Homeಕರ್ನಾಟಕಬಸವ ಕಲ್ಯಾಣ ಉಪಚುನಾವಣೆ: ವಿಜಯೇಂದ್ರಗೆ ಟಿಕೆಟ್ ಇಲ್ಲ, ಈಗ್ಲೂ ‘ಹೊರಗಿನವರಿಗೇ’ ಟಿಕೆಟ್: ನಾರಾಯಣರಾವ್ ನೆನಪೇ ಕಾಂಗ್ರೆಸ್...

ಬಸವ ಕಲ್ಯಾಣ ಉಪಚುನಾವಣೆ: ವಿಜಯೇಂದ್ರಗೆ ಟಿಕೆಟ್ ಇಲ್ಲ, ಈಗ್ಲೂ ‘ಹೊರಗಿನವರಿಗೇ’ ಟಿಕೆಟ್: ನಾರಾಯಣರಾವ್ ನೆನಪೇ ಕಾಂಗ್ರೆಸ್ ಶಕ್ತಿ!

- Advertisement -
- Advertisement -

ಬೀದರಿನ ಬಸವ ಕಲ್ಯಾಣದಲ್ಲಿ ಈಗ ಉಪ ಚುನಾವಣೆ ನಡೆಯುತ್ತಿದೆ. ಯಡಿಯೂರಪ್ಪ ಅಧಿಕಾರಕ್ಕೆ ಬರುವ ಮೊದಲು ಸದನದಲ್ಲಿ ನಡೆದ ಚರ್ಚೆಯಲ್ಲಿ ತಮ್ಮ ಮುಗ್ಧತೆ ಮತ್ತು ಅದಕ್ಕೂ ಮುಖ್ಯವಾಗಿ ಪ್ರಾಮಾಣಿಕತೆಯ ಕಾರಣಕ್ಕೆ ತಮ್ಮ ಭಾಷಣದಿಂದ ರಾಜ್ಯದ ಗಮನ ಸೆಳೆದ ನಾರಾಯಣರಾವ್ ಎಂಬ ಹಿಂದುಳಿದ ವರ್ಗಕ್ಕೆ ಸೇರಿದ ನಾಯಕ ಕೊವಿಡ್ ಕಾರಣಕ್ಕೆ ಮೃತಪಟ್ಟರು. ಆ ಕಾರಣಕ್ಕೆ ಇಲ್ಲಿ ಉಪ ಚುನಾವಣೆ.

ಇರಲಿ, ಇಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅಭ್ಯರ್ಥಿ ಎಂಬ ಮಾತು ಮೊನ್ನೆವರೆಗೂ ಚಾಲ್ತಿಯಲ್ಲಿತ್ತು. ಹತ್-ಹನ್ನೆರಡು ಸಲ ವಿಜಯೇಂದ್ರ ಇಲ್ಲಿಗೆ ಬಂದು, ಲೋಕಲ್ ನಾಯಕರೊಂದಿಗೆ ಗುಪ್ತ ಮಾತುಕತೆ ನಡೆಸಿದ್ದರು. ಮೃತ ಶಾಸಕ ನಾರಾಯಣಸ್ವಾಮಿಯವರ ಬಯಕೆಯಾಗಿದ್ದ ಅನುಭವ ಮಂಟಪಕ್ಕೆ ಮುಖ್ಯಮಂತ್ರಿ ಚಾಲನೆ ನೀಡಿಬಿಟ್ಟರು. ಬೇರೆ-ಯಾವುದೇ ನಿರ್ದಿಷ್ಠ ಬಜೆಟ್ ಅನುದಾನವೂ ಇಲ್ಲದೇ! ಈ ‘ಪ್ರಗತಿಪರ ಸಂಪ್ರದಾಯ’ ಎಂಬ ವಿಲಕ್ಷಣ ಹೆಸರಿನ ಕಾರ್ಯಕ್ರಮದಲ್ಲಿ ವಿಜಯೇಂದ್ರ ಕೂಡ ಇದ್ದರು.

ಇದನ್ನೂ ಓದಿ: ಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

ಆ ನಂತರವೂ, ಮೊನ್ನೆ ಮಠಗಳಿಗೆ ಬೇಕಾಬಿಟ್ಟಿ 800 ಕೋಟಿ ರೂ ಹಂಚಿದರಲ್ಲ ಸಿಎಂ ಸಾಹೇಬರು… ಅದರಲ್ಲಿ ಬೀದರ್ ಜಿಲ್ಲೆ ಮತ್ತು ಬಸವ ಕಲ್ಯಾಣ ತಾಲೂಕಿನ ಮಠಗಳಿಗೆ ಪ್ರಾಶಸ್ತ್ಯ ನೀಡಲಾಗಿತ್ತು.
ಈ ನಡುವೆ ಹತ್ತಾರು ಸಲ ಬಸವಕಲ್ಯಾಣಕ್ಕೆ ಬಂದ ವಿಜಯೇಂದ್ರ ತಾನೇ ಅಭ್ಯರ್ಥಿ ಎಂಬುದನ್ನು ಪಕ್ಷದ ಲೋಕಲ್ ನಾಯಕರಿಗೆ ಹೇಳಿ ಹೋದರು.

ಅದೇನು ಎಡವಟ್ಟಾಯಿತೊ ಎನೊ. ಈಗ ಇಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸದಗಲ. ಇವರು ಕೂಡ ಬೀದರ್‌ನವರು ಅಲ್ಲವೇ ಅಲ್ಲ. ಕಲಬುರ್ಗಿ ಜಿಲ್ಲೆಯ ಅಸಾಮಿ. ಇವರ ಪತ್ನಿ ಇಲ್ಲಿ ತಹಶೀಲ್ದಾರ್ ಆಗಿ ಕೆಲಸ ಮಾಡಿದ್ದರು ಅಷ್ಟೇ.

ನಾರಾಯಣರಾವ್ ಪ್ರಾಮಾಣಿಕತೆಯೇ ಕಾಂಗ್ರೆಸ್ ಶಕ್ತಿ

ಕಾಂಗ್ರೆಸ್ ಇಲ್ಲಿ ಮೃತ ಶಾಸಕ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರನ್ನು ಕಣಕ್ಕೆ ಇಳಿಸಿದೆ. ಇಲ್ಲಿ ಕಾಂಗ್ರೆಸ್ ವರ್ಚಸ್ಸಿಗಿಂತ ನಾರಾಯಣರಾವ್ ಅವರ ಪ್ರಾಮಾಣಿಕತೆ, ಸರಳತೆ ಮತ್ತು ಅಂತಿಮದಲ್ಲಿ ಅವರು ಸದನದಲ್ಲಿ ಮಾಡಿದ ‘ಜನಸಾಮಾನ್ಯನ ಭಾಷಣ’ವೇ ಸ್ಪರ್ಧೆಗೆ ನಿಂತ ಹಾಗೆ ಕಾಣುತ್ತಿದೆ.

ಇದನ್ನೂ ಓದಿ: ಸದನದಲ್ಲಿ ಮಿಂಚಿದ ಬಸವ ಪ್ರಣೀತ ಶಾಸಕ ನಾರಾಯಣರಾವ್

ಇನ್ನೊಂದು ಕಡೆ ಮಸ್ಕಿ ಮತ್ತು ಬೆಳಗಾವಿಯಲ್ಲಿ ಕ್ಯಾಂಡಿಡೇಟ್ ಹಾಕದ ಜೆಡಿಎಸ್ ಇಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ! ಇಲ್ಲಿ ಸುಮಾರು 40,000 ದಷ್ಟು ಮುಸ್ಲಿಂ ಮತಗಳಿರುವುದೇ ಅದಕ್ಕೆ ಕಾರಣ..

ಈ ಕುರಿತು ಸಿದ್ದರಾಮಯ್ಯ “ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 40,000 ಅಲ್ಪಸಂಖ್ಯಾತ ಮತಗಳಿವೆ. ಜೆಡಿಎಸ್ ನವರು ಬಿಜೆಪಿ ಜೊತೆ ಒಳ‌ಒಪ್ಪಂದ ಮಾಡಿಕೊಂಡು ಮುಸ್ಲಿಂ‌ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ನಮ್ಮ ಮತಗಳನ್ನು ವಿಭಜಿಸುವ ಹುನ್ನಾರ ಮಾಡುತ್ತಿದ್ದಾರೆ. ಇದನ್ನು ಕ್ಷೇತ್ರದ ಜನ ಅರ್ಥಮಾಡಿಕೊಳ್ಳಬೇಕು” ಎಂದು ಪ್ರೆಸ್ ಮೀಟ್ ನಲ್ಲಿ ತಿಳಿಸಿದ್ದಾರೆ…

ಒಟ್ಟಿನಲ್ಲಿ ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.. ನಾರಾಯಣ್ ರಾವ್ ನೆನಪಿನಲ್ಲಿ ಅವರ ಪತ್ನಿಯನ್ನು ಕ್ಷೇತ್ರದ ಜನತೆ ಮತ್ತೆ ವಿಧಾನಸೌಧಕ್ಕೆ ಕಳಿಸುತ್ತಾರಾ? ಕಾದು ನೋಡಬೇಕಿದೆ.

ಇದನ್ನೂ ಓದಿ: ಅರಸು ಯುಗದ ಆದರ್ಶದ ಕೊಂಡಿ ಬಿ ನಾರಾಯಣರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...