Homeಕರ್ನಾಟಕಬಿಜೆಪಿ ಆರ್‌.ಎಸ್‌.ಎಸ್‌ ಮುಖಂಡರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಯತ್ನಾಳ್

ಬಿಜೆಪಿ ಆರ್‌.ಎಸ್‌.ಎಸ್‌ ಮುಖಂಡರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಯತ್ನಾಳ್

- Advertisement -
- Advertisement -

ಪ್ರವಾಹ ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯೊಳಗೆ ಹುಟ್ಟಿಕೊಂಡ ಅಸಮಾಧಾನದ ಹೊಗೆ ಬೆಂಕಿಯಾಗುವ ಲಕ್ಷಣಗಳು ದಟ್ಟವಾಗುತ್ತಿವೆ. ದಿನಕ್ಕೊಬ್ಬರಂತೆ ಬಿಜೆಪಿಯ ಒಳಗಿನಿಂದಲೇ ಪಕ್ಷದ ಮುಖಂಡರ ವಿರುದ್ಧ ಅಪಸ್ವರಗಳು ಕೇಳಿಬರುತ್ತಿದ್ದು ಇದು ಮುಖಂಡರಿಗೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ.

ಮೊನ್ನೆಯಷ್ಟೇ ಮೋದಿ ವಿರುದ್ಧ ಗುಡುಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಒಂದೇ ದಿನಕ್ಕೆ ನಾಲ್ಕೈದು ಪ್ರಭಾವಿ ವ್ಯಕ್ತಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಳಿಗ್ಗೆ ಸದಾನಂದಗೌಡ, ಜಗದೀಶ್ ಶೆಟ್ಟರ್‌ ಮತ್ತು ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು ಈಗ ಆರ್‌.ಎಸ್‌.ಎಸ್‌ ಮುಖಂಡ ಬಿ.ಎಲ್ ಸಂತೋಷ್‌ ವಿರುದ್ಧ ಮುರಿದುಕೊಂಡು ಬಿದ್ದಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿರುವ ಅವರು ಬಿ.ಎಸ್ ಸಂತೋಷ್‌ರವರನ್ನು ಅವರ ಜಾತಿಯ ಕಾರಣಕ್ಕೆ ಮಾತ್ರ ನಮ್ಮ ಮಾಧ್ಯಮಗಳು ಎತ್ತಿ ಆಡಿಸುತ್ತಿವೆ. ಅವರಿಗೆ ಇಂದ್ರ ಚಂದ್ರ ಎಂದೆಲ್ಲಾ ಬಿರುದು ಬಾವಲಿಗಳನ್ನು ನೀಡುತ್ತಿದ್ದಾರೆ. ಆದರೆ ಸಂತೋಷ್‌ಗೆ ಚುನಾವಣೆ ಗೆಲ್ಲಿಸುವ ಛಾತಿ ಇಲ್ಲ ಎಂದು ಟೀಕಿಸಿದ್ದಾರೆ.

ಕೇರಳದ ಜವಾಬ್ದಾರಿ ಹೊತ್ತಿಕೊಂಡಿದ್ದ ಅವರು ಶಬರಿಮಲೆ ವಿವಾದ ಇಟ್ಟುಕೊಂಡು ೫ ಸೀಟುಗಳನ್ನು ಗೆಲ್ಲಿಸುತ್ತೇನೆ ಎಂದಿದ್ದರು. ಒಂದನ್ನು ಗೆಲ್ಲಸಲಾಗಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ದಿವಂಗತ ಅನಂತ್‌ ಕುಮಾರ್‌ ಮತ್ತು ಸಿಎಂ ಯಡಿಯುರಪ್ಪನವರ ಗುಣಗಾನ ಮಾಡಿರುವ ಬಸನಗೌಡ ಯತ್ನಾಳ್‌ ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ಸಚಿವರ ವಿರುದ್ಧವೂ ತಿರುಗಿಬಿದ್ದಿದ್ದಾರೆ. ಒಬ್ಬರು ಬೆಂಗಳೂರಿನಲ್ಲಿ ಕುಳಿತು, ಇನ್ನೊಬ್ಬರು ಹುಬ್ಬಳ್ಳಿಯಲ್ಲಿ ಕುಳಿತು ಆಟವಾಡುತ್ತಿದ್ದೀರಾ? ಧೈರ್ಯವಿದ್ದರೆ ಮೋದಿ ಬಳಿ ಮಾತನಾಡಿ ೧೦ ಸಾವಿರ ಕೋಟಿ ಪ್ರವಾಹ ಪರಿಹಾರ ತನ್ನಿ ಎಂದು ಸವಾಲು ಹಾಕಿದ್ದಾರೆ.

ದಿವಂಗತ ಅನಂತ್‌ ಕುಮಾರ್‌ರವರು ಬದುಕಿದ್ದರೆ ರಾಜ್ಯಕ್ಕೆ ಇಂತಹ ಕೆಟ್ಟ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿರುವ ಅವರು ಅನಂತ್‌ ಕುಮಾರ್‌‌ ಮತ್ತು ಯಡಿಯೂರಪ್ಪನವರು ಸೈಕಲ್‌ ತುಳಿದು ಕಟ್ಟಿದ ಪಕ್ಷದಲ್ಲಿ ನೀವೆಲ್ಲಾ ಅಧಿಕಾರ ಅನುಭವಿಸುತ್ತಿದ್ದೀರಿ ಎಂಬುದನ್ನು ಮರೆಯಬೇಡಿ ಎಂದು ತಿಳಿಸಿದ್ದಾರೆ.

ನಾನು ಅಟಲ್ ಬಿಹಾರಿ ವಾಜಪೇಯಿರವರು ಪ್ರಧಾನಿಯಾಗಿದ್ದಾಗ ಸಚಿವನಾಗಿದ್ದೆ. ನಿಮ್ಮ ಹಾಗೆ ಕೈಕಟ್ಟಿ ಕುಳಿತುಕೊಳ್ಳುವ ಬದಲು ಪ್ರಧಾನಿಯೊಂದಿಗೆ ಮಾತನಾಡಿ ಸಾಕಷ್ಟು ಅನುದಾನ ತಂದಿದ್ದೆ ಎಂದು ಅವರು ಹೇಳಿದ್ದಾರೆ. ಪ್ರವಾಹ ಪರಿಹಾರಕ್ಕೆ ಕೇಂದ್ರದ ನೆರವು ಬೇಡವೆಂದಿದ್ದ ಸಂಸದ ತೇಜಸ್ವಿ ಸೂರ್ಯನ ವಿರುದ್ದವೂ ಹರಿಹಾಯ್ದಿದ್ದರು.

ನಿನ್ನೆ ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರ ವಿರುದ್ಧ ತೀವ್ರ ಟೀಕೆಗಳ ಸುರಿಮಳೆಗೈದಿದ್ದರು. ಇದಕ್ಕೆ ಸದಾನಂದಗೌಡರು ಸಹ ತಿರುಗೇಟು ನೀಡಿದ್ದರು. ಇವರಿಬ್ಬರ ನಡುವೆ ಟ್ವಿಟ್ಟರ್‌ನಲ್ಲಿ ವಾದ ವಿವಾದ ನಡೆದು ಕೊನೆಗೆ ಸದಾನಂದಾಗೌಡರು ಸೂಲಿಬೆಲೆಯನ್ನು ಬ್ಲಾಕ್‌ ಮಾಡುವ ಮೂಲಕ ಅಂತ್ಯ ಹಾಡಿದ್ದರು.

ಮೂರು ದಿನದ ಹಿಂದೆ ಚಕ್ರವರ್ತಿ ಸೂಲಿಬೆಲೆ ಪ್ರವಾಹ ಪರಿಹಾರ ತರದ ೨೫ ಸಂಸದರು ಬದುಕಿದ್ದಾರೆಯೇ? ಮೋದಿಗೆ ಉತ್ತರ ಕರ್ನಾಟಕದ ಕಷ್ಟ ಕಾಣುತ್ತಿಲ್ಲವೇ ಎಂದು ಟೀಕಿಸಿದ್ದರು. ಸಂಸದ ಪ್ರತಾಪ ಸಿಂಹ ಅಜ್ಞಾನಿ ಎಂದಿದ್ದರು. ಸದಾನಂದಗೌಡರದು ದಾರ್ಷ್ಟ್ಯ, ದುರಹಂಕಾರ ಎಂದು ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಸದಾನಂದಗೌಡರು ಚಕ್ರವರ್ತಿ ಸೂಲಿಬೆಲೆ ದೇಶದ್ರೋಹಿ ಎಂದಿದ್ದರು.

ಬಿಜೆಪಿಯಲ್ಲಿ ನಡೆಯುತ್ತಿರುವ ಈ ಕಚ್ಚಾಟವೂ ಸೋಷಿಯಲ್ ಮೀಡಿಯಾದಲ್ಲಿ ಎಲ್ಲರ ಬಾಯಿಗೆ ಆಹಾರ ಸಿಕ್ಕಂತಾಗಿದೆ. ಬಹುತೇಕರ ಈ ಬಿಜೆಪಿಯ ಜಗಳವನ್ನು ಎಲ್ಲಾ ಕಡೆ ಹಂಚಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...