Homeಕರ್ನಾಟಕಲಿಂಗಾಯಿತರು ನನಗೆ ಮತ ಕೊಡದಿದ್ದರೂ ಪರವಾಗಿಲ್ಲ, ಬಸವ ತತ್ವದ ಮೇಲೆ ನಡೆದರೆ ಸಾಕು: ಶಾಸಕ ಬಿ.ನಾರಾಯಣರಾವ್...

ಲಿಂಗಾಯಿತರು ನನಗೆ ಮತ ಕೊಡದಿದ್ದರೂ ಪರವಾಗಿಲ್ಲ, ಬಸವ ತತ್ವದ ಮೇಲೆ ನಡೆದರೆ ಸಾಕು: ಶಾಸಕ ಬಿ.ನಾರಾಯಣರಾವ್ ಸಂದರ್ಶನ

- Advertisement -
- Advertisement -

‘ಇಷ್ಟು ಕೋಟಿ ರೊಕ್ಕ ಕೊಟ್ಟರ ಅದನ್ನ ಎಲ್ಲಿಡೋದು ಅಂತ ನಮಗ ಗೊತ್ತಾಗವಲ್ದು ರೀ’ ಎಂದು ವಿಧಾನಸಭೆಯಲ್ಲಿ ಬಿ.ನಾರಾಯಣರಾವ್ ಅವರು ಮಾತನಾಡಿದಾಗ ಕರ್ನಾಟಕದ ಮತದಾರ ಬಂಧುಗಳಿಗೆ ಅದನ್ನು ಹೇಗೆ ಸ್ವೀಕರಿಸಬೇಕು ಎಂದು ಗೊತ್ತಾಗಲಿಲ್ಲ. ಮಾತಾಡುತ್ತಿದ್ದ ವ್ಯಕ್ತಿ ಪ್ರಾಮಾಣಿಕವಾಗಿದ್ದಂತೆ ಎಲ್ಲರಿಗೂ ಅನ್ನಿಸುತ್ತಿತ್ತಾದರೂ, ಇಂದಿನ ರಾಜಕಾರಣದಲ್ಲಿ ಇಂತಹ ಒಬ್ಬ ಶಾಸಕ ಇರಲು ಸಾಧ್ಯವೇ ಎಂಬ ಗುಮಾನಿಯೂ ಇತ್ತು. ನಾರಾಯಣರಾವ್‍ರನ್ನು ಬಲ್ಲವರಿಗೆ ಅಂತಹ ಅನುಮಾನವೇನೂ ಇಲ್ಲ. ‘80ರ ದಶಕದಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸ್ಥಾಪನೆಯಾಗಬೇಕೆಂದು ಒತ್ತಾಯಿಸಿ ಬೀದರ್‌ನಿಂದ ಬೆಂಗಳೂರಿನವರೆಗೆ ಸೈಕಲ್ ಜಾಥಾ ಮಾಡಿದ ಉತ್ಸಾಹಿ ಅವರು. ಬಸವಕಲ್ಯಾಣದ ಹಿಂದುಳಿದ ಜಾತಿಯ ಅವರು ನಿರಂತರವಾಗಿ ರಾಜಕಾರಣದಲ್ಲಿದ್ದರೂ ಅಧಿಕಾರದ ಹತ್ತಿರಕ್ಕೆ ಎಂದೂ ಬಂದಿರಲಿಲ್ಲ. ಆ ನಂತರ ದೇವೇಗೌಡರೊಮ್ಮೆ ತಮ್ಮ ಪಕ್ಷದಿಂದ ‘89ರಲ್ಲಿ ಎಂಎಲ್‍ಎ ಟಿಕೆಟ್ ಕೊಟ್ಟಿದ್ದರಾದರೂ ಯಶಸ್ವಿಯಾಗಲಿಲ್ಲ. 2013ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋತು, 2018ರಲ್ಲಿ ಗೆದ್ದರು. ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದ ಅತಿಥಿಗೃಹದಲ್ಲಿ ಪತ್ರಿಕೆಯ ತಂಡಕ್ಕೆ ನಾರಾಯಣರಾವ್ ಮಾತಿಗೆ ಸಿಕ್ಕರು.

ಚಿತ್ರಕೃಪೆ: ಯೋಯೋ ಟಿವಿ

ಪತ್ರಿಕೆ: ವಿಧಾನಸಭೆಯಲ್ಲಿ ನೀವು ಮಾತಾಡಿದ್ದನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು. ನಿಮ್ಮಂತಹ ವ್ಯಕ್ತಿಗಳು ರಾಜಕಾರಣ ಮಾಡುವ ಪರಿಸ್ಥಿತಿ ಇದೆಯೇ? ನೀವು ಬಯಸುವಂತಹ ಬದಲಾವಣೆ ರಾಜಕಾರಣದಲ್ಲಿ ಸಾಧ್ಯವೇ?

ಬಿ.ನಾರಾಯಣರಾವ್: ಯಾರು ಬದಲಾವಣೆ ಆಗುತ್ತಾರೋ ಬಿಡುತ್ತಾರೋ ಅದು ನಮಗೆ ಸಂಬಂಧಿಸಿಲ್ಲ. ನಾವು, ನಮ್ಮಂತಹ ನಿಷ್ಠಾವಂತರು ಪ್ರಾಮಾಣಿಕರು, ಜನಪರ ಕಾಳಜಿಯಿಟ್ಟು ಹೋರಾಟ ಮಾಡಿದಂತವರು ಬದಲಾಗಬಾರದು.

ಯಾರು ಏನ್ ಮಾಡ್ತರೋ ಬಿಡ್ತಾರೋ ಗೊತ್ತಿಲ್ಲ. ಈ ದೇಶದಲ್ಲಿ ಮಹಾತ್ಮಗಾಂಧಿ ಎಲ್ಲರಿಗಿಂತ ಭಿನ್ನವಾದ ನಾಯಕತ್ವ ಕೊಟ್ಟರು. ಹಾಗಾಗಿ ನಮ್ಮಂತವರು ಅಲ್ಲೊಬ್ಬರು ಇಲ್ಲೊಬ್ಬರು ಉಳಿದುಕೊಂಡಿದ್ದೇವೆ. ಇದು ಬದಲಾವಣೆ ಆಗುವುದಿಲ್ಲ ಅಂತ ನಾವು ಕೆಟ್ಟವರ ಜೊತೆ ಹೋಗೋಕ್ಕಾಗಲ್ಲ.

ಪತ್ರಿಕೆ: ಅನರ್ಹ ಶಾಸಕರು – ಮಾರಿಕೊಂಡು ಹೋದವರನ್ನು ನಿಮ್ಮ ಪಕ್ಷದವರು, ನೀವು ಬೈದಿರಿ. ಆದರೆ ಅಂತಹವರಿಗೆ ಟಿಕೆಟ್ ಕೊಟ್ಟಿದ್ದೇ ನಿಮ್ಮ ಪಕ್ಷವಲ್ಲವೇ?

ವಿಧಾನಸಭೆಯಲ್ಲೇ ನಾನು ಸಿದ್ದರಾಮಯ್ಯ, ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಮೂರು ಜನರಿಗೆ ಸೇರಿಸಿ ಹೇಳಿದ್ದೀನಿ. ಚುನಾವಣೆಗೆ ಕೇವಲ ಹದಿನೈದು ದಿನ ಇದ್ದಾಗ, ಹಣವಂತರು, ಸಾರಾಯಿ ಮಾರುವವರು, ರಿಯಲ್ ಎಸ್ಟೇಟ್‍ನವರು ಕಪ್ಪು ಹಣ ಉಳ್ಳವರಿಗೆ ಟಿಕೆಟ್ ಕೊಟ್ಟಿದ್ದೇ ಈ ಅನಾಹುತಕ್ಕೆ ನಿಜವಾದ ಕಾರಣ.

ಬೇವಿನ ಬೀಜವ ಬಿತ್ತಿ, ಬೆಲ್ಲದ ಕಟ್ಟೆಯನು ಕಟ್ಟಿ,
ಸವಿಜೇನು ಹಾಲು ತುಪ್ಪವನ್ನು ಎರೆದರೆ
ಕಹಿಯಲ್ಲದೇ ಸಿಹಿಯಾಗಬಲ್ಲುದೇ
ನಮ್ಮ ಕೂಡಲ ಸಂಗಮದೇವ

ಎಂದು ಬಸವಣ್ಣನವರು 800 ವರ್ಷಕ್ಕಿಂತ ಮುಂಚೆಯೇ ಹೇಳಿದ ಕಟುಸತ್ಯವನ್ನು ಉಲ್ಲೇಖಿಸಿದ್ದೆ. ಬೇವು ಬೀಜ ಬಿತ್ತಿದರೆ ಬೇವೇ ಸಿಗುತ್ತದೆ. ಮಾವು ಬಿತ್ತಿದರೆ ಮಾವೇ ಸಿಗುತ್ತದೆ ಎಂಬುದು ಇವರಿಗೆ ಗೊತ್ತಿಲ್ಲವೇ?

ಪತ್ರಿಕೆ: ನೀವು ಬಸವ ತತ್ವದ ಕುರಿತು ಇಷ್ಟೊಂದು ಮಾತಾಡುತ್ತೀರಿ. ಆದರೆ ಅದೇಕೆ ಬೆಳೆದು ನಿಲ್ಲಲಿಲ್ಲ?

ಬಿ.ನಾರಾಯಣರಾವ್: ಬಸವ ತತ್ವ ದ್ರಾವಿಡಿಯನ್ ಭಾಗದಲ್ಲಿ ನಮ್ಮ ದಕ್ಷಿಣದಲ್ಲಿ ಹುಟ್ಟಿರುವುದರಿಂದ ಇದು ಬೆಳೆದಿಲ್ಲ. ವಿಂಧ್ಯಪರ್ವತದ ಆಚೆ ಹುಟ್ಟಿದ ಧರ್ಮಗಳು – ಉದಾಹರಣೆಗೆ ಬುದ್ಧ ಧರ್ಮ ಇವತ್ತು ವಿಶ್ವವ್ಯಾಪಿಯಾಗಿಲ್ಲವೇ? ಮಹಾವೀರನ ಧರ್ಮವೂ ಬೆಳೆದಿದೆ. ಮೂರ್ನಾಲ್ಕು ಧರ್ಮಗಳು ವಿಂಧ್ಯ ಪರ್ವತದ ಆಚೆ ಹುಟ್ಟಿದವು ವಿಶ್ವವ್ಯಾಪಿಯಾಗಿವೆ.

ವಿಂಧ್ಯಪರ್ವತ ಈಚೆ ಹುಟ್ಟಿರುವುದು ಒಂದೇ ಒಂದು ಧರ್ಮ ಅದು ಬಸವಣ್ಣನವರ ನೇತೃತ್ವದಲ್ಲಿ ಲಿಂಗಾಯಿತ ಧರ್ಮ. ಅಂಥ ಒಂದು ಧರ್ಮಕ್ಕೆ ರಾಜಕೀಯ ರಕ್ಷಣೆ ಸಿಕ್ಕಿಲ್ಲ. ರಾಜಾಶ್ರಯ ಸಿಕ್ಕಿಲ್ಲ. ಇದು ಒಂದೇ ಧರ್ಮಕ್ಕೆ ರಾಜಾಶ್ರಯ ಸಿಕ್ಕಿಲ್ಲ. ಬೌದ್ಧ ಧರ್ಮಕ್ಕೂ ರಾಜಾಶ್ರಯ ಸಿಕ್ಕಿತ್ತು.

ಪತ್ರಿಕೆ: ಲಿಂಗಾಯಿತ ಸಮುದಾಯದ ಯಡಿಯೂರಪ್ಪನವರು ಸಿಎಂ ಆಗಿದ್ದಾರೆ.. ಅದು ರಾಜಾಶ್ರಯ ಸಿಕ್ಕ ಹಾಗಲ್ಲವೇ?
ಬಿ.ನಾರಾಯಣರಾವ್: ಯಡಿಯೂರಪ್ಪನವರು ಎಷ್ಟು ಕೆಲಸ ಮಾಡುತ್ತಾರೋ ಅಷ್ಟನ್ನು ನಾವು ಸ್ವಾಗತಿಸುತ್ತೇವೆ. ಅವರ ಮನಸ್ಸು ಬಸವಣ್ಣನವರ ಬಗ್ಗೆ ತುಡಿತ ಇದ್ರೂ, ಕಾಳಜಿ ಇದ್ರೂ ಕೂಡ ಅವರು ವೈದಿಕ ವ್ಯವಸ್ಥೆಯ ಭಾಗವಾಗಿರುವುದರಿಂದ ಅವರು ಪೂರ್ಣ ಪ್ರಮಾಣದಲ್ಲಿ ಮಾಡಲಿಕ್ಕೆ (ಆ ವ್ಯವಸ್ಥೆ) ಬಿಡುವುದಿಲ್ಲ. ವೈದಿಕ ವ್ಯವಸ್ಥೆಯನ್ನು ಸಮಾಧಾನಪಡಿಸಲಿಕ್ಕೇನೇ ಅವರ ಒಂದು ಜೀವಮಾನ ಹೋಯ್ತು.

ಪ: ನೀವು ವ್ಯಕ್ತಿಗತ ನೆಲೆಯಲ್ಲಿ ಮಾತಾಡುತ್ತಿದ್ದೀರಿ. ಆದರೆ, ಸಮಗ್ರ ಬದಲಾವಣೆ ಬರಬೇಕಾದರೆ ಒಂದು ಪಕ್ಷ, ಸಂಘಟನೆ ಸರಿಯಿರಬೇಕು. ನಿಮ್ಮ ಪಕ್ಷವೂ ಸರಿಯಿಲ್ಲ. ಹೀಗಿದ್ದ ಮೇಲೆ ಸಮಾಜ ಬದಲಾವಣೆ ಹೇಗೆ ಸಾಧ್ಯ?

ಬಿ.ನಾರಾಯಣರಾವ್: ಹಾಗಂತ ನಾವು ಮನುವಾದಿಗಳ ಜೊತೆ, ಬಿಜೆಪಿ ಗುರುತಿಸಿಕೊಳ್ಳಲು ಆಗುವುದಿಲ್ಲ. ಅದು ನಾಗ್ಪುರದಿಂದ ನಡೆಯುವ ಪಕ್ಷ. ಆರ್‌ಎಸ್‍ಎಸ್‍ನವರ ಕೈಯಲ್ಲಿ ಅದರ ಜುಟ್ಟಿದೆ. ಮೋದಿ ಕೂಡ ಅವರ ಕೈಗೊಂಬೆ. ಯಡಿಯೂರಪ್ಪನವರು ಸಹ ಕೈಗೊಂಬೆಯೇ.. ಅವರು ಪೇಟಿ ಬಾರಿಸುತ್ತಾರೆ ಇವರು ಕುಣಿತಾರೆ. ಕಾನೂನುಗಳು ನಾಗ್ಪುರದಲ್ಲಿ ತಯಾರಾಗ್ತಾವೆ. ಅವರು ಪುಟ ಓದೋದು ಪಾರ್ಲಿಮೆಂಟಲ್ಲಿ. ಇದು ಕಟುಸತ್ಯ. ಎರಡು ಮಾತಿಲ್ಲ. ಈಗ ನಾವು ಇದ್ದುದರಲ್ಲಿ ಇಲ್ಲಿರಬೇಕು.. ಜೆಡಿಎಸ್ ಒಂದು ಕುಟುಂಬದ ಪಕ್ಷ ಆಗಿಬಿಟ್ಟಿದೆ. ಬಿಜೆಪಿಗೆ ನಾವು ಹೋಗುವಂತಿಲ್ಲ. ಕಾಂಗ್ರೆಸ್ಸೂ ಕೂಡ ನೈತಿಕವಾಗಿ ಅಷ್ಟೇನು ಒಳ್ಳೆದಿಲ್ಲ. ಅಲ್ಲಿ ಕೂಡ ಜನಪರ ಕಾಳಜಿ ಇರುವವರು ಒಂದು ಕಡೆ ಇದ್ದಾರೆ, ವೈದಿಕ ವ್ಯವಸ್ಥೆಯನ್ನು ಒಪ್ಪಿ ಕೊಂಡಿರುವವರು ಸಹ ಇದ್ದಾರೆ. ಅಲ್ಲಿ ಎಲ್ಲಾ ಸಾಚಾ ಇಲ್ಲ. ಇದಕ್ಕಿಂತ ಒಳ್ಳೆಯ ವ್ಯವಸ್ಥೆ ಬರಬೇಕೆಂಬ ತುಡಿತ ನಮಗೂ ಇದೆ.

ಪ: ಕರ್ನಾಟಕ ರಾಜ್ಯ ಕಾಂಗ್ರೆಸ್ ನಾಯಕತ್ವದಲ್ಲಿ ಕಚ್ಚಾಟ ನಡೆಯುತ್ತಿದೆ. ವಿರೋಧ ಪಕ್ಷದ ನಾಯಕ ಸಹಾ ಇಲ್ಲ. ಈ ದುರಂತಕ್ಕೆ ಏನು ಹೇಳುತ್ತೀರಿ?

ಬಿ.ನಾರಾಯಣರಾವ್: ಅದೆಲ್ಲಾ 9ನೇ ತಾರೀಖಿಗೆ ಮುಕ್ತಾಯವಾಗುತ್ತದೆ ಸರ್. ಒಂದು ಹೇಳುತ್ತೇನೆ. ಈ ರಾಜ್ಯದಲ್ಲಿ ಜನನಾಯಕರಿರುವುದು ಇಬ್ಬರೆ. ಮೂರು ಪಕ್ಷ ಇವೆ ಮೂರು ಜನ ಇದ್ದಾರೆ. ಕಾಂಗ್ರೆಸ್‍ಗೆ ಸಿದ್ದರಾಮಯ್ಯ, ಬಿಜೆಪಿಗೆ ಯಡಿಯೂರಪ್ಪ, ಜೆಡಿಎಸ್‍ಗೆ ದೇವೇಗೌಡ. ಈಗ ಅವರದು – ಜೆಡಿಎಸ್‍ದು ಮುಗಿದಿದೆ. ಇನ್ನು ಯಡಿಯೂರಪ್ಪನವರದು ಎಷ್ಟು ದಿನ ನೋಡಬೇಕು. ಜನರಿಗೆ ನಾಟಕ ನೋಡಬೇಕಾಗಿದೆ. ಜೆಡಿಎಸ್ ನಾಟಕ ಮುಗಿದಿದೆ. ಈಗ ಬಿಜೆಪಿದು ಇದೆ. ಇದು ಎಷ್ಟು ದಿನ ನಡೆಯುತ್ತದೆ ನೋಡಬೇಕು. ಇದು ಮುಗಿದರೆ ಅನಿವಾರ್ಯವಾಗಿ ಕಾಂಗ್ರೆಸ್ ಬರಲೇಬೇಕು ಸರ್. ಇವೂ ಮೂರು ಬೇಡ ಅಂದ್ರೆ ಮತ್ತೊಂದು ಹುಟ್ಟಿದ್ದರೆ ಅದಕ್ಕೆ ಸೇರಬೇಕು.

ಪ: ಲಿಂಗಾಯಿತರು ಬಸವತತ್ವ ವಿರೋಧಿ ಸಿದ್ಧಾಂತ ಹೊಂದಿರುವ ಬಿಜೆಪಿಗೆ ಮತ ಕೊಡುತ್ತಾರಲ್ಲಾ. ಅದರ ಬಗ್ಗೆ ನೀವೇನು ಹೇಳುತ್ತೀರಿ?

ಬಿ.ನಾರಾಯಣರಾವ್: ಲಿಂಗಾಯಿತರು ಕಾಂಗ್ರೆಸ್‍ಗೆ ಮತ ಕೊಡದಿದ್ದರೂ ಪರವಾಗಿಲ್ಲ. ಆದರೆ ಬಸವಣ್ಣನವರಿಗೆ ಅನ್ಯಾಯ ಮಾಡದಂತೆ ಅವರ ತತ್ವದ ಮೇಲೆ ಅವರು ನಡೆದರೆ ಸಾಕು. ಅವರಿಗೆ ಶರಣು ಶರಣಾರ್ಥಿ. ತಮಗಿಷ್ಟ ಬಂದವರಿಗೆ ಮತ ಹಾಕುವ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಆದರೆ ಬಸವ ವಿರೋಧಿಯಾಗಿ, ಬಸವಣ್ಣನವರ ತತ್ವಕ್ಕೆ ವಿರುದ್ಧವಾಗಿ ನಡೆದುಕೊಳ್ಳಬಾರದು. ಬಸವಣ್ಣನವರು ಯಾವ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡಿದ್ದಾರೋ ಆ ವ್ಯವಸ್ಥೆಯ ಒಳಗೆ ಹೋಗಬಾರದು ಅಷ್ಟೇ.

ಸಂದರ್ಶನ:
ಡಾ.ವಾಸು.ಎಚ್.ವಿ ಮತ್ತು
ಸಿದ್ದಪ್ಪ ಮೂಲಗೆ


ಕೊರೊನಾ: ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್ ನಿಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾರಾಯಣ ರಾವ್ ಅವರ ಅನಿಸಿಕೆಗಳು ವಾಸ್ತವಿಕವಾಗಿವೆ. ಈಗ ಈಗಿರುವ ಮೂರೂ ಪಕ್ಷಗಳ ಬದಲಿಗೆ ಇನ್ನೊಂದು ಪಕ್ಷ ದೆಹಲಿ ಅವಶ್ಯಕತೆಯಿದೆ. ದುದೈ೯ವವೆಂರರೆ ಅಂತಹ ಪಕ್ಷವನ್ನು ಕಟ್ಟುವ, ಬೆಳೆಸುವ ನಾಯಕನಿಲ್ಲ. ಹಾಗೆ ನೋಡಿದರೆ ಹಳೆಯ ಜನತಾ ದಳ ಭರವಸೆಯ ಪಕ್ಷ ವಾಗಿತ್ತು. ಆದರೆ ಪುನರ್ ಜೀವನವಾಗಬೇಕಾಗಿದೆ.

  2. ಹಳೇಪಕ್ಶಗಳಿಗೆ ಅಂಟಿಕೊಳ್ಳುವುದು ಸರಿಯಲ್ಲ.
    ದರ್ಮದ ಹಂಗಿಲ್ಲದ, ಕುಟುಂಬ ರಾಜಕಾರಣದ ಹಂಗಿಲ್ಲದ ಕನ್ನಡನೆಲೆಯ ಹೊಸಕೂಟ ಗಟ್ಟಿಯಾಗಬೇಕು.

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...