ ಖಂಡಿಸಿ ಕಟೀಲ್​ಗೆ ಪತ್ರ

ಜ.4 ಮತ್ತು 5 ರಂದು ವಿಭಾಗವಾರು ಶಾಸಕರ ಬದಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು. ಈ ಹಿಂದಿನ ವಿಭಾಗವಾರು ಸಭೆಗಳು ವಿಫಲವಾಗಿವೆ ಎಂದು ಬಸನಗೌಡ ಪಾಟೀಲ್​ ತಿಳಿಸಿದ್ದಾರೆ.

- Advertisement -
- Advertisement -

ಬಿಜೆಪಿ ಪಕ್ಷ ರಾಜ್ಯದಲ್ಲಿ ತಮ್ಮ ನಿರೀಕ್ಷೆಯಂತೆ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ವರ್ಷದ ಮೇಲಾಗಿದೆ. ಆದರೂ ಆಂತರಿಕ ಬಿಕ್ಕಟ್ಟು ಮಾತ್ರ ಇನ್ನೂ ಶಮನವಾಗುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಇನ್ನೂ ವಿರೋಧ ಪಕ್ಷಗಳಿಗಿಂತ ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಮುಖ್ಯಮಂತ್ರಿ ಬಿಎಸ್​ವೈ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದು ಪಕ್ಷಕ್ಕೆ ದುಬಾರಿಯಾಗಿ ಪರಿಣಮಿಸುತ್ತಿದೆ. ಪಕ್ಷದ ನಾಯಕರು ಎಷ್ಟೇ ಹೇಳಿದರೂ ಬಿಎಸ್​ ಯಡಿಯೂರಪ್ಪ ವಿರುದ್ಧದ ತಮ್ಮ ಎಂದಿನ ವಾಗ್ದಾಳಿಯನ್ನು ನಿಲ್ಲಿಸಲು ಯತ್ನಾಳ್​ ಇಂದೂ ಸಹ ಅವರ ಕಾರ್ಯ ವೈಖರಿಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಆಡಳಿತ ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಜನವರಿ.4 ಮತ್ತು 5 ರಂದು ಬೆಂಗಳೂರಿನಲ್ಲಿ ವಿಭಾಗವಾರು ಶಾಸಕರ ಸಭೆ ಕರೆದಿದ್ದಾರೆ. ಆದರೆ, ಈ ಸಭೆಯ ವಿಚಾರವನ್ನು ಮುಂದಿಟ್ಟುಕೊಂಡು ಶಾಸಕ ಯತ್ನಾಳ್ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್​ ಕಟೀಲ್ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದ ಸಾರಾಂಶ ಹೀಗಿದೆ:

ಜ.4 ಮತ್ತು 5 ರಂದು ವಿಭಾಗವಾರು ಶಾಸಕರ ಬದಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು. ಈ ಹಿಂದಿನ ವಿಭಾಗವಾರು ಸಭೆಗಳು ವಿಫಲವಾಗಿವೆ. ಈ ಮೊದಲು ವಿಭಾಗವಾರು ಶಾಸಕರ ಸಭೆ ಕರೆಯಲಾಗಿತ್ತು. ಆ ಸಭೆಯಲ್ಲಿ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಮನವಿ ಸಲ್ಲಿಸಲಾಗಿತ್ತು. ಸಿಎಂ ತಕ್ಷಣ ಹಣ ಬಿಡುಗಡೆ ಮಾಡಿ ಎಂದು ಷರಾ ಬರೆದಿದ್ದರು. ಆದರೂ, ಈವರೆಗೆ ಹಣ ಬಿಡುಗಡೆಯಾಗಿಲ್ಲ ಎಂದು ಯತ್ನಾಳ ಪತ್ರದಲ್ಲಿ ತಿಳಿಸಿದ್ದಾರೆ.

ಯತ್ನಾಳ್ ಬರೆದಿರುವ ಪತ್ರ.

ಈ ಹಿಂದೆ ನಡೆದ ವಿಭಾಗವಾರು ಶಾಸಕರ ಸಭೆಯಿಂದಾಗಿ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಶಾಸಕರ ಮನಸ್ಸಿಗೆ ನೋವಾಗಿದೆ. ಉದಾಹರಣೆಗೆ ನನ್ನ ಮತಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಿಡುಗಡೆಯಾಗಿಲ್ಲ. ಶಾಸಕರು ಸಿಎಂ ಭೇಟಿಗೆ ಹೋದರೂ ಮುಖ್ಯಮಂತ್ರಿಗಳು ಸಿಗುತ್ತಿಲ್ಲ. ಬಹುಷಃ ಸಿಎಂ ಅನಾರೋಗ್ಯದ ದೃಷ್ಠಿಯಿಂದ ಸಿಗುತ್ತಿಲ್ಲ ಎಂದು ಭಾವಿಸುತ್ತೇನೆ ಎಂದು ಸಿಎಂ ಆರೋಗ್ಯದ ಬಗ್ಗೆಯೂ ಯತ್ನಾಳ ಪ್ರಸ್ತಾಪಿಸಿದ್ದಾರೆ.

ಇತ್ತೀಚೆಗೆ ನಡೆದ ನಾನಾ ನಿಗಮ ಮತ್ತು ಮಂಡಳಿಗಳಿಗೆ, ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಅಲ್ಲದೇ, ಹಲವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಈ ವಿಚಾರದಲ್ಲಿಯೂ ಬಿಜೆಪಿ ಶಾಸಕರನ್ನು ಕಡೆಗಣನೆ ಮಾಡಲಾಗಿದೆ. ಇದರಿಂದ ಕಾರ್ಯಕರ್ತರಿಗೂ ನೋವಾಗಿದೆ” ಎಂದು ಯತ್ನಾಳ ಸಿಎಂ ವಿರುದ್ಧದ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

ಆದ್ದರಿಂದ, ರಾಜ್ಯಾಧ್ಯಕ್ಷರು, ಸಿಎಂ ಜ. 4 ಮತ್ತು 5 ರಂದು ಬೆಳಿಗ್ಗೆಯಿಂದ ಸಂಜೆಯವರೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು. ಈ ಮೂಲಕ ಬಿಜೆಪಿ ಶಾಸಕರಲ್ಲಿ ಇರುವ ಅಸಮಾಧಾನ ಹೋಗಲಾಡಿಸಬೇಕು ಎಂದು ಯತ್ನಾಳ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್​ ಕಟೀಲ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...