Homeಕರ್ನಾಟಕಬಸವ ಕಲ್ಯಾಣ: ಅಂಗನವಾಡಿಯ ದಲಿತ ಸಹಾಯಕಿಗೆ ಸವರ್ಣೀಯರ ಅಸಹಕಾರ

ಬಸವ ಕಲ್ಯಾಣ: ಅಂಗನವಾಡಿಯ ದಲಿತ ಸಹಾಯಕಿಗೆ ಸವರ್ಣೀಯರ ಅಸಹಕಾರ

- Advertisement -
- Advertisement -

ಅಂಗನವಾಡಿ ಸಹಾಯಕಿ ದಲಿತರಾದ ಕಾರಣಕ್ಕೆ ಸವರ್ಣೀಯರು ಅಸಹಕಾರ ತೋರಿರುವ ಘಟನೆ ಬೀದರ್‌ನ ಬಸವಕಲ್ಯಾಣದ ಹತ್ಯಾಳ್‌ ಗ್ರಾಮದಲ್ಲಿ ನಡೆದಿದೆ.

30 ವರ್ಷದ ದಲಿತ ಮಹಿಳೆ ಮಿಲನಾ ಬಾಯಿ ಅವರನ್ನು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿತು. 10 ಜೂನ್ 2021ರಂದು ನೇಮಕಾತಿ ದೃಢೀಕರಣ ದೊರೆಕಿತು. ಅಂಗನವಾಡಿ ಆವರಣದ ನಿರ್ವಹಣೆ ಹಾಗೂ ಅಡುಗೆ ಮಾಡುವ ನಿರೀಕ್ಷೆಯಲ್ಲಿದ್ದ ಮಿಲನಾ ಅವರಿಗೆ ಆಘಾತ ಕಾದಿತ್ತು.

ಮಿಲನಾ ಅವರಿಗೆ ನೇಮಕಾತಿ ದೊರೆತ ಸಮಯದಲ್ಲಿ ಕೋವಿಡ್‌ ಸಮಸ್ಯೆ ಬಿಗಡಾಯಿಸಿದ್ದರಿಂದ ಶಾಲೆಗಳು ಮುಚ್ಚಿದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೂನ್ 4, 2022ರಂದು ಮತ್ತೆ ಶಾಲೆಗಳು ತೆರೆದಾಗ ದಲಿತ ಸಹಾಯಕಿ ಅಂಗನವಾಡಿಗೆ ಪ್ರವೇಶಿಸದಂತೆ ಗ್ರಾಮದ ಮರಾಠರು ಹಾಗೂ ಇತರ ಸವರ್ಣೀಯರು ತಡೆದರು ಎಂಬ ಆರೋಪಗಳಿವೆ. ಮಿಲನಾ ಬಾಯಿ ಅವರ ಜಾತಿ ಕಾರಣಕ್ಕಾಗಿ ಸ್ಥಳೀಯ ಗ್ರಾಮಸ್ಥರು ತಮ್ಮದೇ ಮರಾಠ ಜಾತಿಯ ಸ್ವಯಂ ಸೇವಕಿಯನ್ನು ಅಂಗನವಾಡಿಯಲ್ಲಿ ಅಡುಗೆ ಮಾಡಲು ನೇಮಿಸಿಕೊಂಡರು. 10 ಕಿ.ಮೀ. ದೂರದಲ್ಲಿರುವ ಪಕ್ಕದ ಸಿರ್ಗಾಪುರ ಗ್ರಾಮಕ್ಕೆ ವರ್ಗಾವಣೆಯಾಗುವಂತೆ ಮಿಲನಾ ಬಾಯಿಯವರಿಗೆ ಮನವಿ ಮಾಡಿದ್ದರು ಎಂಬ ದೂರುಗಳು ಬಂದವು.

ಮಿಲನಾ ಬಾಯಿ ಅವರ ಪತಿ ಜೈಪಾಲ್ ರಾಣೆಯವರು ಇತ್ತೀಚೆಗೆ ಪ್ರತಿಕ್ರಿಯೆ ನೀಡಿ, “ನಮ್ಮ ಗ್ರಾಮದಲ್ಲಿ ಮೂರು ಅಂಗನವಾಡಿಗಳಿವೆ. ನನ್ನ ಹೆಂಡತಿಯನ್ನು ಮೆರಿಟ್ (ಸಾಮಾನ್ಯ ವರ್ಗ) ಆಧಾರದ ಮೇಲೆ ಶಾಲೆಯೊಂದರಲ್ಲಿ ಸಹಾಯಕಿಯಾಗಿ ನೇಮಿಸಲಾಗಿದೆ. ಈ ಅಂಗನವಾಡಿ ಭಾಗದಲ್ಲಿ ಸವರ್ಣೀಯರು ಹೆಚ್ಚಿದ್ದಾರೆ. ಸವರ್ಣೀಯರು ನನ್ನ ಹೆಂಡತಿಗೆ ಅಂಗನವಾಡಿಯಲ್ಲಿ ಕೆಲಸ ಮಾಡಲು, ಅಡುಗೆ ಮಾಡಲು ಅವಕಾಶ ನೀಡಲಿಲ್ಲ” ಎಂದು ದೂರಿದ್ದರು.

ಕೋವಿಡ್ ಸಂದರ್ಭದಲ್ಲಿಯೂ ಸವರ್ಣೀಯರು ದಲಿತ ಕಾರ್ಯಕರ್ತೆಯನ್ನು ಅವಮಾನಿಸಿದ್ದಾರೆ ಎಂದು ಮಿಲನಾ ಬಾಯಿ ಅವರ ಕುಟುಂಬದ ಆಪ್ತ ಮೂಲಗಳು ಆರೋಪಿಸಿವೆ. ಲಾಕ್‌ಡೌನ್ ಸಮಯದಲ್ಲಿ ದಿನಸಿ ವಿತರಣೆ ಕಾರ್ಯದಲ್ಲಿ ಮಿಲನಾ ಬಾಯಿ ಕಾರ್ಯಪ್ರವೃತ್ತರಾಗಿದ್ದರು.

“ನನ್ನ ಪತ್ನಿ ನೇಮಕವಾದಾಗಿನಿಂದ ನಿಯಮಿತವಾಗಿ 5000 ರೂ. ವೇತನ ಪಡೆಯುತ್ತಿದ್ದಾರೆ. ಆದರೆ, ಅವರು ಅಂಗನವಾಡಿಯಲ್ಲಿ ಕೆಲಸ ಮಾಡುವುದಕ್ಕೆ ತೀವ್ರ ವಿರೋಧವಿದೆ. ಎರಡು ವಾರಗಳಿಂದ ಸವರ್ಣೀಯ ಹಿಂದೂ ಸಮುದಾಯದ ಇನ್ನೊಬ್ಬ ಸಹಾಯಕಿ ಅಂಗನವಾಡಿಯಲ್ಲಿ ಅಡುಗೆ ಮಾಡುತ್ತಿದ್ದಾರೆ” ಎಂದು ಜೈಪಾಲ್ ಹೇಳಿರುವುದಾಗಿ ‘ದಿ ಕ್ವಿಂಟ್‌’ ವರದಿ ಮಾಡಿದೆ.

ಅಂಗನವಾಡಿಯಲ್ಲಿ ಮಿಲನಾ ಬಾಯಿ ಇರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಮರಾಠಾ ವ್ಯಕ್ತಿ ಸಿದ್ದರಾಮ ಮುಳೆ, “ಸಹಾಯಕಿ ಹುದ್ದೆಯಿಂದ ನಿವೃತ್ತರಾದವರು ಸಾಮಾನ್ಯ ವರ್ಗದವರು. ಈಗ ಆ ಹುದ್ದೆಯನ್ನು ಎಸ್‌ಸಿ ಸಮುದಾಯದ ವ್ಯಕ್ತಿಗೆ ನೀಡಲಾಗಿದೆ. ಇದು ಸರಿಯಲ್ಲ, ನಾವು ಇದಕ್ಕೆ ಅವಕಾಶ ನೀಡುವುದಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

“ಮಿಲನಾ ಬಾಯಿಯವರನ್ನು ಬದಲಿಸಿ, ನಾವು ಯಾರನ್ನೂ ನೇಮಿಸಿಲ್ಲ. ಸಿಡಿಪಿಒ (ಮಕ್ಕಳ ಅಭಿವೃದ್ಧಿ ರಕ್ಷಣಾ ಅಧಿಕಾರಿ) ಸಹಾಯಕರ ಕೊರತೆಯಿದೆ ಎಂದು ಹೇಳಿದಾಗ, ನಾವು ನಮ್ಮ ಸಮುದಾಯದ ಕೆಲವು ಮಹಿಳೆಯರನ್ನು ಕಳುಹಿಸಿದ್ದೇವೆ” ಎಂದು ಸಮರ್ಥಿಸಿಕೊಂಡಿದ್ದಾರೆ ಸಿದ್ದರಾಮ ಮುಳೆ.

ಹತ್ಯಾಳ್‌ನಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ, “ಗ್ರಾಮಸ್ಥರಿಗೆ ಸಹಾಯಕಿಯ ಜಾತಿಯಿಂದ ಯಾವುದೇ ಸಮಸ್ಯೆ ಇಲ್ಲ. ಆದರೆ ಸಾಮಾನ್ಯ ವರ್ಗದ ಜನರಿಗೆ ಪ್ರಾತಿನಿಧ್ಯ ಬೇಕು ಎನ್ನುತ್ತಿದ್ದಾರೆ” ಎಂದಿದ್ದಾರೆ.

ಅದೇ ಇಲಾಖೆಯ ಅಧಿಕಾರಿಯೊಬ್ಬರು ಹೆಸರು ಹೇಳಲಿಚ್ಛಿಸದೆ ಪ್ರತಿಕ್ರಿಯಿಸಿದ್ದು, “ದಲಿತ ಮಹಿಳೆ ಅಡುಗೆ ಮಾಡುವುದನ್ನು ಗ್ರಾಮದ ಸವರ್ಣೀಯರು ಒಪ್ಪಲಿಲ್ಲ. ತಮ್ಮ ಜಾತಿಯ ಸಹಾಯಕಿಯನ್ನು ಬಯಸಿದ್ದರು. ಒಂದು ವರ್ಷದಿಂದ ದಲಿತ ಮಹಿಳೆ ಅಂಗನವಾಡಿ ಸಹಾಯಕಿಯಾಗಿದ್ದಾರೆ” ಎಂದು ತಿಳಿಸಿದ್ದಾರೆ.

“ಪಕ್ಕದ ಗ್ರಾಮ ಸಿರ್ಗಾಪುರಕ್ಕೆ ಸ್ವಯಂಪ್ರೇರಿತವಾಗಿ ವರ್ಗಾವಣೆ ಮಾಡಿಕೊಳ್ಳುವಂತೆ ಸಿಡಿಪಿಒ ಕಚೇರಿಯಿಂದ  ತಿಳಿಸಲಾಗುತ್ತಿದೆ” ಎಂದು ಮಿಲನಾ ಬಾಯಿ ಮತ್ತು ಅವರ ಕುಟುಂಬದವರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ಸಿಡಿಪಿಒ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಪದೇ ಪದೇ ದೂರು ನೀಡಿದ ನಂತರ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಮಿಲನಾ ಬಾಯಿ ಅಂಗನವಾಡಿಯಲ್ಲಿ ಕೆಲಸ ಮುಂದುವರಿಸಬಹುದು ಎಂದು ಭರವಸೆ ನೀಡಿದ್ದಾರೆ. ಆದರೆ, ಕೆಲವು ಮೇಲ್ಜಾತಿಯವರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಹತ್ಯಾಲ್‌ನ ದಲಿತ ರಾಪರ್ ಸಂಗೀತಗಾರ ಹರೀಶ್ ಕಾಂಬಳೆ ಪ್ರತಿಕ್ರಿಯಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಹರೀಶ್‌ ಕಾಂಬಳೆ, “ಇದು ಜಾತಿ ಆಧಾರಿತ ಸಮಸ್ಯೆಯೇ ಹೊರತು, ಪ್ರಾತಿನಿಧ್ಯಕ್ಕೆ ಸಂಬಂಧಿಸಿಲ್ಲ. ತಮ್ಮ ಸಮುದಾಯದ ಪ್ರಾತಿನಿಧ್ಯ ಬೇಕಾದರೆ ಶಾಸನ ರೂಪಿಸಲು ಒತ್ತಾಯಿಸಲಿ. ನಮ್ಮದೇನೂ ತಕರಾರಿಲ್ಲ. ಆದರೆ ಇಲ್ಲಿ ಅಸ್ಪೃಶ್ಯತೆ ಆಚರಣೆಯಾಗಿದೆ. ದಲಿತ ಸಹಾಯಕಿಗೆ ಅಸಹಕಾರ ತೋರಲಾಗಿದೆ” ಎಂದರು.

ಮಿಲನಾ ಬಾಯಿ ಅವರ ಪತಿ ಜೈಪಾಲ್ ರಾಣೆ ‘ನಾನುಗೌರಿ.ಕಾಂ’ ಪ್ರತಿಕ್ರಿಯಿಸಿ, “ಅಧಿಕಾರಿಗಳು ಭೇಟಿ ನೀಡಿದ್ದರು. ದಲಿತ ಮಹಿಳೆಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ಸೂಚನೆ ನೀಡಿದ್ದಾರೆ. ಸುಮಾರು ಆರು ತಿಂಗಳಿಂದ ಅಸಹಕಾರ ತೋರಿದ್ದರು” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...