Homeಕರ್ನಾಟಕಬಸನಗೌಡ ಪಾಟೀಲ್ ಹೇಳಿಕೆ ಬಿಜೆಪಿ ಸರ್ಕಾರದ ಬಣ್ಣ ಬಯಲು ಮಾಡಿದೆ: ಡಿ.ಕೆ ಶಿವಕುಮಾರ್

ಬಸನಗೌಡ ಪಾಟೀಲ್ ಹೇಳಿಕೆ ಬಿಜೆಪಿ ಸರ್ಕಾರದ ಬಣ್ಣ ಬಯಲು ಮಾಡಿದೆ: ಡಿ.ಕೆ ಶಿವಕುಮಾರ್

ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ, ಬಿಜೆಪಿ ಹೈಕಮಾಂಡ್‌ಗೂ ಯಡಿಯೂರಪ್ಪನವರು ಸಾಕಾಗಿದ್ದಾರೆ ಎಂದು ಯತ್ನಾಳ್ ಹೇಳಿದ್ದರು.

- Advertisement -
- Advertisement -

ರಾಜ್ಯದ ಬಿಜೆಪಿ ಸರ್ಕಾರದ ದುರಾಡಳಿತದ ಬಗ್ಗೆ ಬಿಜೆಪಿಯ ಹಿರಿಯ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆಂದರೆ, ಸರ್ಕಾರದಲ್ಲಿ ಭ್ರಷ್ಟಾಚಾರ ಹೇಗಿದೆ ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ, ಬಿಜೆಪಿ ಹೈಕಮಾಂಡ್‌ಗೂ ಯಡಿಯೂರಪ್ಪನವರು ಸಾಕಾಗಿದ್ದಾರೆ. ಹಾಗಾಗಿ ಮುಂದಿನ ಸಿಎಂ ಉತ್ತರ ಕರ್ನಾಟಕದವರೆ ಆಗಿರುತ್ತಾರೆ ಎಂದು ಯತ್ನಾಳ್ ಹೇಳಿದ್ದರು.

ಶಿರಾ ತಾಲೂಕು ಕಳ್ಳಂಬೆಳ್ಳ ಹೋಬಳಿಯ ಯತ್ತಪ್ಪನಹಟ್ಟಿ, ದೊಡ್ಡ ಅಗ್ರಹಾರ, ತರೂರು ಸೇರಿದಂತೆ ಸುತ್ತಮುತ್ತ ಕಾಂಗ್ರೆಸ್ ಪರ ಪ್ರಚಾರ ನಡೆಸಿ ಮಾತನಾಡಿದ ಡಿಕೆಶಿ, ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಬಿಜೆಪಿ ಸರಕಾರ ಸಹಕಾರ ನೀಡಲಿಲ್ಲ, ಇದು ದುಷ್ಟ ಸರ್ಕಾರ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ರೈತ, ದಲಿತ, ಮಹಿಳೆಯರ ಪರವಾಗಿ ಮಾತನಾಡುವ ಶಕ್ತಿ ಇರುವುದು ಕಾಂಗ್ರೆಸ್‍ಗೆ ಮಾತ್ರ. ಕಾಂಗ್ರೆಸ್ ಎಲ್ಲ ವರ್ಗದವರ ಪರ ಮಾತನಾಡುತ್ತಿದೆ. ಅವರ ಪರ ಕೆಲಸ ಮಾಡುತ್ತದೆ. ಹಾಗಾಗಿ ಶಿರಾ ಮತದಾರರು ರಾಜ್ಯಕ್ಕೆ ಸಂದೇಶ ನೀಡಬೇಕಿದೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮತ ಚಲಾಯಿಸುವಂತೆ ಕರೆ ನೀಡಿದರು.

ರಾಜ್ಯದಲ್ಲಿ ಮುಂದೆ ಬಿಜೆಪಿ ಇರುವುದಿಲ್ಲ, ದಳದ ಬಗ್ಗೆ ಮಾತನಾಡೋಲ್ಲ, ಶಿರಾ ಉಪ ಚುನಾವಣೆಯಲ್ಲಿ ಜಯಚಂದ್ರ ಅವರ ಕೈಬಲಪಡಿಸಲು ಬಂದಿದ್ದೇವೆ, ಒಗ್ಗಟ್ಟಿನಿಂದ ಹೋರಾಡುವ ಮೂಲಕ ಜಯಚಂದ್ರ ಅವರನ್ನು ಗೆಲ್ಲಿಸಲು ಎಲ್ಲ ಮುಖಂಡರು ಶ್ರಮಿಸಬೇಕೆಂದು ಮನವಿ ಮಾಡಿದರು.

ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತನಾಡಿ ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಎಂಥ ಆಡಳಿತ ನೀಡುತ್ತಿದೆ ಎಂಬುದನ್ನು ಜನರು ಅನುಭವಿಸಿದ್ದಾರೆ. ಕೊರೋನಾದಿಂದ ಜನರು ಸಂಕಷ್ಟದಲ್ಲಿದ್ದರೂ ಬಿಜೆಪಿ ಬಂಡವಾಳಶಾಹಿಗಳ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರು ಮಾತನಾಡಿ ಸುಳ್ಳು ಹೇಳುವ ಜಾಯಮಾನ ನಮ್ಮದಲ್ಲ, ಕೋವಿಡ್ ವೇಳೆ ಅನ್ನಭಾಗ್ಯದಿಂದ ಅನುಕೂಲ ಆಗಿದೆ, ಅಂತಹ ಬದ್ಧತೆ ಇರುವುದು ಕಾಂಗ್ರೆಸ್ ಸರ್ಕಾರಕ್ಕೆ ಮಾತ್ರ ಎಂದರು.

ಜಯಚಂದ್ರ ಪಶು ಸಚಿವರಾಗಿದ್ದಾಗ, ಆಕಸ್ಮಿಕವಾಗಿ ಕುರಿ, ಮೇಕ ಸಾವನ್ನಪ್ಪಿದ್ದರೆ ಪರಿಹಾರ ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದರು. ಬಿಜೆಪಿ ಸರ್ಕಾರ ಈ ಪರಿಹಾರ ಹಿಂಪಡೆದಿದ್ದಾರೆ. ಅವರಿಗೆ ಮತ ಕೇಳುವ ಅರ್ಹತೆ ಇದೆಯೇ ಎಂದು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಕಲ್ಕೆರೆ ರವಿಕುಮಾರ್, ಮಾಜಿ ಸಂಸದ ಚಂದ್ರಪ್ಪ, ಎಂಎಲ್‍ಸಿ ವೇಣುಗೋಪಾಲ್, ಹೊನ್ನಗಿರಿಗೌಡ, ಸಾಸಲು ಸತೀಶ್, ಎಂ.ಡಿ.ಲಕ್ಷ್ಮೀನಾರಾಯಣ್ , ಗೀತಾರಾಜಣ್ಣ ಇತರರು ಇದ್ದರು.


ಇದನ್ನೂ ಓದಿ: ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ! ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...