Homeಕರ್ನಾಟಕಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ- ಜಮೀರ್‌ ಅಹ್ಮದ್ ಖಾನ್

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣಾ ಕಾವು ರಂಗೇರುತ್ತಿದೆ. ಇದೆ ಜೊತೆಗೆ ಬಸವಕಲ್ಯಾಣ ಉಪಚುನಾವಣೆಯ ಮುಸ್ಲಿಂ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಡುವಿನ ಟ್ವಿಟ್ಟರ್‌ ಸಮರ ತಾರಕಕ್ಕೆ ಏರಿದೆ.

ಬಸವಕಲ್ಯಾಣದಲ್ಲಿ ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ ಹಾಕಲು ಎಚ್.ಡಿ ಕುಮಾರಸ್ವಾಮಿಯವರು ಬಿಜೆಪಿಯಿಂದ 10 ಕೋಟಿ ಹಣ ಪಡೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆರೋಪಿಸಿದ್ದರು. ಇದಕ್ಕೆ ಬುಧವಾರ ಟ್ವಿಟರ್‌ನಲ್ಲಿ ಕುಮಾರಸ್ವಾಮಿ, ಜಮೀರ್ ಅಹ್ಮದ್‌ ಖಾನ್‌ಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದರು.

ಕುಮಾರಸ್ವಾಮಿ ಅವರ ಪ್ರಶ್ನೆಗಳಿಗೆ ಉತ್ತರ ನೀಡಿರುವ ಜಮೀರ್‌ ಅಹ್ಮದ್ ಖಾನ್, “ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?” ಎನ್ನುವ ಮೂಲಕ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಹಾಕಲು 10 ಕೋಟಿ ಹಣ ಆರೋಪ: ಜಮೀರ್ ಅಹ್ಮದ್‌ಗೆ ಪ್ರಶ್ನೆಗಳ ಸುರಿಮಳೆಗೈದ ಕುಮಾರಸ್ವಾಮಿ

“2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಎಚ್.ಡಿ.ಕುಮಾರಸ್ವಾಮಿ, ಅಡ್ಜಸ್ಟ್‌ಮೆಂಟ್ ರಾಜಕೀಯದ ಮೂಲಕ ಇವತ್ತು ತುಂಬಿದ ಕೊಡವಾಗಿದ್ದಾರೆ. ಹಾಗಾಗಿ ದುಡ್ಡಿನ ವಿಚಾರ ಮಾತಾಡ್ತಾರೆ. ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?” ಎಂದು ಪ್ರಶ್ನಿಸಿದ್ದಾರೆ.

2005ರಲ್ಲಿ SM ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್‌ ಬಿಜೆಪಿಯಿಂದ ದುಡ್ಡು ತಂದಿತ್ತೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು ಇದಕ್ಕೆ ಉತ್ತರಿಸಿಉವ ಜಮೀರ್‌ ಅಹ್ಮದ್ ಖಾನ್, “ಚಾಮರಾಜಪೇಟೆ ಉಪಚುನಾವಣೆಯಲ್ಲಿ ಟಿಕೆಟ್ ನೀಡಿ, ಗಲ್ಲಿಗಲ್ಲಿ ಸುತ್ತಿ ಪ್ರಚಾರ ಮಾಡಿ ನನ್ನನ್ನು ಗೆಲ್ಲಿಸಿದ್ದವರು ದೇವೇಗೌಡರು ಮತ್ತು ಸಿದ್ದರಾಮಯ್ಯನವರು. ಆಗ ಕುಮಾರಸ್ವಾಮಿ ಅಂದರೆ ಯಾರು ಅಂತಲೇ ಜನಕ್ಕೆ ಗೊತ್ತಿರಲಿಲ್ಲ. ನನ್ನ ಕ್ಷೇತ್ರದಲ್ಲಿ ಎಷ್ಟು ವಾರ್ಡ್‌ಗಳಿವೆ ಎಂದು ಈಗಲಾದರೂ ನಿಮಗೆ ಗೊತ್ತಾ ಎಚ್.ಡಿ.ಕುಮಾರಸ್ವಾಮಿ ಬ್ರದರ್?” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

“ಜಮೀರ್ ಎಂದೂ ಕೊಟ್ಟ ಹಣಕ್ಕೆ ಲೆಕ್ಕ ಇಟ್ಟವನಲ್ಲ ಆದರೆ ಪಡ್ಕೊಂಡವರು ಮರೆಯಬಾರದಲ್ವಾ ಬ್ರದರ್ ! 2004ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದ ಜೆಡಿ(ಎಸ್) ಅಭ್ಯರ್ಥಿ ಯಾರಿಂದ ಎಷ್ಟು ಪಡ್ಕೊಂಡಿದ್ದರು ಎನ್ನುವುದನ್ನು ಒಳ್ಳೆಯ ಮೂಡಿನಲ್ಲಿದ್ದಾಗ ನೆನಪು ಮಾಡಿಕೊಳ್ಳಿ ಬ್ರದರ್” ಎಂದು ಕುಮಾರಸ್ವಾಮಿ ಅವರನ್ನು ಕಿಚಾಯಿಸಿದ್ದಾರೆ.

ಜೊತೆಗೆ “ನನ್ನನ್ನು ಗೆಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಿರುವ ಜಾತ್ಯತೀತ ನಾಯಕರೇ, ಜಮೀರ್ ಅಹ್ಮದ್ ಜೆಡಿ(ಎಸ್) ಪಕ್ಷದಿಂದ ಹೊರ ಬಂದ ಮೇಲೆ ಎಷ್ಟು ಮುಸ್ಲಿಂ ನಾಯಕರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿ ಗೆಲ್ಲಿಸಿದ್ದೀರಿ? ಇಷ್ಟು ಹೇಳಿಬಿಡಿ ಸಾಕು” ಎಂದು ಸವಾಲು ಹಾಕಿದ್ದಾರೆ.

ತಮಗೆ ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಬ್ರದರ್? ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯದಲ್ಲಿ ಉಪಚುನಾವಣಾ ಕಣ ಪ್ರಚಾರದಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರು ಬ್ಯುಸಿಯಾಗಿದ್ದರೇ, ಇತ್ತ ಕುಮಾರಸ್ವಾಮಿ ಮತ್ತು ಶಾಸಕ ಜಮೀರ್‌ ಅಹ್ಮದ್ ಖಾನ್ ಹಣದ ವಿಷಯ ಮತ್ತು ಮುಸ್ಲಿಂ ಅಬ್ಯರ್ಥಿ ವಿಚಾರವಾಗಿ ಟ್ವಿಟರ್‌ ಸಮರ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...