Homeಕರ್ನಾಟಕಬಸವ ಕಲ್ಯಾಣ: ಅಂಗನವಾಡಿಯ ದಲಿತ ಸಹಾಯಕಿಗೆ ಸವರ್ಣೀಯರ ಅಸಹಕಾರ

ಬಸವ ಕಲ್ಯಾಣ: ಅಂಗನವಾಡಿಯ ದಲಿತ ಸಹಾಯಕಿಗೆ ಸವರ್ಣೀಯರ ಅಸಹಕಾರ

- Advertisement -
- Advertisement -

ಅಂಗನವಾಡಿ ಸಹಾಯಕಿ ದಲಿತರಾದ ಕಾರಣಕ್ಕೆ ಸವರ್ಣೀಯರು ಅಸಹಕಾರ ತೋರಿರುವ ಘಟನೆ ಬೀದರ್‌ನ ಬಸವಕಲ್ಯಾಣದ ಹತ್ಯಾಳ್‌ ಗ್ರಾಮದಲ್ಲಿ ನಡೆದಿದೆ.

30 ವರ್ಷದ ದಲಿತ ಮಹಿಳೆ ಮಿಲನಾ ಬಾಯಿ ಅವರನ್ನು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿತು. 10 ಜೂನ್ 2021ರಂದು ನೇಮಕಾತಿ ದೃಢೀಕರಣ ದೊರೆಕಿತು. ಅಂಗನವಾಡಿ ಆವರಣದ ನಿರ್ವಹಣೆ ಹಾಗೂ ಅಡುಗೆ ಮಾಡುವ ನಿರೀಕ್ಷೆಯಲ್ಲಿದ್ದ ಮಿಲನಾ ಅವರಿಗೆ ಆಘಾತ ಕಾದಿತ್ತು.

ಮಿಲನಾ ಅವರಿಗೆ ನೇಮಕಾತಿ ದೊರೆತ ಸಮಯದಲ್ಲಿ ಕೋವಿಡ್‌ ಸಮಸ್ಯೆ ಬಿಗಡಾಯಿಸಿದ್ದರಿಂದ ಶಾಲೆಗಳು ಮುಚ್ಚಿದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೂನ್ 4, 2022ರಂದು ಮತ್ತೆ ಶಾಲೆಗಳು ತೆರೆದಾಗ ದಲಿತ ಸಹಾಯಕಿ ಅಂಗನವಾಡಿಗೆ ಪ್ರವೇಶಿಸದಂತೆ ಗ್ರಾಮದ ಮರಾಠರು ಹಾಗೂ ಇತರ ಸವರ್ಣೀಯರು ತಡೆದರು ಎಂಬ ಆರೋಪಗಳಿವೆ. ಮಿಲನಾ ಬಾಯಿ ಅವರ ಜಾತಿ ಕಾರಣಕ್ಕಾಗಿ ಸ್ಥಳೀಯ ಗ್ರಾಮಸ್ಥರು ತಮ್ಮದೇ ಮರಾಠ ಜಾತಿಯ ಸ್ವಯಂ ಸೇವಕಿಯನ್ನು ಅಂಗನವಾಡಿಯಲ್ಲಿ ಅಡುಗೆ ಮಾಡಲು ನೇಮಿಸಿಕೊಂಡರು. 10 ಕಿ.ಮೀ. ದೂರದಲ್ಲಿರುವ ಪಕ್ಕದ ಸಿರ್ಗಾಪುರ ಗ್ರಾಮಕ್ಕೆ ವರ್ಗಾವಣೆಯಾಗುವಂತೆ ಮಿಲನಾ ಬಾಯಿಯವರಿಗೆ ಮನವಿ ಮಾಡಿದ್ದರು ಎಂಬ ದೂರುಗಳು ಬಂದವು.

ಮಿಲನಾ ಬಾಯಿ ಅವರ ಪತಿ ಜೈಪಾಲ್ ರಾಣೆಯವರು ಇತ್ತೀಚೆಗೆ ಪ್ರತಿಕ್ರಿಯೆ ನೀಡಿ, “ನಮ್ಮ ಗ್ರಾಮದಲ್ಲಿ ಮೂರು ಅಂಗನವಾಡಿಗಳಿವೆ. ನನ್ನ ಹೆಂಡತಿಯನ್ನು ಮೆರಿಟ್ (ಸಾಮಾನ್ಯ ವರ್ಗ) ಆಧಾರದ ಮೇಲೆ ಶಾಲೆಯೊಂದರಲ್ಲಿ ಸಹಾಯಕಿಯಾಗಿ ನೇಮಿಸಲಾಗಿದೆ. ಈ ಅಂಗನವಾಡಿ ಭಾಗದಲ್ಲಿ ಸವರ್ಣೀಯರು ಹೆಚ್ಚಿದ್ದಾರೆ. ಸವರ್ಣೀಯರು ನನ್ನ ಹೆಂಡತಿಗೆ ಅಂಗನವಾಡಿಯಲ್ಲಿ ಕೆಲಸ ಮಾಡಲು, ಅಡುಗೆ ಮಾಡಲು ಅವಕಾಶ ನೀಡಲಿಲ್ಲ” ಎಂದು ದೂರಿದ್ದರು.

ಕೋವಿಡ್ ಸಂದರ್ಭದಲ್ಲಿಯೂ ಸವರ್ಣೀಯರು ದಲಿತ ಕಾರ್ಯಕರ್ತೆಯನ್ನು ಅವಮಾನಿಸಿದ್ದಾರೆ ಎಂದು ಮಿಲನಾ ಬಾಯಿ ಅವರ ಕುಟುಂಬದ ಆಪ್ತ ಮೂಲಗಳು ಆರೋಪಿಸಿವೆ. ಲಾಕ್‌ಡೌನ್ ಸಮಯದಲ್ಲಿ ದಿನಸಿ ವಿತರಣೆ ಕಾರ್ಯದಲ್ಲಿ ಮಿಲನಾ ಬಾಯಿ ಕಾರ್ಯಪ್ರವೃತ್ತರಾಗಿದ್ದರು.

“ನನ್ನ ಪತ್ನಿ ನೇಮಕವಾದಾಗಿನಿಂದ ನಿಯಮಿತವಾಗಿ 5000 ರೂ. ವೇತನ ಪಡೆಯುತ್ತಿದ್ದಾರೆ. ಆದರೆ, ಅವರು ಅಂಗನವಾಡಿಯಲ್ಲಿ ಕೆಲಸ ಮಾಡುವುದಕ್ಕೆ ತೀವ್ರ ವಿರೋಧವಿದೆ. ಎರಡು ವಾರಗಳಿಂದ ಸವರ್ಣೀಯ ಹಿಂದೂ ಸಮುದಾಯದ ಇನ್ನೊಬ್ಬ ಸಹಾಯಕಿ ಅಂಗನವಾಡಿಯಲ್ಲಿ ಅಡುಗೆ ಮಾಡುತ್ತಿದ್ದಾರೆ” ಎಂದು ಜೈಪಾಲ್ ಹೇಳಿರುವುದಾಗಿ ‘ದಿ ಕ್ವಿಂಟ್‌’ ವರದಿ ಮಾಡಿದೆ.

ಅಂಗನವಾಡಿಯಲ್ಲಿ ಮಿಲನಾ ಬಾಯಿ ಇರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಮರಾಠಾ ವ್ಯಕ್ತಿ ಸಿದ್ದರಾಮ ಮುಳೆ, “ಸಹಾಯಕಿ ಹುದ್ದೆಯಿಂದ ನಿವೃತ್ತರಾದವರು ಸಾಮಾನ್ಯ ವರ್ಗದವರು. ಈಗ ಆ ಹುದ್ದೆಯನ್ನು ಎಸ್‌ಸಿ ಸಮುದಾಯದ ವ್ಯಕ್ತಿಗೆ ನೀಡಲಾಗಿದೆ. ಇದು ಸರಿಯಲ್ಲ, ನಾವು ಇದಕ್ಕೆ ಅವಕಾಶ ನೀಡುವುದಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

“ಮಿಲನಾ ಬಾಯಿಯವರನ್ನು ಬದಲಿಸಿ, ನಾವು ಯಾರನ್ನೂ ನೇಮಿಸಿಲ್ಲ. ಸಿಡಿಪಿಒ (ಮಕ್ಕಳ ಅಭಿವೃದ್ಧಿ ರಕ್ಷಣಾ ಅಧಿಕಾರಿ) ಸಹಾಯಕರ ಕೊರತೆಯಿದೆ ಎಂದು ಹೇಳಿದಾಗ, ನಾವು ನಮ್ಮ ಸಮುದಾಯದ ಕೆಲವು ಮಹಿಳೆಯರನ್ನು ಕಳುಹಿಸಿದ್ದೇವೆ” ಎಂದು ಸಮರ್ಥಿಸಿಕೊಂಡಿದ್ದಾರೆ ಸಿದ್ದರಾಮ ಮುಳೆ.

ಹತ್ಯಾಳ್‌ನಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ, “ಗ್ರಾಮಸ್ಥರಿಗೆ ಸಹಾಯಕಿಯ ಜಾತಿಯಿಂದ ಯಾವುದೇ ಸಮಸ್ಯೆ ಇಲ್ಲ. ಆದರೆ ಸಾಮಾನ್ಯ ವರ್ಗದ ಜನರಿಗೆ ಪ್ರಾತಿನಿಧ್ಯ ಬೇಕು ಎನ್ನುತ್ತಿದ್ದಾರೆ” ಎಂದಿದ್ದಾರೆ.

ಅದೇ ಇಲಾಖೆಯ ಅಧಿಕಾರಿಯೊಬ್ಬರು ಹೆಸರು ಹೇಳಲಿಚ್ಛಿಸದೆ ಪ್ರತಿಕ್ರಿಯಿಸಿದ್ದು, “ದಲಿತ ಮಹಿಳೆ ಅಡುಗೆ ಮಾಡುವುದನ್ನು ಗ್ರಾಮದ ಸವರ್ಣೀಯರು ಒಪ್ಪಲಿಲ್ಲ. ತಮ್ಮ ಜಾತಿಯ ಸಹಾಯಕಿಯನ್ನು ಬಯಸಿದ್ದರು. ಒಂದು ವರ್ಷದಿಂದ ದಲಿತ ಮಹಿಳೆ ಅಂಗನವಾಡಿ ಸಹಾಯಕಿಯಾಗಿದ್ದಾರೆ” ಎಂದು ತಿಳಿಸಿದ್ದಾರೆ.

“ಪಕ್ಕದ ಗ್ರಾಮ ಸಿರ್ಗಾಪುರಕ್ಕೆ ಸ್ವಯಂಪ್ರೇರಿತವಾಗಿ ವರ್ಗಾವಣೆ ಮಾಡಿಕೊಳ್ಳುವಂತೆ ಸಿಡಿಪಿಒ ಕಚೇರಿಯಿಂದ  ತಿಳಿಸಲಾಗುತ್ತಿದೆ” ಎಂದು ಮಿಲನಾ ಬಾಯಿ ಮತ್ತು ಅವರ ಕುಟುಂಬದವರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ಸಿಡಿಪಿಒ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಪದೇ ಪದೇ ದೂರು ನೀಡಿದ ನಂತರ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಮಿಲನಾ ಬಾಯಿ ಅಂಗನವಾಡಿಯಲ್ಲಿ ಕೆಲಸ ಮುಂದುವರಿಸಬಹುದು ಎಂದು ಭರವಸೆ ನೀಡಿದ್ದಾರೆ. ಆದರೆ, ಕೆಲವು ಮೇಲ್ಜಾತಿಯವರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಹತ್ಯಾಲ್‌ನ ದಲಿತ ರಾಪರ್ ಸಂಗೀತಗಾರ ಹರೀಶ್ ಕಾಂಬಳೆ ಪ್ರತಿಕ್ರಿಯಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಹರೀಶ್‌ ಕಾಂಬಳೆ, “ಇದು ಜಾತಿ ಆಧಾರಿತ ಸಮಸ್ಯೆಯೇ ಹೊರತು, ಪ್ರಾತಿನಿಧ್ಯಕ್ಕೆ ಸಂಬಂಧಿಸಿಲ್ಲ. ತಮ್ಮ ಸಮುದಾಯದ ಪ್ರಾತಿನಿಧ್ಯ ಬೇಕಾದರೆ ಶಾಸನ ರೂಪಿಸಲು ಒತ್ತಾಯಿಸಲಿ. ನಮ್ಮದೇನೂ ತಕರಾರಿಲ್ಲ. ಆದರೆ ಇಲ್ಲಿ ಅಸ್ಪೃಶ್ಯತೆ ಆಚರಣೆಯಾಗಿದೆ. ದಲಿತ ಸಹಾಯಕಿಗೆ ಅಸಹಕಾರ ತೋರಲಾಗಿದೆ” ಎಂದರು.

ಮಿಲನಾ ಬಾಯಿ ಅವರ ಪತಿ ಜೈಪಾಲ್ ರಾಣೆ ‘ನಾನುಗೌರಿ.ಕಾಂ’ ಪ್ರತಿಕ್ರಿಯಿಸಿ, “ಅಧಿಕಾರಿಗಳು ಭೇಟಿ ನೀಡಿದ್ದರು. ದಲಿತ ಮಹಿಳೆಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ಸೂಚನೆ ನೀಡಿದ್ದಾರೆ. ಸುಮಾರು ಆರು ತಿಂಗಳಿಂದ ಅಸಹಕಾರ ತೋರಿದ್ದರು” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಕ್ರಿಯೆಯು ಅತ್ಯಂತ ವೇಗ ಪಡೆದುಕೊಂಡಿದೆ. ಇತ್ತೀಚಿನ ಬೆಳವಣಿಗೆಗಳು ರಾಜ್ಯದ ರಾಜಕೀಯ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿವೆ. ಕೇಂದ್ರ ಗೃಹ ಸಚಿವಾಲಯವು...

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...