Homeಕರ್ನಾಟಕಬಸವ ಕಲ್ಯಾಣ: ಅಂಗನವಾಡಿಯ ದಲಿತ ಸಹಾಯಕಿಗೆ ಸವರ್ಣೀಯರ ಅಸಹಕಾರ

ಬಸವ ಕಲ್ಯಾಣ: ಅಂಗನವಾಡಿಯ ದಲಿತ ಸಹಾಯಕಿಗೆ ಸವರ್ಣೀಯರ ಅಸಹಕಾರ

- Advertisement -
- Advertisement -

ಅಂಗನವಾಡಿ ಸಹಾಯಕಿ ದಲಿತರಾದ ಕಾರಣಕ್ಕೆ ಸವರ್ಣೀಯರು ಅಸಹಕಾರ ತೋರಿರುವ ಘಟನೆ ಬೀದರ್‌ನ ಬಸವಕಲ್ಯಾಣದ ಹತ್ಯಾಳ್‌ ಗ್ರಾಮದಲ್ಲಿ ನಡೆದಿದೆ.

30 ವರ್ಷದ ದಲಿತ ಮಹಿಳೆ ಮಿಲನಾ ಬಾಯಿ ಅವರನ್ನು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿತು. 10 ಜೂನ್ 2021ರಂದು ನೇಮಕಾತಿ ದೃಢೀಕರಣ ದೊರೆಕಿತು. ಅಂಗನವಾಡಿ ಆವರಣದ ನಿರ್ವಹಣೆ ಹಾಗೂ ಅಡುಗೆ ಮಾಡುವ ನಿರೀಕ್ಷೆಯಲ್ಲಿದ್ದ ಮಿಲನಾ ಅವರಿಗೆ ಆಘಾತ ಕಾದಿತ್ತು.

ಮಿಲನಾ ಅವರಿಗೆ ನೇಮಕಾತಿ ದೊರೆತ ಸಮಯದಲ್ಲಿ ಕೋವಿಡ್‌ ಸಮಸ್ಯೆ ಬಿಗಡಾಯಿಸಿದ್ದರಿಂದ ಶಾಲೆಗಳು ಮುಚ್ಚಿದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೂನ್ 4, 2022ರಂದು ಮತ್ತೆ ಶಾಲೆಗಳು ತೆರೆದಾಗ ದಲಿತ ಸಹಾಯಕಿ ಅಂಗನವಾಡಿಗೆ ಪ್ರವೇಶಿಸದಂತೆ ಗ್ರಾಮದ ಮರಾಠರು ಹಾಗೂ ಇತರ ಸವರ್ಣೀಯರು ತಡೆದರು ಎಂಬ ಆರೋಪಗಳಿವೆ. ಮಿಲನಾ ಬಾಯಿ ಅವರ ಜಾತಿ ಕಾರಣಕ್ಕಾಗಿ ಸ್ಥಳೀಯ ಗ್ರಾಮಸ್ಥರು ತಮ್ಮದೇ ಮರಾಠ ಜಾತಿಯ ಸ್ವಯಂ ಸೇವಕಿಯನ್ನು ಅಂಗನವಾಡಿಯಲ್ಲಿ ಅಡುಗೆ ಮಾಡಲು ನೇಮಿಸಿಕೊಂಡರು. 10 ಕಿ.ಮೀ. ದೂರದಲ್ಲಿರುವ ಪಕ್ಕದ ಸಿರ್ಗಾಪುರ ಗ್ರಾಮಕ್ಕೆ ವರ್ಗಾವಣೆಯಾಗುವಂತೆ ಮಿಲನಾ ಬಾಯಿಯವರಿಗೆ ಮನವಿ ಮಾಡಿದ್ದರು ಎಂಬ ದೂರುಗಳು ಬಂದವು.

ಮಿಲನಾ ಬಾಯಿ ಅವರ ಪತಿ ಜೈಪಾಲ್ ರಾಣೆಯವರು ಇತ್ತೀಚೆಗೆ ಪ್ರತಿಕ್ರಿಯೆ ನೀಡಿ, “ನಮ್ಮ ಗ್ರಾಮದಲ್ಲಿ ಮೂರು ಅಂಗನವಾಡಿಗಳಿವೆ. ನನ್ನ ಹೆಂಡತಿಯನ್ನು ಮೆರಿಟ್ (ಸಾಮಾನ್ಯ ವರ್ಗ) ಆಧಾರದ ಮೇಲೆ ಶಾಲೆಯೊಂದರಲ್ಲಿ ಸಹಾಯಕಿಯಾಗಿ ನೇಮಿಸಲಾಗಿದೆ. ಈ ಅಂಗನವಾಡಿ ಭಾಗದಲ್ಲಿ ಸವರ್ಣೀಯರು ಹೆಚ್ಚಿದ್ದಾರೆ. ಸವರ್ಣೀಯರು ನನ್ನ ಹೆಂಡತಿಗೆ ಅಂಗನವಾಡಿಯಲ್ಲಿ ಕೆಲಸ ಮಾಡಲು, ಅಡುಗೆ ಮಾಡಲು ಅವಕಾಶ ನೀಡಲಿಲ್ಲ” ಎಂದು ದೂರಿದ್ದರು.

ಕೋವಿಡ್ ಸಂದರ್ಭದಲ್ಲಿಯೂ ಸವರ್ಣೀಯರು ದಲಿತ ಕಾರ್ಯಕರ್ತೆಯನ್ನು ಅವಮಾನಿಸಿದ್ದಾರೆ ಎಂದು ಮಿಲನಾ ಬಾಯಿ ಅವರ ಕುಟುಂಬದ ಆಪ್ತ ಮೂಲಗಳು ಆರೋಪಿಸಿವೆ. ಲಾಕ್‌ಡೌನ್ ಸಮಯದಲ್ಲಿ ದಿನಸಿ ವಿತರಣೆ ಕಾರ್ಯದಲ್ಲಿ ಮಿಲನಾ ಬಾಯಿ ಕಾರ್ಯಪ್ರವೃತ್ತರಾಗಿದ್ದರು.

“ನನ್ನ ಪತ್ನಿ ನೇಮಕವಾದಾಗಿನಿಂದ ನಿಯಮಿತವಾಗಿ 5000 ರೂ. ವೇತನ ಪಡೆಯುತ್ತಿದ್ದಾರೆ. ಆದರೆ, ಅವರು ಅಂಗನವಾಡಿಯಲ್ಲಿ ಕೆಲಸ ಮಾಡುವುದಕ್ಕೆ ತೀವ್ರ ವಿರೋಧವಿದೆ. ಎರಡು ವಾರಗಳಿಂದ ಸವರ್ಣೀಯ ಹಿಂದೂ ಸಮುದಾಯದ ಇನ್ನೊಬ್ಬ ಸಹಾಯಕಿ ಅಂಗನವಾಡಿಯಲ್ಲಿ ಅಡುಗೆ ಮಾಡುತ್ತಿದ್ದಾರೆ” ಎಂದು ಜೈಪಾಲ್ ಹೇಳಿರುವುದಾಗಿ ‘ದಿ ಕ್ವಿಂಟ್‌’ ವರದಿ ಮಾಡಿದೆ.

ಅಂಗನವಾಡಿಯಲ್ಲಿ ಮಿಲನಾ ಬಾಯಿ ಇರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಮರಾಠಾ ವ್ಯಕ್ತಿ ಸಿದ್ದರಾಮ ಮುಳೆ, “ಸಹಾಯಕಿ ಹುದ್ದೆಯಿಂದ ನಿವೃತ್ತರಾದವರು ಸಾಮಾನ್ಯ ವರ್ಗದವರು. ಈಗ ಆ ಹುದ್ದೆಯನ್ನು ಎಸ್‌ಸಿ ಸಮುದಾಯದ ವ್ಯಕ್ತಿಗೆ ನೀಡಲಾಗಿದೆ. ಇದು ಸರಿಯಲ್ಲ, ನಾವು ಇದಕ್ಕೆ ಅವಕಾಶ ನೀಡುವುದಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

“ಮಿಲನಾ ಬಾಯಿಯವರನ್ನು ಬದಲಿಸಿ, ನಾವು ಯಾರನ್ನೂ ನೇಮಿಸಿಲ್ಲ. ಸಿಡಿಪಿಒ (ಮಕ್ಕಳ ಅಭಿವೃದ್ಧಿ ರಕ್ಷಣಾ ಅಧಿಕಾರಿ) ಸಹಾಯಕರ ಕೊರತೆಯಿದೆ ಎಂದು ಹೇಳಿದಾಗ, ನಾವು ನಮ್ಮ ಸಮುದಾಯದ ಕೆಲವು ಮಹಿಳೆಯರನ್ನು ಕಳುಹಿಸಿದ್ದೇವೆ” ಎಂದು ಸಮರ್ಥಿಸಿಕೊಂಡಿದ್ದಾರೆ ಸಿದ್ದರಾಮ ಮುಳೆ.

ಹತ್ಯಾಳ್‌ನಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ, “ಗ್ರಾಮಸ್ಥರಿಗೆ ಸಹಾಯಕಿಯ ಜಾತಿಯಿಂದ ಯಾವುದೇ ಸಮಸ್ಯೆ ಇಲ್ಲ. ಆದರೆ ಸಾಮಾನ್ಯ ವರ್ಗದ ಜನರಿಗೆ ಪ್ರಾತಿನಿಧ್ಯ ಬೇಕು ಎನ್ನುತ್ತಿದ್ದಾರೆ” ಎಂದಿದ್ದಾರೆ.

ಅದೇ ಇಲಾಖೆಯ ಅಧಿಕಾರಿಯೊಬ್ಬರು ಹೆಸರು ಹೇಳಲಿಚ್ಛಿಸದೆ ಪ್ರತಿಕ್ರಿಯಿಸಿದ್ದು, “ದಲಿತ ಮಹಿಳೆ ಅಡುಗೆ ಮಾಡುವುದನ್ನು ಗ್ರಾಮದ ಸವರ್ಣೀಯರು ಒಪ್ಪಲಿಲ್ಲ. ತಮ್ಮ ಜಾತಿಯ ಸಹಾಯಕಿಯನ್ನು ಬಯಸಿದ್ದರು. ಒಂದು ವರ್ಷದಿಂದ ದಲಿತ ಮಹಿಳೆ ಅಂಗನವಾಡಿ ಸಹಾಯಕಿಯಾಗಿದ್ದಾರೆ” ಎಂದು ತಿಳಿಸಿದ್ದಾರೆ.

“ಪಕ್ಕದ ಗ್ರಾಮ ಸಿರ್ಗಾಪುರಕ್ಕೆ ಸ್ವಯಂಪ್ರೇರಿತವಾಗಿ ವರ್ಗಾವಣೆ ಮಾಡಿಕೊಳ್ಳುವಂತೆ ಸಿಡಿಪಿಒ ಕಚೇರಿಯಿಂದ  ತಿಳಿಸಲಾಗುತ್ತಿದೆ” ಎಂದು ಮಿಲನಾ ಬಾಯಿ ಮತ್ತು ಅವರ ಕುಟುಂಬದವರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ಸಿಡಿಪಿಒ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಪದೇ ಪದೇ ದೂರು ನೀಡಿದ ನಂತರ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಮಿಲನಾ ಬಾಯಿ ಅಂಗನವಾಡಿಯಲ್ಲಿ ಕೆಲಸ ಮುಂದುವರಿಸಬಹುದು ಎಂದು ಭರವಸೆ ನೀಡಿದ್ದಾರೆ. ಆದರೆ, ಕೆಲವು ಮೇಲ್ಜಾತಿಯವರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಹತ್ಯಾಲ್‌ನ ದಲಿತ ರಾಪರ್ ಸಂಗೀತಗಾರ ಹರೀಶ್ ಕಾಂಬಳೆ ಪ್ರತಿಕ್ರಿಯಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಹರೀಶ್‌ ಕಾಂಬಳೆ, “ಇದು ಜಾತಿ ಆಧಾರಿತ ಸಮಸ್ಯೆಯೇ ಹೊರತು, ಪ್ರಾತಿನಿಧ್ಯಕ್ಕೆ ಸಂಬಂಧಿಸಿಲ್ಲ. ತಮ್ಮ ಸಮುದಾಯದ ಪ್ರಾತಿನಿಧ್ಯ ಬೇಕಾದರೆ ಶಾಸನ ರೂಪಿಸಲು ಒತ್ತಾಯಿಸಲಿ. ನಮ್ಮದೇನೂ ತಕರಾರಿಲ್ಲ. ಆದರೆ ಇಲ್ಲಿ ಅಸ್ಪೃಶ್ಯತೆ ಆಚರಣೆಯಾಗಿದೆ. ದಲಿತ ಸಹಾಯಕಿಗೆ ಅಸಹಕಾರ ತೋರಲಾಗಿದೆ” ಎಂದರು.

ಮಿಲನಾ ಬಾಯಿ ಅವರ ಪತಿ ಜೈಪಾಲ್ ರಾಣೆ ‘ನಾನುಗೌರಿ.ಕಾಂ’ ಪ್ರತಿಕ್ರಿಯಿಸಿ, “ಅಧಿಕಾರಿಗಳು ಭೇಟಿ ನೀಡಿದ್ದರು. ದಲಿತ ಮಹಿಳೆಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ಸೂಚನೆ ನೀಡಿದ್ದಾರೆ. ಸುಮಾರು ಆರು ತಿಂಗಳಿಂದ ಅಸಹಕಾರ ತೋರಿದ್ದರು” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...