Homeಕರ್ನಾಟಕಬಸವ ಕಲ್ಯಾಣ ಉಪಚುನಾವಣೆ: ವಿಜಯೇಂದ್ರಗೆ ಟಿಕೆಟ್ ಇಲ್ಲ, ಈಗ್ಲೂ ‘ಹೊರಗಿನವರಿಗೇ’ ಟಿಕೆಟ್: ನಾರಾಯಣರಾವ್ ನೆನಪೇ ಕಾಂಗ್ರೆಸ್...

ಬಸವ ಕಲ್ಯಾಣ ಉಪಚುನಾವಣೆ: ವಿಜಯೇಂದ್ರಗೆ ಟಿಕೆಟ್ ಇಲ್ಲ, ಈಗ್ಲೂ ‘ಹೊರಗಿನವರಿಗೇ’ ಟಿಕೆಟ್: ನಾರಾಯಣರಾವ್ ನೆನಪೇ ಕಾಂಗ್ರೆಸ್ ಶಕ್ತಿ!

- Advertisement -
- Advertisement -

ಬೀದರಿನ ಬಸವ ಕಲ್ಯಾಣದಲ್ಲಿ ಈಗ ಉಪ ಚುನಾವಣೆ ನಡೆಯುತ್ತಿದೆ. ಯಡಿಯೂರಪ್ಪ ಅಧಿಕಾರಕ್ಕೆ ಬರುವ ಮೊದಲು ಸದನದಲ್ಲಿ ನಡೆದ ಚರ್ಚೆಯಲ್ಲಿ ತಮ್ಮ ಮುಗ್ಧತೆ ಮತ್ತು ಅದಕ್ಕೂ ಮುಖ್ಯವಾಗಿ ಪ್ರಾಮಾಣಿಕತೆಯ ಕಾರಣಕ್ಕೆ ತಮ್ಮ ಭಾಷಣದಿಂದ ರಾಜ್ಯದ ಗಮನ ಸೆಳೆದ ನಾರಾಯಣರಾವ್ ಎಂಬ ಹಿಂದುಳಿದ ವರ್ಗಕ್ಕೆ ಸೇರಿದ ನಾಯಕ ಕೊವಿಡ್ ಕಾರಣಕ್ಕೆ ಮೃತಪಟ್ಟರು. ಆ ಕಾರಣಕ್ಕೆ ಇಲ್ಲಿ ಉಪ ಚುನಾವಣೆ.

ಇರಲಿ, ಇಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅಭ್ಯರ್ಥಿ ಎಂಬ ಮಾತು ಮೊನ್ನೆವರೆಗೂ ಚಾಲ್ತಿಯಲ್ಲಿತ್ತು. ಹತ್-ಹನ್ನೆರಡು ಸಲ ವಿಜಯೇಂದ್ರ ಇಲ್ಲಿಗೆ ಬಂದು, ಲೋಕಲ್ ನಾಯಕರೊಂದಿಗೆ ಗುಪ್ತ ಮಾತುಕತೆ ನಡೆಸಿದ್ದರು. ಮೃತ ಶಾಸಕ ನಾರಾಯಣಸ್ವಾಮಿಯವರ ಬಯಕೆಯಾಗಿದ್ದ ಅನುಭವ ಮಂಟಪಕ್ಕೆ ಮುಖ್ಯಮಂತ್ರಿ ಚಾಲನೆ ನೀಡಿಬಿಟ್ಟರು. ಬೇರೆ-ಯಾವುದೇ ನಿರ್ದಿಷ್ಠ ಬಜೆಟ್ ಅನುದಾನವೂ ಇಲ್ಲದೇ! ಈ ‘ಪ್ರಗತಿಪರ ಸಂಪ್ರದಾಯ’ ಎಂಬ ವಿಲಕ್ಷಣ ಹೆಸರಿನ ಕಾರ್ಯಕ್ರಮದಲ್ಲಿ ವಿಜಯೇಂದ್ರ ಕೂಡ ಇದ್ದರು.

ಇದನ್ನೂ ಓದಿ: ಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

ಆ ನಂತರವೂ, ಮೊನ್ನೆ ಮಠಗಳಿಗೆ ಬೇಕಾಬಿಟ್ಟಿ 800 ಕೋಟಿ ರೂ ಹಂಚಿದರಲ್ಲ ಸಿಎಂ ಸಾಹೇಬರು… ಅದರಲ್ಲಿ ಬೀದರ್ ಜಿಲ್ಲೆ ಮತ್ತು ಬಸವ ಕಲ್ಯಾಣ ತಾಲೂಕಿನ ಮಠಗಳಿಗೆ ಪ್ರಾಶಸ್ತ್ಯ ನೀಡಲಾಗಿತ್ತು.
ಈ ನಡುವೆ ಹತ್ತಾರು ಸಲ ಬಸವಕಲ್ಯಾಣಕ್ಕೆ ಬಂದ ವಿಜಯೇಂದ್ರ ತಾನೇ ಅಭ್ಯರ್ಥಿ ಎಂಬುದನ್ನು ಪಕ್ಷದ ಲೋಕಲ್ ನಾಯಕರಿಗೆ ಹೇಳಿ ಹೋದರು.

ಅದೇನು ಎಡವಟ್ಟಾಯಿತೊ ಎನೊ. ಈಗ ಇಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸದಗಲ. ಇವರು ಕೂಡ ಬೀದರ್‌ನವರು ಅಲ್ಲವೇ ಅಲ್ಲ. ಕಲಬುರ್ಗಿ ಜಿಲ್ಲೆಯ ಅಸಾಮಿ. ಇವರ ಪತ್ನಿ ಇಲ್ಲಿ ತಹಶೀಲ್ದಾರ್ ಆಗಿ ಕೆಲಸ ಮಾಡಿದ್ದರು ಅಷ್ಟೇ.

ನಾರಾಯಣರಾವ್ ಪ್ರಾಮಾಣಿಕತೆಯೇ ಕಾಂಗ್ರೆಸ್ ಶಕ್ತಿ

ಕಾಂಗ್ರೆಸ್ ಇಲ್ಲಿ ಮೃತ ಶಾಸಕ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರನ್ನು ಕಣಕ್ಕೆ ಇಳಿಸಿದೆ. ಇಲ್ಲಿ ಕಾಂಗ್ರೆಸ್ ವರ್ಚಸ್ಸಿಗಿಂತ ನಾರಾಯಣರಾವ್ ಅವರ ಪ್ರಾಮಾಣಿಕತೆ, ಸರಳತೆ ಮತ್ತು ಅಂತಿಮದಲ್ಲಿ ಅವರು ಸದನದಲ್ಲಿ ಮಾಡಿದ ‘ಜನಸಾಮಾನ್ಯನ ಭಾಷಣ’ವೇ ಸ್ಪರ್ಧೆಗೆ ನಿಂತ ಹಾಗೆ ಕಾಣುತ್ತಿದೆ.

ಇದನ್ನೂ ಓದಿ: ಸದನದಲ್ಲಿ ಮಿಂಚಿದ ಬಸವ ಪ್ರಣೀತ ಶಾಸಕ ನಾರಾಯಣರಾವ್

ಇನ್ನೊಂದು ಕಡೆ ಮಸ್ಕಿ ಮತ್ತು ಬೆಳಗಾವಿಯಲ್ಲಿ ಕ್ಯಾಂಡಿಡೇಟ್ ಹಾಕದ ಜೆಡಿಎಸ್ ಇಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ! ಇಲ್ಲಿ ಸುಮಾರು 40,000 ದಷ್ಟು ಮುಸ್ಲಿಂ ಮತಗಳಿರುವುದೇ ಅದಕ್ಕೆ ಕಾರಣ..

ಈ ಕುರಿತು ಸಿದ್ದರಾಮಯ್ಯ “ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 40,000 ಅಲ್ಪಸಂಖ್ಯಾತ ಮತಗಳಿವೆ. ಜೆಡಿಎಸ್ ನವರು ಬಿಜೆಪಿ ಜೊತೆ ಒಳ‌ಒಪ್ಪಂದ ಮಾಡಿಕೊಂಡು ಮುಸ್ಲಿಂ‌ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ನಮ್ಮ ಮತಗಳನ್ನು ವಿಭಜಿಸುವ ಹುನ್ನಾರ ಮಾಡುತ್ತಿದ್ದಾರೆ. ಇದನ್ನು ಕ್ಷೇತ್ರದ ಜನ ಅರ್ಥಮಾಡಿಕೊಳ್ಳಬೇಕು” ಎಂದು ಪ್ರೆಸ್ ಮೀಟ್ ನಲ್ಲಿ ತಿಳಿಸಿದ್ದಾರೆ…

ಒಟ್ಟಿನಲ್ಲಿ ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.. ನಾರಾಯಣ್ ರಾವ್ ನೆನಪಿನಲ್ಲಿ ಅವರ ಪತ್ನಿಯನ್ನು ಕ್ಷೇತ್ರದ ಜನತೆ ಮತ್ತೆ ವಿಧಾನಸೌಧಕ್ಕೆ ಕಳಿಸುತ್ತಾರಾ? ಕಾದು ನೋಡಬೇಕಿದೆ.

ಇದನ್ನೂ ಓದಿ: ಅರಸು ಯುಗದ ಆದರ್ಶದ ಕೊಂಡಿ ಬಿ ನಾರಾಯಣರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...