Homeಕರ್ನಾಟಕಬಸವಕಲ್ಯಾಣ: ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಪಡೆಯುವ ಮತಗಳ ಮೇಲೆ ಇತರರ ಗೆಲುವು ನಿರ್ಧಾರ!

ಬಸವಕಲ್ಯಾಣ: ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಪಡೆಯುವ ಮತಗಳ ಮೇಲೆ ಇತರರ ಗೆಲುವು ನಿರ್ಧಾರ!

- Advertisement -
- Advertisement -

ಮೂರು ಉಪಚುನಾವಣೆಗಳ ಪೈಕಿ ಮುಖ್ಯ ಮಾಧ್ಯಮ ವಾಹಿನಿಗಳು ಅಷ್ಟಾಗಿ ತಲೆ ಕೆಡಿಸಿಕೊಳ್ಳದ ಕ್ಷೇತ್ರ ಬಸವಕಲ್ಯಾಣ. ಇಲ್ಲಿ ಮೇಲುಸ್ಥರದಲ್ಲಿ ಜಿದ್ದಾಜಿದ್ದಿ ಜೋರಾಗಿಯೇ ಇದೆ. ಶಿರಾ ಮತ್ತು ಇತರ ಉಪ ಚುನಾವಣೆಗಳನ್ನು ‘ಗೆಲ್ಲಿಸಿಕೊಂಡು’ ಬಂದ ವಿಜಯೇಂದ್ರ ಇಲ್ಲಿ ಸಾಕಷ್ಟು ಬೆವರು ಹರಿಸುತ್ತಿದ್ದಾರೆ. ಎಸಿ ರೂಮುಗಳಲ್ಲೇ ಕುಳಿತು ಅವರು ಕೆಲವು ಸಮುದಾಯಗಳನ್ನು ಸೆಳೆಯುವ, ಎದುರಾಳಿ ಪಕ್ಷಗಳಿಂದಲೂ ಸಹಾಯ ಪಡೆಯುವ ಕೆಲಸವನ್ನು ಸಮರ್ಥವಾಗಿಯೇ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ.

ಅನುದಾನ, ಘೋಷಣೆ ವರ್ಸಸ್ ಸೊಷಿಯಲ್ ಇಂಜಿನಿಯರಿಂಗ್

ಇದನ್ನು ಅರಿಯುವ ಮೊದಲು ಇಲ್ಲಿನ ಈಗಿನ ಚುನಾವಣಾ ಪರಿಸ್ಥಿತಿಯ ಬಗ್ಗೆ ಇನ್ನೊಮ್ಮೆ ಅವಲೋಕಿಸೋಣ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಲಾ (ಮಲ್ಲಮ್ಮ) ನಾರಾಯಣರಾವ್ ಅವರು ದಿವಂಗತ ಶಾಸಕ ನಾರಾಯಣರಾವ್ ಪತ್ನಿ. ಬಿಜೆಪಿಯಿಂದ ಸ್ಪರ್ಧಿಸಿರುವ ಶರಣು ಸಲಗಾರ ಕಾಂಗ್ರೆಸ್‌ನಿಂದ ಬಂದಿರುವವರು ಮತ್ತು ಕಲಬುರಗಿ ಜಿಲ್ಲೆಯವರು (ಬಸವಕಲ್ಯಾಣ ಬೀದರ್ ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ). ಬಿಜೆಪಿ ಸರ್ಕಾರ ಇಲ್ಲಿ ಅನುದಾನದ ಹೊಳೆ ಹರಿಸುವ ಭರವಸೆ ನೀಡಿದೆ.

ಇಷ್ಟಕ್ಕೆ ಕತೆ ನಿಲ್ಲಲ್ಲ. ಇಲ್ಲಿ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಎಂಬ ಗಟ್ಟಿ ಕುಳ ಕಣದಲ್ಲಿದೆ. ಇವರು 2013ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆದ್ದು ಶಾಸಕ ಆಗಿದ್ದರು. ಆದರೆ ಈ ಸಿಟ್ಟಿಂಗ್ ಎಂಎಲ್‌ಎಗೆ 2018ರ ಅಸೆಂಬ್ಲಿ ಚುನಾವಣೆಯಲ್ಲಿ ಸೀಟು ನಿರಾಕರಿಸಿದ ಜೆಡಿಎಸ್, ‘ರಾಜ್ಯ ನಾಯಕ’ ಪಿಜಿಆರ್ ಸಿಂಧ್ಯಾರಿಗೆ ಟಿಕೇಟ್ ಕೊಟ್ಟಿತ್ತು. ಆಗ ಶಾಸಕನಾಗಿದ್ದ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿ ಎತ್ತಿಕೊಂಡು ಟಿಕೆಟ್ ಕೊಟ್ಟಿತ್ತು. ಈ ಎಲ್ಲ ರಾಜಕೀಯ ಅಂಧಾದುಂಧಿಯ ಮಧ್ಯೆ ಸಿದ್ದರಾಮಯ್ಯ ನಾರಾಯಣರಾವ್ ಅವರಿಗೆ ಟಿಕೆಟ್ ಕೊಟ್ಟರು. ಲಿಂಗಾಯತರು, ಮುಸ್ಲಿಮರು ಮತ್ತು ಮರಾಠಿಗರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕ್ಷೇತ್ರದಲ್ಲಿ ಒಂದು ಸಣ್ಣ ಸಮುದಾಯದ ವ್ಯಕ್ತಿಯೊಬ್ಬರಿಗೆ ಅವರು ಕಾಂಗ್ರೆಸ್ ಟಿಕೆಟ್ ಕೊಟ್ಟರು.

ಪುಟ್ಟ ಅಂಬಿಗ (ಕೋಲಿ ಅಥವಾ ಕಬ್ಬಿಗ) ಸಮುದಾಯಕ್ಕೆ ಸೇರಿದ ನಾರಾಯಣರಾವ್ ಗೆದ್ದಿದ್ದು ಅವರ ಹತ್ತಾರು ವರ್ಷಗಳ ಹೋರಾಟದಿಂದ. ಅವರು ತಮ್ಮ ಅಂಬಿಗ ಸಮುದಾಯದಂತೆ ಜನಸಂಖ್ಯೆಯಲ್ಲಿ ಕಡಿಮೆ ಇರುವ (ಕ್ಷೇತ್ರದಲ್ಲಿ 5-6 ಸಾವಿರ ಅಷ್ಟೇ) ಜನಸಮುದಾಯಗಳನ್ನು ಬೆಸಿದಿದ್ದರು. ಕ್ಷೇತ್ರದಲ್ಲಿ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿ ಇರುವ ಮುಸ್ಲಿಂ ಸಮುದಾಯದ ಒಲವು ಗಳಿಸಿದ್ದರು. ಸದಾ ಬಸವಣ್ಣನ ಆಶಯಗಳನ್ನು ಪ್ರತಿಪಾದಿಸುತ್ತಿದ್ದ ಅವರು, ಬಹುಪಾಲು ಲಿಂಗಾಯತರ ಒಲವನ್ನು ಗಳಿಸಿದ್ದರು. ಎಲ್ಲಕ್ಕೂ ಮುಖ್ಯವಾಗಿ ಅವರು ಸೀದಾಸಾದಾ ಆಗಿದ್ದರು. ಇದು ರಾಜಕಾರಣಿಗಳಲ್ಲಿ ಕಾಣುವ ಅಪರೂಪದ ಗುಣ. ಇಂಥದ್ದನ್ನು ಜನ ಸುಲಭಕ್ಕೆ ತಿರಸ್ಕರಿಸುವುದಿಲ್ಲ. ಹಾಗಾಗಿಯೇ ಅವರು ಗೆದ್ದಿದ್ದರು. ಈ ಸಲ ನಾರಾಯಣರಾವ್ ಪತ್ನಿ ಅವರಿಗೆ ಆ ಅನುಕಂಪದ ಅಲೆ ಮತಗಳಾಗಿ ಪರಿವರ್ತನೆ ಆಗುತ್ತದೆಯೆ? ಕಾದು ನೋಡಬೇಕಿದೆ.

ಬಿಜೆಪಿ ನೆರವಿಗೆ ಜೆಡಿಎಸ್?

‘ಸಂಪನ್ಮೂಲ’ದ ಕೊರತೆಯ ಕಾರಣಕ್ಕೆ ಇತರ ಉಪ ಚುನಾವಣೆಗಳಲ್ಲಿ ಕ್ಯಾಂಡಿಡೇಟ್ ಹಾಕುವುದಿಲ್ಲ ಎಂದಿದ್ದ ಜೆಡಿಎಸ್ ಇಲ್ಲಿ ಯಸ್ರಬ್ ಅಲಿ ಖಾದ್ರಿ ಎಂಬ ಕ್ಯಾಂಡಿಡೇಟನ್ನು ಹಾಕಿದೆ. ಮತದಾರರ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿರುವ ಮುಸ್ಲಿಂರ ಓಟು ಬಾಚಿ ಬಿಜೆಪಿಗೆ ನೆರವು ನೀಡುವ ಉದ್ದೇಶ ಇದರಿಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಯಸ್ರಬ್ ಅಲಿ ಮೂಲ ಕಾಂಗ್ರೆಸ್ ಪಕ್ಷವೇ ಎಂಬುದನ್ನು ಮರೆಯಬಾರದು.

ಖೂಬಾ ಕೊಡಲಿರುವ ಏಟು!

2013ರ ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆಲವು ಸಾಧಿಸಿದ್ದ, ಅದರ ಹಿಂದಿನ ಚುನಾವಣೆಯಲ್ಲೂ ಜೆಡಿಎಸ್‌ನಿಂದಲೇ ಗೆದ್ದಿದ್ದ ಮಲ್ಲಿಕಾರ್ಜುನ ಖೂಬಾ ಈಗ ಬಿಜೆಪಿ ಬಂಡಾಯ ಅಭ್ಯರ್ಥಿ. ಕಳೆದ ಸಲ 2018ರಲ್ಲಿ ಜೆಡಿಎಸ್ ಟಿಕೆಟ್ ಕೊಡದ ಪರಿಣಾಮ ಮಲ್ಲಿಕಾರ್ಜುನ್ ಖೂಬಾ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಈ ಸಲ ಅವರು ಎಷ್ಟು ಬಿಜೆಪಿ ಓಟ್ ಕೀಳುತ್ತಾರೆ ಎಂಬುದು ಕೂಡ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ. ಅಲ್ಲದೇ ಬಿಜೆಪಿ ವರಿಷ್ಠರಿಗೆ ಯಾರಿಗೂ ನಮ್ಮ ಮನೆಗೆ ಪ್ರವೇಶವಿಲ್ಲ ಎಂಬ ಬೋರ್ಡ್ ಹಾಕುವ ಮೂಲಕ ಅವರು ತಮ್ಮ ಕೋಪ ಪ್ರದರ್ಶಿಸಿದ್ದಾರೆ.

ಮರಾಠಿ ಭಾಷಿಕರ ವೋಟು

ಲಿಂಗಾಯತರ ವೋಟುಗಳ ಜೊತೆಗೆ ಮರಾಠಿ ಭಾಷಿಕರ ಓಟುಗಳನ್ನು ಬಿಜೆಪಿ ನೆಚ್ಚಿದೆ. ಇಲ್ಲಿ ಲಿಂಗಾಯತರ ಮತಗಳು ಸುಮಾರು 60 ಸಾವಿರದಷ್ಟಿದ್ದರೆ, ಮರಾಠಿ ಭಾಷಿಕರ ಮತಗಳ ಸಂಖ್ಯೆ 25-30 ಸಾವಿರ. ಮುಸ್ಲಿಮರ ಮತಗಳ ಸಂಖ್ಯೆ 35 ಸಾವಿರದಷ್ಟು ಇದೆ.
ಮರಾಠ ಮತಗಳ ಮೇಲೆ ಕಣ್ಣಿಟ್ಟು ಎನ್‌ಸಿಪಿಯಿಂದ ಎಂ.ಜಿ ಮೂಳೆ ಇಲ್ಲಿ ನಾಮಪತ್ರ ಹಾಕಿ ಕೊನೆ ಕ್ಷಣದಲ್ಲಿ ಬಿಜೆಪಿಗೆ ಬೆಂಬಲ ಘೋಷಿಸಿ ಕಣದಿಂದ ಹೊರ ನಡೆದಿದ್ದಾರೆ. ಇದೇನೂ ಚುನಾವಣೆಯ ಮೇಲೆ ಗಾಢ ಪರಿಣಾಮ ಬೀರದು ಎನ್ನಲಾಗುತ್ತಿದೆ.

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...