Homeಕರ್ನಾಟಕಬಸವ ಕಲ್ಯಾಣ ಉಪಚುನಾವಣೆ: ವಿಜಯೇಂದ್ರಗೆ ಟಿಕೆಟ್ ಇಲ್ಲ, ಈಗ್ಲೂ ‘ಹೊರಗಿನವರಿಗೇ’ ಟಿಕೆಟ್: ನಾರಾಯಣರಾವ್ ನೆನಪೇ ಕಾಂಗ್ರೆಸ್...

ಬಸವ ಕಲ್ಯಾಣ ಉಪಚುನಾವಣೆ: ವಿಜಯೇಂದ್ರಗೆ ಟಿಕೆಟ್ ಇಲ್ಲ, ಈಗ್ಲೂ ‘ಹೊರಗಿನವರಿಗೇ’ ಟಿಕೆಟ್: ನಾರಾಯಣರಾವ್ ನೆನಪೇ ಕಾಂಗ್ರೆಸ್ ಶಕ್ತಿ!

- Advertisement -
- Advertisement -

ಬೀದರಿನ ಬಸವ ಕಲ್ಯಾಣದಲ್ಲಿ ಈಗ ಉಪ ಚುನಾವಣೆ ನಡೆಯುತ್ತಿದೆ. ಯಡಿಯೂರಪ್ಪ ಅಧಿಕಾರಕ್ಕೆ ಬರುವ ಮೊದಲು ಸದನದಲ್ಲಿ ನಡೆದ ಚರ್ಚೆಯಲ್ಲಿ ತಮ್ಮ ಮುಗ್ಧತೆ ಮತ್ತು ಅದಕ್ಕೂ ಮುಖ್ಯವಾಗಿ ಪ್ರಾಮಾಣಿಕತೆಯ ಕಾರಣಕ್ಕೆ ತಮ್ಮ ಭಾಷಣದಿಂದ ರಾಜ್ಯದ ಗಮನ ಸೆಳೆದ ನಾರಾಯಣರಾವ್ ಎಂಬ ಹಿಂದುಳಿದ ವರ್ಗಕ್ಕೆ ಸೇರಿದ ನಾಯಕ ಕೊವಿಡ್ ಕಾರಣಕ್ಕೆ ಮೃತಪಟ್ಟರು. ಆ ಕಾರಣಕ್ಕೆ ಇಲ್ಲಿ ಉಪ ಚುನಾವಣೆ.

ಇರಲಿ, ಇಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅಭ್ಯರ್ಥಿ ಎಂಬ ಮಾತು ಮೊನ್ನೆವರೆಗೂ ಚಾಲ್ತಿಯಲ್ಲಿತ್ತು. ಹತ್-ಹನ್ನೆರಡು ಸಲ ವಿಜಯೇಂದ್ರ ಇಲ್ಲಿಗೆ ಬಂದು, ಲೋಕಲ್ ನಾಯಕರೊಂದಿಗೆ ಗುಪ್ತ ಮಾತುಕತೆ ನಡೆಸಿದ್ದರು. ಮೃತ ಶಾಸಕ ನಾರಾಯಣಸ್ವಾಮಿಯವರ ಬಯಕೆಯಾಗಿದ್ದ ಅನುಭವ ಮಂಟಪಕ್ಕೆ ಮುಖ್ಯಮಂತ್ರಿ ಚಾಲನೆ ನೀಡಿಬಿಟ್ಟರು. ಬೇರೆ-ಯಾವುದೇ ನಿರ್ದಿಷ್ಠ ಬಜೆಟ್ ಅನುದಾನವೂ ಇಲ್ಲದೇ! ಈ ‘ಪ್ರಗತಿಪರ ಸಂಪ್ರದಾಯ’ ಎಂಬ ವಿಲಕ್ಷಣ ಹೆಸರಿನ ಕಾರ್ಯಕ್ರಮದಲ್ಲಿ ವಿಜಯೇಂದ್ರ ಕೂಡ ಇದ್ದರು.

ಇದನ್ನೂ ಓದಿ: ಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

ಆ ನಂತರವೂ, ಮೊನ್ನೆ ಮಠಗಳಿಗೆ ಬೇಕಾಬಿಟ್ಟಿ 800 ಕೋಟಿ ರೂ ಹಂಚಿದರಲ್ಲ ಸಿಎಂ ಸಾಹೇಬರು… ಅದರಲ್ಲಿ ಬೀದರ್ ಜಿಲ್ಲೆ ಮತ್ತು ಬಸವ ಕಲ್ಯಾಣ ತಾಲೂಕಿನ ಮಠಗಳಿಗೆ ಪ್ರಾಶಸ್ತ್ಯ ನೀಡಲಾಗಿತ್ತು.
ಈ ನಡುವೆ ಹತ್ತಾರು ಸಲ ಬಸವಕಲ್ಯಾಣಕ್ಕೆ ಬಂದ ವಿಜಯೇಂದ್ರ ತಾನೇ ಅಭ್ಯರ್ಥಿ ಎಂಬುದನ್ನು ಪಕ್ಷದ ಲೋಕಲ್ ನಾಯಕರಿಗೆ ಹೇಳಿ ಹೋದರು.

ಅದೇನು ಎಡವಟ್ಟಾಯಿತೊ ಎನೊ. ಈಗ ಇಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸದಗಲ. ಇವರು ಕೂಡ ಬೀದರ್‌ನವರು ಅಲ್ಲವೇ ಅಲ್ಲ. ಕಲಬುರ್ಗಿ ಜಿಲ್ಲೆಯ ಅಸಾಮಿ. ಇವರ ಪತ್ನಿ ಇಲ್ಲಿ ತಹಶೀಲ್ದಾರ್ ಆಗಿ ಕೆಲಸ ಮಾಡಿದ್ದರು ಅಷ್ಟೇ.

ನಾರಾಯಣರಾವ್ ಪ್ರಾಮಾಣಿಕತೆಯೇ ಕಾಂಗ್ರೆಸ್ ಶಕ್ತಿ

ಕಾಂಗ್ರೆಸ್ ಇಲ್ಲಿ ಮೃತ ಶಾಸಕ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರನ್ನು ಕಣಕ್ಕೆ ಇಳಿಸಿದೆ. ಇಲ್ಲಿ ಕಾಂಗ್ರೆಸ್ ವರ್ಚಸ್ಸಿಗಿಂತ ನಾರಾಯಣರಾವ್ ಅವರ ಪ್ರಾಮಾಣಿಕತೆ, ಸರಳತೆ ಮತ್ತು ಅಂತಿಮದಲ್ಲಿ ಅವರು ಸದನದಲ್ಲಿ ಮಾಡಿದ ‘ಜನಸಾಮಾನ್ಯನ ಭಾಷಣ’ವೇ ಸ್ಪರ್ಧೆಗೆ ನಿಂತ ಹಾಗೆ ಕಾಣುತ್ತಿದೆ.

ಇದನ್ನೂ ಓದಿ: ಸದನದಲ್ಲಿ ಮಿಂಚಿದ ಬಸವ ಪ್ರಣೀತ ಶಾಸಕ ನಾರಾಯಣರಾವ್

ಇನ್ನೊಂದು ಕಡೆ ಮಸ್ಕಿ ಮತ್ತು ಬೆಳಗಾವಿಯಲ್ಲಿ ಕ್ಯಾಂಡಿಡೇಟ್ ಹಾಕದ ಜೆಡಿಎಸ್ ಇಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ! ಇಲ್ಲಿ ಸುಮಾರು 40,000 ದಷ್ಟು ಮುಸ್ಲಿಂ ಮತಗಳಿರುವುದೇ ಅದಕ್ಕೆ ಕಾರಣ..

ಈ ಕುರಿತು ಸಿದ್ದರಾಮಯ್ಯ “ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 40,000 ಅಲ್ಪಸಂಖ್ಯಾತ ಮತಗಳಿವೆ. ಜೆಡಿಎಸ್ ನವರು ಬಿಜೆಪಿ ಜೊತೆ ಒಳ‌ಒಪ್ಪಂದ ಮಾಡಿಕೊಂಡು ಮುಸ್ಲಿಂ‌ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ನಮ್ಮ ಮತಗಳನ್ನು ವಿಭಜಿಸುವ ಹುನ್ನಾರ ಮಾಡುತ್ತಿದ್ದಾರೆ. ಇದನ್ನು ಕ್ಷೇತ್ರದ ಜನ ಅರ್ಥಮಾಡಿಕೊಳ್ಳಬೇಕು” ಎಂದು ಪ್ರೆಸ್ ಮೀಟ್ ನಲ್ಲಿ ತಿಳಿಸಿದ್ದಾರೆ…

ಒಟ್ಟಿನಲ್ಲಿ ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.. ನಾರಾಯಣ್ ರಾವ್ ನೆನಪಿನಲ್ಲಿ ಅವರ ಪತ್ನಿಯನ್ನು ಕ್ಷೇತ್ರದ ಜನತೆ ಮತ್ತೆ ವಿಧಾನಸೌಧಕ್ಕೆ ಕಳಿಸುತ್ತಾರಾ? ಕಾದು ನೋಡಬೇಕಿದೆ.

ಇದನ್ನೂ ಓದಿ: ಅರಸು ಯುಗದ ಆದರ್ಶದ ಕೊಂಡಿ ಬಿ ನಾರಾಯಣರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....