Homeಕರ್ನಾಟಕಬಿಜೆಪಿ ಆರ್‌.ಎಸ್‌.ಎಸ್‌ ಮುಖಂಡರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಯತ್ನಾಳ್

ಬಿಜೆಪಿ ಆರ್‌.ಎಸ್‌.ಎಸ್‌ ಮುಖಂಡರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಯತ್ನಾಳ್

- Advertisement -
- Advertisement -

ಪ್ರವಾಹ ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯೊಳಗೆ ಹುಟ್ಟಿಕೊಂಡ ಅಸಮಾಧಾನದ ಹೊಗೆ ಬೆಂಕಿಯಾಗುವ ಲಕ್ಷಣಗಳು ದಟ್ಟವಾಗುತ್ತಿವೆ. ದಿನಕ್ಕೊಬ್ಬರಂತೆ ಬಿಜೆಪಿಯ ಒಳಗಿನಿಂದಲೇ ಪಕ್ಷದ ಮುಖಂಡರ ವಿರುದ್ಧ ಅಪಸ್ವರಗಳು ಕೇಳಿಬರುತ್ತಿದ್ದು ಇದು ಮುಖಂಡರಿಗೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ.

ಮೊನ್ನೆಯಷ್ಟೇ ಮೋದಿ ವಿರುದ್ಧ ಗುಡುಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಒಂದೇ ದಿನಕ್ಕೆ ನಾಲ್ಕೈದು ಪ್ರಭಾವಿ ವ್ಯಕ್ತಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಳಿಗ್ಗೆ ಸದಾನಂದಗೌಡ, ಜಗದೀಶ್ ಶೆಟ್ಟರ್‌ ಮತ್ತು ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು ಈಗ ಆರ್‌.ಎಸ್‌.ಎಸ್‌ ಮುಖಂಡ ಬಿ.ಎಲ್ ಸಂತೋಷ್‌ ವಿರುದ್ಧ ಮುರಿದುಕೊಂಡು ಬಿದ್ದಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿರುವ ಅವರು ಬಿ.ಎಸ್ ಸಂತೋಷ್‌ರವರನ್ನು ಅವರ ಜಾತಿಯ ಕಾರಣಕ್ಕೆ ಮಾತ್ರ ನಮ್ಮ ಮಾಧ್ಯಮಗಳು ಎತ್ತಿ ಆಡಿಸುತ್ತಿವೆ. ಅವರಿಗೆ ಇಂದ್ರ ಚಂದ್ರ ಎಂದೆಲ್ಲಾ ಬಿರುದು ಬಾವಲಿಗಳನ್ನು ನೀಡುತ್ತಿದ್ದಾರೆ. ಆದರೆ ಸಂತೋಷ್‌ಗೆ ಚುನಾವಣೆ ಗೆಲ್ಲಿಸುವ ಛಾತಿ ಇಲ್ಲ ಎಂದು ಟೀಕಿಸಿದ್ದಾರೆ.

ಕೇರಳದ ಜವಾಬ್ದಾರಿ ಹೊತ್ತಿಕೊಂಡಿದ್ದ ಅವರು ಶಬರಿಮಲೆ ವಿವಾದ ಇಟ್ಟುಕೊಂಡು ೫ ಸೀಟುಗಳನ್ನು ಗೆಲ್ಲಿಸುತ್ತೇನೆ ಎಂದಿದ್ದರು. ಒಂದನ್ನು ಗೆಲ್ಲಸಲಾಗಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ದಿವಂಗತ ಅನಂತ್‌ ಕುಮಾರ್‌ ಮತ್ತು ಸಿಎಂ ಯಡಿಯುರಪ್ಪನವರ ಗುಣಗಾನ ಮಾಡಿರುವ ಬಸನಗೌಡ ಯತ್ನಾಳ್‌ ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ಸಚಿವರ ವಿರುದ್ಧವೂ ತಿರುಗಿಬಿದ್ದಿದ್ದಾರೆ. ಒಬ್ಬರು ಬೆಂಗಳೂರಿನಲ್ಲಿ ಕುಳಿತು, ಇನ್ನೊಬ್ಬರು ಹುಬ್ಬಳ್ಳಿಯಲ್ಲಿ ಕುಳಿತು ಆಟವಾಡುತ್ತಿದ್ದೀರಾ? ಧೈರ್ಯವಿದ್ದರೆ ಮೋದಿ ಬಳಿ ಮಾತನಾಡಿ ೧೦ ಸಾವಿರ ಕೋಟಿ ಪ್ರವಾಹ ಪರಿಹಾರ ತನ್ನಿ ಎಂದು ಸವಾಲು ಹಾಕಿದ್ದಾರೆ.

ದಿವಂಗತ ಅನಂತ್‌ ಕುಮಾರ್‌ರವರು ಬದುಕಿದ್ದರೆ ರಾಜ್ಯಕ್ಕೆ ಇಂತಹ ಕೆಟ್ಟ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿರುವ ಅವರು ಅನಂತ್‌ ಕುಮಾರ್‌‌ ಮತ್ತು ಯಡಿಯೂರಪ್ಪನವರು ಸೈಕಲ್‌ ತುಳಿದು ಕಟ್ಟಿದ ಪಕ್ಷದಲ್ಲಿ ನೀವೆಲ್ಲಾ ಅಧಿಕಾರ ಅನುಭವಿಸುತ್ತಿದ್ದೀರಿ ಎಂಬುದನ್ನು ಮರೆಯಬೇಡಿ ಎಂದು ತಿಳಿಸಿದ್ದಾರೆ.

ನಾನು ಅಟಲ್ ಬಿಹಾರಿ ವಾಜಪೇಯಿರವರು ಪ್ರಧಾನಿಯಾಗಿದ್ದಾಗ ಸಚಿವನಾಗಿದ್ದೆ. ನಿಮ್ಮ ಹಾಗೆ ಕೈಕಟ್ಟಿ ಕುಳಿತುಕೊಳ್ಳುವ ಬದಲು ಪ್ರಧಾನಿಯೊಂದಿಗೆ ಮಾತನಾಡಿ ಸಾಕಷ್ಟು ಅನುದಾನ ತಂದಿದ್ದೆ ಎಂದು ಅವರು ಹೇಳಿದ್ದಾರೆ. ಪ್ರವಾಹ ಪರಿಹಾರಕ್ಕೆ ಕೇಂದ್ರದ ನೆರವು ಬೇಡವೆಂದಿದ್ದ ಸಂಸದ ತೇಜಸ್ವಿ ಸೂರ್ಯನ ವಿರುದ್ದವೂ ಹರಿಹಾಯ್ದಿದ್ದರು.

ನಿನ್ನೆ ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರ ವಿರುದ್ಧ ತೀವ್ರ ಟೀಕೆಗಳ ಸುರಿಮಳೆಗೈದಿದ್ದರು. ಇದಕ್ಕೆ ಸದಾನಂದಗೌಡರು ಸಹ ತಿರುಗೇಟು ನೀಡಿದ್ದರು. ಇವರಿಬ್ಬರ ನಡುವೆ ಟ್ವಿಟ್ಟರ್‌ನಲ್ಲಿ ವಾದ ವಿವಾದ ನಡೆದು ಕೊನೆಗೆ ಸದಾನಂದಾಗೌಡರು ಸೂಲಿಬೆಲೆಯನ್ನು ಬ್ಲಾಕ್‌ ಮಾಡುವ ಮೂಲಕ ಅಂತ್ಯ ಹಾಡಿದ್ದರು.

ಮೂರು ದಿನದ ಹಿಂದೆ ಚಕ್ರವರ್ತಿ ಸೂಲಿಬೆಲೆ ಪ್ರವಾಹ ಪರಿಹಾರ ತರದ ೨೫ ಸಂಸದರು ಬದುಕಿದ್ದಾರೆಯೇ? ಮೋದಿಗೆ ಉತ್ತರ ಕರ್ನಾಟಕದ ಕಷ್ಟ ಕಾಣುತ್ತಿಲ್ಲವೇ ಎಂದು ಟೀಕಿಸಿದ್ದರು. ಸಂಸದ ಪ್ರತಾಪ ಸಿಂಹ ಅಜ್ಞಾನಿ ಎಂದಿದ್ದರು. ಸದಾನಂದಗೌಡರದು ದಾರ್ಷ್ಟ್ಯ, ದುರಹಂಕಾರ ಎಂದು ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಸದಾನಂದಗೌಡರು ಚಕ್ರವರ್ತಿ ಸೂಲಿಬೆಲೆ ದೇಶದ್ರೋಹಿ ಎಂದಿದ್ದರು.

ಬಿಜೆಪಿಯಲ್ಲಿ ನಡೆಯುತ್ತಿರುವ ಈ ಕಚ್ಚಾಟವೂ ಸೋಷಿಯಲ್ ಮೀಡಿಯಾದಲ್ಲಿ ಎಲ್ಲರ ಬಾಯಿಗೆ ಆಹಾರ ಸಿಕ್ಕಂತಾಗಿದೆ. ಬಹುತೇಕರ ಈ ಬಿಜೆಪಿಯ ಜಗಳವನ್ನು ಎಲ್ಲಾ ಕಡೆ ಹಂಚಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...