Homeಕರ್ನಾಟಕಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಹಾಕಲು 10 ಕೋಟಿ ಹಣ ಆರೋಪ: ಜಮೀರ್ ಅಹ್ಮದ್‌ಗೆ ಪ್ರಶ್ನೆಗಳ ಸುರಿಮಳೆಗೈದ...

ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಹಾಕಲು 10 ಕೋಟಿ ಹಣ ಆರೋಪ: ಜಮೀರ್ ಅಹ್ಮದ್‌ಗೆ ಪ್ರಶ್ನೆಗಳ ಸುರಿಮಳೆಗೈದ ಕುಮಾರಸ್ವಾಮಿ

- Advertisement -
- Advertisement -

ಬಸವಕಲ್ಯಾಣ ಉಪಚುನಾವಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಬಿಸಿ ಬಿಸಿ ಚರ್ಚೆಗಳು ತಾರಕಕ್ಕೇರಿವೆ. ಅಲ್ಲಿ ಜೆಡಿಎಸ್ ವತಿಯಿಂದ ಮುಸ್ಲಿಂ ಅಭ್ಯರ್ಥಿ ಹಾಕಲು ಎಚ್.ಡಿ ಕುಮಾರಸ್ವಾಮಿಯವರು ಬಿಜೆಪಿಯಿಂದ 10 ಕೋಟಿ ಹಣ ಪಡೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆರೋಪಕ್ಕೆ ಸಿಡಿಮಿಡಿಗೊಂಡಿರುವ ಕುಮಾರಸ್ವಾಮಿಯವರು ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ನಾನು ಬಿಜೆಪಿಯಿಂದ ಹಣ ಪಡೆದಿರುವುದಾಗಿ ಮಿತ್ರರೊಬ್ಬರು ಹೇಳಿದ್ದಾರೆ. ಆಗಲಿ, 2005ರಲ್ಲಿ SM ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್‌ ಬಿಜೆಪಿಯಿಂದ ದುಡ್ಡು ತಂದಿತ್ತೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “2005ರ ಚಾಮರಾಜಪೇಟೆ ಉಪಚುನಾವಣೆಯ ಆ ‘ಮುಸ್ಲಿಂ ಅಭ್ಯರ್ಥಿ’ಗಾಗಿ ಮಾಜಿ ಪ್ರಧಾನಿ ದೇವೇಗೌಡರು ಗಲ್ಲಿಗಲ್ಲಿಗಳಲ್ಲಿ ಸುತ್ತಿದ್ದರು. ಬೆವರು ಹರಿಸಿದ್ದರು. ದೇವೇಗೌಡರಂಥವರು ಅಂದು ಅಷ್ಟು ಕಷ್ಟಪಟ್ಟು ಉಪಚುನಾವಣೆ ನಡೆಸಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಇದಕ್ಕೆ ಸನ್ಮಿತ್ರರು ಆತ್ಮಸಾಕ್ಷಿಯಿಂದ, ಮನದಾಳದಿಂದ, ಪ್ರಾಮಾಣಿಕ ಉತ್ತರ ಕೊಡಬಹುದೇ? ಎಂದು ಟಾಂಗ್ ನೀಡಿದ್ದಾರೆ.

ಚಾಮರಾಜಪೇಟೆ ಉಪಚುನಾವಣೆಯ ಮತದಾನಕ್ಕೆ ಇನ್ನು 2 ದಿನಗಳು ಬಾಕಿ ಉಳಿದಿವೆ ಎನ್ನುವಾಗ ನಮ್ಮ ‘ಮುಸ್ಲಿಂ ಅಭ್ಯರ್ಥಿ’ ಏಕಾಏಕಿ ಕಾಣೆಯಾಗಿದ್ದರು. ಕಾರಣ ಹುಡುಕಿದಾಗ ಹಣದ ಕೊರತೆ ಎಂಬ ಅಂಶ ಗೊತ್ತಾಯಿತು. ಅಂದು ಶಿವಮೊಗ್ಗ ಪ್ರವಾಸದಲ್ಲಿದ್ದ ನಾನು ಓಡೋಡಿ ಬಂದು ಸಾಲ ಮಾಡಿ ಹಣ ಹೊಂದಿಸಿಕೊಟ್ಟಿದ್ದೆ. ಅಂದು ನಾನು ತಂದ ಸಾಲ ಬಿಜೆಪಿಯ ಹಣವಾಗಿತ್ತೇ? ಎಂದು ಮತ್ತೊಂದು ಪ್ರಶ್ನೆ ಎಸೆದಿದ್ದಾರೆ.

ಅಂದು ಚಾಮರಾಜಪೇಟೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಜೆಡಿಎಸ್‌ ‘ಮುಸ್ಲಿಂ ಅಭ್ಯರ್ಥಿ’ಯನ್ನು ಗುರುತಿಸಿತ್ತೇ? ಅಂದು ಬಿಜೆಪಿಯನ್ನು ಗೆಲ್ಲಿಸಲೆಂದು ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದಿದ್ದರೆ ಇಂದು ನನ್ನ ವಿರುದ್ಧ ಆರೋಪ ಮಾಡಲು ಆ ನಾಯಕರೇ ಇರುತ್ತಿರಲಿಲ್ಲ. ಜೆಡಿಎಸ್‌ ಪಕ್ಷದ ತ್ಯಾಗಕ್ಕಾಗಿ ಕಿಂಚಿತ್ತು ಕೃತಜ್ಞತೆ ಉಳಿಯದಿದ್ದರೆ ಹೇಗೆ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸನ್ಮಿತ್ರರು ನಮ್ಮಲ್ಲಿದ್ದಾಗ ಅವರನ್ನು ಬೆಂಗಳೂರು ಕೇಂದ್ರ ಲೋಕಸಭೆಗೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಅವರ ಸೋದರನನ್ನು ಚಿಕ್ಕಪೇಟೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಇದೆಲ್ಲ ಮಾಡಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಜೆಡಿಎಸ್‌ ಪಕ್ಷ ಮತ್ತು ಇದರ ಕಾರ್ಯಕರ್ತರು ಎಲ್ಲರನ್ನೂ ಬೆಳೆಸಿದೆ. ಹೊರಗೆ ಹೋದವರನ್ನು ಹರಸಿದೆ. ಕೃತಜ್ಞತೆ ಇರಲಿ ಎಂದು ತಿಳಿಸಿದ್ದಾರೆ.

2008ರ ಆಪರೇಷನ್‌ ಕಮಲದ ನಂತರ ನಡೆದ 20ಕ್ಕೂ ಹೆಚ್ಚು ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಒಂದು ಸ್ಥಾನ ಗೆಲ್ಲದೇ ಮುಖಭಂಗ ಅನುಭವಿಸಿತ್ತು. ಅದರ ಹಿಂದೆ ಯಾವ ನಾಯಕರು ಇದ್ದರು? ಎಷ್ಟು ಹಣ ಪಡೆದಿದ್ದರು? ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಸನ್ಮಿತ್ರರು ತಿಳಿಯಲಿ. ಹೇಗೂ ಅವರ ಅಕ್ಕಪಕ್ಕದಲ್ಲೆ ಇದ್ದೀರಲ್ಲ… ಕೇಳಿ ನೋಡಿ ಎಂದು ವ್ಯಂಗ್ಯವಾಡಿದ್ದಾರೆ.

ಬಸವಕಲ್ಯಾಣದಲ್ಲಿ ಬಿಜೆಪಿಯಿಂದ ಶರಣು ಸಲಗರ, ಕಾಂಗ್ರೆಸ್‌ನಿಂದ ಮಾಲಾ ನಾರಾಯಣರಾವ್ ಮತ್ತು ಜೆಡಿಎಸ್‌ನಿಂದ ಸೈಯದ್ ಅಶ್ರಬ್ ಅಲಿಖಾನ್ ಸ್ಪರ್ಧಿಸಲಿದ್ದಾರೆ. ಏಪ್ರಿಲ್‌ 17ರಂದು ಮತದಾನ ನಡೆಯಲಿದ್ದು, ಮೇ 2ರಂದು ಮತ ಏಣಿಕೆ ನಡೆಯಲಿದೆ.


ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...