Homeಕರ್ನಾಟಕಬಿಜೆಪಿ ಆರ್‌.ಎಸ್‌.ಎಸ್‌ ಮುಖಂಡರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಯತ್ನಾಳ್

ಬಿಜೆಪಿ ಆರ್‌.ಎಸ್‌.ಎಸ್‌ ಮುಖಂಡರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಯತ್ನಾಳ್

- Advertisement -
- Advertisement -

ಪ್ರವಾಹ ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯೊಳಗೆ ಹುಟ್ಟಿಕೊಂಡ ಅಸಮಾಧಾನದ ಹೊಗೆ ಬೆಂಕಿಯಾಗುವ ಲಕ್ಷಣಗಳು ದಟ್ಟವಾಗುತ್ತಿವೆ. ದಿನಕ್ಕೊಬ್ಬರಂತೆ ಬಿಜೆಪಿಯ ಒಳಗಿನಿಂದಲೇ ಪಕ್ಷದ ಮುಖಂಡರ ವಿರುದ್ಧ ಅಪಸ್ವರಗಳು ಕೇಳಿಬರುತ್ತಿದ್ದು ಇದು ಮುಖಂಡರಿಗೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ.

ಮೊನ್ನೆಯಷ್ಟೇ ಮೋದಿ ವಿರುದ್ಧ ಗುಡುಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಒಂದೇ ದಿನಕ್ಕೆ ನಾಲ್ಕೈದು ಪ್ರಭಾವಿ ವ್ಯಕ್ತಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಳಿಗ್ಗೆ ಸದಾನಂದಗೌಡ, ಜಗದೀಶ್ ಶೆಟ್ಟರ್‌ ಮತ್ತು ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು ಈಗ ಆರ್‌.ಎಸ್‌.ಎಸ್‌ ಮುಖಂಡ ಬಿ.ಎಲ್ ಸಂತೋಷ್‌ ವಿರುದ್ಧ ಮುರಿದುಕೊಂಡು ಬಿದ್ದಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿರುವ ಅವರು ಬಿ.ಎಸ್ ಸಂತೋಷ್‌ರವರನ್ನು ಅವರ ಜಾತಿಯ ಕಾರಣಕ್ಕೆ ಮಾತ್ರ ನಮ್ಮ ಮಾಧ್ಯಮಗಳು ಎತ್ತಿ ಆಡಿಸುತ್ತಿವೆ. ಅವರಿಗೆ ಇಂದ್ರ ಚಂದ್ರ ಎಂದೆಲ್ಲಾ ಬಿರುದು ಬಾವಲಿಗಳನ್ನು ನೀಡುತ್ತಿದ್ದಾರೆ. ಆದರೆ ಸಂತೋಷ್‌ಗೆ ಚುನಾವಣೆ ಗೆಲ್ಲಿಸುವ ಛಾತಿ ಇಲ್ಲ ಎಂದು ಟೀಕಿಸಿದ್ದಾರೆ.

ಕೇರಳದ ಜವಾಬ್ದಾರಿ ಹೊತ್ತಿಕೊಂಡಿದ್ದ ಅವರು ಶಬರಿಮಲೆ ವಿವಾದ ಇಟ್ಟುಕೊಂಡು ೫ ಸೀಟುಗಳನ್ನು ಗೆಲ್ಲಿಸುತ್ತೇನೆ ಎಂದಿದ್ದರು. ಒಂದನ್ನು ಗೆಲ್ಲಸಲಾಗಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ದಿವಂಗತ ಅನಂತ್‌ ಕುಮಾರ್‌ ಮತ್ತು ಸಿಎಂ ಯಡಿಯುರಪ್ಪನವರ ಗುಣಗಾನ ಮಾಡಿರುವ ಬಸನಗೌಡ ಯತ್ನಾಳ್‌ ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ಸಚಿವರ ವಿರುದ್ಧವೂ ತಿರುಗಿಬಿದ್ದಿದ್ದಾರೆ. ಒಬ್ಬರು ಬೆಂಗಳೂರಿನಲ್ಲಿ ಕುಳಿತು, ಇನ್ನೊಬ್ಬರು ಹುಬ್ಬಳ್ಳಿಯಲ್ಲಿ ಕುಳಿತು ಆಟವಾಡುತ್ತಿದ್ದೀರಾ? ಧೈರ್ಯವಿದ್ದರೆ ಮೋದಿ ಬಳಿ ಮಾತನಾಡಿ ೧೦ ಸಾವಿರ ಕೋಟಿ ಪ್ರವಾಹ ಪರಿಹಾರ ತನ್ನಿ ಎಂದು ಸವಾಲು ಹಾಕಿದ್ದಾರೆ.

ದಿವಂಗತ ಅನಂತ್‌ ಕುಮಾರ್‌ರವರು ಬದುಕಿದ್ದರೆ ರಾಜ್ಯಕ್ಕೆ ಇಂತಹ ಕೆಟ್ಟ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿರುವ ಅವರು ಅನಂತ್‌ ಕುಮಾರ್‌‌ ಮತ್ತು ಯಡಿಯೂರಪ್ಪನವರು ಸೈಕಲ್‌ ತುಳಿದು ಕಟ್ಟಿದ ಪಕ್ಷದಲ್ಲಿ ನೀವೆಲ್ಲಾ ಅಧಿಕಾರ ಅನುಭವಿಸುತ್ತಿದ್ದೀರಿ ಎಂಬುದನ್ನು ಮರೆಯಬೇಡಿ ಎಂದು ತಿಳಿಸಿದ್ದಾರೆ.

ನಾನು ಅಟಲ್ ಬಿಹಾರಿ ವಾಜಪೇಯಿರವರು ಪ್ರಧಾನಿಯಾಗಿದ್ದಾಗ ಸಚಿವನಾಗಿದ್ದೆ. ನಿಮ್ಮ ಹಾಗೆ ಕೈಕಟ್ಟಿ ಕುಳಿತುಕೊಳ್ಳುವ ಬದಲು ಪ್ರಧಾನಿಯೊಂದಿಗೆ ಮಾತನಾಡಿ ಸಾಕಷ್ಟು ಅನುದಾನ ತಂದಿದ್ದೆ ಎಂದು ಅವರು ಹೇಳಿದ್ದಾರೆ. ಪ್ರವಾಹ ಪರಿಹಾರಕ್ಕೆ ಕೇಂದ್ರದ ನೆರವು ಬೇಡವೆಂದಿದ್ದ ಸಂಸದ ತೇಜಸ್ವಿ ಸೂರ್ಯನ ವಿರುದ್ದವೂ ಹರಿಹಾಯ್ದಿದ್ದರು.

ನಿನ್ನೆ ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರ ವಿರುದ್ಧ ತೀವ್ರ ಟೀಕೆಗಳ ಸುರಿಮಳೆಗೈದಿದ್ದರು. ಇದಕ್ಕೆ ಸದಾನಂದಗೌಡರು ಸಹ ತಿರುಗೇಟು ನೀಡಿದ್ದರು. ಇವರಿಬ್ಬರ ನಡುವೆ ಟ್ವಿಟ್ಟರ್‌ನಲ್ಲಿ ವಾದ ವಿವಾದ ನಡೆದು ಕೊನೆಗೆ ಸದಾನಂದಾಗೌಡರು ಸೂಲಿಬೆಲೆಯನ್ನು ಬ್ಲಾಕ್‌ ಮಾಡುವ ಮೂಲಕ ಅಂತ್ಯ ಹಾಡಿದ್ದರು.

ಮೂರು ದಿನದ ಹಿಂದೆ ಚಕ್ರವರ್ತಿ ಸೂಲಿಬೆಲೆ ಪ್ರವಾಹ ಪರಿಹಾರ ತರದ ೨೫ ಸಂಸದರು ಬದುಕಿದ್ದಾರೆಯೇ? ಮೋದಿಗೆ ಉತ್ತರ ಕರ್ನಾಟಕದ ಕಷ್ಟ ಕಾಣುತ್ತಿಲ್ಲವೇ ಎಂದು ಟೀಕಿಸಿದ್ದರು. ಸಂಸದ ಪ್ರತಾಪ ಸಿಂಹ ಅಜ್ಞಾನಿ ಎಂದಿದ್ದರು. ಸದಾನಂದಗೌಡರದು ದಾರ್ಷ್ಟ್ಯ, ದುರಹಂಕಾರ ಎಂದು ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಸದಾನಂದಗೌಡರು ಚಕ್ರವರ್ತಿ ಸೂಲಿಬೆಲೆ ದೇಶದ್ರೋಹಿ ಎಂದಿದ್ದರು.

ಬಿಜೆಪಿಯಲ್ಲಿ ನಡೆಯುತ್ತಿರುವ ಈ ಕಚ್ಚಾಟವೂ ಸೋಷಿಯಲ್ ಮೀಡಿಯಾದಲ್ಲಿ ಎಲ್ಲರ ಬಾಯಿಗೆ ಆಹಾರ ಸಿಕ್ಕಂತಾಗಿದೆ. ಬಹುತೇಕರ ಈ ಬಿಜೆಪಿಯ ಜಗಳವನ್ನು ಎಲ್ಲಾ ಕಡೆ ಹಂಚಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...