Homeಕರ್ನಾಟಕಬಸವಕಲ್ಯಾಣ: ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಪಡೆಯುವ ಮತಗಳ ಮೇಲೆ ಇತರರ ಗೆಲುವು ನಿರ್ಧಾರ!

ಬಸವಕಲ್ಯಾಣ: ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಪಡೆಯುವ ಮತಗಳ ಮೇಲೆ ಇತರರ ಗೆಲುವು ನಿರ್ಧಾರ!

- Advertisement -
- Advertisement -

ಮೂರು ಉಪಚುನಾವಣೆಗಳ ಪೈಕಿ ಮುಖ್ಯ ಮಾಧ್ಯಮ ವಾಹಿನಿಗಳು ಅಷ್ಟಾಗಿ ತಲೆ ಕೆಡಿಸಿಕೊಳ್ಳದ ಕ್ಷೇತ್ರ ಬಸವಕಲ್ಯಾಣ. ಇಲ್ಲಿ ಮೇಲುಸ್ಥರದಲ್ಲಿ ಜಿದ್ದಾಜಿದ್ದಿ ಜೋರಾಗಿಯೇ ಇದೆ. ಶಿರಾ ಮತ್ತು ಇತರ ಉಪ ಚುನಾವಣೆಗಳನ್ನು ‘ಗೆಲ್ಲಿಸಿಕೊಂಡು’ ಬಂದ ವಿಜಯೇಂದ್ರ ಇಲ್ಲಿ ಸಾಕಷ್ಟು ಬೆವರು ಹರಿಸುತ್ತಿದ್ದಾರೆ. ಎಸಿ ರೂಮುಗಳಲ್ಲೇ ಕುಳಿತು ಅವರು ಕೆಲವು ಸಮುದಾಯಗಳನ್ನು ಸೆಳೆಯುವ, ಎದುರಾಳಿ ಪಕ್ಷಗಳಿಂದಲೂ ಸಹಾಯ ಪಡೆಯುವ ಕೆಲಸವನ್ನು ಸಮರ್ಥವಾಗಿಯೇ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ.

ಅನುದಾನ, ಘೋಷಣೆ ವರ್ಸಸ್ ಸೊಷಿಯಲ್ ಇಂಜಿನಿಯರಿಂಗ್

ಇದನ್ನು ಅರಿಯುವ ಮೊದಲು ಇಲ್ಲಿನ ಈಗಿನ ಚುನಾವಣಾ ಪರಿಸ್ಥಿತಿಯ ಬಗ್ಗೆ ಇನ್ನೊಮ್ಮೆ ಅವಲೋಕಿಸೋಣ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಲಾ (ಮಲ್ಲಮ್ಮ) ನಾರಾಯಣರಾವ್ ಅವರು ದಿವಂಗತ ಶಾಸಕ ನಾರಾಯಣರಾವ್ ಪತ್ನಿ. ಬಿಜೆಪಿಯಿಂದ ಸ್ಪರ್ಧಿಸಿರುವ ಶರಣು ಸಲಗಾರ ಕಾಂಗ್ರೆಸ್‌ನಿಂದ ಬಂದಿರುವವರು ಮತ್ತು ಕಲಬುರಗಿ ಜಿಲ್ಲೆಯವರು (ಬಸವಕಲ್ಯಾಣ ಬೀದರ್ ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ). ಬಿಜೆಪಿ ಸರ್ಕಾರ ಇಲ್ಲಿ ಅನುದಾನದ ಹೊಳೆ ಹರಿಸುವ ಭರವಸೆ ನೀಡಿದೆ.

ಇಷ್ಟಕ್ಕೆ ಕತೆ ನಿಲ್ಲಲ್ಲ. ಇಲ್ಲಿ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಎಂಬ ಗಟ್ಟಿ ಕುಳ ಕಣದಲ್ಲಿದೆ. ಇವರು 2013ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆದ್ದು ಶಾಸಕ ಆಗಿದ್ದರು. ಆದರೆ ಈ ಸಿಟ್ಟಿಂಗ್ ಎಂಎಲ್‌ಎಗೆ 2018ರ ಅಸೆಂಬ್ಲಿ ಚುನಾವಣೆಯಲ್ಲಿ ಸೀಟು ನಿರಾಕರಿಸಿದ ಜೆಡಿಎಸ್, ‘ರಾಜ್ಯ ನಾಯಕ’ ಪಿಜಿಆರ್ ಸಿಂಧ್ಯಾರಿಗೆ ಟಿಕೇಟ್ ಕೊಟ್ಟಿತ್ತು. ಆಗ ಶಾಸಕನಾಗಿದ್ದ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿ ಎತ್ತಿಕೊಂಡು ಟಿಕೆಟ್ ಕೊಟ್ಟಿತ್ತು. ಈ ಎಲ್ಲ ರಾಜಕೀಯ ಅಂಧಾದುಂಧಿಯ ಮಧ್ಯೆ ಸಿದ್ದರಾಮಯ್ಯ ನಾರಾಯಣರಾವ್ ಅವರಿಗೆ ಟಿಕೆಟ್ ಕೊಟ್ಟರು. ಲಿಂಗಾಯತರು, ಮುಸ್ಲಿಮರು ಮತ್ತು ಮರಾಠಿಗರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕ್ಷೇತ್ರದಲ್ಲಿ ಒಂದು ಸಣ್ಣ ಸಮುದಾಯದ ವ್ಯಕ್ತಿಯೊಬ್ಬರಿಗೆ ಅವರು ಕಾಂಗ್ರೆಸ್ ಟಿಕೆಟ್ ಕೊಟ್ಟರು.

ಪುಟ್ಟ ಅಂಬಿಗ (ಕೋಲಿ ಅಥವಾ ಕಬ್ಬಿಗ) ಸಮುದಾಯಕ್ಕೆ ಸೇರಿದ ನಾರಾಯಣರಾವ್ ಗೆದ್ದಿದ್ದು ಅವರ ಹತ್ತಾರು ವರ್ಷಗಳ ಹೋರಾಟದಿಂದ. ಅವರು ತಮ್ಮ ಅಂಬಿಗ ಸಮುದಾಯದಂತೆ ಜನಸಂಖ್ಯೆಯಲ್ಲಿ ಕಡಿಮೆ ಇರುವ (ಕ್ಷೇತ್ರದಲ್ಲಿ 5-6 ಸಾವಿರ ಅಷ್ಟೇ) ಜನಸಮುದಾಯಗಳನ್ನು ಬೆಸಿದಿದ್ದರು. ಕ್ಷೇತ್ರದಲ್ಲಿ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿ ಇರುವ ಮುಸ್ಲಿಂ ಸಮುದಾಯದ ಒಲವು ಗಳಿಸಿದ್ದರು. ಸದಾ ಬಸವಣ್ಣನ ಆಶಯಗಳನ್ನು ಪ್ರತಿಪಾದಿಸುತ್ತಿದ್ದ ಅವರು, ಬಹುಪಾಲು ಲಿಂಗಾಯತರ ಒಲವನ್ನು ಗಳಿಸಿದ್ದರು. ಎಲ್ಲಕ್ಕೂ ಮುಖ್ಯವಾಗಿ ಅವರು ಸೀದಾಸಾದಾ ಆಗಿದ್ದರು. ಇದು ರಾಜಕಾರಣಿಗಳಲ್ಲಿ ಕಾಣುವ ಅಪರೂಪದ ಗುಣ. ಇಂಥದ್ದನ್ನು ಜನ ಸುಲಭಕ್ಕೆ ತಿರಸ್ಕರಿಸುವುದಿಲ್ಲ. ಹಾಗಾಗಿಯೇ ಅವರು ಗೆದ್ದಿದ್ದರು. ಈ ಸಲ ನಾರಾಯಣರಾವ್ ಪತ್ನಿ ಅವರಿಗೆ ಆ ಅನುಕಂಪದ ಅಲೆ ಮತಗಳಾಗಿ ಪರಿವರ್ತನೆ ಆಗುತ್ತದೆಯೆ? ಕಾದು ನೋಡಬೇಕಿದೆ.

ಬಿಜೆಪಿ ನೆರವಿಗೆ ಜೆಡಿಎಸ್?

‘ಸಂಪನ್ಮೂಲ’ದ ಕೊರತೆಯ ಕಾರಣಕ್ಕೆ ಇತರ ಉಪ ಚುನಾವಣೆಗಳಲ್ಲಿ ಕ್ಯಾಂಡಿಡೇಟ್ ಹಾಕುವುದಿಲ್ಲ ಎಂದಿದ್ದ ಜೆಡಿಎಸ್ ಇಲ್ಲಿ ಯಸ್ರಬ್ ಅಲಿ ಖಾದ್ರಿ ಎಂಬ ಕ್ಯಾಂಡಿಡೇಟನ್ನು ಹಾಕಿದೆ. ಮತದಾರರ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿರುವ ಮುಸ್ಲಿಂರ ಓಟು ಬಾಚಿ ಬಿಜೆಪಿಗೆ ನೆರವು ನೀಡುವ ಉದ್ದೇಶ ಇದರಿಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಯಸ್ರಬ್ ಅಲಿ ಮೂಲ ಕಾಂಗ್ರೆಸ್ ಪಕ್ಷವೇ ಎಂಬುದನ್ನು ಮರೆಯಬಾರದು.

ಖೂಬಾ ಕೊಡಲಿರುವ ಏಟು!

2013ರ ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆಲವು ಸಾಧಿಸಿದ್ದ, ಅದರ ಹಿಂದಿನ ಚುನಾವಣೆಯಲ್ಲೂ ಜೆಡಿಎಸ್‌ನಿಂದಲೇ ಗೆದ್ದಿದ್ದ ಮಲ್ಲಿಕಾರ್ಜುನ ಖೂಬಾ ಈಗ ಬಿಜೆಪಿ ಬಂಡಾಯ ಅಭ್ಯರ್ಥಿ. ಕಳೆದ ಸಲ 2018ರಲ್ಲಿ ಜೆಡಿಎಸ್ ಟಿಕೆಟ್ ಕೊಡದ ಪರಿಣಾಮ ಮಲ್ಲಿಕಾರ್ಜುನ್ ಖೂಬಾ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಈ ಸಲ ಅವರು ಎಷ್ಟು ಬಿಜೆಪಿ ಓಟ್ ಕೀಳುತ್ತಾರೆ ಎಂಬುದು ಕೂಡ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ. ಅಲ್ಲದೇ ಬಿಜೆಪಿ ವರಿಷ್ಠರಿಗೆ ಯಾರಿಗೂ ನಮ್ಮ ಮನೆಗೆ ಪ್ರವೇಶವಿಲ್ಲ ಎಂಬ ಬೋರ್ಡ್ ಹಾಕುವ ಮೂಲಕ ಅವರು ತಮ್ಮ ಕೋಪ ಪ್ರದರ್ಶಿಸಿದ್ದಾರೆ.

ಮರಾಠಿ ಭಾಷಿಕರ ವೋಟು

ಲಿಂಗಾಯತರ ವೋಟುಗಳ ಜೊತೆಗೆ ಮರಾಠಿ ಭಾಷಿಕರ ಓಟುಗಳನ್ನು ಬಿಜೆಪಿ ನೆಚ್ಚಿದೆ. ಇಲ್ಲಿ ಲಿಂಗಾಯತರ ಮತಗಳು ಸುಮಾರು 60 ಸಾವಿರದಷ್ಟಿದ್ದರೆ, ಮರಾಠಿ ಭಾಷಿಕರ ಮತಗಳ ಸಂಖ್ಯೆ 25-30 ಸಾವಿರ. ಮುಸ್ಲಿಮರ ಮತಗಳ ಸಂಖ್ಯೆ 35 ಸಾವಿರದಷ್ಟು ಇದೆ.
ಮರಾಠ ಮತಗಳ ಮೇಲೆ ಕಣ್ಣಿಟ್ಟು ಎನ್‌ಸಿಪಿಯಿಂದ ಎಂ.ಜಿ ಮೂಳೆ ಇಲ್ಲಿ ನಾಮಪತ್ರ ಹಾಕಿ ಕೊನೆ ಕ್ಷಣದಲ್ಲಿ ಬಿಜೆಪಿಗೆ ಬೆಂಬಲ ಘೋಷಿಸಿ ಕಣದಿಂದ ಹೊರ ನಡೆದಿದ್ದಾರೆ. ಇದೇನೂ ಚುನಾವಣೆಯ ಮೇಲೆ ಗಾಢ ಪರಿಣಾಮ ಬೀರದು ಎನ್ನಲಾಗುತ್ತಿದೆ.

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...