Homeಕರ್ನಾಟಕಬಸವಕಲ್ಯಾಣ: ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಪಡೆಯುವ ಮತಗಳ ಮೇಲೆ ಇತರರ ಗೆಲುವು ನಿರ್ಧಾರ!

ಬಸವಕಲ್ಯಾಣ: ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಪಡೆಯುವ ಮತಗಳ ಮೇಲೆ ಇತರರ ಗೆಲುವು ನಿರ್ಧಾರ!

- Advertisement -
- Advertisement -

ಮೂರು ಉಪಚುನಾವಣೆಗಳ ಪೈಕಿ ಮುಖ್ಯ ಮಾಧ್ಯಮ ವಾಹಿನಿಗಳು ಅಷ್ಟಾಗಿ ತಲೆ ಕೆಡಿಸಿಕೊಳ್ಳದ ಕ್ಷೇತ್ರ ಬಸವಕಲ್ಯಾಣ. ಇಲ್ಲಿ ಮೇಲುಸ್ಥರದಲ್ಲಿ ಜಿದ್ದಾಜಿದ್ದಿ ಜೋರಾಗಿಯೇ ಇದೆ. ಶಿರಾ ಮತ್ತು ಇತರ ಉಪ ಚುನಾವಣೆಗಳನ್ನು ‘ಗೆಲ್ಲಿಸಿಕೊಂಡು’ ಬಂದ ವಿಜಯೇಂದ್ರ ಇಲ್ಲಿ ಸಾಕಷ್ಟು ಬೆವರು ಹರಿಸುತ್ತಿದ್ದಾರೆ. ಎಸಿ ರೂಮುಗಳಲ್ಲೇ ಕುಳಿತು ಅವರು ಕೆಲವು ಸಮುದಾಯಗಳನ್ನು ಸೆಳೆಯುವ, ಎದುರಾಳಿ ಪಕ್ಷಗಳಿಂದಲೂ ಸಹಾಯ ಪಡೆಯುವ ಕೆಲಸವನ್ನು ಸಮರ್ಥವಾಗಿಯೇ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ.

ಅನುದಾನ, ಘೋಷಣೆ ವರ್ಸಸ್ ಸೊಷಿಯಲ್ ಇಂಜಿನಿಯರಿಂಗ್

ಇದನ್ನು ಅರಿಯುವ ಮೊದಲು ಇಲ್ಲಿನ ಈಗಿನ ಚುನಾವಣಾ ಪರಿಸ್ಥಿತಿಯ ಬಗ್ಗೆ ಇನ್ನೊಮ್ಮೆ ಅವಲೋಕಿಸೋಣ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಲಾ (ಮಲ್ಲಮ್ಮ) ನಾರಾಯಣರಾವ್ ಅವರು ದಿವಂಗತ ಶಾಸಕ ನಾರಾಯಣರಾವ್ ಪತ್ನಿ. ಬಿಜೆಪಿಯಿಂದ ಸ್ಪರ್ಧಿಸಿರುವ ಶರಣು ಸಲಗಾರ ಕಾಂಗ್ರೆಸ್‌ನಿಂದ ಬಂದಿರುವವರು ಮತ್ತು ಕಲಬುರಗಿ ಜಿಲ್ಲೆಯವರು (ಬಸವಕಲ್ಯಾಣ ಬೀದರ್ ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ). ಬಿಜೆಪಿ ಸರ್ಕಾರ ಇಲ್ಲಿ ಅನುದಾನದ ಹೊಳೆ ಹರಿಸುವ ಭರವಸೆ ನೀಡಿದೆ.

ಇಷ್ಟಕ್ಕೆ ಕತೆ ನಿಲ್ಲಲ್ಲ. ಇಲ್ಲಿ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಎಂಬ ಗಟ್ಟಿ ಕುಳ ಕಣದಲ್ಲಿದೆ. ಇವರು 2013ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆದ್ದು ಶಾಸಕ ಆಗಿದ್ದರು. ಆದರೆ ಈ ಸಿಟ್ಟಿಂಗ್ ಎಂಎಲ್‌ಎಗೆ 2018ರ ಅಸೆಂಬ್ಲಿ ಚುನಾವಣೆಯಲ್ಲಿ ಸೀಟು ನಿರಾಕರಿಸಿದ ಜೆಡಿಎಸ್, ‘ರಾಜ್ಯ ನಾಯಕ’ ಪಿಜಿಆರ್ ಸಿಂಧ್ಯಾರಿಗೆ ಟಿಕೇಟ್ ಕೊಟ್ಟಿತ್ತು. ಆಗ ಶಾಸಕನಾಗಿದ್ದ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿ ಎತ್ತಿಕೊಂಡು ಟಿಕೆಟ್ ಕೊಟ್ಟಿತ್ತು. ಈ ಎಲ್ಲ ರಾಜಕೀಯ ಅಂಧಾದುಂಧಿಯ ಮಧ್ಯೆ ಸಿದ್ದರಾಮಯ್ಯ ನಾರಾಯಣರಾವ್ ಅವರಿಗೆ ಟಿಕೆಟ್ ಕೊಟ್ಟರು. ಲಿಂಗಾಯತರು, ಮುಸ್ಲಿಮರು ಮತ್ತು ಮರಾಠಿಗರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕ್ಷೇತ್ರದಲ್ಲಿ ಒಂದು ಸಣ್ಣ ಸಮುದಾಯದ ವ್ಯಕ್ತಿಯೊಬ್ಬರಿಗೆ ಅವರು ಕಾಂಗ್ರೆಸ್ ಟಿಕೆಟ್ ಕೊಟ್ಟರು.

ಪುಟ್ಟ ಅಂಬಿಗ (ಕೋಲಿ ಅಥವಾ ಕಬ್ಬಿಗ) ಸಮುದಾಯಕ್ಕೆ ಸೇರಿದ ನಾರಾಯಣರಾವ್ ಗೆದ್ದಿದ್ದು ಅವರ ಹತ್ತಾರು ವರ್ಷಗಳ ಹೋರಾಟದಿಂದ. ಅವರು ತಮ್ಮ ಅಂಬಿಗ ಸಮುದಾಯದಂತೆ ಜನಸಂಖ್ಯೆಯಲ್ಲಿ ಕಡಿಮೆ ಇರುವ (ಕ್ಷೇತ್ರದಲ್ಲಿ 5-6 ಸಾವಿರ ಅಷ್ಟೇ) ಜನಸಮುದಾಯಗಳನ್ನು ಬೆಸಿದಿದ್ದರು. ಕ್ಷೇತ್ರದಲ್ಲಿ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿ ಇರುವ ಮುಸ್ಲಿಂ ಸಮುದಾಯದ ಒಲವು ಗಳಿಸಿದ್ದರು. ಸದಾ ಬಸವಣ್ಣನ ಆಶಯಗಳನ್ನು ಪ್ರತಿಪಾದಿಸುತ್ತಿದ್ದ ಅವರು, ಬಹುಪಾಲು ಲಿಂಗಾಯತರ ಒಲವನ್ನು ಗಳಿಸಿದ್ದರು. ಎಲ್ಲಕ್ಕೂ ಮುಖ್ಯವಾಗಿ ಅವರು ಸೀದಾಸಾದಾ ಆಗಿದ್ದರು. ಇದು ರಾಜಕಾರಣಿಗಳಲ್ಲಿ ಕಾಣುವ ಅಪರೂಪದ ಗುಣ. ಇಂಥದ್ದನ್ನು ಜನ ಸುಲಭಕ್ಕೆ ತಿರಸ್ಕರಿಸುವುದಿಲ್ಲ. ಹಾಗಾಗಿಯೇ ಅವರು ಗೆದ್ದಿದ್ದರು. ಈ ಸಲ ನಾರಾಯಣರಾವ್ ಪತ್ನಿ ಅವರಿಗೆ ಆ ಅನುಕಂಪದ ಅಲೆ ಮತಗಳಾಗಿ ಪರಿವರ್ತನೆ ಆಗುತ್ತದೆಯೆ? ಕಾದು ನೋಡಬೇಕಿದೆ.

ಬಿಜೆಪಿ ನೆರವಿಗೆ ಜೆಡಿಎಸ್?

‘ಸಂಪನ್ಮೂಲ’ದ ಕೊರತೆಯ ಕಾರಣಕ್ಕೆ ಇತರ ಉಪ ಚುನಾವಣೆಗಳಲ್ಲಿ ಕ್ಯಾಂಡಿಡೇಟ್ ಹಾಕುವುದಿಲ್ಲ ಎಂದಿದ್ದ ಜೆಡಿಎಸ್ ಇಲ್ಲಿ ಯಸ್ರಬ್ ಅಲಿ ಖಾದ್ರಿ ಎಂಬ ಕ್ಯಾಂಡಿಡೇಟನ್ನು ಹಾಕಿದೆ. ಮತದಾರರ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿರುವ ಮುಸ್ಲಿಂರ ಓಟು ಬಾಚಿ ಬಿಜೆಪಿಗೆ ನೆರವು ನೀಡುವ ಉದ್ದೇಶ ಇದರಿಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಯಸ್ರಬ್ ಅಲಿ ಮೂಲ ಕಾಂಗ್ರೆಸ್ ಪಕ್ಷವೇ ಎಂಬುದನ್ನು ಮರೆಯಬಾರದು.

ಖೂಬಾ ಕೊಡಲಿರುವ ಏಟು!

2013ರ ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆಲವು ಸಾಧಿಸಿದ್ದ, ಅದರ ಹಿಂದಿನ ಚುನಾವಣೆಯಲ್ಲೂ ಜೆಡಿಎಸ್‌ನಿಂದಲೇ ಗೆದ್ದಿದ್ದ ಮಲ್ಲಿಕಾರ್ಜುನ ಖೂಬಾ ಈಗ ಬಿಜೆಪಿ ಬಂಡಾಯ ಅಭ್ಯರ್ಥಿ. ಕಳೆದ ಸಲ 2018ರಲ್ಲಿ ಜೆಡಿಎಸ್ ಟಿಕೆಟ್ ಕೊಡದ ಪರಿಣಾಮ ಮಲ್ಲಿಕಾರ್ಜುನ್ ಖೂಬಾ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಈ ಸಲ ಅವರು ಎಷ್ಟು ಬಿಜೆಪಿ ಓಟ್ ಕೀಳುತ್ತಾರೆ ಎಂಬುದು ಕೂಡ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ. ಅಲ್ಲದೇ ಬಿಜೆಪಿ ವರಿಷ್ಠರಿಗೆ ಯಾರಿಗೂ ನಮ್ಮ ಮನೆಗೆ ಪ್ರವೇಶವಿಲ್ಲ ಎಂಬ ಬೋರ್ಡ್ ಹಾಕುವ ಮೂಲಕ ಅವರು ತಮ್ಮ ಕೋಪ ಪ್ರದರ್ಶಿಸಿದ್ದಾರೆ.

ಮರಾಠಿ ಭಾಷಿಕರ ವೋಟು

ಲಿಂಗಾಯತರ ವೋಟುಗಳ ಜೊತೆಗೆ ಮರಾಠಿ ಭಾಷಿಕರ ಓಟುಗಳನ್ನು ಬಿಜೆಪಿ ನೆಚ್ಚಿದೆ. ಇಲ್ಲಿ ಲಿಂಗಾಯತರ ಮತಗಳು ಸುಮಾರು 60 ಸಾವಿರದಷ್ಟಿದ್ದರೆ, ಮರಾಠಿ ಭಾಷಿಕರ ಮತಗಳ ಸಂಖ್ಯೆ 25-30 ಸಾವಿರ. ಮುಸ್ಲಿಮರ ಮತಗಳ ಸಂಖ್ಯೆ 35 ಸಾವಿರದಷ್ಟು ಇದೆ.
ಮರಾಠ ಮತಗಳ ಮೇಲೆ ಕಣ್ಣಿಟ್ಟು ಎನ್‌ಸಿಪಿಯಿಂದ ಎಂ.ಜಿ ಮೂಳೆ ಇಲ್ಲಿ ನಾಮಪತ್ರ ಹಾಕಿ ಕೊನೆ ಕ್ಷಣದಲ್ಲಿ ಬಿಜೆಪಿಗೆ ಬೆಂಬಲ ಘೋಷಿಸಿ ಕಣದಿಂದ ಹೊರ ನಡೆದಿದ್ದಾರೆ. ಇದೇನೂ ಚುನಾವಣೆಯ ಮೇಲೆ ಗಾಢ ಪರಿಣಾಮ ಬೀರದು ಎನ್ನಲಾಗುತ್ತಿದೆ.

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...