Homeಕರ್ನಾಟಕಬಸವಕಲ್ಯಾಣ: ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಪಡೆಯುವ ಮತಗಳ ಮೇಲೆ ಇತರರ ಗೆಲುವು ನಿರ್ಧಾರ!

ಬಸವಕಲ್ಯಾಣ: ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಪಡೆಯುವ ಮತಗಳ ಮೇಲೆ ಇತರರ ಗೆಲುವು ನಿರ್ಧಾರ!

- Advertisement -
- Advertisement -

ಮೂರು ಉಪಚುನಾವಣೆಗಳ ಪೈಕಿ ಮುಖ್ಯ ಮಾಧ್ಯಮ ವಾಹಿನಿಗಳು ಅಷ್ಟಾಗಿ ತಲೆ ಕೆಡಿಸಿಕೊಳ್ಳದ ಕ್ಷೇತ್ರ ಬಸವಕಲ್ಯಾಣ. ಇಲ್ಲಿ ಮೇಲುಸ್ಥರದಲ್ಲಿ ಜಿದ್ದಾಜಿದ್ದಿ ಜೋರಾಗಿಯೇ ಇದೆ. ಶಿರಾ ಮತ್ತು ಇತರ ಉಪ ಚುನಾವಣೆಗಳನ್ನು ‘ಗೆಲ್ಲಿಸಿಕೊಂಡು’ ಬಂದ ವಿಜಯೇಂದ್ರ ಇಲ್ಲಿ ಸಾಕಷ್ಟು ಬೆವರು ಹರಿಸುತ್ತಿದ್ದಾರೆ. ಎಸಿ ರೂಮುಗಳಲ್ಲೇ ಕುಳಿತು ಅವರು ಕೆಲವು ಸಮುದಾಯಗಳನ್ನು ಸೆಳೆಯುವ, ಎದುರಾಳಿ ಪಕ್ಷಗಳಿಂದಲೂ ಸಹಾಯ ಪಡೆಯುವ ಕೆಲಸವನ್ನು ಸಮರ್ಥವಾಗಿಯೇ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ.

ಅನುದಾನ, ಘೋಷಣೆ ವರ್ಸಸ್ ಸೊಷಿಯಲ್ ಇಂಜಿನಿಯರಿಂಗ್

ಇದನ್ನು ಅರಿಯುವ ಮೊದಲು ಇಲ್ಲಿನ ಈಗಿನ ಚುನಾವಣಾ ಪರಿಸ್ಥಿತಿಯ ಬಗ್ಗೆ ಇನ್ನೊಮ್ಮೆ ಅವಲೋಕಿಸೋಣ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಲಾ (ಮಲ್ಲಮ್ಮ) ನಾರಾಯಣರಾವ್ ಅವರು ದಿವಂಗತ ಶಾಸಕ ನಾರಾಯಣರಾವ್ ಪತ್ನಿ. ಬಿಜೆಪಿಯಿಂದ ಸ್ಪರ್ಧಿಸಿರುವ ಶರಣು ಸಲಗಾರ ಕಾಂಗ್ರೆಸ್‌ನಿಂದ ಬಂದಿರುವವರು ಮತ್ತು ಕಲಬುರಗಿ ಜಿಲ್ಲೆಯವರು (ಬಸವಕಲ್ಯಾಣ ಬೀದರ್ ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ). ಬಿಜೆಪಿ ಸರ್ಕಾರ ಇಲ್ಲಿ ಅನುದಾನದ ಹೊಳೆ ಹರಿಸುವ ಭರವಸೆ ನೀಡಿದೆ.

ಇಷ್ಟಕ್ಕೆ ಕತೆ ನಿಲ್ಲಲ್ಲ. ಇಲ್ಲಿ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಎಂಬ ಗಟ್ಟಿ ಕುಳ ಕಣದಲ್ಲಿದೆ. ಇವರು 2013ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆದ್ದು ಶಾಸಕ ಆಗಿದ್ದರು. ಆದರೆ ಈ ಸಿಟ್ಟಿಂಗ್ ಎಂಎಲ್‌ಎಗೆ 2018ರ ಅಸೆಂಬ್ಲಿ ಚುನಾವಣೆಯಲ್ಲಿ ಸೀಟು ನಿರಾಕರಿಸಿದ ಜೆಡಿಎಸ್, ‘ರಾಜ್ಯ ನಾಯಕ’ ಪಿಜಿಆರ್ ಸಿಂಧ್ಯಾರಿಗೆ ಟಿಕೇಟ್ ಕೊಟ್ಟಿತ್ತು. ಆಗ ಶಾಸಕನಾಗಿದ್ದ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿ ಎತ್ತಿಕೊಂಡು ಟಿಕೆಟ್ ಕೊಟ್ಟಿತ್ತು. ಈ ಎಲ್ಲ ರಾಜಕೀಯ ಅಂಧಾದುಂಧಿಯ ಮಧ್ಯೆ ಸಿದ್ದರಾಮಯ್ಯ ನಾರಾಯಣರಾವ್ ಅವರಿಗೆ ಟಿಕೆಟ್ ಕೊಟ್ಟರು. ಲಿಂಗಾಯತರು, ಮುಸ್ಲಿಮರು ಮತ್ತು ಮರಾಠಿಗರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕ್ಷೇತ್ರದಲ್ಲಿ ಒಂದು ಸಣ್ಣ ಸಮುದಾಯದ ವ್ಯಕ್ತಿಯೊಬ್ಬರಿಗೆ ಅವರು ಕಾಂಗ್ರೆಸ್ ಟಿಕೆಟ್ ಕೊಟ್ಟರು.

ಪುಟ್ಟ ಅಂಬಿಗ (ಕೋಲಿ ಅಥವಾ ಕಬ್ಬಿಗ) ಸಮುದಾಯಕ್ಕೆ ಸೇರಿದ ನಾರಾಯಣರಾವ್ ಗೆದ್ದಿದ್ದು ಅವರ ಹತ್ತಾರು ವರ್ಷಗಳ ಹೋರಾಟದಿಂದ. ಅವರು ತಮ್ಮ ಅಂಬಿಗ ಸಮುದಾಯದಂತೆ ಜನಸಂಖ್ಯೆಯಲ್ಲಿ ಕಡಿಮೆ ಇರುವ (ಕ್ಷೇತ್ರದಲ್ಲಿ 5-6 ಸಾವಿರ ಅಷ್ಟೇ) ಜನಸಮುದಾಯಗಳನ್ನು ಬೆಸಿದಿದ್ದರು. ಕ್ಷೇತ್ರದಲ್ಲಿ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿ ಇರುವ ಮುಸ್ಲಿಂ ಸಮುದಾಯದ ಒಲವು ಗಳಿಸಿದ್ದರು. ಸದಾ ಬಸವಣ್ಣನ ಆಶಯಗಳನ್ನು ಪ್ರತಿಪಾದಿಸುತ್ತಿದ್ದ ಅವರು, ಬಹುಪಾಲು ಲಿಂಗಾಯತರ ಒಲವನ್ನು ಗಳಿಸಿದ್ದರು. ಎಲ್ಲಕ್ಕೂ ಮುಖ್ಯವಾಗಿ ಅವರು ಸೀದಾಸಾದಾ ಆಗಿದ್ದರು. ಇದು ರಾಜಕಾರಣಿಗಳಲ್ಲಿ ಕಾಣುವ ಅಪರೂಪದ ಗುಣ. ಇಂಥದ್ದನ್ನು ಜನ ಸುಲಭಕ್ಕೆ ತಿರಸ್ಕರಿಸುವುದಿಲ್ಲ. ಹಾಗಾಗಿಯೇ ಅವರು ಗೆದ್ದಿದ್ದರು. ಈ ಸಲ ನಾರಾಯಣರಾವ್ ಪತ್ನಿ ಅವರಿಗೆ ಆ ಅನುಕಂಪದ ಅಲೆ ಮತಗಳಾಗಿ ಪರಿವರ್ತನೆ ಆಗುತ್ತದೆಯೆ? ಕಾದು ನೋಡಬೇಕಿದೆ.

ಬಿಜೆಪಿ ನೆರವಿಗೆ ಜೆಡಿಎಸ್?

‘ಸಂಪನ್ಮೂಲ’ದ ಕೊರತೆಯ ಕಾರಣಕ್ಕೆ ಇತರ ಉಪ ಚುನಾವಣೆಗಳಲ್ಲಿ ಕ್ಯಾಂಡಿಡೇಟ್ ಹಾಕುವುದಿಲ್ಲ ಎಂದಿದ್ದ ಜೆಡಿಎಸ್ ಇಲ್ಲಿ ಯಸ್ರಬ್ ಅಲಿ ಖಾದ್ರಿ ಎಂಬ ಕ್ಯಾಂಡಿಡೇಟನ್ನು ಹಾಕಿದೆ. ಮತದಾರರ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿರುವ ಮುಸ್ಲಿಂರ ಓಟು ಬಾಚಿ ಬಿಜೆಪಿಗೆ ನೆರವು ನೀಡುವ ಉದ್ದೇಶ ಇದರಿಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಯಸ್ರಬ್ ಅಲಿ ಮೂಲ ಕಾಂಗ್ರೆಸ್ ಪಕ್ಷವೇ ಎಂಬುದನ್ನು ಮರೆಯಬಾರದು.

ಖೂಬಾ ಕೊಡಲಿರುವ ಏಟು!

2013ರ ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆಲವು ಸಾಧಿಸಿದ್ದ, ಅದರ ಹಿಂದಿನ ಚುನಾವಣೆಯಲ್ಲೂ ಜೆಡಿಎಸ್‌ನಿಂದಲೇ ಗೆದ್ದಿದ್ದ ಮಲ್ಲಿಕಾರ್ಜುನ ಖೂಬಾ ಈಗ ಬಿಜೆಪಿ ಬಂಡಾಯ ಅಭ್ಯರ್ಥಿ. ಕಳೆದ ಸಲ 2018ರಲ್ಲಿ ಜೆಡಿಎಸ್ ಟಿಕೆಟ್ ಕೊಡದ ಪರಿಣಾಮ ಮಲ್ಲಿಕಾರ್ಜುನ್ ಖೂಬಾ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಈ ಸಲ ಅವರು ಎಷ್ಟು ಬಿಜೆಪಿ ಓಟ್ ಕೀಳುತ್ತಾರೆ ಎಂಬುದು ಕೂಡ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ. ಅಲ್ಲದೇ ಬಿಜೆಪಿ ವರಿಷ್ಠರಿಗೆ ಯಾರಿಗೂ ನಮ್ಮ ಮನೆಗೆ ಪ್ರವೇಶವಿಲ್ಲ ಎಂಬ ಬೋರ್ಡ್ ಹಾಕುವ ಮೂಲಕ ಅವರು ತಮ್ಮ ಕೋಪ ಪ್ರದರ್ಶಿಸಿದ್ದಾರೆ.

ಮರಾಠಿ ಭಾಷಿಕರ ವೋಟು

ಲಿಂಗಾಯತರ ವೋಟುಗಳ ಜೊತೆಗೆ ಮರಾಠಿ ಭಾಷಿಕರ ಓಟುಗಳನ್ನು ಬಿಜೆಪಿ ನೆಚ್ಚಿದೆ. ಇಲ್ಲಿ ಲಿಂಗಾಯತರ ಮತಗಳು ಸುಮಾರು 60 ಸಾವಿರದಷ್ಟಿದ್ದರೆ, ಮರಾಠಿ ಭಾಷಿಕರ ಮತಗಳ ಸಂಖ್ಯೆ 25-30 ಸಾವಿರ. ಮುಸ್ಲಿಮರ ಮತಗಳ ಸಂಖ್ಯೆ 35 ಸಾವಿರದಷ್ಟು ಇದೆ.
ಮರಾಠ ಮತಗಳ ಮೇಲೆ ಕಣ್ಣಿಟ್ಟು ಎನ್‌ಸಿಪಿಯಿಂದ ಎಂ.ಜಿ ಮೂಳೆ ಇಲ್ಲಿ ನಾಮಪತ್ರ ಹಾಕಿ ಕೊನೆ ಕ್ಷಣದಲ್ಲಿ ಬಿಜೆಪಿಗೆ ಬೆಂಬಲ ಘೋಷಿಸಿ ಕಣದಿಂದ ಹೊರ ನಡೆದಿದ್ದಾರೆ. ಇದೇನೂ ಚುನಾವಣೆಯ ಮೇಲೆ ಗಾಢ ಪರಿಣಾಮ ಬೀರದು ಎನ್ನಲಾಗುತ್ತಿದೆ.

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...