Homeಕರ್ನಾಟಕಬಿಜೆಪಿ ಆರ್‌.ಎಸ್‌.ಎಸ್‌ ಮುಖಂಡರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಯತ್ನಾಳ್

ಬಿಜೆಪಿ ಆರ್‌.ಎಸ್‌.ಎಸ್‌ ಮುಖಂಡರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಯತ್ನಾಳ್

- Advertisement -
- Advertisement -

ಪ್ರವಾಹ ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯೊಳಗೆ ಹುಟ್ಟಿಕೊಂಡ ಅಸಮಾಧಾನದ ಹೊಗೆ ಬೆಂಕಿಯಾಗುವ ಲಕ್ಷಣಗಳು ದಟ್ಟವಾಗುತ್ತಿವೆ. ದಿನಕ್ಕೊಬ್ಬರಂತೆ ಬಿಜೆಪಿಯ ಒಳಗಿನಿಂದಲೇ ಪಕ್ಷದ ಮುಖಂಡರ ವಿರುದ್ಧ ಅಪಸ್ವರಗಳು ಕೇಳಿಬರುತ್ತಿದ್ದು ಇದು ಮುಖಂಡರಿಗೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ.

ಮೊನ್ನೆಯಷ್ಟೇ ಮೋದಿ ವಿರುದ್ಧ ಗುಡುಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಒಂದೇ ದಿನಕ್ಕೆ ನಾಲ್ಕೈದು ಪ್ರಭಾವಿ ವ್ಯಕ್ತಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಳಿಗ್ಗೆ ಸದಾನಂದಗೌಡ, ಜಗದೀಶ್ ಶೆಟ್ಟರ್‌ ಮತ್ತು ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು ಈಗ ಆರ್‌.ಎಸ್‌.ಎಸ್‌ ಮುಖಂಡ ಬಿ.ಎಲ್ ಸಂತೋಷ್‌ ವಿರುದ್ಧ ಮುರಿದುಕೊಂಡು ಬಿದ್ದಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿರುವ ಅವರು ಬಿ.ಎಸ್ ಸಂತೋಷ್‌ರವರನ್ನು ಅವರ ಜಾತಿಯ ಕಾರಣಕ್ಕೆ ಮಾತ್ರ ನಮ್ಮ ಮಾಧ್ಯಮಗಳು ಎತ್ತಿ ಆಡಿಸುತ್ತಿವೆ. ಅವರಿಗೆ ಇಂದ್ರ ಚಂದ್ರ ಎಂದೆಲ್ಲಾ ಬಿರುದು ಬಾವಲಿಗಳನ್ನು ನೀಡುತ್ತಿದ್ದಾರೆ. ಆದರೆ ಸಂತೋಷ್‌ಗೆ ಚುನಾವಣೆ ಗೆಲ್ಲಿಸುವ ಛಾತಿ ಇಲ್ಲ ಎಂದು ಟೀಕಿಸಿದ್ದಾರೆ.

ಕೇರಳದ ಜವಾಬ್ದಾರಿ ಹೊತ್ತಿಕೊಂಡಿದ್ದ ಅವರು ಶಬರಿಮಲೆ ವಿವಾದ ಇಟ್ಟುಕೊಂಡು ೫ ಸೀಟುಗಳನ್ನು ಗೆಲ್ಲಿಸುತ್ತೇನೆ ಎಂದಿದ್ದರು. ಒಂದನ್ನು ಗೆಲ್ಲಸಲಾಗಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ದಿವಂಗತ ಅನಂತ್‌ ಕುಮಾರ್‌ ಮತ್ತು ಸಿಎಂ ಯಡಿಯುರಪ್ಪನವರ ಗುಣಗಾನ ಮಾಡಿರುವ ಬಸನಗೌಡ ಯತ್ನಾಳ್‌ ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ಸಚಿವರ ವಿರುದ್ಧವೂ ತಿರುಗಿಬಿದ್ದಿದ್ದಾರೆ. ಒಬ್ಬರು ಬೆಂಗಳೂರಿನಲ್ಲಿ ಕುಳಿತು, ಇನ್ನೊಬ್ಬರು ಹುಬ್ಬಳ್ಳಿಯಲ್ಲಿ ಕುಳಿತು ಆಟವಾಡುತ್ತಿದ್ದೀರಾ? ಧೈರ್ಯವಿದ್ದರೆ ಮೋದಿ ಬಳಿ ಮಾತನಾಡಿ ೧೦ ಸಾವಿರ ಕೋಟಿ ಪ್ರವಾಹ ಪರಿಹಾರ ತನ್ನಿ ಎಂದು ಸವಾಲು ಹಾಕಿದ್ದಾರೆ.

ದಿವಂಗತ ಅನಂತ್‌ ಕುಮಾರ್‌ರವರು ಬದುಕಿದ್ದರೆ ರಾಜ್ಯಕ್ಕೆ ಇಂತಹ ಕೆಟ್ಟ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿರುವ ಅವರು ಅನಂತ್‌ ಕುಮಾರ್‌‌ ಮತ್ತು ಯಡಿಯೂರಪ್ಪನವರು ಸೈಕಲ್‌ ತುಳಿದು ಕಟ್ಟಿದ ಪಕ್ಷದಲ್ಲಿ ನೀವೆಲ್ಲಾ ಅಧಿಕಾರ ಅನುಭವಿಸುತ್ತಿದ್ದೀರಿ ಎಂಬುದನ್ನು ಮರೆಯಬೇಡಿ ಎಂದು ತಿಳಿಸಿದ್ದಾರೆ.

ನಾನು ಅಟಲ್ ಬಿಹಾರಿ ವಾಜಪೇಯಿರವರು ಪ್ರಧಾನಿಯಾಗಿದ್ದಾಗ ಸಚಿವನಾಗಿದ್ದೆ. ನಿಮ್ಮ ಹಾಗೆ ಕೈಕಟ್ಟಿ ಕುಳಿತುಕೊಳ್ಳುವ ಬದಲು ಪ್ರಧಾನಿಯೊಂದಿಗೆ ಮಾತನಾಡಿ ಸಾಕಷ್ಟು ಅನುದಾನ ತಂದಿದ್ದೆ ಎಂದು ಅವರು ಹೇಳಿದ್ದಾರೆ. ಪ್ರವಾಹ ಪರಿಹಾರಕ್ಕೆ ಕೇಂದ್ರದ ನೆರವು ಬೇಡವೆಂದಿದ್ದ ಸಂಸದ ತೇಜಸ್ವಿ ಸೂರ್ಯನ ವಿರುದ್ದವೂ ಹರಿಹಾಯ್ದಿದ್ದರು.

ನಿನ್ನೆ ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರ ವಿರುದ್ಧ ತೀವ್ರ ಟೀಕೆಗಳ ಸುರಿಮಳೆಗೈದಿದ್ದರು. ಇದಕ್ಕೆ ಸದಾನಂದಗೌಡರು ಸಹ ತಿರುಗೇಟು ನೀಡಿದ್ದರು. ಇವರಿಬ್ಬರ ನಡುವೆ ಟ್ವಿಟ್ಟರ್‌ನಲ್ಲಿ ವಾದ ವಿವಾದ ನಡೆದು ಕೊನೆಗೆ ಸದಾನಂದಾಗೌಡರು ಸೂಲಿಬೆಲೆಯನ್ನು ಬ್ಲಾಕ್‌ ಮಾಡುವ ಮೂಲಕ ಅಂತ್ಯ ಹಾಡಿದ್ದರು.

ಮೂರು ದಿನದ ಹಿಂದೆ ಚಕ್ರವರ್ತಿ ಸೂಲಿಬೆಲೆ ಪ್ರವಾಹ ಪರಿಹಾರ ತರದ ೨೫ ಸಂಸದರು ಬದುಕಿದ್ದಾರೆಯೇ? ಮೋದಿಗೆ ಉತ್ತರ ಕರ್ನಾಟಕದ ಕಷ್ಟ ಕಾಣುತ್ತಿಲ್ಲವೇ ಎಂದು ಟೀಕಿಸಿದ್ದರು. ಸಂಸದ ಪ್ರತಾಪ ಸಿಂಹ ಅಜ್ಞಾನಿ ಎಂದಿದ್ದರು. ಸದಾನಂದಗೌಡರದು ದಾರ್ಷ್ಟ್ಯ, ದುರಹಂಕಾರ ಎಂದು ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಸದಾನಂದಗೌಡರು ಚಕ್ರವರ್ತಿ ಸೂಲಿಬೆಲೆ ದೇಶದ್ರೋಹಿ ಎಂದಿದ್ದರು.

ಬಿಜೆಪಿಯಲ್ಲಿ ನಡೆಯುತ್ತಿರುವ ಈ ಕಚ್ಚಾಟವೂ ಸೋಷಿಯಲ್ ಮೀಡಿಯಾದಲ್ಲಿ ಎಲ್ಲರ ಬಾಯಿಗೆ ಆಹಾರ ಸಿಕ್ಕಂತಾಗಿದೆ. ಬಹುತೇಕರ ಈ ಬಿಜೆಪಿಯ ಜಗಳವನ್ನು ಎಲ್ಲಾ ಕಡೆ ಹಂಚಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...