Homeಕರ್ನಾಟಕಬಸವ ಕಲ್ಯಾಣ: ಅಂಗನವಾಡಿಯ ದಲಿತ ಸಹಾಯಕಿಗೆ ಸವರ್ಣೀಯರ ಅಸಹಕಾರ

ಬಸವ ಕಲ್ಯಾಣ: ಅಂಗನವಾಡಿಯ ದಲಿತ ಸಹಾಯಕಿಗೆ ಸವರ್ಣೀಯರ ಅಸಹಕಾರ

- Advertisement -
- Advertisement -

ಅಂಗನವಾಡಿ ಸಹಾಯಕಿ ದಲಿತರಾದ ಕಾರಣಕ್ಕೆ ಸವರ್ಣೀಯರು ಅಸಹಕಾರ ತೋರಿರುವ ಘಟನೆ ಬೀದರ್‌ನ ಬಸವಕಲ್ಯಾಣದ ಹತ್ಯಾಳ್‌ ಗ್ರಾಮದಲ್ಲಿ ನಡೆದಿದೆ.

30 ವರ್ಷದ ದಲಿತ ಮಹಿಳೆ ಮಿಲನಾ ಬಾಯಿ ಅವರನ್ನು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿತು. 10 ಜೂನ್ 2021ರಂದು ನೇಮಕಾತಿ ದೃಢೀಕರಣ ದೊರೆಕಿತು. ಅಂಗನವಾಡಿ ಆವರಣದ ನಿರ್ವಹಣೆ ಹಾಗೂ ಅಡುಗೆ ಮಾಡುವ ನಿರೀಕ್ಷೆಯಲ್ಲಿದ್ದ ಮಿಲನಾ ಅವರಿಗೆ ಆಘಾತ ಕಾದಿತ್ತು.

ಮಿಲನಾ ಅವರಿಗೆ ನೇಮಕಾತಿ ದೊರೆತ ಸಮಯದಲ್ಲಿ ಕೋವಿಡ್‌ ಸಮಸ್ಯೆ ಬಿಗಡಾಯಿಸಿದ್ದರಿಂದ ಶಾಲೆಗಳು ಮುಚ್ಚಿದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೂನ್ 4, 2022ರಂದು ಮತ್ತೆ ಶಾಲೆಗಳು ತೆರೆದಾಗ ದಲಿತ ಸಹಾಯಕಿ ಅಂಗನವಾಡಿಗೆ ಪ್ರವೇಶಿಸದಂತೆ ಗ್ರಾಮದ ಮರಾಠರು ಹಾಗೂ ಇತರ ಸವರ್ಣೀಯರು ತಡೆದರು ಎಂಬ ಆರೋಪಗಳಿವೆ. ಮಿಲನಾ ಬಾಯಿ ಅವರ ಜಾತಿ ಕಾರಣಕ್ಕಾಗಿ ಸ್ಥಳೀಯ ಗ್ರಾಮಸ್ಥರು ತಮ್ಮದೇ ಮರಾಠ ಜಾತಿಯ ಸ್ವಯಂ ಸೇವಕಿಯನ್ನು ಅಂಗನವಾಡಿಯಲ್ಲಿ ಅಡುಗೆ ಮಾಡಲು ನೇಮಿಸಿಕೊಂಡರು. 10 ಕಿ.ಮೀ. ದೂರದಲ್ಲಿರುವ ಪಕ್ಕದ ಸಿರ್ಗಾಪುರ ಗ್ರಾಮಕ್ಕೆ ವರ್ಗಾವಣೆಯಾಗುವಂತೆ ಮಿಲನಾ ಬಾಯಿಯವರಿಗೆ ಮನವಿ ಮಾಡಿದ್ದರು ಎಂಬ ದೂರುಗಳು ಬಂದವು.

ಮಿಲನಾ ಬಾಯಿ ಅವರ ಪತಿ ಜೈಪಾಲ್ ರಾಣೆಯವರು ಇತ್ತೀಚೆಗೆ ಪ್ರತಿಕ್ರಿಯೆ ನೀಡಿ, “ನಮ್ಮ ಗ್ರಾಮದಲ್ಲಿ ಮೂರು ಅಂಗನವಾಡಿಗಳಿವೆ. ನನ್ನ ಹೆಂಡತಿಯನ್ನು ಮೆರಿಟ್ (ಸಾಮಾನ್ಯ ವರ್ಗ) ಆಧಾರದ ಮೇಲೆ ಶಾಲೆಯೊಂದರಲ್ಲಿ ಸಹಾಯಕಿಯಾಗಿ ನೇಮಿಸಲಾಗಿದೆ. ಈ ಅಂಗನವಾಡಿ ಭಾಗದಲ್ಲಿ ಸವರ್ಣೀಯರು ಹೆಚ್ಚಿದ್ದಾರೆ. ಸವರ್ಣೀಯರು ನನ್ನ ಹೆಂಡತಿಗೆ ಅಂಗನವಾಡಿಯಲ್ಲಿ ಕೆಲಸ ಮಾಡಲು, ಅಡುಗೆ ಮಾಡಲು ಅವಕಾಶ ನೀಡಲಿಲ್ಲ” ಎಂದು ದೂರಿದ್ದರು.

ಕೋವಿಡ್ ಸಂದರ್ಭದಲ್ಲಿಯೂ ಸವರ್ಣೀಯರು ದಲಿತ ಕಾರ್ಯಕರ್ತೆಯನ್ನು ಅವಮಾನಿಸಿದ್ದಾರೆ ಎಂದು ಮಿಲನಾ ಬಾಯಿ ಅವರ ಕುಟುಂಬದ ಆಪ್ತ ಮೂಲಗಳು ಆರೋಪಿಸಿವೆ. ಲಾಕ್‌ಡೌನ್ ಸಮಯದಲ್ಲಿ ದಿನಸಿ ವಿತರಣೆ ಕಾರ್ಯದಲ್ಲಿ ಮಿಲನಾ ಬಾಯಿ ಕಾರ್ಯಪ್ರವೃತ್ತರಾಗಿದ್ದರು.

“ನನ್ನ ಪತ್ನಿ ನೇಮಕವಾದಾಗಿನಿಂದ ನಿಯಮಿತವಾಗಿ 5000 ರೂ. ವೇತನ ಪಡೆಯುತ್ತಿದ್ದಾರೆ. ಆದರೆ, ಅವರು ಅಂಗನವಾಡಿಯಲ್ಲಿ ಕೆಲಸ ಮಾಡುವುದಕ್ಕೆ ತೀವ್ರ ವಿರೋಧವಿದೆ. ಎರಡು ವಾರಗಳಿಂದ ಸವರ್ಣೀಯ ಹಿಂದೂ ಸಮುದಾಯದ ಇನ್ನೊಬ್ಬ ಸಹಾಯಕಿ ಅಂಗನವಾಡಿಯಲ್ಲಿ ಅಡುಗೆ ಮಾಡುತ್ತಿದ್ದಾರೆ” ಎಂದು ಜೈಪಾಲ್ ಹೇಳಿರುವುದಾಗಿ ‘ದಿ ಕ್ವಿಂಟ್‌’ ವರದಿ ಮಾಡಿದೆ.

ಅಂಗನವಾಡಿಯಲ್ಲಿ ಮಿಲನಾ ಬಾಯಿ ಇರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಮರಾಠಾ ವ್ಯಕ್ತಿ ಸಿದ್ದರಾಮ ಮುಳೆ, “ಸಹಾಯಕಿ ಹುದ್ದೆಯಿಂದ ನಿವೃತ್ತರಾದವರು ಸಾಮಾನ್ಯ ವರ್ಗದವರು. ಈಗ ಆ ಹುದ್ದೆಯನ್ನು ಎಸ್‌ಸಿ ಸಮುದಾಯದ ವ್ಯಕ್ತಿಗೆ ನೀಡಲಾಗಿದೆ. ಇದು ಸರಿಯಲ್ಲ, ನಾವು ಇದಕ್ಕೆ ಅವಕಾಶ ನೀಡುವುದಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

“ಮಿಲನಾ ಬಾಯಿಯವರನ್ನು ಬದಲಿಸಿ, ನಾವು ಯಾರನ್ನೂ ನೇಮಿಸಿಲ್ಲ. ಸಿಡಿಪಿಒ (ಮಕ್ಕಳ ಅಭಿವೃದ್ಧಿ ರಕ್ಷಣಾ ಅಧಿಕಾರಿ) ಸಹಾಯಕರ ಕೊರತೆಯಿದೆ ಎಂದು ಹೇಳಿದಾಗ, ನಾವು ನಮ್ಮ ಸಮುದಾಯದ ಕೆಲವು ಮಹಿಳೆಯರನ್ನು ಕಳುಹಿಸಿದ್ದೇವೆ” ಎಂದು ಸಮರ್ಥಿಸಿಕೊಂಡಿದ್ದಾರೆ ಸಿದ್ದರಾಮ ಮುಳೆ.

ಹತ್ಯಾಳ್‌ನಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ, “ಗ್ರಾಮಸ್ಥರಿಗೆ ಸಹಾಯಕಿಯ ಜಾತಿಯಿಂದ ಯಾವುದೇ ಸಮಸ್ಯೆ ಇಲ್ಲ. ಆದರೆ ಸಾಮಾನ್ಯ ವರ್ಗದ ಜನರಿಗೆ ಪ್ರಾತಿನಿಧ್ಯ ಬೇಕು ಎನ್ನುತ್ತಿದ್ದಾರೆ” ಎಂದಿದ್ದಾರೆ.

ಅದೇ ಇಲಾಖೆಯ ಅಧಿಕಾರಿಯೊಬ್ಬರು ಹೆಸರು ಹೇಳಲಿಚ್ಛಿಸದೆ ಪ್ರತಿಕ್ರಿಯಿಸಿದ್ದು, “ದಲಿತ ಮಹಿಳೆ ಅಡುಗೆ ಮಾಡುವುದನ್ನು ಗ್ರಾಮದ ಸವರ್ಣೀಯರು ಒಪ್ಪಲಿಲ್ಲ. ತಮ್ಮ ಜಾತಿಯ ಸಹಾಯಕಿಯನ್ನು ಬಯಸಿದ್ದರು. ಒಂದು ವರ್ಷದಿಂದ ದಲಿತ ಮಹಿಳೆ ಅಂಗನವಾಡಿ ಸಹಾಯಕಿಯಾಗಿದ್ದಾರೆ” ಎಂದು ತಿಳಿಸಿದ್ದಾರೆ.

“ಪಕ್ಕದ ಗ್ರಾಮ ಸಿರ್ಗಾಪುರಕ್ಕೆ ಸ್ವಯಂಪ್ರೇರಿತವಾಗಿ ವರ್ಗಾವಣೆ ಮಾಡಿಕೊಳ್ಳುವಂತೆ ಸಿಡಿಪಿಒ ಕಚೇರಿಯಿಂದ  ತಿಳಿಸಲಾಗುತ್ತಿದೆ” ಎಂದು ಮಿಲನಾ ಬಾಯಿ ಮತ್ತು ಅವರ ಕುಟುಂಬದವರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ಸಿಡಿಪಿಒ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಪದೇ ಪದೇ ದೂರು ನೀಡಿದ ನಂತರ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಮಿಲನಾ ಬಾಯಿ ಅಂಗನವಾಡಿಯಲ್ಲಿ ಕೆಲಸ ಮುಂದುವರಿಸಬಹುದು ಎಂದು ಭರವಸೆ ನೀಡಿದ್ದಾರೆ. ಆದರೆ, ಕೆಲವು ಮೇಲ್ಜಾತಿಯವರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಹತ್ಯಾಲ್‌ನ ದಲಿತ ರಾಪರ್ ಸಂಗೀತಗಾರ ಹರೀಶ್ ಕಾಂಬಳೆ ಪ್ರತಿಕ್ರಿಯಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಹರೀಶ್‌ ಕಾಂಬಳೆ, “ಇದು ಜಾತಿ ಆಧಾರಿತ ಸಮಸ್ಯೆಯೇ ಹೊರತು, ಪ್ರಾತಿನಿಧ್ಯಕ್ಕೆ ಸಂಬಂಧಿಸಿಲ್ಲ. ತಮ್ಮ ಸಮುದಾಯದ ಪ್ರಾತಿನಿಧ್ಯ ಬೇಕಾದರೆ ಶಾಸನ ರೂಪಿಸಲು ಒತ್ತಾಯಿಸಲಿ. ನಮ್ಮದೇನೂ ತಕರಾರಿಲ್ಲ. ಆದರೆ ಇಲ್ಲಿ ಅಸ್ಪೃಶ್ಯತೆ ಆಚರಣೆಯಾಗಿದೆ. ದಲಿತ ಸಹಾಯಕಿಗೆ ಅಸಹಕಾರ ತೋರಲಾಗಿದೆ” ಎಂದರು.

ಮಿಲನಾ ಬಾಯಿ ಅವರ ಪತಿ ಜೈಪಾಲ್ ರಾಣೆ ‘ನಾನುಗೌರಿ.ಕಾಂ’ ಪ್ರತಿಕ್ರಿಯಿಸಿ, “ಅಧಿಕಾರಿಗಳು ಭೇಟಿ ನೀಡಿದ್ದರು. ದಲಿತ ಮಹಿಳೆಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ಸೂಚನೆ ನೀಡಿದ್ದಾರೆ. ಸುಮಾರು ಆರು ತಿಂಗಳಿಂದ ಅಸಹಕಾರ ತೋರಿದ್ದರು” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....