Homeಕರ್ನಾಟಕಬಸವ ಕಲ್ಯಾಣ: ಅಂಗನವಾಡಿಯ ದಲಿತ ಸಹಾಯಕಿಗೆ ಸವರ್ಣೀಯರ ಅಸಹಕಾರ

ಬಸವ ಕಲ್ಯಾಣ: ಅಂಗನವಾಡಿಯ ದಲಿತ ಸಹಾಯಕಿಗೆ ಸವರ್ಣೀಯರ ಅಸಹಕಾರ

- Advertisement -
- Advertisement -

ಅಂಗನವಾಡಿ ಸಹಾಯಕಿ ದಲಿತರಾದ ಕಾರಣಕ್ಕೆ ಸವರ್ಣೀಯರು ಅಸಹಕಾರ ತೋರಿರುವ ಘಟನೆ ಬೀದರ್‌ನ ಬಸವಕಲ್ಯಾಣದ ಹತ್ಯಾಳ್‌ ಗ್ರಾಮದಲ್ಲಿ ನಡೆದಿದೆ.

30 ವರ್ಷದ ದಲಿತ ಮಹಿಳೆ ಮಿಲನಾ ಬಾಯಿ ಅವರನ್ನು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿತು. 10 ಜೂನ್ 2021ರಂದು ನೇಮಕಾತಿ ದೃಢೀಕರಣ ದೊರೆಕಿತು. ಅಂಗನವಾಡಿ ಆವರಣದ ನಿರ್ವಹಣೆ ಹಾಗೂ ಅಡುಗೆ ಮಾಡುವ ನಿರೀಕ್ಷೆಯಲ್ಲಿದ್ದ ಮಿಲನಾ ಅವರಿಗೆ ಆಘಾತ ಕಾದಿತ್ತು.

ಮಿಲನಾ ಅವರಿಗೆ ನೇಮಕಾತಿ ದೊರೆತ ಸಮಯದಲ್ಲಿ ಕೋವಿಡ್‌ ಸಮಸ್ಯೆ ಬಿಗಡಾಯಿಸಿದ್ದರಿಂದ ಶಾಲೆಗಳು ಮುಚ್ಚಿದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೂನ್ 4, 2022ರಂದು ಮತ್ತೆ ಶಾಲೆಗಳು ತೆರೆದಾಗ ದಲಿತ ಸಹಾಯಕಿ ಅಂಗನವಾಡಿಗೆ ಪ್ರವೇಶಿಸದಂತೆ ಗ್ರಾಮದ ಮರಾಠರು ಹಾಗೂ ಇತರ ಸವರ್ಣೀಯರು ತಡೆದರು ಎಂಬ ಆರೋಪಗಳಿವೆ. ಮಿಲನಾ ಬಾಯಿ ಅವರ ಜಾತಿ ಕಾರಣಕ್ಕಾಗಿ ಸ್ಥಳೀಯ ಗ್ರಾಮಸ್ಥರು ತಮ್ಮದೇ ಮರಾಠ ಜಾತಿಯ ಸ್ವಯಂ ಸೇವಕಿಯನ್ನು ಅಂಗನವಾಡಿಯಲ್ಲಿ ಅಡುಗೆ ಮಾಡಲು ನೇಮಿಸಿಕೊಂಡರು. 10 ಕಿ.ಮೀ. ದೂರದಲ್ಲಿರುವ ಪಕ್ಕದ ಸಿರ್ಗಾಪುರ ಗ್ರಾಮಕ್ಕೆ ವರ್ಗಾವಣೆಯಾಗುವಂತೆ ಮಿಲನಾ ಬಾಯಿಯವರಿಗೆ ಮನವಿ ಮಾಡಿದ್ದರು ಎಂಬ ದೂರುಗಳು ಬಂದವು.

ಮಿಲನಾ ಬಾಯಿ ಅವರ ಪತಿ ಜೈಪಾಲ್ ರಾಣೆಯವರು ಇತ್ತೀಚೆಗೆ ಪ್ರತಿಕ್ರಿಯೆ ನೀಡಿ, “ನಮ್ಮ ಗ್ರಾಮದಲ್ಲಿ ಮೂರು ಅಂಗನವಾಡಿಗಳಿವೆ. ನನ್ನ ಹೆಂಡತಿಯನ್ನು ಮೆರಿಟ್ (ಸಾಮಾನ್ಯ ವರ್ಗ) ಆಧಾರದ ಮೇಲೆ ಶಾಲೆಯೊಂದರಲ್ಲಿ ಸಹಾಯಕಿಯಾಗಿ ನೇಮಿಸಲಾಗಿದೆ. ಈ ಅಂಗನವಾಡಿ ಭಾಗದಲ್ಲಿ ಸವರ್ಣೀಯರು ಹೆಚ್ಚಿದ್ದಾರೆ. ಸವರ್ಣೀಯರು ನನ್ನ ಹೆಂಡತಿಗೆ ಅಂಗನವಾಡಿಯಲ್ಲಿ ಕೆಲಸ ಮಾಡಲು, ಅಡುಗೆ ಮಾಡಲು ಅವಕಾಶ ನೀಡಲಿಲ್ಲ” ಎಂದು ದೂರಿದ್ದರು.

ಕೋವಿಡ್ ಸಂದರ್ಭದಲ್ಲಿಯೂ ಸವರ್ಣೀಯರು ದಲಿತ ಕಾರ್ಯಕರ್ತೆಯನ್ನು ಅವಮಾನಿಸಿದ್ದಾರೆ ಎಂದು ಮಿಲನಾ ಬಾಯಿ ಅವರ ಕುಟುಂಬದ ಆಪ್ತ ಮೂಲಗಳು ಆರೋಪಿಸಿವೆ. ಲಾಕ್‌ಡೌನ್ ಸಮಯದಲ್ಲಿ ದಿನಸಿ ವಿತರಣೆ ಕಾರ್ಯದಲ್ಲಿ ಮಿಲನಾ ಬಾಯಿ ಕಾರ್ಯಪ್ರವೃತ್ತರಾಗಿದ್ದರು.

“ನನ್ನ ಪತ್ನಿ ನೇಮಕವಾದಾಗಿನಿಂದ ನಿಯಮಿತವಾಗಿ 5000 ರೂ. ವೇತನ ಪಡೆಯುತ್ತಿದ್ದಾರೆ. ಆದರೆ, ಅವರು ಅಂಗನವಾಡಿಯಲ್ಲಿ ಕೆಲಸ ಮಾಡುವುದಕ್ಕೆ ತೀವ್ರ ವಿರೋಧವಿದೆ. ಎರಡು ವಾರಗಳಿಂದ ಸವರ್ಣೀಯ ಹಿಂದೂ ಸಮುದಾಯದ ಇನ್ನೊಬ್ಬ ಸಹಾಯಕಿ ಅಂಗನವಾಡಿಯಲ್ಲಿ ಅಡುಗೆ ಮಾಡುತ್ತಿದ್ದಾರೆ” ಎಂದು ಜೈಪಾಲ್ ಹೇಳಿರುವುದಾಗಿ ‘ದಿ ಕ್ವಿಂಟ್‌’ ವರದಿ ಮಾಡಿದೆ.

ಅಂಗನವಾಡಿಯಲ್ಲಿ ಮಿಲನಾ ಬಾಯಿ ಇರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಮರಾಠಾ ವ್ಯಕ್ತಿ ಸಿದ್ದರಾಮ ಮುಳೆ, “ಸಹಾಯಕಿ ಹುದ್ದೆಯಿಂದ ನಿವೃತ್ತರಾದವರು ಸಾಮಾನ್ಯ ವರ್ಗದವರು. ಈಗ ಆ ಹುದ್ದೆಯನ್ನು ಎಸ್‌ಸಿ ಸಮುದಾಯದ ವ್ಯಕ್ತಿಗೆ ನೀಡಲಾಗಿದೆ. ಇದು ಸರಿಯಲ್ಲ, ನಾವು ಇದಕ್ಕೆ ಅವಕಾಶ ನೀಡುವುದಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

“ಮಿಲನಾ ಬಾಯಿಯವರನ್ನು ಬದಲಿಸಿ, ನಾವು ಯಾರನ್ನೂ ನೇಮಿಸಿಲ್ಲ. ಸಿಡಿಪಿಒ (ಮಕ್ಕಳ ಅಭಿವೃದ್ಧಿ ರಕ್ಷಣಾ ಅಧಿಕಾರಿ) ಸಹಾಯಕರ ಕೊರತೆಯಿದೆ ಎಂದು ಹೇಳಿದಾಗ, ನಾವು ನಮ್ಮ ಸಮುದಾಯದ ಕೆಲವು ಮಹಿಳೆಯರನ್ನು ಕಳುಹಿಸಿದ್ದೇವೆ” ಎಂದು ಸಮರ್ಥಿಸಿಕೊಂಡಿದ್ದಾರೆ ಸಿದ್ದರಾಮ ಮುಳೆ.

ಹತ್ಯಾಳ್‌ನಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ, “ಗ್ರಾಮಸ್ಥರಿಗೆ ಸಹಾಯಕಿಯ ಜಾತಿಯಿಂದ ಯಾವುದೇ ಸಮಸ್ಯೆ ಇಲ್ಲ. ಆದರೆ ಸಾಮಾನ್ಯ ವರ್ಗದ ಜನರಿಗೆ ಪ್ರಾತಿನಿಧ್ಯ ಬೇಕು ಎನ್ನುತ್ತಿದ್ದಾರೆ” ಎಂದಿದ್ದಾರೆ.

ಅದೇ ಇಲಾಖೆಯ ಅಧಿಕಾರಿಯೊಬ್ಬರು ಹೆಸರು ಹೇಳಲಿಚ್ಛಿಸದೆ ಪ್ರತಿಕ್ರಿಯಿಸಿದ್ದು, “ದಲಿತ ಮಹಿಳೆ ಅಡುಗೆ ಮಾಡುವುದನ್ನು ಗ್ರಾಮದ ಸವರ್ಣೀಯರು ಒಪ್ಪಲಿಲ್ಲ. ತಮ್ಮ ಜಾತಿಯ ಸಹಾಯಕಿಯನ್ನು ಬಯಸಿದ್ದರು. ಒಂದು ವರ್ಷದಿಂದ ದಲಿತ ಮಹಿಳೆ ಅಂಗನವಾಡಿ ಸಹಾಯಕಿಯಾಗಿದ್ದಾರೆ” ಎಂದು ತಿಳಿಸಿದ್ದಾರೆ.

“ಪಕ್ಕದ ಗ್ರಾಮ ಸಿರ್ಗಾಪುರಕ್ಕೆ ಸ್ವಯಂಪ್ರೇರಿತವಾಗಿ ವರ್ಗಾವಣೆ ಮಾಡಿಕೊಳ್ಳುವಂತೆ ಸಿಡಿಪಿಒ ಕಚೇರಿಯಿಂದ  ತಿಳಿಸಲಾಗುತ್ತಿದೆ” ಎಂದು ಮಿಲನಾ ಬಾಯಿ ಮತ್ತು ಅವರ ಕುಟುಂಬದವರು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ಸಿಡಿಪಿಒ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಪದೇ ಪದೇ ದೂರು ನೀಡಿದ ನಂತರ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಮಿಲನಾ ಬಾಯಿ ಅಂಗನವಾಡಿಯಲ್ಲಿ ಕೆಲಸ ಮುಂದುವರಿಸಬಹುದು ಎಂದು ಭರವಸೆ ನೀಡಿದ್ದಾರೆ. ಆದರೆ, ಕೆಲವು ಮೇಲ್ಜಾತಿಯವರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಹತ್ಯಾಲ್‌ನ ದಲಿತ ರಾಪರ್ ಸಂಗೀತಗಾರ ಹರೀಶ್ ಕಾಂಬಳೆ ಪ್ರತಿಕ್ರಿಯಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಹರೀಶ್‌ ಕಾಂಬಳೆ, “ಇದು ಜಾತಿ ಆಧಾರಿತ ಸಮಸ್ಯೆಯೇ ಹೊರತು, ಪ್ರಾತಿನಿಧ್ಯಕ್ಕೆ ಸಂಬಂಧಿಸಿಲ್ಲ. ತಮ್ಮ ಸಮುದಾಯದ ಪ್ರಾತಿನಿಧ್ಯ ಬೇಕಾದರೆ ಶಾಸನ ರೂಪಿಸಲು ಒತ್ತಾಯಿಸಲಿ. ನಮ್ಮದೇನೂ ತಕರಾರಿಲ್ಲ. ಆದರೆ ಇಲ್ಲಿ ಅಸ್ಪೃಶ್ಯತೆ ಆಚರಣೆಯಾಗಿದೆ. ದಲಿತ ಸಹಾಯಕಿಗೆ ಅಸಹಕಾರ ತೋರಲಾಗಿದೆ” ಎಂದರು.

ಮಿಲನಾ ಬಾಯಿ ಅವರ ಪತಿ ಜೈಪಾಲ್ ರಾಣೆ ‘ನಾನುಗೌರಿ.ಕಾಂ’ ಪ್ರತಿಕ್ರಿಯಿಸಿ, “ಅಧಿಕಾರಿಗಳು ಭೇಟಿ ನೀಡಿದ್ದರು. ದಲಿತ ಮಹಿಳೆಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ಸೂಚನೆ ನೀಡಿದ್ದಾರೆ. ಸುಮಾರು ಆರು ತಿಂಗಳಿಂದ ಅಸಹಕಾರ ತೋರಿದ್ದರು” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...