Homeಕರ್ನಾಟಕಬಸವಕಲ್ಯಾಣ: ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಪಡೆಯುವ ಮತಗಳ ಮೇಲೆ ಇತರರ ಗೆಲುವು ನಿರ್ಧಾರ!

ಬಸವಕಲ್ಯಾಣ: ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಪಡೆಯುವ ಮತಗಳ ಮೇಲೆ ಇತರರ ಗೆಲುವು ನಿರ್ಧಾರ!

- Advertisement -
- Advertisement -

ಮೂರು ಉಪಚುನಾವಣೆಗಳ ಪೈಕಿ ಮುಖ್ಯ ಮಾಧ್ಯಮ ವಾಹಿನಿಗಳು ಅಷ್ಟಾಗಿ ತಲೆ ಕೆಡಿಸಿಕೊಳ್ಳದ ಕ್ಷೇತ್ರ ಬಸವಕಲ್ಯಾಣ. ಇಲ್ಲಿ ಮೇಲುಸ್ಥರದಲ್ಲಿ ಜಿದ್ದಾಜಿದ್ದಿ ಜೋರಾಗಿಯೇ ಇದೆ. ಶಿರಾ ಮತ್ತು ಇತರ ಉಪ ಚುನಾವಣೆಗಳನ್ನು ‘ಗೆಲ್ಲಿಸಿಕೊಂಡು’ ಬಂದ ವಿಜಯೇಂದ್ರ ಇಲ್ಲಿ ಸಾಕಷ್ಟು ಬೆವರು ಹರಿಸುತ್ತಿದ್ದಾರೆ. ಎಸಿ ರೂಮುಗಳಲ್ಲೇ ಕುಳಿತು ಅವರು ಕೆಲವು ಸಮುದಾಯಗಳನ್ನು ಸೆಳೆಯುವ, ಎದುರಾಳಿ ಪಕ್ಷಗಳಿಂದಲೂ ಸಹಾಯ ಪಡೆಯುವ ಕೆಲಸವನ್ನು ಸಮರ್ಥವಾಗಿಯೇ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ.

ಅನುದಾನ, ಘೋಷಣೆ ವರ್ಸಸ್ ಸೊಷಿಯಲ್ ಇಂಜಿನಿಯರಿಂಗ್

ಇದನ್ನು ಅರಿಯುವ ಮೊದಲು ಇಲ್ಲಿನ ಈಗಿನ ಚುನಾವಣಾ ಪರಿಸ್ಥಿತಿಯ ಬಗ್ಗೆ ಇನ್ನೊಮ್ಮೆ ಅವಲೋಕಿಸೋಣ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಲಾ (ಮಲ್ಲಮ್ಮ) ನಾರಾಯಣರಾವ್ ಅವರು ದಿವಂಗತ ಶಾಸಕ ನಾರಾಯಣರಾವ್ ಪತ್ನಿ. ಬಿಜೆಪಿಯಿಂದ ಸ್ಪರ್ಧಿಸಿರುವ ಶರಣು ಸಲಗಾರ ಕಾಂಗ್ರೆಸ್‌ನಿಂದ ಬಂದಿರುವವರು ಮತ್ತು ಕಲಬುರಗಿ ಜಿಲ್ಲೆಯವರು (ಬಸವಕಲ್ಯಾಣ ಬೀದರ್ ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ). ಬಿಜೆಪಿ ಸರ್ಕಾರ ಇಲ್ಲಿ ಅನುದಾನದ ಹೊಳೆ ಹರಿಸುವ ಭರವಸೆ ನೀಡಿದೆ.

ಇಷ್ಟಕ್ಕೆ ಕತೆ ನಿಲ್ಲಲ್ಲ. ಇಲ್ಲಿ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಎಂಬ ಗಟ್ಟಿ ಕುಳ ಕಣದಲ್ಲಿದೆ. ಇವರು 2013ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆದ್ದು ಶಾಸಕ ಆಗಿದ್ದರು. ಆದರೆ ಈ ಸಿಟ್ಟಿಂಗ್ ಎಂಎಲ್‌ಎಗೆ 2018ರ ಅಸೆಂಬ್ಲಿ ಚುನಾವಣೆಯಲ್ಲಿ ಸೀಟು ನಿರಾಕರಿಸಿದ ಜೆಡಿಎಸ್, ‘ರಾಜ್ಯ ನಾಯಕ’ ಪಿಜಿಆರ್ ಸಿಂಧ್ಯಾರಿಗೆ ಟಿಕೇಟ್ ಕೊಟ್ಟಿತ್ತು. ಆಗ ಶಾಸಕನಾಗಿದ್ದ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿ ಎತ್ತಿಕೊಂಡು ಟಿಕೆಟ್ ಕೊಟ್ಟಿತ್ತು. ಈ ಎಲ್ಲ ರಾಜಕೀಯ ಅಂಧಾದುಂಧಿಯ ಮಧ್ಯೆ ಸಿದ್ದರಾಮಯ್ಯ ನಾರಾಯಣರಾವ್ ಅವರಿಗೆ ಟಿಕೆಟ್ ಕೊಟ್ಟರು. ಲಿಂಗಾಯತರು, ಮುಸ್ಲಿಮರು ಮತ್ತು ಮರಾಠಿಗರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕ್ಷೇತ್ರದಲ್ಲಿ ಒಂದು ಸಣ್ಣ ಸಮುದಾಯದ ವ್ಯಕ್ತಿಯೊಬ್ಬರಿಗೆ ಅವರು ಕಾಂಗ್ರೆಸ್ ಟಿಕೆಟ್ ಕೊಟ್ಟರು.

ಪುಟ್ಟ ಅಂಬಿಗ (ಕೋಲಿ ಅಥವಾ ಕಬ್ಬಿಗ) ಸಮುದಾಯಕ್ಕೆ ಸೇರಿದ ನಾರಾಯಣರಾವ್ ಗೆದ್ದಿದ್ದು ಅವರ ಹತ್ತಾರು ವರ್ಷಗಳ ಹೋರಾಟದಿಂದ. ಅವರು ತಮ್ಮ ಅಂಬಿಗ ಸಮುದಾಯದಂತೆ ಜನಸಂಖ್ಯೆಯಲ್ಲಿ ಕಡಿಮೆ ಇರುವ (ಕ್ಷೇತ್ರದಲ್ಲಿ 5-6 ಸಾವಿರ ಅಷ್ಟೇ) ಜನಸಮುದಾಯಗಳನ್ನು ಬೆಸಿದಿದ್ದರು. ಕ್ಷೇತ್ರದಲ್ಲಿ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿ ಇರುವ ಮುಸ್ಲಿಂ ಸಮುದಾಯದ ಒಲವು ಗಳಿಸಿದ್ದರು. ಸದಾ ಬಸವಣ್ಣನ ಆಶಯಗಳನ್ನು ಪ್ರತಿಪಾದಿಸುತ್ತಿದ್ದ ಅವರು, ಬಹುಪಾಲು ಲಿಂಗಾಯತರ ಒಲವನ್ನು ಗಳಿಸಿದ್ದರು. ಎಲ್ಲಕ್ಕೂ ಮುಖ್ಯವಾಗಿ ಅವರು ಸೀದಾಸಾದಾ ಆಗಿದ್ದರು. ಇದು ರಾಜಕಾರಣಿಗಳಲ್ಲಿ ಕಾಣುವ ಅಪರೂಪದ ಗುಣ. ಇಂಥದ್ದನ್ನು ಜನ ಸುಲಭಕ್ಕೆ ತಿರಸ್ಕರಿಸುವುದಿಲ್ಲ. ಹಾಗಾಗಿಯೇ ಅವರು ಗೆದ್ದಿದ್ದರು. ಈ ಸಲ ನಾರಾಯಣರಾವ್ ಪತ್ನಿ ಅವರಿಗೆ ಆ ಅನುಕಂಪದ ಅಲೆ ಮತಗಳಾಗಿ ಪರಿವರ್ತನೆ ಆಗುತ್ತದೆಯೆ? ಕಾದು ನೋಡಬೇಕಿದೆ.

ಬಿಜೆಪಿ ನೆರವಿಗೆ ಜೆಡಿಎಸ್?

‘ಸಂಪನ್ಮೂಲ’ದ ಕೊರತೆಯ ಕಾರಣಕ್ಕೆ ಇತರ ಉಪ ಚುನಾವಣೆಗಳಲ್ಲಿ ಕ್ಯಾಂಡಿಡೇಟ್ ಹಾಕುವುದಿಲ್ಲ ಎಂದಿದ್ದ ಜೆಡಿಎಸ್ ಇಲ್ಲಿ ಯಸ್ರಬ್ ಅಲಿ ಖಾದ್ರಿ ಎಂಬ ಕ್ಯಾಂಡಿಡೇಟನ್ನು ಹಾಕಿದೆ. ಮತದಾರರ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿರುವ ಮುಸ್ಲಿಂರ ಓಟು ಬಾಚಿ ಬಿಜೆಪಿಗೆ ನೆರವು ನೀಡುವ ಉದ್ದೇಶ ಇದರಿಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಯಸ್ರಬ್ ಅಲಿ ಮೂಲ ಕಾಂಗ್ರೆಸ್ ಪಕ್ಷವೇ ಎಂಬುದನ್ನು ಮರೆಯಬಾರದು.

ಖೂಬಾ ಕೊಡಲಿರುವ ಏಟು!

2013ರ ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆಲವು ಸಾಧಿಸಿದ್ದ, ಅದರ ಹಿಂದಿನ ಚುನಾವಣೆಯಲ್ಲೂ ಜೆಡಿಎಸ್‌ನಿಂದಲೇ ಗೆದ್ದಿದ್ದ ಮಲ್ಲಿಕಾರ್ಜುನ ಖೂಬಾ ಈಗ ಬಿಜೆಪಿ ಬಂಡಾಯ ಅಭ್ಯರ್ಥಿ. ಕಳೆದ ಸಲ 2018ರಲ್ಲಿ ಜೆಡಿಎಸ್ ಟಿಕೆಟ್ ಕೊಡದ ಪರಿಣಾಮ ಮಲ್ಲಿಕಾರ್ಜುನ್ ಖೂಬಾ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಈ ಸಲ ಅವರು ಎಷ್ಟು ಬಿಜೆಪಿ ಓಟ್ ಕೀಳುತ್ತಾರೆ ಎಂಬುದು ಕೂಡ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ. ಅಲ್ಲದೇ ಬಿಜೆಪಿ ವರಿಷ್ಠರಿಗೆ ಯಾರಿಗೂ ನಮ್ಮ ಮನೆಗೆ ಪ್ರವೇಶವಿಲ್ಲ ಎಂಬ ಬೋರ್ಡ್ ಹಾಕುವ ಮೂಲಕ ಅವರು ತಮ್ಮ ಕೋಪ ಪ್ರದರ್ಶಿಸಿದ್ದಾರೆ.

ಮರಾಠಿ ಭಾಷಿಕರ ವೋಟು

ಲಿಂಗಾಯತರ ವೋಟುಗಳ ಜೊತೆಗೆ ಮರಾಠಿ ಭಾಷಿಕರ ಓಟುಗಳನ್ನು ಬಿಜೆಪಿ ನೆಚ್ಚಿದೆ. ಇಲ್ಲಿ ಲಿಂಗಾಯತರ ಮತಗಳು ಸುಮಾರು 60 ಸಾವಿರದಷ್ಟಿದ್ದರೆ, ಮರಾಠಿ ಭಾಷಿಕರ ಮತಗಳ ಸಂಖ್ಯೆ 25-30 ಸಾವಿರ. ಮುಸ್ಲಿಮರ ಮತಗಳ ಸಂಖ್ಯೆ 35 ಸಾವಿರದಷ್ಟು ಇದೆ.
ಮರಾಠ ಮತಗಳ ಮೇಲೆ ಕಣ್ಣಿಟ್ಟು ಎನ್‌ಸಿಪಿಯಿಂದ ಎಂ.ಜಿ ಮೂಳೆ ಇಲ್ಲಿ ನಾಮಪತ್ರ ಹಾಕಿ ಕೊನೆ ಕ್ಷಣದಲ್ಲಿ ಬಿಜೆಪಿಗೆ ಬೆಂಬಲ ಘೋಷಿಸಿ ಕಣದಿಂದ ಹೊರ ನಡೆದಿದ್ದಾರೆ. ಇದೇನೂ ಚುನಾವಣೆಯ ಮೇಲೆ ಗಾಢ ಪರಿಣಾಮ ಬೀರದು ಎನ್ನಲಾಗುತ್ತಿದೆ.

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...