Homeಕರ್ನಾಟಕಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ- ಜಮೀರ್‌ ಅಹ್ಮದ್ ಖಾನ್

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣಾ ಕಾವು ರಂಗೇರುತ್ತಿದೆ. ಇದೆ ಜೊತೆಗೆ ಬಸವಕಲ್ಯಾಣ ಉಪಚುನಾವಣೆಯ ಮುಸ್ಲಿಂ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಡುವಿನ ಟ್ವಿಟ್ಟರ್‌ ಸಮರ ತಾರಕಕ್ಕೆ ಏರಿದೆ.

ಬಸವಕಲ್ಯಾಣದಲ್ಲಿ ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ ಹಾಕಲು ಎಚ್.ಡಿ ಕುಮಾರಸ್ವಾಮಿಯವರು ಬಿಜೆಪಿಯಿಂದ 10 ಕೋಟಿ ಹಣ ಪಡೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆರೋಪಿಸಿದ್ದರು. ಇದಕ್ಕೆ ಬುಧವಾರ ಟ್ವಿಟರ್‌ನಲ್ಲಿ ಕುಮಾರಸ್ವಾಮಿ, ಜಮೀರ್ ಅಹ್ಮದ್‌ ಖಾನ್‌ಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದರು.

ಕುಮಾರಸ್ವಾಮಿ ಅವರ ಪ್ರಶ್ನೆಗಳಿಗೆ ಉತ್ತರ ನೀಡಿರುವ ಜಮೀರ್‌ ಅಹ್ಮದ್ ಖಾನ್, “ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?” ಎನ್ನುವ ಮೂಲಕ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಹಾಕಲು 10 ಕೋಟಿ ಹಣ ಆರೋಪ: ಜಮೀರ್ ಅಹ್ಮದ್‌ಗೆ ಪ್ರಶ್ನೆಗಳ ಸುರಿಮಳೆಗೈದ ಕುಮಾರಸ್ವಾಮಿ

“2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಎಚ್.ಡಿ.ಕುಮಾರಸ್ವಾಮಿ, ಅಡ್ಜಸ್ಟ್‌ಮೆಂಟ್ ರಾಜಕೀಯದ ಮೂಲಕ ಇವತ್ತು ತುಂಬಿದ ಕೊಡವಾಗಿದ್ದಾರೆ. ಹಾಗಾಗಿ ದುಡ್ಡಿನ ವಿಚಾರ ಮಾತಾಡ್ತಾರೆ. ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?” ಎಂದು ಪ್ರಶ್ನಿಸಿದ್ದಾರೆ.

2005ರಲ್ಲಿ SM ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್‌ ಬಿಜೆಪಿಯಿಂದ ದುಡ್ಡು ತಂದಿತ್ತೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು ಇದಕ್ಕೆ ಉತ್ತರಿಸಿಉವ ಜಮೀರ್‌ ಅಹ್ಮದ್ ಖಾನ್, “ಚಾಮರಾಜಪೇಟೆ ಉಪಚುನಾವಣೆಯಲ್ಲಿ ಟಿಕೆಟ್ ನೀಡಿ, ಗಲ್ಲಿಗಲ್ಲಿ ಸುತ್ತಿ ಪ್ರಚಾರ ಮಾಡಿ ನನ್ನನ್ನು ಗೆಲ್ಲಿಸಿದ್ದವರು ದೇವೇಗೌಡರು ಮತ್ತು ಸಿದ್ದರಾಮಯ್ಯನವರು. ಆಗ ಕುಮಾರಸ್ವಾಮಿ ಅಂದರೆ ಯಾರು ಅಂತಲೇ ಜನಕ್ಕೆ ಗೊತ್ತಿರಲಿಲ್ಲ. ನನ್ನ ಕ್ಷೇತ್ರದಲ್ಲಿ ಎಷ್ಟು ವಾರ್ಡ್‌ಗಳಿವೆ ಎಂದು ಈಗಲಾದರೂ ನಿಮಗೆ ಗೊತ್ತಾ ಎಚ್.ಡಿ.ಕುಮಾರಸ್ವಾಮಿ ಬ್ರದರ್?” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

“ಜಮೀರ್ ಎಂದೂ ಕೊಟ್ಟ ಹಣಕ್ಕೆ ಲೆಕ್ಕ ಇಟ್ಟವನಲ್ಲ ಆದರೆ ಪಡ್ಕೊಂಡವರು ಮರೆಯಬಾರದಲ್ವಾ ಬ್ರದರ್ ! 2004ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದ ಜೆಡಿ(ಎಸ್) ಅಭ್ಯರ್ಥಿ ಯಾರಿಂದ ಎಷ್ಟು ಪಡ್ಕೊಂಡಿದ್ದರು ಎನ್ನುವುದನ್ನು ಒಳ್ಳೆಯ ಮೂಡಿನಲ್ಲಿದ್ದಾಗ ನೆನಪು ಮಾಡಿಕೊಳ್ಳಿ ಬ್ರದರ್” ಎಂದು ಕುಮಾರಸ್ವಾಮಿ ಅವರನ್ನು ಕಿಚಾಯಿಸಿದ್ದಾರೆ.

ಜೊತೆಗೆ “ನನ್ನನ್ನು ಗೆಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಿರುವ ಜಾತ್ಯತೀತ ನಾಯಕರೇ, ಜಮೀರ್ ಅಹ್ಮದ್ ಜೆಡಿ(ಎಸ್) ಪಕ್ಷದಿಂದ ಹೊರ ಬಂದ ಮೇಲೆ ಎಷ್ಟು ಮುಸ್ಲಿಂ ನಾಯಕರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿ ಗೆಲ್ಲಿಸಿದ್ದೀರಿ? ಇಷ್ಟು ಹೇಳಿಬಿಡಿ ಸಾಕು” ಎಂದು ಸವಾಲು ಹಾಕಿದ್ದಾರೆ.

ತಮಗೆ ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಬ್ರದರ್? ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯದಲ್ಲಿ ಉಪಚುನಾವಣಾ ಕಣ ಪ್ರಚಾರದಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರು ಬ್ಯುಸಿಯಾಗಿದ್ದರೇ, ಇತ್ತ ಕುಮಾರಸ್ವಾಮಿ ಮತ್ತು ಶಾಸಕ ಜಮೀರ್‌ ಅಹ್ಮದ್ ಖಾನ್ ಹಣದ ವಿಷಯ ಮತ್ತು ಮುಸ್ಲಿಂ ಅಬ್ಯರ್ಥಿ ವಿಚಾರವಾಗಿ ಟ್ವಿಟರ್‌ ಸಮರ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...