Homeಮುಖಪುಟಬಸವಕಲ್ಯಾಣ: ಬಿಜೆಪಿ ಅಭ್ಯರ್ಥಿ ಶರಣು ಸಲಗರರ ಗೆಲವಿಗೆ ಕಾರಣಗಳು

ಬಸವಕಲ್ಯಾಣ: ಬಿಜೆಪಿ ಅಭ್ಯರ್ಥಿ ಶರಣು ಸಲಗರರ ಗೆಲವಿಗೆ ಕಾರಣಗಳು

- Advertisement -
- Advertisement -

ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಕಾಂಗ್ರೆಸ್‌ನ ಮಾಲಾ ನಾರಾಯಣ್‌ರಾವ್‌ ಅವರ ವಿರುದ್ಧ ಸುಮಾರು 20,448 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಕಾಂಗ್ರೆಸ್ ಶಾಸಕ ನಾರಾಯಣರಾವ್‌ರವರ ನಿಧನದಿಂದ ತೆರವಾಗಿದ್ದ ಈ ಕ್ಷೇತ್ರದಲ್ಲಿ ಅನುಕಂಪದ ಅಲೆ ಕಾಂಗ್ರೆಸ್‌ಗೆ ದಕ್ಕಿಲ್ಲದಿರುವುದು ಸ್ಪಷ್ಟವಾಗಿದೆ.

ಬಿಜೆಪಿಯ ಶರಣು ಸಲಗರರವರು 70,556 ಮತಗಳನ್ನು ಪಡೆದರೆ, ಕಾಂಗ್ರೆಸ್‌ನ ಮಾಲಾ ನಾರಾಯಣ್‌ರಾವ್ 50,108 ಮತಗಳನ್ನಷ್ಟೆ ಪಡೆಯಲು ಸಫಲರಾಗಿದ್ದಾರೆ. ಇನ್ನು ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ಸೈಯದ್ ಅಲಿ 11,390 ಮತಗಳನ್ನು ಪಡೆದರೆ, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿದ್ದ ಮಲ್ಲಿಕಾರ್ಜುನ ಖೂಬಾ 9 ಸಾವಿರದಷ್ಟು ಮತಗಳನ್ನು ಪಡೆದರೆ, ಅಬ್ದುಲ್ ಚೌಧರಿ ಎನ್ನುವ ಪಕ್ಷೇತರ ಅಭ್ಯರ್ಥಿ ಸುಮಾರು 2,200 ಓಟು ಪಡೆದಿದ್ದಾರೆ.

ಮರಾಠಿಗರ ಬೆಂಬಲ

ಲಿಂಗಾಯತರು, ಮುಸ್ಲಿಮರ ನಂತರ ಮತದಾರರ ಸಂಖ್ಯೆಯಲ್ಲಿ ಮೂರನೇ ಸ್ಥಾನದಲ್ಲಿರುವ ಮರಾಠಿ ಭಾಷಿಕರು ಇಲ್ಲಿ ನಿರ್ಣಾಯಕ. ಕಳೆದ ಮೂರು ದಶಕಗಳಲ್ಲಿ ಹಿಂದೂತ್ವದ ಕಡೆ ಹೊರಳಿದ ಇವರೆಲ್ಲ ಕಳೆದ ಸಲ ಸರಳ ನಡೆಯ ಕಾಂಗ್ರೆಸ್‌ನ ನಾರಾಯಣರಾವ್‌ ಪರ ಇದ್ದರು ಎನ್ನಲಾಗಿದೆ.

ಈ ಸಲ ಇಲ್ಲಿ ಮರಾಠಾ ಸಮುದಾಯ ಸಭೆ ನಡೆಸಿ ಎನ್‌ಸಿಪಿಯಿಂದ ಅಭ್ಯರ್ಥಿಯನ್ನು ಹಾಕಿತು. ಆದರೆ ಈ ಅಭ್ಯರ್ಥಿ ಕೊನೆ ಕ್ಷಣದಲ್ಲಿ ಬಿಜೆಪಿ ಪರ ಬೆಂಬಲ ಘೋಷಿಸಿ ಕಣದಿಂದ ಹಿಂದೆ ಸರಿದರು! ಇದೆಲ್ಲವೂ ಬಿಜೆಪಿಗೆ ವರದಾನವಾಗಿದೆ.

ನಿಗಮಗಳು, ಅನುಭವ ಮಂಟಪವೂ….

ಈ ಕ್ಷೇತ್ರದಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂಬ ವದಂತಿ ಇತ್ತು. ಅದಕ್ಕೆ ತಕ್ಕಂತೆಯೇ ಅವರು ಚುನಾವಣೆ ಘೋಷಣೆಗೆ ಮೊದಲು ಇಲ್ಲಿ ಹಲವಾರು ಆಂತರಿಕ ಬಿಜೆಪಿ ಸಭೆಗಳನ್ನು ನಡೆಸಿದ್ದರು. ಅವರ ಗೆಲುವಿಗೆಂದೇ ನೂರಾರು ಕೋಟಿಗಳ ಅನುಭವ ಮಂಟಪ ಘೋಷಿಸಿ, ಭೂಮಿಪೂಜೆಯನ್ನು ಮಾಡಲಾಗಿತು. ಬೆಳಗಾವಿ ಮತ್ತು ಬಸವ ಕಲ್ಯಾಣ ಚುನಾವಣೆಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಮರಾಠಾ ಅಭಿವೃದ್ಧಿ ನಿಗಮ ಮತ್ತು ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಲಾಯಿತು. ಕೊನಗೆ ಅಭ್ಯರ್ಥಿ ಬದಲಾದರೂ ಗೆಲುವು ಮಾತ್ರ ಬಿಜೆಪಿಯದಾಯಿತು.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮಸ್ಕಿ: ನೀರಾವರಿ ಹೋರಾಟದ ಕಾಲುವೆಯಲ್ಲಿ ಕೊಚ್ಚಿ ಹೋದ ಬಿಜೆಪಿಯ ಹಣದ ಹೊಳೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...