Homeಕರ್ನಾಟಕಬಸವಕಲ್ಯಾಣ: ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಪಡೆಯುವ ಮತಗಳ ಮೇಲೆ ಇತರರ ಗೆಲುವು ನಿರ್ಧಾರ!

ಬಸವಕಲ್ಯಾಣ: ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಪಡೆಯುವ ಮತಗಳ ಮೇಲೆ ಇತರರ ಗೆಲುವು ನಿರ್ಧಾರ!

- Advertisement -
- Advertisement -

ಮೂರು ಉಪಚುನಾವಣೆಗಳ ಪೈಕಿ ಮುಖ್ಯ ಮಾಧ್ಯಮ ವಾಹಿನಿಗಳು ಅಷ್ಟಾಗಿ ತಲೆ ಕೆಡಿಸಿಕೊಳ್ಳದ ಕ್ಷೇತ್ರ ಬಸವಕಲ್ಯಾಣ. ಇಲ್ಲಿ ಮೇಲುಸ್ಥರದಲ್ಲಿ ಜಿದ್ದಾಜಿದ್ದಿ ಜೋರಾಗಿಯೇ ಇದೆ. ಶಿರಾ ಮತ್ತು ಇತರ ಉಪ ಚುನಾವಣೆಗಳನ್ನು ‘ಗೆಲ್ಲಿಸಿಕೊಂಡು’ ಬಂದ ವಿಜಯೇಂದ್ರ ಇಲ್ಲಿ ಸಾಕಷ್ಟು ಬೆವರು ಹರಿಸುತ್ತಿದ್ದಾರೆ. ಎಸಿ ರೂಮುಗಳಲ್ಲೇ ಕುಳಿತು ಅವರು ಕೆಲವು ಸಮುದಾಯಗಳನ್ನು ಸೆಳೆಯುವ, ಎದುರಾಳಿ ಪಕ್ಷಗಳಿಂದಲೂ ಸಹಾಯ ಪಡೆಯುವ ಕೆಲಸವನ್ನು ಸಮರ್ಥವಾಗಿಯೇ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ.

ಅನುದಾನ, ಘೋಷಣೆ ವರ್ಸಸ್ ಸೊಷಿಯಲ್ ಇಂಜಿನಿಯರಿಂಗ್

ಇದನ್ನು ಅರಿಯುವ ಮೊದಲು ಇಲ್ಲಿನ ಈಗಿನ ಚುನಾವಣಾ ಪರಿಸ್ಥಿತಿಯ ಬಗ್ಗೆ ಇನ್ನೊಮ್ಮೆ ಅವಲೋಕಿಸೋಣ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಲಾ (ಮಲ್ಲಮ್ಮ) ನಾರಾಯಣರಾವ್ ಅವರು ದಿವಂಗತ ಶಾಸಕ ನಾರಾಯಣರಾವ್ ಪತ್ನಿ. ಬಿಜೆಪಿಯಿಂದ ಸ್ಪರ್ಧಿಸಿರುವ ಶರಣು ಸಲಗಾರ ಕಾಂಗ್ರೆಸ್‌ನಿಂದ ಬಂದಿರುವವರು ಮತ್ತು ಕಲಬುರಗಿ ಜಿಲ್ಲೆಯವರು (ಬಸವಕಲ್ಯಾಣ ಬೀದರ್ ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ). ಬಿಜೆಪಿ ಸರ್ಕಾರ ಇಲ್ಲಿ ಅನುದಾನದ ಹೊಳೆ ಹರಿಸುವ ಭರವಸೆ ನೀಡಿದೆ.

ಇಷ್ಟಕ್ಕೆ ಕತೆ ನಿಲ್ಲಲ್ಲ. ಇಲ್ಲಿ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಎಂಬ ಗಟ್ಟಿ ಕುಳ ಕಣದಲ್ಲಿದೆ. ಇವರು 2013ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆದ್ದು ಶಾಸಕ ಆಗಿದ್ದರು. ಆದರೆ ಈ ಸಿಟ್ಟಿಂಗ್ ಎಂಎಲ್‌ಎಗೆ 2018ರ ಅಸೆಂಬ್ಲಿ ಚುನಾವಣೆಯಲ್ಲಿ ಸೀಟು ನಿರಾಕರಿಸಿದ ಜೆಡಿಎಸ್, ‘ರಾಜ್ಯ ನಾಯಕ’ ಪಿಜಿಆರ್ ಸಿಂಧ್ಯಾರಿಗೆ ಟಿಕೇಟ್ ಕೊಟ್ಟಿತ್ತು. ಆಗ ಶಾಸಕನಾಗಿದ್ದ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿ ಎತ್ತಿಕೊಂಡು ಟಿಕೆಟ್ ಕೊಟ್ಟಿತ್ತು. ಈ ಎಲ್ಲ ರಾಜಕೀಯ ಅಂಧಾದುಂಧಿಯ ಮಧ್ಯೆ ಸಿದ್ದರಾಮಯ್ಯ ನಾರಾಯಣರಾವ್ ಅವರಿಗೆ ಟಿಕೆಟ್ ಕೊಟ್ಟರು. ಲಿಂಗಾಯತರು, ಮುಸ್ಲಿಮರು ಮತ್ತು ಮರಾಠಿಗರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕ್ಷೇತ್ರದಲ್ಲಿ ಒಂದು ಸಣ್ಣ ಸಮುದಾಯದ ವ್ಯಕ್ತಿಯೊಬ್ಬರಿಗೆ ಅವರು ಕಾಂಗ್ರೆಸ್ ಟಿಕೆಟ್ ಕೊಟ್ಟರು.

ಪುಟ್ಟ ಅಂಬಿಗ (ಕೋಲಿ ಅಥವಾ ಕಬ್ಬಿಗ) ಸಮುದಾಯಕ್ಕೆ ಸೇರಿದ ನಾರಾಯಣರಾವ್ ಗೆದ್ದಿದ್ದು ಅವರ ಹತ್ತಾರು ವರ್ಷಗಳ ಹೋರಾಟದಿಂದ. ಅವರು ತಮ್ಮ ಅಂಬಿಗ ಸಮುದಾಯದಂತೆ ಜನಸಂಖ್ಯೆಯಲ್ಲಿ ಕಡಿಮೆ ಇರುವ (ಕ್ಷೇತ್ರದಲ್ಲಿ 5-6 ಸಾವಿರ ಅಷ್ಟೇ) ಜನಸಮುದಾಯಗಳನ್ನು ಬೆಸಿದಿದ್ದರು. ಕ್ಷೇತ್ರದಲ್ಲಿ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿ ಇರುವ ಮುಸ್ಲಿಂ ಸಮುದಾಯದ ಒಲವು ಗಳಿಸಿದ್ದರು. ಸದಾ ಬಸವಣ್ಣನ ಆಶಯಗಳನ್ನು ಪ್ರತಿಪಾದಿಸುತ್ತಿದ್ದ ಅವರು, ಬಹುಪಾಲು ಲಿಂಗಾಯತರ ಒಲವನ್ನು ಗಳಿಸಿದ್ದರು. ಎಲ್ಲಕ್ಕೂ ಮುಖ್ಯವಾಗಿ ಅವರು ಸೀದಾಸಾದಾ ಆಗಿದ್ದರು. ಇದು ರಾಜಕಾರಣಿಗಳಲ್ಲಿ ಕಾಣುವ ಅಪರೂಪದ ಗುಣ. ಇಂಥದ್ದನ್ನು ಜನ ಸುಲಭಕ್ಕೆ ತಿರಸ್ಕರಿಸುವುದಿಲ್ಲ. ಹಾಗಾಗಿಯೇ ಅವರು ಗೆದ್ದಿದ್ದರು. ಈ ಸಲ ನಾರಾಯಣರಾವ್ ಪತ್ನಿ ಅವರಿಗೆ ಆ ಅನುಕಂಪದ ಅಲೆ ಮತಗಳಾಗಿ ಪರಿವರ್ತನೆ ಆಗುತ್ತದೆಯೆ? ಕಾದು ನೋಡಬೇಕಿದೆ.

ಬಿಜೆಪಿ ನೆರವಿಗೆ ಜೆಡಿಎಸ್?

‘ಸಂಪನ್ಮೂಲ’ದ ಕೊರತೆಯ ಕಾರಣಕ್ಕೆ ಇತರ ಉಪ ಚುನಾವಣೆಗಳಲ್ಲಿ ಕ್ಯಾಂಡಿಡೇಟ್ ಹಾಕುವುದಿಲ್ಲ ಎಂದಿದ್ದ ಜೆಡಿಎಸ್ ಇಲ್ಲಿ ಯಸ್ರಬ್ ಅಲಿ ಖಾದ್ರಿ ಎಂಬ ಕ್ಯಾಂಡಿಡೇಟನ್ನು ಹಾಕಿದೆ. ಮತದಾರರ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿರುವ ಮುಸ್ಲಿಂರ ಓಟು ಬಾಚಿ ಬಿಜೆಪಿಗೆ ನೆರವು ನೀಡುವ ಉದ್ದೇಶ ಇದರಿಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಯಸ್ರಬ್ ಅಲಿ ಮೂಲ ಕಾಂಗ್ರೆಸ್ ಪಕ್ಷವೇ ಎಂಬುದನ್ನು ಮರೆಯಬಾರದು.

ಖೂಬಾ ಕೊಡಲಿರುವ ಏಟು!

2013ರ ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆಲವು ಸಾಧಿಸಿದ್ದ, ಅದರ ಹಿಂದಿನ ಚುನಾವಣೆಯಲ್ಲೂ ಜೆಡಿಎಸ್‌ನಿಂದಲೇ ಗೆದ್ದಿದ್ದ ಮಲ್ಲಿಕಾರ್ಜುನ ಖೂಬಾ ಈಗ ಬಿಜೆಪಿ ಬಂಡಾಯ ಅಭ್ಯರ್ಥಿ. ಕಳೆದ ಸಲ 2018ರಲ್ಲಿ ಜೆಡಿಎಸ್ ಟಿಕೆಟ್ ಕೊಡದ ಪರಿಣಾಮ ಮಲ್ಲಿಕಾರ್ಜುನ್ ಖೂಬಾ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಈ ಸಲ ಅವರು ಎಷ್ಟು ಬಿಜೆಪಿ ಓಟ್ ಕೀಳುತ್ತಾರೆ ಎಂಬುದು ಕೂಡ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ. ಅಲ್ಲದೇ ಬಿಜೆಪಿ ವರಿಷ್ಠರಿಗೆ ಯಾರಿಗೂ ನಮ್ಮ ಮನೆಗೆ ಪ್ರವೇಶವಿಲ್ಲ ಎಂಬ ಬೋರ್ಡ್ ಹಾಕುವ ಮೂಲಕ ಅವರು ತಮ್ಮ ಕೋಪ ಪ್ರದರ್ಶಿಸಿದ್ದಾರೆ.

ಮರಾಠಿ ಭಾಷಿಕರ ವೋಟು

ಲಿಂಗಾಯತರ ವೋಟುಗಳ ಜೊತೆಗೆ ಮರಾಠಿ ಭಾಷಿಕರ ಓಟುಗಳನ್ನು ಬಿಜೆಪಿ ನೆಚ್ಚಿದೆ. ಇಲ್ಲಿ ಲಿಂಗಾಯತರ ಮತಗಳು ಸುಮಾರು 60 ಸಾವಿರದಷ್ಟಿದ್ದರೆ, ಮರಾಠಿ ಭಾಷಿಕರ ಮತಗಳ ಸಂಖ್ಯೆ 25-30 ಸಾವಿರ. ಮುಸ್ಲಿಮರ ಮತಗಳ ಸಂಖ್ಯೆ 35 ಸಾವಿರದಷ್ಟು ಇದೆ.
ಮರಾಠ ಮತಗಳ ಮೇಲೆ ಕಣ್ಣಿಟ್ಟು ಎನ್‌ಸಿಪಿಯಿಂದ ಎಂ.ಜಿ ಮೂಳೆ ಇಲ್ಲಿ ನಾಮಪತ್ರ ಹಾಕಿ ಕೊನೆ ಕ್ಷಣದಲ್ಲಿ ಬಿಜೆಪಿಗೆ ಬೆಂಬಲ ಘೋಷಿಸಿ ಕಣದಿಂದ ಹೊರ ನಡೆದಿದ್ದಾರೆ. ಇದೇನೂ ಚುನಾವಣೆಯ ಮೇಲೆ ಗಾಢ ಪರಿಣಾಮ ಬೀರದು ಎನ್ನಲಾಗುತ್ತಿದೆ.

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...