Homeಕರ್ನಾಟಕಬಸವ ಕಲ್ಯಾಣ: ಅಂಗನವಾಡಿಯ ದಲಿತ ಸಹಾಯಕಿಗೆ ಸವರ್ಣೀಯರ ಅಸಹಕಾರ

ಬಸವ ಕಲ್ಯಾಣ: ಅಂಗನವಾಡಿಯ ದಲಿತ ಸಹಾಯಕಿಗೆ ಸವರ್ಣೀಯರ ಅಸಹಕಾರ

- Advertisement -
- Advertisement -

ಅಂಗನವಾಡಿ ಸಹಾಯಕಿ ದಲಿತರಾದ ಕಾರಣಕ್ಕೆ ಸವರ್ಣೀಯರು ಅಸಹಕಾರ ತೋರಿರುವ ಘಟನೆ ಬೀದರ್‌ನ ಬಸವಕಲ್ಯಾಣದ ಹತ್ಯಾಳ್‌ ಗ್ರಾಮದಲ್ಲಿ ನಡೆದಿದೆ.

30 ವರ್ಷದ ದಲಿತ ಮಹಿಳೆ ಮಿಲನಾ ಬಾಯಿ ಅವರನ್ನು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿತು. 10 ಜೂನ್ 2021ರಂದು ನೇಮಕಾತಿ ದೃಢೀಕರಣ ದೊರೆಕಿತು. ಅಂಗನವಾಡಿ ಆವರಣದ ನಿರ್ವಹಣೆ ಹಾಗೂ ಅಡುಗೆ ಮಾಡುವ ನಿರೀಕ್ಷೆಯಲ್ಲಿದ್ದ ಮಿಲನಾ ಅವರಿಗೆ ಆಘಾತ ಕಾದಿತ್ತು.

ಮಿಲನಾ ಅವರಿಗೆ ನೇಮಕಾತಿ ದೊರೆತ ಸಮಯದಲ್ಲಿ ಕೋವಿಡ್‌ ಸಮಸ್ಯೆ ಬಿಗಡಾಯಿಸಿದ್ದರಿಂದ ಶಾಲೆಗಳು ಮುಚ್ಚಿದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೂನ್ 4, 2022ರಂದು ಮತ್ತೆ ಶಾಲೆಗಳು ತೆರೆದಾಗ ದಲಿತ ಸಹಾಯಕಿ ಅಂಗನವಾಡಿಗೆ ಪ್ರವೇಶಿಸದಂತೆ ಗ್ರಾಮದ ಮರಾಠರು ಹಾಗೂ ಇತರ ಸವರ್ಣೀಯರು ತಡೆದರು ಎಂಬ ಆರೋಪಗಳಿವೆ. ಮಿಲನಾ ಬಾಯಿ ಅವರ ಜಾತಿ ಕಾರಣಕ್ಕಾಗಿ ಸ್ಥಳೀಯ ಗ್ರಾಮಸ್ಥರು ತಮ್ಮದೇ ಮರಾಠ ಜಾತಿಯ ಸ್ವಯಂ ಸೇವಕಿಯನ್ನು ಅಂಗನವಾಡಿಯಲ್ಲಿ ಅಡುಗೆ ಮಾಡಲು ನೇಮಿಸಿಕೊಂಡರು. 10 ಕಿ.ಮೀ. ದೂರದಲ್ಲಿರುವ ಪಕ್ಕದ ಸಿರ್ಗಾಪುರ ಗ್ರಾಮಕ್ಕೆ ವರ್ಗಾವಣೆಯಾಗುವಂತೆ ಮಿಲನಾ ಬಾಯಿಯವರಿಗೆ ಮನವಿ ಮಾಡಿದ್ದರು ಎಂಬ ದೂರುಗಳು ಬಂದವು.

ಮಿಲನಾ ಬಾಯಿ ಅವರ ಪತಿ ಜೈಪಾಲ್ ರಾಣೆಯವರು ಇತ್ತೀಚೆಗೆ ಪ್ರತಿಕ್ರಿಯೆ ನೀಡಿ, “ನಮ್ಮ ಗ್ರಾಮದಲ್ಲಿ ಮೂರು ಅಂಗನವಾಡಿಗಳಿವೆ. ನನ್ನ ಹೆಂಡತಿಯನ್ನು ಮೆರಿಟ್ (ಸಾಮಾನ್ಯ ವರ್ಗ) ಆಧಾರದ ಮೇಲೆ ಶಾಲೆಯೊಂದರಲ್ಲಿ ಸಹಾಯಕಿಯಾಗಿ ನೇಮಿಸಲಾಗಿದೆ. ಈ ಅಂಗನವಾಡಿ ಭಾಗದಲ್ಲಿ ಸವರ್ಣೀಯರು ಹೆಚ್ಚಿದ್ದಾರೆ. ಸವರ್ಣೀಯರು ನನ್ನ ಹೆಂಡತಿಗೆ ಅಂಗನವಾಡಿಯಲ್ಲಿ ಕೆಲಸ ಮಾಡಲು, ಅಡುಗೆ ಮಾಡಲು ಅವಕಾಶ ನೀಡಲಿಲ್ಲ” ಎಂದು ದೂರಿದ್ದರು.

ಕೋವಿಡ್ ಸಂದರ್ಭದಲ್ಲಿಯೂ ಸವರ್ಣೀಯರು ದಲಿತ ಕಾರ್ಯಕರ್ತೆಯನ್ನು ಅವಮಾನಿಸಿದ್ದಾರೆ ಎಂದು ಮಿಲನಾ ಬಾಯಿ ಅವರ ಕುಟುಂಬದ ಆಪ್ತ ಮೂಲಗಳು ಆರೋಪಿಸಿವೆ. ಲಾಕ್‌ಡೌನ್ ಸಮಯದಲ್ಲಿ ದಿನಸಿ ವಿತರಣೆ ಕಾರ್ಯದಲ್ಲಿ ಮಿಲನಾ ಬಾಯಿ ಕಾರ್ಯಪ್ರವೃತ್ತರಾಗಿದ್ದರು.

“ನನ್ನ ಪತ್ನಿ ನೇಮಕವಾದಾಗಿನಿಂದ ನಿಯಮಿತವಾಗಿ 5000 ರೂ. ವೇತನ ಪಡೆಯುತ್ತಿದ್ದಾರೆ. ಆದರೆ, ಅವರು ಅಂಗನವಾಡಿಯಲ್ಲಿ ಕೆಲಸ ಮಾಡುವುದಕ್ಕೆ ತೀವ್ರ ವಿರೋಧವಿದೆ. ಎರಡು ವಾರಗಳಿಂದ ಸವರ್ಣೀಯ ಹಿಂದೂ ಸಮುದಾಯದ ಇನ್ನೊಬ್ಬ ಸಹಾಯಕಿ ಅಂಗನವಾಡಿಯಲ್ಲಿ ಅಡುಗೆ ಮಾಡುತ್ತಿದ್ದಾರೆ” ಎಂದು ಜೈಪಾಲ್ ಹೇಳಿರುವುದಾಗಿ ‘ದಿ ಕ್ವಿಂಟ್‌’ ವರದಿ ಮಾಡಿದೆ.

ಅಂಗನವಾಡಿಯಲ್ಲಿ ಮಿಲನಾ ಬಾಯಿ ಇರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಮರಾಠಾ ವ್ಯಕ್ತಿ ಸಿದ್ದರಾಮ ಮುಳೆ, “ಸಹಾಯಕಿ ಹುದ್ದೆಯಿಂದ ನಿವೃತ್ತರಾದವರು ಸಾಮಾನ್ಯ ವರ್ಗದವರು. ಈಗ ಆ ಹುದ್ದೆಯನ್ನು ಎಸ್‌ಸಿ ಸಮುದಾಯದ ವ್ಯಕ್ತಿಗೆ ನೀಡಲಾಗಿದೆ. ಇದು ಸರಿಯಲ್ಲ, ನಾವು ಇದಕ್ಕೆ ಅವಕಾಶ ನೀಡುವುದಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

“ಮಿಲನಾ ಬಾಯಿಯವರನ್ನು ಬದಲಿಸಿ, ನಾವು ಯಾರನ್ನೂ ನೇಮಿಸಿಲ್ಲ. ಸಿಡಿಪಿಒ (ಮಕ್ಕಳ ಅಭಿವೃದ್ಧಿ ರಕ್ಷಣಾ ಅಧಿಕಾರಿ) ಸಹಾಯಕರ ಕೊರತೆಯಿದೆ ಎಂದು ಹೇಳಿದಾಗ, ನಾವು ನಮ್ಮ ಸಮುದಾಯದ ಕೆಲವು ಮಹಿಳೆಯರನ್ನು ಕಳುಹಿಸಿದ್ದೇವೆ” ಎಂದು ಸಮರ್ಥಿಸಿಕೊಂಡಿದ್ದಾರೆ ಸಿದ್ದರಾಮ ಮುಳೆ.

ಹತ್ಯಾಳ್‌ನಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ, “ಗ್ರಾಮಸ್ಥರಿಗೆ ಸಹಾಯಕಿಯ ಜಾತಿಯಿಂದ ಯಾವುದೇ ಸಮಸ್ಯೆ ಇಲ್ಲ. ಆದರೆ ಸಾಮಾನ್ಯ ವರ್ಗದ ಜನರಿಗೆ ಪ್ರಾತಿನಿಧ್ಯ ಬೇಕು ಎನ್ನುತ್ತಿದ್ದಾರೆ” ಎಂದಿದ್ದಾರೆ.

ಅದೇ ಇಲಾಖೆಯ ಅಧಿಕಾರಿಯೊಬ್ಬರು ಹೆಸರು ಹೇಳಲಿಚ್ಛಿಸದೆ ಪ್ರತಿಕ್ರಿಯಿಸಿದ್ದು, “ದಲಿತ ಮಹಿಳೆ ಅಡುಗೆ ಮಾಡುವುದನ್ನು ಗ್ರಾಮದ ಸವರ್ಣೀಯರು ಒಪ್ಪಲಿಲ್ಲ. ತಮ್ಮ ಜಾತಿಯ ಸಹಾಯಕಿಯನ್ನು ಬಯಸಿದ್ದರು. ಒಂದು ವರ್ಷದಿಂದ ದಲಿತ ಮಹಿಳೆ ಅಂಗನವಾಡಿ ಸಹಾಯಕಿಯಾಗಿದ್ದಾರೆ” ಎಂದು ತಿಳಿಸಿದ್ದಾರೆ.

“ಪಕ್ಕದ ಗ್ರಾಮ ಸಿರ್ಗಾಪುರಕ್ಕೆ ಸ್ವಯಂಪ್ರೇರಿತವಾಗಿ ವರ್ಗಾವಣೆ ಮಾಡಿಕೊಳ್ಳುವಂತೆ ಸಿಡಿಪಿಒ ಕಚೇರಿಯಿಂದ  ತಿಳಿಸಲಾಗುತ್ತಿದೆ” ಎಂದು ಮಿಲನಾ ಬಾಯಿ ಮತ್ತು ಅವರ ಕುಟುಂಬದವರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ಸಿಡಿಪಿಒ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಪದೇ ಪದೇ ದೂರು ನೀಡಿದ ನಂತರ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಮಿಲನಾ ಬಾಯಿ ಅಂಗನವಾಡಿಯಲ್ಲಿ ಕೆಲಸ ಮುಂದುವರಿಸಬಹುದು ಎಂದು ಭರವಸೆ ನೀಡಿದ್ದಾರೆ. ಆದರೆ, ಕೆಲವು ಮೇಲ್ಜಾತಿಯವರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಹತ್ಯಾಲ್‌ನ ದಲಿತ ರಾಪರ್ ಸಂಗೀತಗಾರ ಹರೀಶ್ ಕಾಂಬಳೆ ಪ್ರತಿಕ್ರಿಯಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಹರೀಶ್‌ ಕಾಂಬಳೆ, “ಇದು ಜಾತಿ ಆಧಾರಿತ ಸಮಸ್ಯೆಯೇ ಹೊರತು, ಪ್ರಾತಿನಿಧ್ಯಕ್ಕೆ ಸಂಬಂಧಿಸಿಲ್ಲ. ತಮ್ಮ ಸಮುದಾಯದ ಪ್ರಾತಿನಿಧ್ಯ ಬೇಕಾದರೆ ಶಾಸನ ರೂಪಿಸಲು ಒತ್ತಾಯಿಸಲಿ. ನಮ್ಮದೇನೂ ತಕರಾರಿಲ್ಲ. ಆದರೆ ಇಲ್ಲಿ ಅಸ್ಪೃಶ್ಯತೆ ಆಚರಣೆಯಾಗಿದೆ. ದಲಿತ ಸಹಾಯಕಿಗೆ ಅಸಹಕಾರ ತೋರಲಾಗಿದೆ” ಎಂದರು.

ಮಿಲನಾ ಬಾಯಿ ಅವರ ಪತಿ ಜೈಪಾಲ್ ರಾಣೆ ‘ನಾನುಗೌರಿ.ಕಾಂ’ ಪ್ರತಿಕ್ರಿಯಿಸಿ, “ಅಧಿಕಾರಿಗಳು ಭೇಟಿ ನೀಡಿದ್ದರು. ದಲಿತ ಮಹಿಳೆಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ಸೂಚನೆ ನೀಡಿದ್ದಾರೆ. ಸುಮಾರು ಆರು ತಿಂಗಳಿಂದ ಅಸಹಕಾರ ತೋರಿದ್ದರು” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...