Homeಕರ್ನಾಟಕಬಸನಗೌಡ ಪಾಟೀಲ್ ಹೇಳಿಕೆ ಬಿಜೆಪಿ ಸರ್ಕಾರದ ಬಣ್ಣ ಬಯಲು ಮಾಡಿದೆ: ಡಿ.ಕೆ ಶಿವಕುಮಾರ್

ಬಸನಗೌಡ ಪಾಟೀಲ್ ಹೇಳಿಕೆ ಬಿಜೆಪಿ ಸರ್ಕಾರದ ಬಣ್ಣ ಬಯಲು ಮಾಡಿದೆ: ಡಿ.ಕೆ ಶಿವಕುಮಾರ್

ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ, ಬಿಜೆಪಿ ಹೈಕಮಾಂಡ್‌ಗೂ ಯಡಿಯೂರಪ್ಪನವರು ಸಾಕಾಗಿದ್ದಾರೆ ಎಂದು ಯತ್ನಾಳ್ ಹೇಳಿದ್ದರು.

- Advertisement -
- Advertisement -

ರಾಜ್ಯದ ಬಿಜೆಪಿ ಸರ್ಕಾರದ ದುರಾಡಳಿತದ ಬಗ್ಗೆ ಬಿಜೆಪಿಯ ಹಿರಿಯ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆಂದರೆ, ಸರ್ಕಾರದಲ್ಲಿ ಭ್ರಷ್ಟಾಚಾರ ಹೇಗಿದೆ ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ, ಬಿಜೆಪಿ ಹೈಕಮಾಂಡ್‌ಗೂ ಯಡಿಯೂರಪ್ಪನವರು ಸಾಕಾಗಿದ್ದಾರೆ. ಹಾಗಾಗಿ ಮುಂದಿನ ಸಿಎಂ ಉತ್ತರ ಕರ್ನಾಟಕದವರೆ ಆಗಿರುತ್ತಾರೆ ಎಂದು ಯತ್ನಾಳ್ ಹೇಳಿದ್ದರು.

ಶಿರಾ ತಾಲೂಕು ಕಳ್ಳಂಬೆಳ್ಳ ಹೋಬಳಿಯ ಯತ್ತಪ್ಪನಹಟ್ಟಿ, ದೊಡ್ಡ ಅಗ್ರಹಾರ, ತರೂರು ಸೇರಿದಂತೆ ಸುತ್ತಮುತ್ತ ಕಾಂಗ್ರೆಸ್ ಪರ ಪ್ರಚಾರ ನಡೆಸಿ ಮಾತನಾಡಿದ ಡಿಕೆಶಿ, ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಬಿಜೆಪಿ ಸರಕಾರ ಸಹಕಾರ ನೀಡಲಿಲ್ಲ, ಇದು ದುಷ್ಟ ಸರ್ಕಾರ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ರೈತ, ದಲಿತ, ಮಹಿಳೆಯರ ಪರವಾಗಿ ಮಾತನಾಡುವ ಶಕ್ತಿ ಇರುವುದು ಕಾಂಗ್ರೆಸ್‍ಗೆ ಮಾತ್ರ. ಕಾಂಗ್ರೆಸ್ ಎಲ್ಲ ವರ್ಗದವರ ಪರ ಮಾತನಾಡುತ್ತಿದೆ. ಅವರ ಪರ ಕೆಲಸ ಮಾಡುತ್ತದೆ. ಹಾಗಾಗಿ ಶಿರಾ ಮತದಾರರು ರಾಜ್ಯಕ್ಕೆ ಸಂದೇಶ ನೀಡಬೇಕಿದೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮತ ಚಲಾಯಿಸುವಂತೆ ಕರೆ ನೀಡಿದರು.

ರಾಜ್ಯದಲ್ಲಿ ಮುಂದೆ ಬಿಜೆಪಿ ಇರುವುದಿಲ್ಲ, ದಳದ ಬಗ್ಗೆ ಮಾತನಾಡೋಲ್ಲ, ಶಿರಾ ಉಪ ಚುನಾವಣೆಯಲ್ಲಿ ಜಯಚಂದ್ರ ಅವರ ಕೈಬಲಪಡಿಸಲು ಬಂದಿದ್ದೇವೆ, ಒಗ್ಗಟ್ಟಿನಿಂದ ಹೋರಾಡುವ ಮೂಲಕ ಜಯಚಂದ್ರ ಅವರನ್ನು ಗೆಲ್ಲಿಸಲು ಎಲ್ಲ ಮುಖಂಡರು ಶ್ರಮಿಸಬೇಕೆಂದು ಮನವಿ ಮಾಡಿದರು.

ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತನಾಡಿ ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಎಂಥ ಆಡಳಿತ ನೀಡುತ್ತಿದೆ ಎಂಬುದನ್ನು ಜನರು ಅನುಭವಿಸಿದ್ದಾರೆ. ಕೊರೋನಾದಿಂದ ಜನರು ಸಂಕಷ್ಟದಲ್ಲಿದ್ದರೂ ಬಿಜೆಪಿ ಬಂಡವಾಳಶಾಹಿಗಳ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರು ಮಾತನಾಡಿ ಸುಳ್ಳು ಹೇಳುವ ಜಾಯಮಾನ ನಮ್ಮದಲ್ಲ, ಕೋವಿಡ್ ವೇಳೆ ಅನ್ನಭಾಗ್ಯದಿಂದ ಅನುಕೂಲ ಆಗಿದೆ, ಅಂತಹ ಬದ್ಧತೆ ಇರುವುದು ಕಾಂಗ್ರೆಸ್ ಸರ್ಕಾರಕ್ಕೆ ಮಾತ್ರ ಎಂದರು.

ಜಯಚಂದ್ರ ಪಶು ಸಚಿವರಾಗಿದ್ದಾಗ, ಆಕಸ್ಮಿಕವಾಗಿ ಕುರಿ, ಮೇಕ ಸಾವನ್ನಪ್ಪಿದ್ದರೆ ಪರಿಹಾರ ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದರು. ಬಿಜೆಪಿ ಸರ್ಕಾರ ಈ ಪರಿಹಾರ ಹಿಂಪಡೆದಿದ್ದಾರೆ. ಅವರಿಗೆ ಮತ ಕೇಳುವ ಅರ್ಹತೆ ಇದೆಯೇ ಎಂದು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಕಲ್ಕೆರೆ ರವಿಕುಮಾರ್, ಮಾಜಿ ಸಂಸದ ಚಂದ್ರಪ್ಪ, ಎಂಎಲ್‍ಸಿ ವೇಣುಗೋಪಾಲ್, ಹೊನ್ನಗಿರಿಗೌಡ, ಸಾಸಲು ಸತೀಶ್, ಎಂ.ಡಿ.ಲಕ್ಷ್ಮೀನಾರಾಯಣ್ , ಗೀತಾರಾಜಣ್ಣ ಇತರರು ಇದ್ದರು.


ಇದನ್ನೂ ಓದಿ: ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ! ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...