Homeಕರ್ನಾಟಕಬಸವ ಕಲ್ಯಾಣ: ಅಂಗನವಾಡಿಯ ದಲಿತ ಸಹಾಯಕಿಗೆ ಸವರ್ಣೀಯರ ಅಸಹಕಾರ

ಬಸವ ಕಲ್ಯಾಣ: ಅಂಗನವಾಡಿಯ ದಲಿತ ಸಹಾಯಕಿಗೆ ಸವರ್ಣೀಯರ ಅಸಹಕಾರ

- Advertisement -
- Advertisement -

ಅಂಗನವಾಡಿ ಸಹಾಯಕಿ ದಲಿತರಾದ ಕಾರಣಕ್ಕೆ ಸವರ್ಣೀಯರು ಅಸಹಕಾರ ತೋರಿರುವ ಘಟನೆ ಬೀದರ್‌ನ ಬಸವಕಲ್ಯಾಣದ ಹತ್ಯಾಳ್‌ ಗ್ರಾಮದಲ್ಲಿ ನಡೆದಿದೆ.

30 ವರ್ಷದ ದಲಿತ ಮಹಿಳೆ ಮಿಲನಾ ಬಾಯಿ ಅವರನ್ನು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿತು. 10 ಜೂನ್ 2021ರಂದು ನೇಮಕಾತಿ ದೃಢೀಕರಣ ದೊರೆಕಿತು. ಅಂಗನವಾಡಿ ಆವರಣದ ನಿರ್ವಹಣೆ ಹಾಗೂ ಅಡುಗೆ ಮಾಡುವ ನಿರೀಕ್ಷೆಯಲ್ಲಿದ್ದ ಮಿಲನಾ ಅವರಿಗೆ ಆಘಾತ ಕಾದಿತ್ತು.

ಮಿಲನಾ ಅವರಿಗೆ ನೇಮಕಾತಿ ದೊರೆತ ಸಮಯದಲ್ಲಿ ಕೋವಿಡ್‌ ಸಮಸ್ಯೆ ಬಿಗಡಾಯಿಸಿದ್ದರಿಂದ ಶಾಲೆಗಳು ಮುಚ್ಚಿದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೂನ್ 4, 2022ರಂದು ಮತ್ತೆ ಶಾಲೆಗಳು ತೆರೆದಾಗ ದಲಿತ ಸಹಾಯಕಿ ಅಂಗನವಾಡಿಗೆ ಪ್ರವೇಶಿಸದಂತೆ ಗ್ರಾಮದ ಮರಾಠರು ಹಾಗೂ ಇತರ ಸವರ್ಣೀಯರು ತಡೆದರು ಎಂಬ ಆರೋಪಗಳಿವೆ. ಮಿಲನಾ ಬಾಯಿ ಅವರ ಜಾತಿ ಕಾರಣಕ್ಕಾಗಿ ಸ್ಥಳೀಯ ಗ್ರಾಮಸ್ಥರು ತಮ್ಮದೇ ಮರಾಠ ಜಾತಿಯ ಸ್ವಯಂ ಸೇವಕಿಯನ್ನು ಅಂಗನವಾಡಿಯಲ್ಲಿ ಅಡುಗೆ ಮಾಡಲು ನೇಮಿಸಿಕೊಂಡರು. 10 ಕಿ.ಮೀ. ದೂರದಲ್ಲಿರುವ ಪಕ್ಕದ ಸಿರ್ಗಾಪುರ ಗ್ರಾಮಕ್ಕೆ ವರ್ಗಾವಣೆಯಾಗುವಂತೆ ಮಿಲನಾ ಬಾಯಿಯವರಿಗೆ ಮನವಿ ಮಾಡಿದ್ದರು ಎಂಬ ದೂರುಗಳು ಬಂದವು.

ಮಿಲನಾ ಬಾಯಿ ಅವರ ಪತಿ ಜೈಪಾಲ್ ರಾಣೆಯವರು ಇತ್ತೀಚೆಗೆ ಪ್ರತಿಕ್ರಿಯೆ ನೀಡಿ, “ನಮ್ಮ ಗ್ರಾಮದಲ್ಲಿ ಮೂರು ಅಂಗನವಾಡಿಗಳಿವೆ. ನನ್ನ ಹೆಂಡತಿಯನ್ನು ಮೆರಿಟ್ (ಸಾಮಾನ್ಯ ವರ್ಗ) ಆಧಾರದ ಮೇಲೆ ಶಾಲೆಯೊಂದರಲ್ಲಿ ಸಹಾಯಕಿಯಾಗಿ ನೇಮಿಸಲಾಗಿದೆ. ಈ ಅಂಗನವಾಡಿ ಭಾಗದಲ್ಲಿ ಸವರ್ಣೀಯರು ಹೆಚ್ಚಿದ್ದಾರೆ. ಸವರ್ಣೀಯರು ನನ್ನ ಹೆಂಡತಿಗೆ ಅಂಗನವಾಡಿಯಲ್ಲಿ ಕೆಲಸ ಮಾಡಲು, ಅಡುಗೆ ಮಾಡಲು ಅವಕಾಶ ನೀಡಲಿಲ್ಲ” ಎಂದು ದೂರಿದ್ದರು.

ಕೋವಿಡ್ ಸಂದರ್ಭದಲ್ಲಿಯೂ ಸವರ್ಣೀಯರು ದಲಿತ ಕಾರ್ಯಕರ್ತೆಯನ್ನು ಅವಮಾನಿಸಿದ್ದಾರೆ ಎಂದು ಮಿಲನಾ ಬಾಯಿ ಅವರ ಕುಟುಂಬದ ಆಪ್ತ ಮೂಲಗಳು ಆರೋಪಿಸಿವೆ. ಲಾಕ್‌ಡೌನ್ ಸಮಯದಲ್ಲಿ ದಿನಸಿ ವಿತರಣೆ ಕಾರ್ಯದಲ್ಲಿ ಮಿಲನಾ ಬಾಯಿ ಕಾರ್ಯಪ್ರವೃತ್ತರಾಗಿದ್ದರು.

“ನನ್ನ ಪತ್ನಿ ನೇಮಕವಾದಾಗಿನಿಂದ ನಿಯಮಿತವಾಗಿ 5000 ರೂ. ವೇತನ ಪಡೆಯುತ್ತಿದ್ದಾರೆ. ಆದರೆ, ಅವರು ಅಂಗನವಾಡಿಯಲ್ಲಿ ಕೆಲಸ ಮಾಡುವುದಕ್ಕೆ ತೀವ್ರ ವಿರೋಧವಿದೆ. ಎರಡು ವಾರಗಳಿಂದ ಸವರ್ಣೀಯ ಹಿಂದೂ ಸಮುದಾಯದ ಇನ್ನೊಬ್ಬ ಸಹಾಯಕಿ ಅಂಗನವಾಡಿಯಲ್ಲಿ ಅಡುಗೆ ಮಾಡುತ್ತಿದ್ದಾರೆ” ಎಂದು ಜೈಪಾಲ್ ಹೇಳಿರುವುದಾಗಿ ‘ದಿ ಕ್ವಿಂಟ್‌’ ವರದಿ ಮಾಡಿದೆ.

ಅಂಗನವಾಡಿಯಲ್ಲಿ ಮಿಲನಾ ಬಾಯಿ ಇರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಮರಾಠಾ ವ್ಯಕ್ತಿ ಸಿದ್ದರಾಮ ಮುಳೆ, “ಸಹಾಯಕಿ ಹುದ್ದೆಯಿಂದ ನಿವೃತ್ತರಾದವರು ಸಾಮಾನ್ಯ ವರ್ಗದವರು. ಈಗ ಆ ಹುದ್ದೆಯನ್ನು ಎಸ್‌ಸಿ ಸಮುದಾಯದ ವ್ಯಕ್ತಿಗೆ ನೀಡಲಾಗಿದೆ. ಇದು ಸರಿಯಲ್ಲ, ನಾವು ಇದಕ್ಕೆ ಅವಕಾಶ ನೀಡುವುದಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

“ಮಿಲನಾ ಬಾಯಿಯವರನ್ನು ಬದಲಿಸಿ, ನಾವು ಯಾರನ್ನೂ ನೇಮಿಸಿಲ್ಲ. ಸಿಡಿಪಿಒ (ಮಕ್ಕಳ ಅಭಿವೃದ್ಧಿ ರಕ್ಷಣಾ ಅಧಿಕಾರಿ) ಸಹಾಯಕರ ಕೊರತೆಯಿದೆ ಎಂದು ಹೇಳಿದಾಗ, ನಾವು ನಮ್ಮ ಸಮುದಾಯದ ಕೆಲವು ಮಹಿಳೆಯರನ್ನು ಕಳುಹಿಸಿದ್ದೇವೆ” ಎಂದು ಸಮರ್ಥಿಸಿಕೊಂಡಿದ್ದಾರೆ ಸಿದ್ದರಾಮ ಮುಳೆ.

ಹತ್ಯಾಳ್‌ನಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ, “ಗ್ರಾಮಸ್ಥರಿಗೆ ಸಹಾಯಕಿಯ ಜಾತಿಯಿಂದ ಯಾವುದೇ ಸಮಸ್ಯೆ ಇಲ್ಲ. ಆದರೆ ಸಾಮಾನ್ಯ ವರ್ಗದ ಜನರಿಗೆ ಪ್ರಾತಿನಿಧ್ಯ ಬೇಕು ಎನ್ನುತ್ತಿದ್ದಾರೆ” ಎಂದಿದ್ದಾರೆ.

ಅದೇ ಇಲಾಖೆಯ ಅಧಿಕಾರಿಯೊಬ್ಬರು ಹೆಸರು ಹೇಳಲಿಚ್ಛಿಸದೆ ಪ್ರತಿಕ್ರಿಯಿಸಿದ್ದು, “ದಲಿತ ಮಹಿಳೆ ಅಡುಗೆ ಮಾಡುವುದನ್ನು ಗ್ರಾಮದ ಸವರ್ಣೀಯರು ಒಪ್ಪಲಿಲ್ಲ. ತಮ್ಮ ಜಾತಿಯ ಸಹಾಯಕಿಯನ್ನು ಬಯಸಿದ್ದರು. ಒಂದು ವರ್ಷದಿಂದ ದಲಿತ ಮಹಿಳೆ ಅಂಗನವಾಡಿ ಸಹಾಯಕಿಯಾಗಿದ್ದಾರೆ” ಎಂದು ತಿಳಿಸಿದ್ದಾರೆ.

“ಪಕ್ಕದ ಗ್ರಾಮ ಸಿರ್ಗಾಪುರಕ್ಕೆ ಸ್ವಯಂಪ್ರೇರಿತವಾಗಿ ವರ್ಗಾವಣೆ ಮಾಡಿಕೊಳ್ಳುವಂತೆ ಸಿಡಿಪಿಒ ಕಚೇರಿಯಿಂದ  ತಿಳಿಸಲಾಗುತ್ತಿದೆ” ಎಂದು ಮಿಲನಾ ಬಾಯಿ ಮತ್ತು ಅವರ ಕುಟುಂಬದವರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ಸಿಡಿಪಿಒ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಪದೇ ಪದೇ ದೂರು ನೀಡಿದ ನಂತರ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಮಿಲನಾ ಬಾಯಿ ಅಂಗನವಾಡಿಯಲ್ಲಿ ಕೆಲಸ ಮುಂದುವರಿಸಬಹುದು ಎಂದು ಭರವಸೆ ನೀಡಿದ್ದಾರೆ. ಆದರೆ, ಕೆಲವು ಮೇಲ್ಜಾತಿಯವರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಹತ್ಯಾಲ್‌ನ ದಲಿತ ರಾಪರ್ ಸಂಗೀತಗಾರ ಹರೀಶ್ ಕಾಂಬಳೆ ಪ್ರತಿಕ್ರಿಯಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಹರೀಶ್‌ ಕಾಂಬಳೆ, “ಇದು ಜಾತಿ ಆಧಾರಿತ ಸಮಸ್ಯೆಯೇ ಹೊರತು, ಪ್ರಾತಿನಿಧ್ಯಕ್ಕೆ ಸಂಬಂಧಿಸಿಲ್ಲ. ತಮ್ಮ ಸಮುದಾಯದ ಪ್ರಾತಿನಿಧ್ಯ ಬೇಕಾದರೆ ಶಾಸನ ರೂಪಿಸಲು ಒತ್ತಾಯಿಸಲಿ. ನಮ್ಮದೇನೂ ತಕರಾರಿಲ್ಲ. ಆದರೆ ಇಲ್ಲಿ ಅಸ್ಪೃಶ್ಯತೆ ಆಚರಣೆಯಾಗಿದೆ. ದಲಿತ ಸಹಾಯಕಿಗೆ ಅಸಹಕಾರ ತೋರಲಾಗಿದೆ” ಎಂದರು.

ಮಿಲನಾ ಬಾಯಿ ಅವರ ಪತಿ ಜೈಪಾಲ್ ರಾಣೆ ‘ನಾನುಗೌರಿ.ಕಾಂ’ ಪ್ರತಿಕ್ರಿಯಿಸಿ, “ಅಧಿಕಾರಿಗಳು ಭೇಟಿ ನೀಡಿದ್ದರು. ದಲಿತ ಮಹಿಳೆಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ಸೂಚನೆ ನೀಡಿದ್ದಾರೆ. ಸುಮಾರು ಆರು ತಿಂಗಳಿಂದ ಅಸಹಕಾರ ತೋರಿದ್ದರು” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...