Homeಕರ್ನಾಟಕಬಸವ ಕಲ್ಯಾಣ: ಅಂಗನವಾಡಿಯ ದಲಿತ ಸಹಾಯಕಿಗೆ ಸವರ್ಣೀಯರ ಅಸಹಕಾರ

ಬಸವ ಕಲ್ಯಾಣ: ಅಂಗನವಾಡಿಯ ದಲಿತ ಸಹಾಯಕಿಗೆ ಸವರ್ಣೀಯರ ಅಸಹಕಾರ

- Advertisement -
- Advertisement -

ಅಂಗನವಾಡಿ ಸಹಾಯಕಿ ದಲಿತರಾದ ಕಾರಣಕ್ಕೆ ಸವರ್ಣೀಯರು ಅಸಹಕಾರ ತೋರಿರುವ ಘಟನೆ ಬೀದರ್‌ನ ಬಸವಕಲ್ಯಾಣದ ಹತ್ಯಾಳ್‌ ಗ್ರಾಮದಲ್ಲಿ ನಡೆದಿದೆ.

30 ವರ್ಷದ ದಲಿತ ಮಹಿಳೆ ಮಿಲನಾ ಬಾಯಿ ಅವರನ್ನು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿತು. 10 ಜೂನ್ 2021ರಂದು ನೇಮಕಾತಿ ದೃಢೀಕರಣ ದೊರೆಕಿತು. ಅಂಗನವಾಡಿ ಆವರಣದ ನಿರ್ವಹಣೆ ಹಾಗೂ ಅಡುಗೆ ಮಾಡುವ ನಿರೀಕ್ಷೆಯಲ್ಲಿದ್ದ ಮಿಲನಾ ಅವರಿಗೆ ಆಘಾತ ಕಾದಿತ್ತು.

ಮಿಲನಾ ಅವರಿಗೆ ನೇಮಕಾತಿ ದೊರೆತ ಸಮಯದಲ್ಲಿ ಕೋವಿಡ್‌ ಸಮಸ್ಯೆ ಬಿಗಡಾಯಿಸಿದ್ದರಿಂದ ಶಾಲೆಗಳು ಮುಚ್ಚಿದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೂನ್ 4, 2022ರಂದು ಮತ್ತೆ ಶಾಲೆಗಳು ತೆರೆದಾಗ ದಲಿತ ಸಹಾಯಕಿ ಅಂಗನವಾಡಿಗೆ ಪ್ರವೇಶಿಸದಂತೆ ಗ್ರಾಮದ ಮರಾಠರು ಹಾಗೂ ಇತರ ಸವರ್ಣೀಯರು ತಡೆದರು ಎಂಬ ಆರೋಪಗಳಿವೆ. ಮಿಲನಾ ಬಾಯಿ ಅವರ ಜಾತಿ ಕಾರಣಕ್ಕಾಗಿ ಸ್ಥಳೀಯ ಗ್ರಾಮಸ್ಥರು ತಮ್ಮದೇ ಮರಾಠ ಜಾತಿಯ ಸ್ವಯಂ ಸೇವಕಿಯನ್ನು ಅಂಗನವಾಡಿಯಲ್ಲಿ ಅಡುಗೆ ಮಾಡಲು ನೇಮಿಸಿಕೊಂಡರು. 10 ಕಿ.ಮೀ. ದೂರದಲ್ಲಿರುವ ಪಕ್ಕದ ಸಿರ್ಗಾಪುರ ಗ್ರಾಮಕ್ಕೆ ವರ್ಗಾವಣೆಯಾಗುವಂತೆ ಮಿಲನಾ ಬಾಯಿಯವರಿಗೆ ಮನವಿ ಮಾಡಿದ್ದರು ಎಂಬ ದೂರುಗಳು ಬಂದವು.

ಮಿಲನಾ ಬಾಯಿ ಅವರ ಪತಿ ಜೈಪಾಲ್ ರಾಣೆಯವರು ಇತ್ತೀಚೆಗೆ ಪ್ರತಿಕ್ರಿಯೆ ನೀಡಿ, “ನಮ್ಮ ಗ್ರಾಮದಲ್ಲಿ ಮೂರು ಅಂಗನವಾಡಿಗಳಿವೆ. ನನ್ನ ಹೆಂಡತಿಯನ್ನು ಮೆರಿಟ್ (ಸಾಮಾನ್ಯ ವರ್ಗ) ಆಧಾರದ ಮೇಲೆ ಶಾಲೆಯೊಂದರಲ್ಲಿ ಸಹಾಯಕಿಯಾಗಿ ನೇಮಿಸಲಾಗಿದೆ. ಈ ಅಂಗನವಾಡಿ ಭಾಗದಲ್ಲಿ ಸವರ್ಣೀಯರು ಹೆಚ್ಚಿದ್ದಾರೆ. ಸವರ್ಣೀಯರು ನನ್ನ ಹೆಂಡತಿಗೆ ಅಂಗನವಾಡಿಯಲ್ಲಿ ಕೆಲಸ ಮಾಡಲು, ಅಡುಗೆ ಮಾಡಲು ಅವಕಾಶ ನೀಡಲಿಲ್ಲ” ಎಂದು ದೂರಿದ್ದರು.

ಕೋವಿಡ್ ಸಂದರ್ಭದಲ್ಲಿಯೂ ಸವರ್ಣೀಯರು ದಲಿತ ಕಾರ್ಯಕರ್ತೆಯನ್ನು ಅವಮಾನಿಸಿದ್ದಾರೆ ಎಂದು ಮಿಲನಾ ಬಾಯಿ ಅವರ ಕುಟುಂಬದ ಆಪ್ತ ಮೂಲಗಳು ಆರೋಪಿಸಿವೆ. ಲಾಕ್‌ಡೌನ್ ಸಮಯದಲ್ಲಿ ದಿನಸಿ ವಿತರಣೆ ಕಾರ್ಯದಲ್ಲಿ ಮಿಲನಾ ಬಾಯಿ ಕಾರ್ಯಪ್ರವೃತ್ತರಾಗಿದ್ದರು.

“ನನ್ನ ಪತ್ನಿ ನೇಮಕವಾದಾಗಿನಿಂದ ನಿಯಮಿತವಾಗಿ 5000 ರೂ. ವೇತನ ಪಡೆಯುತ್ತಿದ್ದಾರೆ. ಆದರೆ, ಅವರು ಅಂಗನವಾಡಿಯಲ್ಲಿ ಕೆಲಸ ಮಾಡುವುದಕ್ಕೆ ತೀವ್ರ ವಿರೋಧವಿದೆ. ಎರಡು ವಾರಗಳಿಂದ ಸವರ್ಣೀಯ ಹಿಂದೂ ಸಮುದಾಯದ ಇನ್ನೊಬ್ಬ ಸಹಾಯಕಿ ಅಂಗನವಾಡಿಯಲ್ಲಿ ಅಡುಗೆ ಮಾಡುತ್ತಿದ್ದಾರೆ” ಎಂದು ಜೈಪಾಲ್ ಹೇಳಿರುವುದಾಗಿ ‘ದಿ ಕ್ವಿಂಟ್‌’ ವರದಿ ಮಾಡಿದೆ.

ಅಂಗನವಾಡಿಯಲ್ಲಿ ಮಿಲನಾ ಬಾಯಿ ಇರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಮರಾಠಾ ವ್ಯಕ್ತಿ ಸಿದ್ದರಾಮ ಮುಳೆ, “ಸಹಾಯಕಿ ಹುದ್ದೆಯಿಂದ ನಿವೃತ್ತರಾದವರು ಸಾಮಾನ್ಯ ವರ್ಗದವರು. ಈಗ ಆ ಹುದ್ದೆಯನ್ನು ಎಸ್‌ಸಿ ಸಮುದಾಯದ ವ್ಯಕ್ತಿಗೆ ನೀಡಲಾಗಿದೆ. ಇದು ಸರಿಯಲ್ಲ, ನಾವು ಇದಕ್ಕೆ ಅವಕಾಶ ನೀಡುವುದಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

“ಮಿಲನಾ ಬಾಯಿಯವರನ್ನು ಬದಲಿಸಿ, ನಾವು ಯಾರನ್ನೂ ನೇಮಿಸಿಲ್ಲ. ಸಿಡಿಪಿಒ (ಮಕ್ಕಳ ಅಭಿವೃದ್ಧಿ ರಕ್ಷಣಾ ಅಧಿಕಾರಿ) ಸಹಾಯಕರ ಕೊರತೆಯಿದೆ ಎಂದು ಹೇಳಿದಾಗ, ನಾವು ನಮ್ಮ ಸಮುದಾಯದ ಕೆಲವು ಮಹಿಳೆಯರನ್ನು ಕಳುಹಿಸಿದ್ದೇವೆ” ಎಂದು ಸಮರ್ಥಿಸಿಕೊಂಡಿದ್ದಾರೆ ಸಿದ್ದರಾಮ ಮುಳೆ.

ಹತ್ಯಾಳ್‌ನಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ, “ಗ್ರಾಮಸ್ಥರಿಗೆ ಸಹಾಯಕಿಯ ಜಾತಿಯಿಂದ ಯಾವುದೇ ಸಮಸ್ಯೆ ಇಲ್ಲ. ಆದರೆ ಸಾಮಾನ್ಯ ವರ್ಗದ ಜನರಿಗೆ ಪ್ರಾತಿನಿಧ್ಯ ಬೇಕು ಎನ್ನುತ್ತಿದ್ದಾರೆ” ಎಂದಿದ್ದಾರೆ.

ಅದೇ ಇಲಾಖೆಯ ಅಧಿಕಾರಿಯೊಬ್ಬರು ಹೆಸರು ಹೇಳಲಿಚ್ಛಿಸದೆ ಪ್ರತಿಕ್ರಿಯಿಸಿದ್ದು, “ದಲಿತ ಮಹಿಳೆ ಅಡುಗೆ ಮಾಡುವುದನ್ನು ಗ್ರಾಮದ ಸವರ್ಣೀಯರು ಒಪ್ಪಲಿಲ್ಲ. ತಮ್ಮ ಜಾತಿಯ ಸಹಾಯಕಿಯನ್ನು ಬಯಸಿದ್ದರು. ಒಂದು ವರ್ಷದಿಂದ ದಲಿತ ಮಹಿಳೆ ಅಂಗನವಾಡಿ ಸಹಾಯಕಿಯಾಗಿದ್ದಾರೆ” ಎಂದು ತಿಳಿಸಿದ್ದಾರೆ.

“ಪಕ್ಕದ ಗ್ರಾಮ ಸಿರ್ಗಾಪುರಕ್ಕೆ ಸ್ವಯಂಪ್ರೇರಿತವಾಗಿ ವರ್ಗಾವಣೆ ಮಾಡಿಕೊಳ್ಳುವಂತೆ ಸಿಡಿಪಿಒ ಕಚೇರಿಯಿಂದ  ತಿಳಿಸಲಾಗುತ್ತಿದೆ” ಎಂದು ಮಿಲನಾ ಬಾಯಿ ಮತ್ತು ಅವರ ಕುಟುಂಬದವರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ಸಿಡಿಪಿಒ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಪದೇ ಪದೇ ದೂರು ನೀಡಿದ ನಂತರ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಮಿಲನಾ ಬಾಯಿ ಅಂಗನವಾಡಿಯಲ್ಲಿ ಕೆಲಸ ಮುಂದುವರಿಸಬಹುದು ಎಂದು ಭರವಸೆ ನೀಡಿದ್ದಾರೆ. ಆದರೆ, ಕೆಲವು ಮೇಲ್ಜಾತಿಯವರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಹತ್ಯಾಲ್‌ನ ದಲಿತ ರಾಪರ್ ಸಂಗೀತಗಾರ ಹರೀಶ್ ಕಾಂಬಳೆ ಪ್ರತಿಕ್ರಿಯಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಹರೀಶ್‌ ಕಾಂಬಳೆ, “ಇದು ಜಾತಿ ಆಧಾರಿತ ಸಮಸ್ಯೆಯೇ ಹೊರತು, ಪ್ರಾತಿನಿಧ್ಯಕ್ಕೆ ಸಂಬಂಧಿಸಿಲ್ಲ. ತಮ್ಮ ಸಮುದಾಯದ ಪ್ರಾತಿನಿಧ್ಯ ಬೇಕಾದರೆ ಶಾಸನ ರೂಪಿಸಲು ಒತ್ತಾಯಿಸಲಿ. ನಮ್ಮದೇನೂ ತಕರಾರಿಲ್ಲ. ಆದರೆ ಇಲ್ಲಿ ಅಸ್ಪೃಶ್ಯತೆ ಆಚರಣೆಯಾಗಿದೆ. ದಲಿತ ಸಹಾಯಕಿಗೆ ಅಸಹಕಾರ ತೋರಲಾಗಿದೆ” ಎಂದರು.

ಮಿಲನಾ ಬಾಯಿ ಅವರ ಪತಿ ಜೈಪಾಲ್ ರಾಣೆ ‘ನಾನುಗೌರಿ.ಕಾಂ’ ಪ್ರತಿಕ್ರಿಯಿಸಿ, “ಅಧಿಕಾರಿಗಳು ಭೇಟಿ ನೀಡಿದ್ದರು. ದಲಿತ ಮಹಿಳೆಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ಸೂಚನೆ ನೀಡಿದ್ದಾರೆ. ಸುಮಾರು ಆರು ತಿಂಗಳಿಂದ ಅಸಹಕಾರ ತೋರಿದ್ದರು” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...