Homeಕರ್ನಾಟಕಬಿಜೆಪಿ ಆರ್‌.ಎಸ್‌.ಎಸ್‌ ಮುಖಂಡರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಯತ್ನಾಳ್

ಬಿಜೆಪಿ ಆರ್‌.ಎಸ್‌.ಎಸ್‌ ಮುಖಂಡರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಯತ್ನಾಳ್

- Advertisement -
- Advertisement -

ಪ್ರವಾಹ ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯೊಳಗೆ ಹುಟ್ಟಿಕೊಂಡ ಅಸಮಾಧಾನದ ಹೊಗೆ ಬೆಂಕಿಯಾಗುವ ಲಕ್ಷಣಗಳು ದಟ್ಟವಾಗುತ್ತಿವೆ. ದಿನಕ್ಕೊಬ್ಬರಂತೆ ಬಿಜೆಪಿಯ ಒಳಗಿನಿಂದಲೇ ಪಕ್ಷದ ಮುಖಂಡರ ವಿರುದ್ಧ ಅಪಸ್ವರಗಳು ಕೇಳಿಬರುತ್ತಿದ್ದು ಇದು ಮುಖಂಡರಿಗೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ.

ಮೊನ್ನೆಯಷ್ಟೇ ಮೋದಿ ವಿರುದ್ಧ ಗುಡುಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಒಂದೇ ದಿನಕ್ಕೆ ನಾಲ್ಕೈದು ಪ್ರಭಾವಿ ವ್ಯಕ್ತಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಳಿಗ್ಗೆ ಸದಾನಂದಗೌಡ, ಜಗದೀಶ್ ಶೆಟ್ಟರ್‌ ಮತ್ತು ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು ಈಗ ಆರ್‌.ಎಸ್‌.ಎಸ್‌ ಮುಖಂಡ ಬಿ.ಎಲ್ ಸಂತೋಷ್‌ ವಿರುದ್ಧ ಮುರಿದುಕೊಂಡು ಬಿದ್ದಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿರುವ ಅವರು ಬಿ.ಎಸ್ ಸಂತೋಷ್‌ರವರನ್ನು ಅವರ ಜಾತಿಯ ಕಾರಣಕ್ಕೆ ಮಾತ್ರ ನಮ್ಮ ಮಾಧ್ಯಮಗಳು ಎತ್ತಿ ಆಡಿಸುತ್ತಿವೆ. ಅವರಿಗೆ ಇಂದ್ರ ಚಂದ್ರ ಎಂದೆಲ್ಲಾ ಬಿರುದು ಬಾವಲಿಗಳನ್ನು ನೀಡುತ್ತಿದ್ದಾರೆ. ಆದರೆ ಸಂತೋಷ್‌ಗೆ ಚುನಾವಣೆ ಗೆಲ್ಲಿಸುವ ಛಾತಿ ಇಲ್ಲ ಎಂದು ಟೀಕಿಸಿದ್ದಾರೆ.

ಕೇರಳದ ಜವಾಬ್ದಾರಿ ಹೊತ್ತಿಕೊಂಡಿದ್ದ ಅವರು ಶಬರಿಮಲೆ ವಿವಾದ ಇಟ್ಟುಕೊಂಡು ೫ ಸೀಟುಗಳನ್ನು ಗೆಲ್ಲಿಸುತ್ತೇನೆ ಎಂದಿದ್ದರು. ಒಂದನ್ನು ಗೆಲ್ಲಸಲಾಗಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ದಿವಂಗತ ಅನಂತ್‌ ಕುಮಾರ್‌ ಮತ್ತು ಸಿಎಂ ಯಡಿಯುರಪ್ಪನವರ ಗುಣಗಾನ ಮಾಡಿರುವ ಬಸನಗೌಡ ಯತ್ನಾಳ್‌ ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ಸಚಿವರ ವಿರುದ್ಧವೂ ತಿರುಗಿಬಿದ್ದಿದ್ದಾರೆ. ಒಬ್ಬರು ಬೆಂಗಳೂರಿನಲ್ಲಿ ಕುಳಿತು, ಇನ್ನೊಬ್ಬರು ಹುಬ್ಬಳ್ಳಿಯಲ್ಲಿ ಕುಳಿತು ಆಟವಾಡುತ್ತಿದ್ದೀರಾ? ಧೈರ್ಯವಿದ್ದರೆ ಮೋದಿ ಬಳಿ ಮಾತನಾಡಿ ೧೦ ಸಾವಿರ ಕೋಟಿ ಪ್ರವಾಹ ಪರಿಹಾರ ತನ್ನಿ ಎಂದು ಸವಾಲು ಹಾಕಿದ್ದಾರೆ.

ದಿವಂಗತ ಅನಂತ್‌ ಕುಮಾರ್‌ರವರು ಬದುಕಿದ್ದರೆ ರಾಜ್ಯಕ್ಕೆ ಇಂತಹ ಕೆಟ್ಟ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿರುವ ಅವರು ಅನಂತ್‌ ಕುಮಾರ್‌‌ ಮತ್ತು ಯಡಿಯೂರಪ್ಪನವರು ಸೈಕಲ್‌ ತುಳಿದು ಕಟ್ಟಿದ ಪಕ್ಷದಲ್ಲಿ ನೀವೆಲ್ಲಾ ಅಧಿಕಾರ ಅನುಭವಿಸುತ್ತಿದ್ದೀರಿ ಎಂಬುದನ್ನು ಮರೆಯಬೇಡಿ ಎಂದು ತಿಳಿಸಿದ್ದಾರೆ.

ನಾನು ಅಟಲ್ ಬಿಹಾರಿ ವಾಜಪೇಯಿರವರು ಪ್ರಧಾನಿಯಾಗಿದ್ದಾಗ ಸಚಿವನಾಗಿದ್ದೆ. ನಿಮ್ಮ ಹಾಗೆ ಕೈಕಟ್ಟಿ ಕುಳಿತುಕೊಳ್ಳುವ ಬದಲು ಪ್ರಧಾನಿಯೊಂದಿಗೆ ಮಾತನಾಡಿ ಸಾಕಷ್ಟು ಅನುದಾನ ತಂದಿದ್ದೆ ಎಂದು ಅವರು ಹೇಳಿದ್ದಾರೆ. ಪ್ರವಾಹ ಪರಿಹಾರಕ್ಕೆ ಕೇಂದ್ರದ ನೆರವು ಬೇಡವೆಂದಿದ್ದ ಸಂಸದ ತೇಜಸ್ವಿ ಸೂರ್ಯನ ವಿರುದ್ದವೂ ಹರಿಹಾಯ್ದಿದ್ದರು.

ನಿನ್ನೆ ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರ ವಿರುದ್ಧ ತೀವ್ರ ಟೀಕೆಗಳ ಸುರಿಮಳೆಗೈದಿದ್ದರು. ಇದಕ್ಕೆ ಸದಾನಂದಗೌಡರು ಸಹ ತಿರುಗೇಟು ನೀಡಿದ್ದರು. ಇವರಿಬ್ಬರ ನಡುವೆ ಟ್ವಿಟ್ಟರ್‌ನಲ್ಲಿ ವಾದ ವಿವಾದ ನಡೆದು ಕೊನೆಗೆ ಸದಾನಂದಾಗೌಡರು ಸೂಲಿಬೆಲೆಯನ್ನು ಬ್ಲಾಕ್‌ ಮಾಡುವ ಮೂಲಕ ಅಂತ್ಯ ಹಾಡಿದ್ದರು.

ಮೂರು ದಿನದ ಹಿಂದೆ ಚಕ್ರವರ್ತಿ ಸೂಲಿಬೆಲೆ ಪ್ರವಾಹ ಪರಿಹಾರ ತರದ ೨೫ ಸಂಸದರು ಬದುಕಿದ್ದಾರೆಯೇ? ಮೋದಿಗೆ ಉತ್ತರ ಕರ್ನಾಟಕದ ಕಷ್ಟ ಕಾಣುತ್ತಿಲ್ಲವೇ ಎಂದು ಟೀಕಿಸಿದ್ದರು. ಸಂಸದ ಪ್ರತಾಪ ಸಿಂಹ ಅಜ್ಞಾನಿ ಎಂದಿದ್ದರು. ಸದಾನಂದಗೌಡರದು ದಾರ್ಷ್ಟ್ಯ, ದುರಹಂಕಾರ ಎಂದು ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಸದಾನಂದಗೌಡರು ಚಕ್ರವರ್ತಿ ಸೂಲಿಬೆಲೆ ದೇಶದ್ರೋಹಿ ಎಂದಿದ್ದರು.

ಬಿಜೆಪಿಯಲ್ಲಿ ನಡೆಯುತ್ತಿರುವ ಈ ಕಚ್ಚಾಟವೂ ಸೋಷಿಯಲ್ ಮೀಡಿಯಾದಲ್ಲಿ ಎಲ್ಲರ ಬಾಯಿಗೆ ಆಹಾರ ಸಿಕ್ಕಂತಾಗಿದೆ. ಬಹುತೇಕರ ಈ ಬಿಜೆಪಿಯ ಜಗಳವನ್ನು ಎಲ್ಲಾ ಕಡೆ ಹಂಚಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...