Homeಕರ್ನಾಟಕಬಸವಕಲ್ಯಾಣ: ಅಪ್ರಾಪ್ತ ಬಾಲಕಿಯ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ; ಆರೋಪಿ ಬಂಧನ

ಬಸವಕಲ್ಯಾಣ: ಅಪ್ರಾಪ್ತ ಬಾಲಕಿಯ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ; ಆರೋಪಿ ಬಂಧನ

- Advertisement -
- Advertisement -

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವಂಥ ದುಷ್ಕೃತ್ಯ ಬೆಳಕಿಗೆ ಬಂದಿದೆ. ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು ಸೋಮವಾರ ಆರೋಪಿಯನ್ನು ಬಂಧಿಸಿದ್ದಾರೆ.

ಕೊರೋನಾ ಲಾಕ್ ಡೌನ್ ವೇಳೆ ಶಾಲೆಗೆ ರಜೆ ಘೋಷಿಸಿದ ನಂತರ ಮನೆಯಲ್ಲಿ ಯಾರು ಇಲ್ಲದಾಗ ಬಲವಂತವಾಗಿ ಅತ್ಯಾಚಾರ ನಡೆಸಿ ಯಾರಿಗೂ ವಿಷಯ ಹೇಳದಂತೆ ಬಾಲಕಿಗೆ ಆರೋಪಿ ತಂದೆ ಬೆದರಿಕೆಯೊಡ್ಡಿದ್ದ ಎನ್ನಲಾಗಿದೆ.

ರಾತ್ರಿ ಸಮಯದಲ್ಲಿ ಎಲ್ಲರೂ ಮಲಗಿದ್ದಾಗ ಆರೋಪಿ ಮಗಳ ಬಾಯಿ ಮುಚ್ಚಿ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದನು. ಬಾಲಕಿ ಈ ವಿಷಯವನ್ನು ತನ್ನ ತಾಯಿಗೆ ತಿಳಿಸಿದ್ದು ಕೇಳಲು ಬಂದ ಪತ್ನಿಯನ್ನೇ ಥಳಿಸಿ ಗಲಾಟೆ ಮಾಡುತ್ತಿದ್ದನಂತೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಡೆಸಿದ ಆಪ್ತ ಸಮಾಲೋಚನೆಯಲ್ಲಿ ಬಾಲಕಿ ಸಂಗತಿಯನ್ನು ತೆರೆದಿಟ್ಟಿದ್ದಾಳೆ. ಪ್ರಕರಣ ಬೆಳಕಿಗೆ ಬಂದಿದ್ದು, ದೂರಿನ ಮೇರೆಗೆ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ತಿಳಿಸಿದ್ದಾರೆ.

ಭೋಪಾಲ್: ದೇವಾಲಯದ ಆವರಣದಲ್ಲಿಯೇ ಸಾಮೂಹಿಕ ಅತ್ಯಾಚಾರ

ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು , ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಭಿಕ್ಷೆ ಬೇಡುತ್ತಿದ್ದ ಬಾಲಕಿ ಮೇಲೆ ದೇವಾಲಯದ ಆಡಳಿತ ಸಿಬ್ಬಂದಿಯೇ ದೇವಾಲಯದ ಆವರಣದಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಘಟನೆ ಇತ್ತೀಚೆಗೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿತ್ತು.

ಮೈಹಾರ್​ ದೇವಾಲಯದ ಆಡಳಿತ ಸಮಿತಿಯ ಇಬ್ಬರು ನೌಕರರು ಬಾಲಕಿಗೆ ಆಮಿಷವೊಡ್ಡಿ ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ದು ಅತ್ಯಾಚಾರ ನಡೆಸಿದ್ದರು. ಗುರುವಾರ ಅತ್ಯಾಚಾರ ನಡೆದಿದ್ದು, ಮರುದಿನ ಬೆಳಕಿಗೆ ಬಂದಿದೆ. ತೀವ್ರ ರಕ್ತಸ್ರಾವದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಾಲಕಿಯನ್ನು ರೇವಾದಲ್ಲಿರುವ ಸಂಜಯ್​ ಗಾಂಧಿ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆರೋಪಿಗಳನ್ನು ರವಿ ಚೌಧರಿ ಹಾಗೂ ಅತುಲ್​ ಬಧೋಲಿಯಾ ಎಂದು ಗುರುತಿಸಲಾಗಿದ್ದು, ಇಬ್ಬರನ್ನೂ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಂತರದ ಬೆಳವಣಿಗೆಯಾಗಿ ಜಿಲ್ಲಾಡಳಿತ ಹಾಗೂ ಪೊಲೀಸ್​ ಇಲಾಖೆ ಸಿಬ್ಬಂದಿ ಸೇರಿ ಅತ್ಯಾಚಾರ ಆರೋಪಿಗಳಿಬ್ಬರ ಮನೆಗಳನ್ನು ಬುಲ್ಡೋಜರ್​ನಿಂದ ಕೆಡವಿದ್ದರು.

ಮಂಗಳೂರು: 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ

8ನೇ ತರಗತಿಯಲ್ಲಿ ಓದುತ್ತಿರುವ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದು, ಬಾಲಕಿ ಗರ್ಭಿಣಿಯಾಗಿರುವ ಘಟನೆ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದಿತ್ತು.

ಬಾಲಕಿ ಶಾಲೆಗೆ ಹೋಗುತ್ತಿದ್ದಾಗ ದಾರಿಯಲ್ಲಿ ಸಿಕ್ಕಿ ಮಾತನಾಡುತ್ತಿದ್ದಾತ ಮನೆಯಲ್ಲಿ ಯಾರೂ ಇಲ್ಲದೆ ವೇಳೆ ಬಂದು, ಬಾಲಕಿಯ ಬಾಯಿಗೆ ಕೈ ಹಿಡಿದು, ಪಕ್ಕದ ಕೋಣೆಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದನು. ಅದಷ್ಟೇ ಅಲ್ಲದೆ ಬೇರೆ ಸಮಯದಲ್ಲೂ ಬಾಲಕಿ ಒಬ್ಬಳೇ ಇದ್ದಾಗ ಬಂದು ಅತ್ಯಾಚಾರ ನಡೆಸಿದ್ದನು. ಇದರಿಂದ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಬಾಲಕಿ ತನ್ನ ತಾಯಿ ಜೊತೆ ಬಂದು ಮಂಗಳೂರು ಮಹಿಳಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ಇದನ್ನೂ ಓದಿ: ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಸಂತ್ರಸ್ತರಿಂದ ಸುಪ್ರೀಂಗೆ ಅರ್ಜಿ ಸಲ್ಲಿಕೆ; ಇಂದು ವಿಚಾರಣೆ ಆರಂಭ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...