Homeಕರ್ನಾಟಕಲಿಂಗಾಯಿತರು ನನಗೆ ಮತ ಕೊಡದಿದ್ದರೂ ಪರವಾಗಿಲ್ಲ, ಬಸವ ತತ್ವದ ಮೇಲೆ ನಡೆದರೆ ಸಾಕು: ಶಾಸಕ ಬಿ.ನಾರಾಯಣರಾವ್...

ಲಿಂಗಾಯಿತರು ನನಗೆ ಮತ ಕೊಡದಿದ್ದರೂ ಪರವಾಗಿಲ್ಲ, ಬಸವ ತತ್ವದ ಮೇಲೆ ನಡೆದರೆ ಸಾಕು: ಶಾಸಕ ಬಿ.ನಾರಾಯಣರಾವ್ ಸಂದರ್ಶನ

- Advertisement -
- Advertisement -

‘ಇಷ್ಟು ಕೋಟಿ ರೊಕ್ಕ ಕೊಟ್ಟರ ಅದನ್ನ ಎಲ್ಲಿಡೋದು ಅಂತ ನಮಗ ಗೊತ್ತಾಗವಲ್ದು ರೀ’ ಎಂದು ವಿಧಾನಸಭೆಯಲ್ಲಿ ಬಿ.ನಾರಾಯಣರಾವ್ ಅವರು ಮಾತನಾಡಿದಾಗ ಕರ್ನಾಟಕದ ಮತದಾರ ಬಂಧುಗಳಿಗೆ ಅದನ್ನು ಹೇಗೆ ಸ್ವೀಕರಿಸಬೇಕು ಎಂದು ಗೊತ್ತಾಗಲಿಲ್ಲ. ಮಾತಾಡುತ್ತಿದ್ದ ವ್ಯಕ್ತಿ ಪ್ರಾಮಾಣಿಕವಾಗಿದ್ದಂತೆ ಎಲ್ಲರಿಗೂ ಅನ್ನಿಸುತ್ತಿತ್ತಾದರೂ, ಇಂದಿನ ರಾಜಕಾರಣದಲ್ಲಿ ಇಂತಹ ಒಬ್ಬ ಶಾಸಕ ಇರಲು ಸಾಧ್ಯವೇ ಎಂಬ ಗುಮಾನಿಯೂ ಇತ್ತು. ನಾರಾಯಣರಾವ್‍ರನ್ನು ಬಲ್ಲವರಿಗೆ ಅಂತಹ ಅನುಮಾನವೇನೂ ಇಲ್ಲ. ‘80ರ ದಶಕದಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸ್ಥಾಪನೆಯಾಗಬೇಕೆಂದು ಒತ್ತಾಯಿಸಿ ಬೀದರ್‌ನಿಂದ ಬೆಂಗಳೂರಿನವರೆಗೆ ಸೈಕಲ್ ಜಾಥಾ ಮಾಡಿದ ಉತ್ಸಾಹಿ ಅವರು. ಬಸವಕಲ್ಯಾಣದ ಹಿಂದುಳಿದ ಜಾತಿಯ ಅವರು ನಿರಂತರವಾಗಿ ರಾಜಕಾರಣದಲ್ಲಿದ್ದರೂ ಅಧಿಕಾರದ ಹತ್ತಿರಕ್ಕೆ ಎಂದೂ ಬಂದಿರಲಿಲ್ಲ. ಆ ನಂತರ ದೇವೇಗೌಡರೊಮ್ಮೆ ತಮ್ಮ ಪಕ್ಷದಿಂದ ‘89ರಲ್ಲಿ ಎಂಎಲ್‍ಎ ಟಿಕೆಟ್ ಕೊಟ್ಟಿದ್ದರಾದರೂ ಯಶಸ್ವಿಯಾಗಲಿಲ್ಲ. 2013ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋತು, 2018ರಲ್ಲಿ ಗೆದ್ದರು. ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದ ಅತಿಥಿಗೃಹದಲ್ಲಿ ಪತ್ರಿಕೆಯ ತಂಡಕ್ಕೆ ನಾರಾಯಣರಾವ್ ಮಾತಿಗೆ ಸಿಕ್ಕರು.

ಚಿತ್ರಕೃಪೆ: ಯೋಯೋ ಟಿವಿ

ಪತ್ರಿಕೆ: ವಿಧಾನಸಭೆಯಲ್ಲಿ ನೀವು ಮಾತಾಡಿದ್ದನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು. ನಿಮ್ಮಂತಹ ವ್ಯಕ್ತಿಗಳು ರಾಜಕಾರಣ ಮಾಡುವ ಪರಿಸ್ಥಿತಿ ಇದೆಯೇ? ನೀವು ಬಯಸುವಂತಹ ಬದಲಾವಣೆ ರಾಜಕಾರಣದಲ್ಲಿ ಸಾಧ್ಯವೇ?

ಬಿ.ನಾರಾಯಣರಾವ್: ಯಾರು ಬದಲಾವಣೆ ಆಗುತ್ತಾರೋ ಬಿಡುತ್ತಾರೋ ಅದು ನಮಗೆ ಸಂಬಂಧಿಸಿಲ್ಲ. ನಾವು, ನಮ್ಮಂತಹ ನಿಷ್ಠಾವಂತರು ಪ್ರಾಮಾಣಿಕರು, ಜನಪರ ಕಾಳಜಿಯಿಟ್ಟು ಹೋರಾಟ ಮಾಡಿದಂತವರು ಬದಲಾಗಬಾರದು.

ಯಾರು ಏನ್ ಮಾಡ್ತರೋ ಬಿಡ್ತಾರೋ ಗೊತ್ತಿಲ್ಲ. ಈ ದೇಶದಲ್ಲಿ ಮಹಾತ್ಮಗಾಂಧಿ ಎಲ್ಲರಿಗಿಂತ ಭಿನ್ನವಾದ ನಾಯಕತ್ವ ಕೊಟ್ಟರು. ಹಾಗಾಗಿ ನಮ್ಮಂತವರು ಅಲ್ಲೊಬ್ಬರು ಇಲ್ಲೊಬ್ಬರು ಉಳಿದುಕೊಂಡಿದ್ದೇವೆ. ಇದು ಬದಲಾವಣೆ ಆಗುವುದಿಲ್ಲ ಅಂತ ನಾವು ಕೆಟ್ಟವರ ಜೊತೆ ಹೋಗೋಕ್ಕಾಗಲ್ಲ.

ಪತ್ರಿಕೆ: ಅನರ್ಹ ಶಾಸಕರು – ಮಾರಿಕೊಂಡು ಹೋದವರನ್ನು ನಿಮ್ಮ ಪಕ್ಷದವರು, ನೀವು ಬೈದಿರಿ. ಆದರೆ ಅಂತಹವರಿಗೆ ಟಿಕೆಟ್ ಕೊಟ್ಟಿದ್ದೇ ನಿಮ್ಮ ಪಕ್ಷವಲ್ಲವೇ?

ವಿಧಾನಸಭೆಯಲ್ಲೇ ನಾನು ಸಿದ್ದರಾಮಯ್ಯ, ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಮೂರು ಜನರಿಗೆ ಸೇರಿಸಿ ಹೇಳಿದ್ದೀನಿ. ಚುನಾವಣೆಗೆ ಕೇವಲ ಹದಿನೈದು ದಿನ ಇದ್ದಾಗ, ಹಣವಂತರು, ಸಾರಾಯಿ ಮಾರುವವರು, ರಿಯಲ್ ಎಸ್ಟೇಟ್‍ನವರು ಕಪ್ಪು ಹಣ ಉಳ್ಳವರಿಗೆ ಟಿಕೆಟ್ ಕೊಟ್ಟಿದ್ದೇ ಈ ಅನಾಹುತಕ್ಕೆ ನಿಜವಾದ ಕಾರಣ.

ಬೇವಿನ ಬೀಜವ ಬಿತ್ತಿ, ಬೆಲ್ಲದ ಕಟ್ಟೆಯನು ಕಟ್ಟಿ,
ಸವಿಜೇನು ಹಾಲು ತುಪ್ಪವನ್ನು ಎರೆದರೆ
ಕಹಿಯಲ್ಲದೇ ಸಿಹಿಯಾಗಬಲ್ಲುದೇ
ನಮ್ಮ ಕೂಡಲ ಸಂಗಮದೇವ

ಎಂದು ಬಸವಣ್ಣನವರು 800 ವರ್ಷಕ್ಕಿಂತ ಮುಂಚೆಯೇ ಹೇಳಿದ ಕಟುಸತ್ಯವನ್ನು ಉಲ್ಲೇಖಿಸಿದ್ದೆ. ಬೇವು ಬೀಜ ಬಿತ್ತಿದರೆ ಬೇವೇ ಸಿಗುತ್ತದೆ. ಮಾವು ಬಿತ್ತಿದರೆ ಮಾವೇ ಸಿಗುತ್ತದೆ ಎಂಬುದು ಇವರಿಗೆ ಗೊತ್ತಿಲ್ಲವೇ?

ಪತ್ರಿಕೆ: ನೀವು ಬಸವ ತತ್ವದ ಕುರಿತು ಇಷ್ಟೊಂದು ಮಾತಾಡುತ್ತೀರಿ. ಆದರೆ ಅದೇಕೆ ಬೆಳೆದು ನಿಲ್ಲಲಿಲ್ಲ?

ಬಿ.ನಾರಾಯಣರಾವ್: ಬಸವ ತತ್ವ ದ್ರಾವಿಡಿಯನ್ ಭಾಗದಲ್ಲಿ ನಮ್ಮ ದಕ್ಷಿಣದಲ್ಲಿ ಹುಟ್ಟಿರುವುದರಿಂದ ಇದು ಬೆಳೆದಿಲ್ಲ. ವಿಂಧ್ಯಪರ್ವತದ ಆಚೆ ಹುಟ್ಟಿದ ಧರ್ಮಗಳು – ಉದಾಹರಣೆಗೆ ಬುದ್ಧ ಧರ್ಮ ಇವತ್ತು ವಿಶ್ವವ್ಯಾಪಿಯಾಗಿಲ್ಲವೇ? ಮಹಾವೀರನ ಧರ್ಮವೂ ಬೆಳೆದಿದೆ. ಮೂರ್ನಾಲ್ಕು ಧರ್ಮಗಳು ವಿಂಧ್ಯ ಪರ್ವತದ ಆಚೆ ಹುಟ್ಟಿದವು ವಿಶ್ವವ್ಯಾಪಿಯಾಗಿವೆ.

ವಿಂಧ್ಯಪರ್ವತ ಈಚೆ ಹುಟ್ಟಿರುವುದು ಒಂದೇ ಒಂದು ಧರ್ಮ ಅದು ಬಸವಣ್ಣನವರ ನೇತೃತ್ವದಲ್ಲಿ ಲಿಂಗಾಯಿತ ಧರ್ಮ. ಅಂಥ ಒಂದು ಧರ್ಮಕ್ಕೆ ರಾಜಕೀಯ ರಕ್ಷಣೆ ಸಿಕ್ಕಿಲ್ಲ. ರಾಜಾಶ್ರಯ ಸಿಕ್ಕಿಲ್ಲ. ಇದು ಒಂದೇ ಧರ್ಮಕ್ಕೆ ರಾಜಾಶ್ರಯ ಸಿಕ್ಕಿಲ್ಲ. ಬೌದ್ಧ ಧರ್ಮಕ್ಕೂ ರಾಜಾಶ್ರಯ ಸಿಕ್ಕಿತ್ತು.

ಪತ್ರಿಕೆ: ಲಿಂಗಾಯಿತ ಸಮುದಾಯದ ಯಡಿಯೂರಪ್ಪನವರು ಸಿಎಂ ಆಗಿದ್ದಾರೆ.. ಅದು ರಾಜಾಶ್ರಯ ಸಿಕ್ಕ ಹಾಗಲ್ಲವೇ?
ಬಿ.ನಾರಾಯಣರಾವ್: ಯಡಿಯೂರಪ್ಪನವರು ಎಷ್ಟು ಕೆಲಸ ಮಾಡುತ್ತಾರೋ ಅಷ್ಟನ್ನು ನಾವು ಸ್ವಾಗತಿಸುತ್ತೇವೆ. ಅವರ ಮನಸ್ಸು ಬಸವಣ್ಣನವರ ಬಗ್ಗೆ ತುಡಿತ ಇದ್ರೂ, ಕಾಳಜಿ ಇದ್ರೂ ಕೂಡ ಅವರು ವೈದಿಕ ವ್ಯವಸ್ಥೆಯ ಭಾಗವಾಗಿರುವುದರಿಂದ ಅವರು ಪೂರ್ಣ ಪ್ರಮಾಣದಲ್ಲಿ ಮಾಡಲಿಕ್ಕೆ (ಆ ವ್ಯವಸ್ಥೆ) ಬಿಡುವುದಿಲ್ಲ. ವೈದಿಕ ವ್ಯವಸ್ಥೆಯನ್ನು ಸಮಾಧಾನಪಡಿಸಲಿಕ್ಕೇನೇ ಅವರ ಒಂದು ಜೀವಮಾನ ಹೋಯ್ತು.

ಪ: ನೀವು ವ್ಯಕ್ತಿಗತ ನೆಲೆಯಲ್ಲಿ ಮಾತಾಡುತ್ತಿದ್ದೀರಿ. ಆದರೆ, ಸಮಗ್ರ ಬದಲಾವಣೆ ಬರಬೇಕಾದರೆ ಒಂದು ಪಕ್ಷ, ಸಂಘಟನೆ ಸರಿಯಿರಬೇಕು. ನಿಮ್ಮ ಪಕ್ಷವೂ ಸರಿಯಿಲ್ಲ. ಹೀಗಿದ್ದ ಮೇಲೆ ಸಮಾಜ ಬದಲಾವಣೆ ಹೇಗೆ ಸಾಧ್ಯ?

ಬಿ.ನಾರಾಯಣರಾವ್: ಹಾಗಂತ ನಾವು ಮನುವಾದಿಗಳ ಜೊತೆ, ಬಿಜೆಪಿ ಗುರುತಿಸಿಕೊಳ್ಳಲು ಆಗುವುದಿಲ್ಲ. ಅದು ನಾಗ್ಪುರದಿಂದ ನಡೆಯುವ ಪಕ್ಷ. ಆರ್‌ಎಸ್‍ಎಸ್‍ನವರ ಕೈಯಲ್ಲಿ ಅದರ ಜುಟ್ಟಿದೆ. ಮೋದಿ ಕೂಡ ಅವರ ಕೈಗೊಂಬೆ. ಯಡಿಯೂರಪ್ಪನವರು ಸಹ ಕೈಗೊಂಬೆಯೇ.. ಅವರು ಪೇಟಿ ಬಾರಿಸುತ್ತಾರೆ ಇವರು ಕುಣಿತಾರೆ. ಕಾನೂನುಗಳು ನಾಗ್ಪುರದಲ್ಲಿ ತಯಾರಾಗ್ತಾವೆ. ಅವರು ಪುಟ ಓದೋದು ಪಾರ್ಲಿಮೆಂಟಲ್ಲಿ. ಇದು ಕಟುಸತ್ಯ. ಎರಡು ಮಾತಿಲ್ಲ. ಈಗ ನಾವು ಇದ್ದುದರಲ್ಲಿ ಇಲ್ಲಿರಬೇಕು.. ಜೆಡಿಎಸ್ ಒಂದು ಕುಟುಂಬದ ಪಕ್ಷ ಆಗಿಬಿಟ್ಟಿದೆ. ಬಿಜೆಪಿಗೆ ನಾವು ಹೋಗುವಂತಿಲ್ಲ. ಕಾಂಗ್ರೆಸ್ಸೂ ಕೂಡ ನೈತಿಕವಾಗಿ ಅಷ್ಟೇನು ಒಳ್ಳೆದಿಲ್ಲ. ಅಲ್ಲಿ ಕೂಡ ಜನಪರ ಕಾಳಜಿ ಇರುವವರು ಒಂದು ಕಡೆ ಇದ್ದಾರೆ, ವೈದಿಕ ವ್ಯವಸ್ಥೆಯನ್ನು ಒಪ್ಪಿ ಕೊಂಡಿರುವವರು ಸಹ ಇದ್ದಾರೆ. ಅಲ್ಲಿ ಎಲ್ಲಾ ಸಾಚಾ ಇಲ್ಲ. ಇದಕ್ಕಿಂತ ಒಳ್ಳೆಯ ವ್ಯವಸ್ಥೆ ಬರಬೇಕೆಂಬ ತುಡಿತ ನಮಗೂ ಇದೆ.

ಪ: ಕರ್ನಾಟಕ ರಾಜ್ಯ ಕಾಂಗ್ರೆಸ್ ನಾಯಕತ್ವದಲ್ಲಿ ಕಚ್ಚಾಟ ನಡೆಯುತ್ತಿದೆ. ವಿರೋಧ ಪಕ್ಷದ ನಾಯಕ ಸಹಾ ಇಲ್ಲ. ಈ ದುರಂತಕ್ಕೆ ಏನು ಹೇಳುತ್ತೀರಿ?

ಬಿ.ನಾರಾಯಣರಾವ್: ಅದೆಲ್ಲಾ 9ನೇ ತಾರೀಖಿಗೆ ಮುಕ್ತಾಯವಾಗುತ್ತದೆ ಸರ್. ಒಂದು ಹೇಳುತ್ತೇನೆ. ಈ ರಾಜ್ಯದಲ್ಲಿ ಜನನಾಯಕರಿರುವುದು ಇಬ್ಬರೆ. ಮೂರು ಪಕ್ಷ ಇವೆ ಮೂರು ಜನ ಇದ್ದಾರೆ. ಕಾಂಗ್ರೆಸ್‍ಗೆ ಸಿದ್ದರಾಮಯ್ಯ, ಬಿಜೆಪಿಗೆ ಯಡಿಯೂರಪ್ಪ, ಜೆಡಿಎಸ್‍ಗೆ ದೇವೇಗೌಡ. ಈಗ ಅವರದು – ಜೆಡಿಎಸ್‍ದು ಮುಗಿದಿದೆ. ಇನ್ನು ಯಡಿಯೂರಪ್ಪನವರದು ಎಷ್ಟು ದಿನ ನೋಡಬೇಕು. ಜನರಿಗೆ ನಾಟಕ ನೋಡಬೇಕಾಗಿದೆ. ಜೆಡಿಎಸ್ ನಾಟಕ ಮುಗಿದಿದೆ. ಈಗ ಬಿಜೆಪಿದು ಇದೆ. ಇದು ಎಷ್ಟು ದಿನ ನಡೆಯುತ್ತದೆ ನೋಡಬೇಕು. ಇದು ಮುಗಿದರೆ ಅನಿವಾರ್ಯವಾಗಿ ಕಾಂಗ್ರೆಸ್ ಬರಲೇಬೇಕು ಸರ್. ಇವೂ ಮೂರು ಬೇಡ ಅಂದ್ರೆ ಮತ್ತೊಂದು ಹುಟ್ಟಿದ್ದರೆ ಅದಕ್ಕೆ ಸೇರಬೇಕು.

ಪ: ಲಿಂಗಾಯಿತರು ಬಸವತತ್ವ ವಿರೋಧಿ ಸಿದ್ಧಾಂತ ಹೊಂದಿರುವ ಬಿಜೆಪಿಗೆ ಮತ ಕೊಡುತ್ತಾರಲ್ಲಾ. ಅದರ ಬಗ್ಗೆ ನೀವೇನು ಹೇಳುತ್ತೀರಿ?

ಬಿ.ನಾರಾಯಣರಾವ್: ಲಿಂಗಾಯಿತರು ಕಾಂಗ್ರೆಸ್‍ಗೆ ಮತ ಕೊಡದಿದ್ದರೂ ಪರವಾಗಿಲ್ಲ. ಆದರೆ ಬಸವಣ್ಣನವರಿಗೆ ಅನ್ಯಾಯ ಮಾಡದಂತೆ ಅವರ ತತ್ವದ ಮೇಲೆ ಅವರು ನಡೆದರೆ ಸಾಕು. ಅವರಿಗೆ ಶರಣು ಶರಣಾರ್ಥಿ. ತಮಗಿಷ್ಟ ಬಂದವರಿಗೆ ಮತ ಹಾಕುವ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಆದರೆ ಬಸವ ವಿರೋಧಿಯಾಗಿ, ಬಸವಣ್ಣನವರ ತತ್ವಕ್ಕೆ ವಿರುದ್ಧವಾಗಿ ನಡೆದುಕೊಳ್ಳಬಾರದು. ಬಸವಣ್ಣನವರು ಯಾವ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡಿದ್ದಾರೋ ಆ ವ್ಯವಸ್ಥೆಯ ಒಳಗೆ ಹೋಗಬಾರದು ಅಷ್ಟೇ.

ಸಂದರ್ಶನ:
ಡಾ.ವಾಸು.ಎಚ್.ವಿ ಮತ್ತು
ಸಿದ್ದಪ್ಪ ಮೂಲಗೆ


ಕೊರೊನಾ: ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್ ನಿಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾರಾಯಣ ರಾವ್ ಅವರ ಅನಿಸಿಕೆಗಳು ವಾಸ್ತವಿಕವಾಗಿವೆ. ಈಗ ಈಗಿರುವ ಮೂರೂ ಪಕ್ಷಗಳ ಬದಲಿಗೆ ಇನ್ನೊಂದು ಪಕ್ಷ ದೆಹಲಿ ಅವಶ್ಯಕತೆಯಿದೆ. ದುದೈ೯ವವೆಂರರೆ ಅಂತಹ ಪಕ್ಷವನ್ನು ಕಟ್ಟುವ, ಬೆಳೆಸುವ ನಾಯಕನಿಲ್ಲ. ಹಾಗೆ ನೋಡಿದರೆ ಹಳೆಯ ಜನತಾ ದಳ ಭರವಸೆಯ ಪಕ್ಷ ವಾಗಿತ್ತು. ಆದರೆ ಪುನರ್ ಜೀವನವಾಗಬೇಕಾಗಿದೆ.

  2. ಹಳೇಪಕ್ಶಗಳಿಗೆ ಅಂಟಿಕೊಳ್ಳುವುದು ಸರಿಯಲ್ಲ.
    ದರ್ಮದ ಹಂಗಿಲ್ಲದ, ಕುಟುಂಬ ರಾಜಕಾರಣದ ಹಂಗಿಲ್ಲದ ಕನ್ನಡನೆಲೆಯ ಹೊಸಕೂಟ ಗಟ್ಟಿಯಾಗಬೇಕು.

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...