Homeಕರ್ನಾಟಕಬಸವಕಲ್ಯಾಣ: ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಪಡೆಯುವ ಮತಗಳ ಮೇಲೆ ಇತರರ ಗೆಲುವು ನಿರ್ಧಾರ!

ಬಸವಕಲ್ಯಾಣ: ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಪಡೆಯುವ ಮತಗಳ ಮೇಲೆ ಇತರರ ಗೆಲುವು ನಿರ್ಧಾರ!

- Advertisement -
- Advertisement -

ಮೂರು ಉಪಚುನಾವಣೆಗಳ ಪೈಕಿ ಮುಖ್ಯ ಮಾಧ್ಯಮ ವಾಹಿನಿಗಳು ಅಷ್ಟಾಗಿ ತಲೆ ಕೆಡಿಸಿಕೊಳ್ಳದ ಕ್ಷೇತ್ರ ಬಸವಕಲ್ಯಾಣ. ಇಲ್ಲಿ ಮೇಲುಸ್ಥರದಲ್ಲಿ ಜಿದ್ದಾಜಿದ್ದಿ ಜೋರಾಗಿಯೇ ಇದೆ. ಶಿರಾ ಮತ್ತು ಇತರ ಉಪ ಚುನಾವಣೆಗಳನ್ನು ‘ಗೆಲ್ಲಿಸಿಕೊಂಡು’ ಬಂದ ವಿಜಯೇಂದ್ರ ಇಲ್ಲಿ ಸಾಕಷ್ಟು ಬೆವರು ಹರಿಸುತ್ತಿದ್ದಾರೆ. ಎಸಿ ರೂಮುಗಳಲ್ಲೇ ಕುಳಿತು ಅವರು ಕೆಲವು ಸಮುದಾಯಗಳನ್ನು ಸೆಳೆಯುವ, ಎದುರಾಳಿ ಪಕ್ಷಗಳಿಂದಲೂ ಸಹಾಯ ಪಡೆಯುವ ಕೆಲಸವನ್ನು ಸಮರ್ಥವಾಗಿಯೇ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ.

ಅನುದಾನ, ಘೋಷಣೆ ವರ್ಸಸ್ ಸೊಷಿಯಲ್ ಇಂಜಿನಿಯರಿಂಗ್

ಇದನ್ನು ಅರಿಯುವ ಮೊದಲು ಇಲ್ಲಿನ ಈಗಿನ ಚುನಾವಣಾ ಪರಿಸ್ಥಿತಿಯ ಬಗ್ಗೆ ಇನ್ನೊಮ್ಮೆ ಅವಲೋಕಿಸೋಣ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಲಾ (ಮಲ್ಲಮ್ಮ) ನಾರಾಯಣರಾವ್ ಅವರು ದಿವಂಗತ ಶಾಸಕ ನಾರಾಯಣರಾವ್ ಪತ್ನಿ. ಬಿಜೆಪಿಯಿಂದ ಸ್ಪರ್ಧಿಸಿರುವ ಶರಣು ಸಲಗಾರ ಕಾಂಗ್ರೆಸ್‌ನಿಂದ ಬಂದಿರುವವರು ಮತ್ತು ಕಲಬುರಗಿ ಜಿಲ್ಲೆಯವರು (ಬಸವಕಲ್ಯಾಣ ಬೀದರ್ ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ). ಬಿಜೆಪಿ ಸರ್ಕಾರ ಇಲ್ಲಿ ಅನುದಾನದ ಹೊಳೆ ಹರಿಸುವ ಭರವಸೆ ನೀಡಿದೆ.

ಇಷ್ಟಕ್ಕೆ ಕತೆ ನಿಲ್ಲಲ್ಲ. ಇಲ್ಲಿ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಎಂಬ ಗಟ್ಟಿ ಕುಳ ಕಣದಲ್ಲಿದೆ. ಇವರು 2013ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆದ್ದು ಶಾಸಕ ಆಗಿದ್ದರು. ಆದರೆ ಈ ಸಿಟ್ಟಿಂಗ್ ಎಂಎಲ್‌ಎಗೆ 2018ರ ಅಸೆಂಬ್ಲಿ ಚುನಾವಣೆಯಲ್ಲಿ ಸೀಟು ನಿರಾಕರಿಸಿದ ಜೆಡಿಎಸ್, ‘ರಾಜ್ಯ ನಾಯಕ’ ಪಿಜಿಆರ್ ಸಿಂಧ್ಯಾರಿಗೆ ಟಿಕೇಟ್ ಕೊಟ್ಟಿತ್ತು. ಆಗ ಶಾಸಕನಾಗಿದ್ದ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿ ಎತ್ತಿಕೊಂಡು ಟಿಕೆಟ್ ಕೊಟ್ಟಿತ್ತು. ಈ ಎಲ್ಲ ರಾಜಕೀಯ ಅಂಧಾದುಂಧಿಯ ಮಧ್ಯೆ ಸಿದ್ದರಾಮಯ್ಯ ನಾರಾಯಣರಾವ್ ಅವರಿಗೆ ಟಿಕೆಟ್ ಕೊಟ್ಟರು. ಲಿಂಗಾಯತರು, ಮುಸ್ಲಿಮರು ಮತ್ತು ಮರಾಠಿಗರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕ್ಷೇತ್ರದಲ್ಲಿ ಒಂದು ಸಣ್ಣ ಸಮುದಾಯದ ವ್ಯಕ್ತಿಯೊಬ್ಬರಿಗೆ ಅವರು ಕಾಂಗ್ರೆಸ್ ಟಿಕೆಟ್ ಕೊಟ್ಟರು.

ಪುಟ್ಟ ಅಂಬಿಗ (ಕೋಲಿ ಅಥವಾ ಕಬ್ಬಿಗ) ಸಮುದಾಯಕ್ಕೆ ಸೇರಿದ ನಾರಾಯಣರಾವ್ ಗೆದ್ದಿದ್ದು ಅವರ ಹತ್ತಾರು ವರ್ಷಗಳ ಹೋರಾಟದಿಂದ. ಅವರು ತಮ್ಮ ಅಂಬಿಗ ಸಮುದಾಯದಂತೆ ಜನಸಂಖ್ಯೆಯಲ್ಲಿ ಕಡಿಮೆ ಇರುವ (ಕ್ಷೇತ್ರದಲ್ಲಿ 5-6 ಸಾವಿರ ಅಷ್ಟೇ) ಜನಸಮುದಾಯಗಳನ್ನು ಬೆಸಿದಿದ್ದರು. ಕ್ಷೇತ್ರದಲ್ಲಿ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿ ಇರುವ ಮುಸ್ಲಿಂ ಸಮುದಾಯದ ಒಲವು ಗಳಿಸಿದ್ದರು. ಸದಾ ಬಸವಣ್ಣನ ಆಶಯಗಳನ್ನು ಪ್ರತಿಪಾದಿಸುತ್ತಿದ್ದ ಅವರು, ಬಹುಪಾಲು ಲಿಂಗಾಯತರ ಒಲವನ್ನು ಗಳಿಸಿದ್ದರು. ಎಲ್ಲಕ್ಕೂ ಮುಖ್ಯವಾಗಿ ಅವರು ಸೀದಾಸಾದಾ ಆಗಿದ್ದರು. ಇದು ರಾಜಕಾರಣಿಗಳಲ್ಲಿ ಕಾಣುವ ಅಪರೂಪದ ಗುಣ. ಇಂಥದ್ದನ್ನು ಜನ ಸುಲಭಕ್ಕೆ ತಿರಸ್ಕರಿಸುವುದಿಲ್ಲ. ಹಾಗಾಗಿಯೇ ಅವರು ಗೆದ್ದಿದ್ದರು. ಈ ಸಲ ನಾರಾಯಣರಾವ್ ಪತ್ನಿ ಅವರಿಗೆ ಆ ಅನುಕಂಪದ ಅಲೆ ಮತಗಳಾಗಿ ಪರಿವರ್ತನೆ ಆಗುತ್ತದೆಯೆ? ಕಾದು ನೋಡಬೇಕಿದೆ.

ಬಿಜೆಪಿ ನೆರವಿಗೆ ಜೆಡಿಎಸ್?

‘ಸಂಪನ್ಮೂಲ’ದ ಕೊರತೆಯ ಕಾರಣಕ್ಕೆ ಇತರ ಉಪ ಚುನಾವಣೆಗಳಲ್ಲಿ ಕ್ಯಾಂಡಿಡೇಟ್ ಹಾಕುವುದಿಲ್ಲ ಎಂದಿದ್ದ ಜೆಡಿಎಸ್ ಇಲ್ಲಿ ಯಸ್ರಬ್ ಅಲಿ ಖಾದ್ರಿ ಎಂಬ ಕ್ಯಾಂಡಿಡೇಟನ್ನು ಹಾಕಿದೆ. ಮತದಾರರ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿರುವ ಮುಸ್ಲಿಂರ ಓಟು ಬಾಚಿ ಬಿಜೆಪಿಗೆ ನೆರವು ನೀಡುವ ಉದ್ದೇಶ ಇದರಿಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಯಸ್ರಬ್ ಅಲಿ ಮೂಲ ಕಾಂಗ್ರೆಸ್ ಪಕ್ಷವೇ ಎಂಬುದನ್ನು ಮರೆಯಬಾರದು.

ಖೂಬಾ ಕೊಡಲಿರುವ ಏಟು!

2013ರ ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆಲವು ಸಾಧಿಸಿದ್ದ, ಅದರ ಹಿಂದಿನ ಚುನಾವಣೆಯಲ್ಲೂ ಜೆಡಿಎಸ್‌ನಿಂದಲೇ ಗೆದ್ದಿದ್ದ ಮಲ್ಲಿಕಾರ್ಜುನ ಖೂಬಾ ಈಗ ಬಿಜೆಪಿ ಬಂಡಾಯ ಅಭ್ಯರ್ಥಿ. ಕಳೆದ ಸಲ 2018ರಲ್ಲಿ ಜೆಡಿಎಸ್ ಟಿಕೆಟ್ ಕೊಡದ ಪರಿಣಾಮ ಮಲ್ಲಿಕಾರ್ಜುನ್ ಖೂಬಾ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಈ ಸಲ ಅವರು ಎಷ್ಟು ಬಿಜೆಪಿ ಓಟ್ ಕೀಳುತ್ತಾರೆ ಎಂಬುದು ಕೂಡ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ. ಅಲ್ಲದೇ ಬಿಜೆಪಿ ವರಿಷ್ಠರಿಗೆ ಯಾರಿಗೂ ನಮ್ಮ ಮನೆಗೆ ಪ್ರವೇಶವಿಲ್ಲ ಎಂಬ ಬೋರ್ಡ್ ಹಾಕುವ ಮೂಲಕ ಅವರು ತಮ್ಮ ಕೋಪ ಪ್ರದರ್ಶಿಸಿದ್ದಾರೆ.

ಮರಾಠಿ ಭಾಷಿಕರ ವೋಟು

ಲಿಂಗಾಯತರ ವೋಟುಗಳ ಜೊತೆಗೆ ಮರಾಠಿ ಭಾಷಿಕರ ಓಟುಗಳನ್ನು ಬಿಜೆಪಿ ನೆಚ್ಚಿದೆ. ಇಲ್ಲಿ ಲಿಂಗಾಯತರ ಮತಗಳು ಸುಮಾರು 60 ಸಾವಿರದಷ್ಟಿದ್ದರೆ, ಮರಾಠಿ ಭಾಷಿಕರ ಮತಗಳ ಸಂಖ್ಯೆ 25-30 ಸಾವಿರ. ಮುಸ್ಲಿಮರ ಮತಗಳ ಸಂಖ್ಯೆ 35 ಸಾವಿರದಷ್ಟು ಇದೆ.
ಮರಾಠ ಮತಗಳ ಮೇಲೆ ಕಣ್ಣಿಟ್ಟು ಎನ್‌ಸಿಪಿಯಿಂದ ಎಂ.ಜಿ ಮೂಳೆ ಇಲ್ಲಿ ನಾಮಪತ್ರ ಹಾಕಿ ಕೊನೆ ಕ್ಷಣದಲ್ಲಿ ಬಿಜೆಪಿಗೆ ಬೆಂಬಲ ಘೋಷಿಸಿ ಕಣದಿಂದ ಹೊರ ನಡೆದಿದ್ದಾರೆ. ಇದೇನೂ ಚುನಾವಣೆಯ ಮೇಲೆ ಗಾಢ ಪರಿಣಾಮ ಬೀರದು ಎನ್ನಲಾಗುತ್ತಿದೆ.

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...