Homeಮುಖಪುಟಯತ್ನಾಳ್‌ಗೆ ಗುಲಾಮಗಿರಿ ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?: ಕರವೇ ಪ್ರಶ್ನೆ

ಯತ್ನಾಳ್‌ಗೆ ಗುಲಾಮಗಿರಿ ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?: ಕರವೇ ಪ್ರಶ್ನೆ

ಕಂಡಕಂಡವರಿಗೆ ಸವಾಲು ಎಸೆಯುವ ಯತ್ನಾಳ್ ಅವರಿಗೆ ಎರಡೇ ಎರಡು ಸವಾಲು ಹಾಕುತ್ತೇವೆ. ಅವರಿಗೆ ನಿಜವಾಗಿಯೂ ತಾಕತ್ತಿದ್ದರೆ ಈ ಸವಾಲುಗಳನ್ನು ಸ್ವೀಕರಿಸಲಿ.

- Advertisement -
- Advertisement -

ನಕಲಿ ಕನ್ನಡಪರ ಹೋರಾಟಗಾರರು ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಿಡಿಕಾರಿದೆ. ಸದಾ ಸವಾಲು ಹಾಕುವ ಅವರು ನಾವು ಹಾಕುವ ಸವಾಲು ಸ್ವೀಕರಿಸದಿದ್ದರೆ ‘ಹೈಕಮಾಂಡ್ ಗುಲಾಮಗಿರಿಯನ್ನೇ ಮಾಡುತ್ತೇವೆ, ಗುಲಾಮಗಿರಿ ಬಿಟ್ಟು ಬೇರೇನೂ ತಮಗೆ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?’ ಎಂದು ಕರವೇ ಪ್ರಶ್ನಿಸಿದೆ.

ಮರಾಠ ಪ್ರಾಧಿಕಾರಿ ರಚಿಸಲು ಮುಂದಾಗಿರುವ ಸಿಎಂ ಯಡಿಯೂರಪ್ಪನವರ ನಡೆ ವಿರುದ್ಧ ಡಿಸೆಂಬರ್ 05 ರಂದು ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದವು. ಇದನ್ನು ವಿರೋಧಿಸಿದ್ದ ಯತ್ನಾಳ್, “ಕನ್ನಡಪರ ನಕಲಿ ಹೋರಾಟಗಾರರು ಮತ್ತು ರೋಲ್‌ಕಾಲ್‌ ಹೋರಾಟಗಾರರಿಗೆ ಸಿಎಂ ಯಡಿಯೂರಪ್ಪನವರು ಹೆದರಬಾರದು. ಡಿಸೆಂಬರ್ 05 ರಂದು ಅವರು ಹೇಗೆ ಬಂದ್ ಮಾಡುತ್ತಾರೆ ನೋಡುತ್ತೇನೆ’ ಎಂದು ಸವಾಲು ಹಾಕಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ “ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕನ್ನಡಪರ ಚಳವಳಿಗಾರರ ಕುರಿತು ಕುಚೇಷ್ಟೆಯ ಮಾತುಗಳನ್ನು ಆಡಿದ್ದಾರೆ. ಅವರು ಕನ್ನಡ ಚಳವಳಿಗಾರರ ಕುರಿತು ಏನೆಲ್ಲ ಮಾತುಗಳನ್ನು ಆಡಿದ್ದಾರೋ ಅದೆಲ್ಲವೂ ಅವರಿಗೇ ಅನ್ವಯಿಸುತ್ತದೆ. ಸಚಿವ ಸ್ಥಾನ ಪಡೆಯಲು ಆಗಾಗ ತಮ್ಮ ಪಕ್ಷದ ಸರ್ಕಾರವನ್ನೇ ಬ್ಲಾಕ್ ಮೇಲ್ ಮಾಡಿಕೊಂಡುಬಂದವರು ಯತ್ನಾಳ್” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಂಡಕಂಡವರಿಗೆ ಸವಾಲು ಎಸೆಯುವ ಯತ್ನಾಳ್ ಅವರಿಗೆ ಎರಡೇ ಎರಡು ಸವಾಲು ಹಾಕುತ್ತೇವೆ. ಅವರಿಗೆ ನಿಜವಾಗಿಯೂ ತಾಕತ್ತಿದ್ದರೆ ಈ ಸವಾಲುಗಳನ್ನು ಸ್ವೀಕರಿಸಲಿ. ಇಲ್ಲವಾದಲ್ಲಿ ಬೂಟಾಟಿಕೆಯ ರಾಜಕೀಯ ಮಾಡುವುದನ್ನು ಬಿಟ್ಟುಬಿಡಲಿ ಎಂದು ನಾರಾಯಣಗೌಡ ತಿಳಿಸಿದ್ದಾರೆ.

ಯತ್ನಾಳ್ ಶಾಸಕರಾಗಿರುವ ಜಿಲ್ಲೆ ಬಿಜಾಪುರವೂ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ನೆರೆ, ಭಾರೀ ಮಳೆಯಿಂದಾಗಿ ಸುಮಾರು 25,000 ಕೋಟಿ ರುಪಾಯಿ ನಷ್ಟವಾಗಿದ್ದು, ಕನಿಷ್ಠ 10,000 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಬೇಡಿಕೆ ಇಟ್ಟಿದ್ದಾರೆ. ಕೇಂದ್ರ ಸರ್ಕಾರ ಕೊಟ್ಟಿರುವುದು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಕೇವಲ 550 ಕೋಟಿ ರುಪಾಯಿ. ಬಿಜಾಪುರ ಜಿಲ್ಲೆಯಲ್ಲಿ ಎರಡು ಲಕ್ಷ ಎಕರೆಗೂ ಹೆಚ್ಚು ಕೃಷಿ ಭೂಮಿ, ಹತ್ತು ಸಾವಿರ ಎಕರೆಗೂ ಹೆಚ್ಚು ತೋಟಗಾರಿಕಾ ಭೂಮಿ ಹಾಳಾಗಿದೆ. ರೈತರಿಗೆ ಪರಿಹಾರವಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರವಿಲ್ಲ. ಅಲ್ಪಸ್ವಲ್ಪ ಬಿಡುಗಡೆಯಾದ ಹಣವನ್ನೂ ಪುಡಾರಿಗಳು ನುಂಗಿ ನೀರು ಕುಡಿದಿದ್ದಾರೆ. ಗಂಜೀಕೇಂದ್ರಗಳಲ್ಲಿ ಮೂಲಭೂತ ಸೌಕರ್ಯವಿಲ್ಲದೆ ಸಂತ್ರಸ್ಥರು ಒದ್ದಾಡುತ್ತಿದ್ದಾರೆ. ಯತ್ನಾಳ್ ಗೆ ನಿಜವಾಗಿಯೂ ಜನಪರ ಕಾಳಜಿ ಇದ್ದರೆ, ತನ್ನ ಕ್ಷೇತ್ರದ ಮತದಾರರ ಹಿತ ಕಾಯುವ ಮನಸ್ಸಿದ್ದರೆ, ಕೇಂದ್ರ ಸರ್ಕಾರ ಯಾಕೆ ಹಣ ನೀಡುತ್ತಿಲ್ಲ ಎಂದು ಪ್ರಶ್ನಿಸಲಿ ಎಂದು ಮೊದಲ ಸವಾಲು ಹಾಕಿದ್ದಾರೆ.

ತಮ್ಮ ಎರಡನೇ ಸವಾಲಿನಲ್ಲಿ “ಜಿಎಸ್‌ಟಿ ವ್ಯವಸ್ಥೆ ಜಾರಿಯಾದಾಗಿನಿಂದಲೂ ಕರ್ನಾಟಕ ಸರ್ಕಾರ ಲಕ್ಷಾಂತರ ಕೋಟಿ ರುಪಾಯಿ ಹಣವನ್ನು ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ನೀಡುತ್ತಿದೆ. ಜಿಎಸ್ ಟಿ ವ್ಯವಸ್ಥೆ ಜಾರಿಯಾದ ಸಂದರ್ಭದಲ್ಲಿ ರಾಜ್ಯಗಳಿಗೆ ಆಗುವ ನಷ್ಟವಾಗುವ ಹಣವನ್ನು ಕೊಡುವ ವಾಗ್ದಾನವನ್ನು ಕೇಂದ್ರ ಸರ್ಕಾರ ನೀಡಿತ್ತು. ಆದರೆ ಕೇಂದ್ರ ಸರ್ಕಾರ ಮಾತು ಮುರಿದಿದೆ. ಪರಿಹಾರದ ಹಣ ನೀಡುತ್ತಿಲ್ಲ. ಬದಲಾಗಿ ರಿಸರ್ವ್ ಬ್ಯಾಂಕ್ ನಿಂದ ಸಾಲ ಪಡೆಯಿರಿ ಎಂದು ಹೇಳುತ್ತಿದೆ. ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ. ಸರ್ಕಾರಿ ನೌಕರರಿಗೆ ಸಂಬಳ ಕೊಡಲೂ ಹಣವಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಸರ್ಕಾರ ದಿವಾಳಿಯಾಗುವ ಸ್ಥಿತಿ ಇದೆ. ಯತ್ನಾಳ್ ಅವರಿಗೆ ನಿಜವಾಗಿಯೂ ಧೈರ್ಯ ಅನ್ನೋದೇನಾದರೂ ಇದ್ದರೆ ನಮ್ಮ ಹಣ ನಮಗೆ ಕೊಡಿ ಎಂದು ಮೋದಿ ಸರ್ಕಾರವನ್ನು ಕೇಳಲಿ, ಅದಕ್ಕಾಗಿ ಧರಣಿ‌ ಮಾಡಲಿ” ಎಂದಿದ್ದಾರೆ.

ಇದೆರಡು ಕೆಲಸ ಮಾಡಲು ಯತ್ನಾಳ್ ಅವರಿಂದ ಸಾಧ್ಯವೇ? ಅಥವಾ ತಾವು ಹೈಕಮಾಂಡ್ ಗುಲಾಮಗಿರಿಯನ್ನೇ ಮಾಡುತ್ತೇವೆ, ಗುಲಾಮಗಿರಿ ಬಿಟ್ಟು ಬೇರೇನೂ ತಮಗೆ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ? ಎಂದು ಕರವೇ ಪ್ರಶ್ನಿಸಿದೆ.


ಇದನ್ನೂ ಓದಿ: ಸಿಜೆಐ ಬೋಬ್ಡೆ ವಿರುದ್ಧ ಟ್ವೀಟ್: ಕುನಾಲ್ ಕಮ್ರ ವಿರುದ್ಧ ಮೊತ್ತೊಂದು ನ್ಯಾಯಾಂಗ ನಿಂದನೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಿ.ಜೆ.ಪಿ.ಶಾಸಕ ಬಸವನಗೌಡ ಯತ್ನಾಳ್ ಕನ್ನಡದ ಜಲ ನೆಲದ ಬಗ್ಗೆ ತನಗೆ ಮಾತಾಡುವ ಹಕ್ಕಿಲ್ಲಂದಾದಲ್ಲಿ
    ಕನಾ೯ಟಕ ಬಿಟ್ಟು ಮಹರಾಷ್ಟ್ರದಲ್ಲಿ ನೆಲೆ ಹೂರಿ ಮರಾಠಿಯರ ಪರವಾಗಿ ಹೋರಾಟ ಮಾಡಲಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...