Homeಕರ್ನಾಟಕಬಿಜೆಪಿ ಆರ್‌.ಎಸ್‌.ಎಸ್‌ ಮುಖಂಡರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಯತ್ನಾಳ್

ಬಿಜೆಪಿ ಆರ್‌.ಎಸ್‌.ಎಸ್‌ ಮುಖಂಡರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಯತ್ನಾಳ್

- Advertisement -
- Advertisement -

ಪ್ರವಾಹ ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯೊಳಗೆ ಹುಟ್ಟಿಕೊಂಡ ಅಸಮಾಧಾನದ ಹೊಗೆ ಬೆಂಕಿಯಾಗುವ ಲಕ್ಷಣಗಳು ದಟ್ಟವಾಗುತ್ತಿವೆ. ದಿನಕ್ಕೊಬ್ಬರಂತೆ ಬಿಜೆಪಿಯ ಒಳಗಿನಿಂದಲೇ ಪಕ್ಷದ ಮುಖಂಡರ ವಿರುದ್ಧ ಅಪಸ್ವರಗಳು ಕೇಳಿಬರುತ್ತಿದ್ದು ಇದು ಮುಖಂಡರಿಗೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ.

ಮೊನ್ನೆಯಷ್ಟೇ ಮೋದಿ ವಿರುದ್ಧ ಗುಡುಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಒಂದೇ ದಿನಕ್ಕೆ ನಾಲ್ಕೈದು ಪ್ರಭಾವಿ ವ್ಯಕ್ತಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಳಿಗ್ಗೆ ಸದಾನಂದಗೌಡ, ಜಗದೀಶ್ ಶೆಟ್ಟರ್‌ ಮತ್ತು ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು ಈಗ ಆರ್‌.ಎಸ್‌.ಎಸ್‌ ಮುಖಂಡ ಬಿ.ಎಲ್ ಸಂತೋಷ್‌ ವಿರುದ್ಧ ಮುರಿದುಕೊಂಡು ಬಿದ್ದಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿರುವ ಅವರು ಬಿ.ಎಸ್ ಸಂತೋಷ್‌ರವರನ್ನು ಅವರ ಜಾತಿಯ ಕಾರಣಕ್ಕೆ ಮಾತ್ರ ನಮ್ಮ ಮಾಧ್ಯಮಗಳು ಎತ್ತಿ ಆಡಿಸುತ್ತಿವೆ. ಅವರಿಗೆ ಇಂದ್ರ ಚಂದ್ರ ಎಂದೆಲ್ಲಾ ಬಿರುದು ಬಾವಲಿಗಳನ್ನು ನೀಡುತ್ತಿದ್ದಾರೆ. ಆದರೆ ಸಂತೋಷ್‌ಗೆ ಚುನಾವಣೆ ಗೆಲ್ಲಿಸುವ ಛಾತಿ ಇಲ್ಲ ಎಂದು ಟೀಕಿಸಿದ್ದಾರೆ.

ಕೇರಳದ ಜವಾಬ್ದಾರಿ ಹೊತ್ತಿಕೊಂಡಿದ್ದ ಅವರು ಶಬರಿಮಲೆ ವಿವಾದ ಇಟ್ಟುಕೊಂಡು ೫ ಸೀಟುಗಳನ್ನು ಗೆಲ್ಲಿಸುತ್ತೇನೆ ಎಂದಿದ್ದರು. ಒಂದನ್ನು ಗೆಲ್ಲಸಲಾಗಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ದಿವಂಗತ ಅನಂತ್‌ ಕುಮಾರ್‌ ಮತ್ತು ಸಿಎಂ ಯಡಿಯುರಪ್ಪನವರ ಗುಣಗಾನ ಮಾಡಿರುವ ಬಸನಗೌಡ ಯತ್ನಾಳ್‌ ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ಸಚಿವರ ವಿರುದ್ಧವೂ ತಿರುಗಿಬಿದ್ದಿದ್ದಾರೆ. ಒಬ್ಬರು ಬೆಂಗಳೂರಿನಲ್ಲಿ ಕುಳಿತು, ಇನ್ನೊಬ್ಬರು ಹುಬ್ಬಳ್ಳಿಯಲ್ಲಿ ಕುಳಿತು ಆಟವಾಡುತ್ತಿದ್ದೀರಾ? ಧೈರ್ಯವಿದ್ದರೆ ಮೋದಿ ಬಳಿ ಮಾತನಾಡಿ ೧೦ ಸಾವಿರ ಕೋಟಿ ಪ್ರವಾಹ ಪರಿಹಾರ ತನ್ನಿ ಎಂದು ಸವಾಲು ಹಾಕಿದ್ದಾರೆ.

ದಿವಂಗತ ಅನಂತ್‌ ಕುಮಾರ್‌ರವರು ಬದುಕಿದ್ದರೆ ರಾಜ್ಯಕ್ಕೆ ಇಂತಹ ಕೆಟ್ಟ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿರುವ ಅವರು ಅನಂತ್‌ ಕುಮಾರ್‌‌ ಮತ್ತು ಯಡಿಯೂರಪ್ಪನವರು ಸೈಕಲ್‌ ತುಳಿದು ಕಟ್ಟಿದ ಪಕ್ಷದಲ್ಲಿ ನೀವೆಲ್ಲಾ ಅಧಿಕಾರ ಅನುಭವಿಸುತ್ತಿದ್ದೀರಿ ಎಂಬುದನ್ನು ಮರೆಯಬೇಡಿ ಎಂದು ತಿಳಿಸಿದ್ದಾರೆ.

ನಾನು ಅಟಲ್ ಬಿಹಾರಿ ವಾಜಪೇಯಿರವರು ಪ್ರಧಾನಿಯಾಗಿದ್ದಾಗ ಸಚಿವನಾಗಿದ್ದೆ. ನಿಮ್ಮ ಹಾಗೆ ಕೈಕಟ್ಟಿ ಕುಳಿತುಕೊಳ್ಳುವ ಬದಲು ಪ್ರಧಾನಿಯೊಂದಿಗೆ ಮಾತನಾಡಿ ಸಾಕಷ್ಟು ಅನುದಾನ ತಂದಿದ್ದೆ ಎಂದು ಅವರು ಹೇಳಿದ್ದಾರೆ. ಪ್ರವಾಹ ಪರಿಹಾರಕ್ಕೆ ಕೇಂದ್ರದ ನೆರವು ಬೇಡವೆಂದಿದ್ದ ಸಂಸದ ತೇಜಸ್ವಿ ಸೂರ್ಯನ ವಿರುದ್ದವೂ ಹರಿಹಾಯ್ದಿದ್ದರು.

ನಿನ್ನೆ ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರ ವಿರುದ್ಧ ತೀವ್ರ ಟೀಕೆಗಳ ಸುರಿಮಳೆಗೈದಿದ್ದರು. ಇದಕ್ಕೆ ಸದಾನಂದಗೌಡರು ಸಹ ತಿರುಗೇಟು ನೀಡಿದ್ದರು. ಇವರಿಬ್ಬರ ನಡುವೆ ಟ್ವಿಟ್ಟರ್‌ನಲ್ಲಿ ವಾದ ವಿವಾದ ನಡೆದು ಕೊನೆಗೆ ಸದಾನಂದಾಗೌಡರು ಸೂಲಿಬೆಲೆಯನ್ನು ಬ್ಲಾಕ್‌ ಮಾಡುವ ಮೂಲಕ ಅಂತ್ಯ ಹಾಡಿದ್ದರು.

ಮೂರು ದಿನದ ಹಿಂದೆ ಚಕ್ರವರ್ತಿ ಸೂಲಿಬೆಲೆ ಪ್ರವಾಹ ಪರಿಹಾರ ತರದ ೨೫ ಸಂಸದರು ಬದುಕಿದ್ದಾರೆಯೇ? ಮೋದಿಗೆ ಉತ್ತರ ಕರ್ನಾಟಕದ ಕಷ್ಟ ಕಾಣುತ್ತಿಲ್ಲವೇ ಎಂದು ಟೀಕಿಸಿದ್ದರು. ಸಂಸದ ಪ್ರತಾಪ ಸಿಂಹ ಅಜ್ಞಾನಿ ಎಂದಿದ್ದರು. ಸದಾನಂದಗೌಡರದು ದಾರ್ಷ್ಟ್ಯ, ದುರಹಂಕಾರ ಎಂದು ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಸದಾನಂದಗೌಡರು ಚಕ್ರವರ್ತಿ ಸೂಲಿಬೆಲೆ ದೇಶದ್ರೋಹಿ ಎಂದಿದ್ದರು.

ಬಿಜೆಪಿಯಲ್ಲಿ ನಡೆಯುತ್ತಿರುವ ಈ ಕಚ್ಚಾಟವೂ ಸೋಷಿಯಲ್ ಮೀಡಿಯಾದಲ್ಲಿ ಎಲ್ಲರ ಬಾಯಿಗೆ ಆಹಾರ ಸಿಕ್ಕಂತಾಗಿದೆ. ಬಹುತೇಕರ ಈ ಬಿಜೆಪಿಯ ಜಗಳವನ್ನು ಎಲ್ಲಾ ಕಡೆ ಹಂಚಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...