Homeಕರ್ನಾಟಕಬಿಜೆಪಿ ಆರ್‌.ಎಸ್‌.ಎಸ್‌ ಮುಖಂಡರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಯತ್ನಾಳ್

ಬಿಜೆಪಿ ಆರ್‌.ಎಸ್‌.ಎಸ್‌ ಮುಖಂಡರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಯತ್ನಾಳ್

- Advertisement -
- Advertisement -

ಪ್ರವಾಹ ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯೊಳಗೆ ಹುಟ್ಟಿಕೊಂಡ ಅಸಮಾಧಾನದ ಹೊಗೆ ಬೆಂಕಿಯಾಗುವ ಲಕ್ಷಣಗಳು ದಟ್ಟವಾಗುತ್ತಿವೆ. ದಿನಕ್ಕೊಬ್ಬರಂತೆ ಬಿಜೆಪಿಯ ಒಳಗಿನಿಂದಲೇ ಪಕ್ಷದ ಮುಖಂಡರ ವಿರುದ್ಧ ಅಪಸ್ವರಗಳು ಕೇಳಿಬರುತ್ತಿದ್ದು ಇದು ಮುಖಂಡರಿಗೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ.

ಮೊನ್ನೆಯಷ್ಟೇ ಮೋದಿ ವಿರುದ್ಧ ಗುಡುಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಒಂದೇ ದಿನಕ್ಕೆ ನಾಲ್ಕೈದು ಪ್ರಭಾವಿ ವ್ಯಕ್ತಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಳಿಗ್ಗೆ ಸದಾನಂದಗೌಡ, ಜಗದೀಶ್ ಶೆಟ್ಟರ್‌ ಮತ್ತು ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು ಈಗ ಆರ್‌.ಎಸ್‌.ಎಸ್‌ ಮುಖಂಡ ಬಿ.ಎಲ್ ಸಂತೋಷ್‌ ವಿರುದ್ಧ ಮುರಿದುಕೊಂಡು ಬಿದ್ದಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿರುವ ಅವರು ಬಿ.ಎಸ್ ಸಂತೋಷ್‌ರವರನ್ನು ಅವರ ಜಾತಿಯ ಕಾರಣಕ್ಕೆ ಮಾತ್ರ ನಮ್ಮ ಮಾಧ್ಯಮಗಳು ಎತ್ತಿ ಆಡಿಸುತ್ತಿವೆ. ಅವರಿಗೆ ಇಂದ್ರ ಚಂದ್ರ ಎಂದೆಲ್ಲಾ ಬಿರುದು ಬಾವಲಿಗಳನ್ನು ನೀಡುತ್ತಿದ್ದಾರೆ. ಆದರೆ ಸಂತೋಷ್‌ಗೆ ಚುನಾವಣೆ ಗೆಲ್ಲಿಸುವ ಛಾತಿ ಇಲ್ಲ ಎಂದು ಟೀಕಿಸಿದ್ದಾರೆ.

ಕೇರಳದ ಜವಾಬ್ದಾರಿ ಹೊತ್ತಿಕೊಂಡಿದ್ದ ಅವರು ಶಬರಿಮಲೆ ವಿವಾದ ಇಟ್ಟುಕೊಂಡು ೫ ಸೀಟುಗಳನ್ನು ಗೆಲ್ಲಿಸುತ್ತೇನೆ ಎಂದಿದ್ದರು. ಒಂದನ್ನು ಗೆಲ್ಲಸಲಾಗಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ದಿವಂಗತ ಅನಂತ್‌ ಕುಮಾರ್‌ ಮತ್ತು ಸಿಎಂ ಯಡಿಯುರಪ್ಪನವರ ಗುಣಗಾನ ಮಾಡಿರುವ ಬಸನಗೌಡ ಯತ್ನಾಳ್‌ ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ಸಚಿವರ ವಿರುದ್ಧವೂ ತಿರುಗಿಬಿದ್ದಿದ್ದಾರೆ. ಒಬ್ಬರು ಬೆಂಗಳೂರಿನಲ್ಲಿ ಕುಳಿತು, ಇನ್ನೊಬ್ಬರು ಹುಬ್ಬಳ್ಳಿಯಲ್ಲಿ ಕುಳಿತು ಆಟವಾಡುತ್ತಿದ್ದೀರಾ? ಧೈರ್ಯವಿದ್ದರೆ ಮೋದಿ ಬಳಿ ಮಾತನಾಡಿ ೧೦ ಸಾವಿರ ಕೋಟಿ ಪ್ರವಾಹ ಪರಿಹಾರ ತನ್ನಿ ಎಂದು ಸವಾಲು ಹಾಕಿದ್ದಾರೆ.

ದಿವಂಗತ ಅನಂತ್‌ ಕುಮಾರ್‌ರವರು ಬದುಕಿದ್ದರೆ ರಾಜ್ಯಕ್ಕೆ ಇಂತಹ ಕೆಟ್ಟ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿರುವ ಅವರು ಅನಂತ್‌ ಕುಮಾರ್‌‌ ಮತ್ತು ಯಡಿಯೂರಪ್ಪನವರು ಸೈಕಲ್‌ ತುಳಿದು ಕಟ್ಟಿದ ಪಕ್ಷದಲ್ಲಿ ನೀವೆಲ್ಲಾ ಅಧಿಕಾರ ಅನುಭವಿಸುತ್ತಿದ್ದೀರಿ ಎಂಬುದನ್ನು ಮರೆಯಬೇಡಿ ಎಂದು ತಿಳಿಸಿದ್ದಾರೆ.

ನಾನು ಅಟಲ್ ಬಿಹಾರಿ ವಾಜಪೇಯಿರವರು ಪ್ರಧಾನಿಯಾಗಿದ್ದಾಗ ಸಚಿವನಾಗಿದ್ದೆ. ನಿಮ್ಮ ಹಾಗೆ ಕೈಕಟ್ಟಿ ಕುಳಿತುಕೊಳ್ಳುವ ಬದಲು ಪ್ರಧಾನಿಯೊಂದಿಗೆ ಮಾತನಾಡಿ ಸಾಕಷ್ಟು ಅನುದಾನ ತಂದಿದ್ದೆ ಎಂದು ಅವರು ಹೇಳಿದ್ದಾರೆ. ಪ್ರವಾಹ ಪರಿಹಾರಕ್ಕೆ ಕೇಂದ್ರದ ನೆರವು ಬೇಡವೆಂದಿದ್ದ ಸಂಸದ ತೇಜಸ್ವಿ ಸೂರ್ಯನ ವಿರುದ್ದವೂ ಹರಿಹಾಯ್ದಿದ್ದರು.

ನಿನ್ನೆ ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರ ವಿರುದ್ಧ ತೀವ್ರ ಟೀಕೆಗಳ ಸುರಿಮಳೆಗೈದಿದ್ದರು. ಇದಕ್ಕೆ ಸದಾನಂದಗೌಡರು ಸಹ ತಿರುಗೇಟು ನೀಡಿದ್ದರು. ಇವರಿಬ್ಬರ ನಡುವೆ ಟ್ವಿಟ್ಟರ್‌ನಲ್ಲಿ ವಾದ ವಿವಾದ ನಡೆದು ಕೊನೆಗೆ ಸದಾನಂದಾಗೌಡರು ಸೂಲಿಬೆಲೆಯನ್ನು ಬ್ಲಾಕ್‌ ಮಾಡುವ ಮೂಲಕ ಅಂತ್ಯ ಹಾಡಿದ್ದರು.

ಮೂರು ದಿನದ ಹಿಂದೆ ಚಕ್ರವರ್ತಿ ಸೂಲಿಬೆಲೆ ಪ್ರವಾಹ ಪರಿಹಾರ ತರದ ೨೫ ಸಂಸದರು ಬದುಕಿದ್ದಾರೆಯೇ? ಮೋದಿಗೆ ಉತ್ತರ ಕರ್ನಾಟಕದ ಕಷ್ಟ ಕಾಣುತ್ತಿಲ್ಲವೇ ಎಂದು ಟೀಕಿಸಿದ್ದರು. ಸಂಸದ ಪ್ರತಾಪ ಸಿಂಹ ಅಜ್ಞಾನಿ ಎಂದಿದ್ದರು. ಸದಾನಂದಗೌಡರದು ದಾರ್ಷ್ಟ್ಯ, ದುರಹಂಕಾರ ಎಂದು ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಸದಾನಂದಗೌಡರು ಚಕ್ರವರ್ತಿ ಸೂಲಿಬೆಲೆ ದೇಶದ್ರೋಹಿ ಎಂದಿದ್ದರು.

ಬಿಜೆಪಿಯಲ್ಲಿ ನಡೆಯುತ್ತಿರುವ ಈ ಕಚ್ಚಾಟವೂ ಸೋಷಿಯಲ್ ಮೀಡಿಯಾದಲ್ಲಿ ಎಲ್ಲರ ಬಾಯಿಗೆ ಆಹಾರ ಸಿಕ್ಕಂತಾಗಿದೆ. ಬಹುತೇಕರ ಈ ಬಿಜೆಪಿಯ ಜಗಳವನ್ನು ಎಲ್ಲಾ ಕಡೆ ಹಂಚಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...