Homeಕರ್ನಾಟಕಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ- ಜಮೀರ್‌ ಅಹ್ಮದ್ ಖಾನ್

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣಾ ಕಾವು ರಂಗೇರುತ್ತಿದೆ. ಇದೆ ಜೊತೆಗೆ ಬಸವಕಲ್ಯಾಣ ಉಪಚುನಾವಣೆಯ ಮುಸ್ಲಿಂ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಡುವಿನ ಟ್ವಿಟ್ಟರ್‌ ಸಮರ ತಾರಕಕ್ಕೆ ಏರಿದೆ.

ಬಸವಕಲ್ಯಾಣದಲ್ಲಿ ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ ಹಾಕಲು ಎಚ್.ಡಿ ಕುಮಾರಸ್ವಾಮಿಯವರು ಬಿಜೆಪಿಯಿಂದ 10 ಕೋಟಿ ಹಣ ಪಡೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆರೋಪಿಸಿದ್ದರು. ಇದಕ್ಕೆ ಬುಧವಾರ ಟ್ವಿಟರ್‌ನಲ್ಲಿ ಕುಮಾರಸ್ವಾಮಿ, ಜಮೀರ್ ಅಹ್ಮದ್‌ ಖಾನ್‌ಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದರು.

ಕುಮಾರಸ್ವಾಮಿ ಅವರ ಪ್ರಶ್ನೆಗಳಿಗೆ ಉತ್ತರ ನೀಡಿರುವ ಜಮೀರ್‌ ಅಹ್ಮದ್ ಖಾನ್, “ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?” ಎನ್ನುವ ಮೂಲಕ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಹಾಕಲು 10 ಕೋಟಿ ಹಣ ಆರೋಪ: ಜಮೀರ್ ಅಹ್ಮದ್‌ಗೆ ಪ್ರಶ್ನೆಗಳ ಸುರಿಮಳೆಗೈದ ಕುಮಾರಸ್ವಾಮಿ

“2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಎಚ್.ಡಿ.ಕುಮಾರಸ್ವಾಮಿ, ಅಡ್ಜಸ್ಟ್‌ಮೆಂಟ್ ರಾಜಕೀಯದ ಮೂಲಕ ಇವತ್ತು ತುಂಬಿದ ಕೊಡವಾಗಿದ್ದಾರೆ. ಹಾಗಾಗಿ ದುಡ್ಡಿನ ವಿಚಾರ ಮಾತಾಡ್ತಾರೆ. ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?” ಎಂದು ಪ್ರಶ್ನಿಸಿದ್ದಾರೆ.

2005ರಲ್ಲಿ SM ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್‌ ಬಿಜೆಪಿಯಿಂದ ದುಡ್ಡು ತಂದಿತ್ತೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು ಇದಕ್ಕೆ ಉತ್ತರಿಸಿಉವ ಜಮೀರ್‌ ಅಹ್ಮದ್ ಖಾನ್, “ಚಾಮರಾಜಪೇಟೆ ಉಪಚುನಾವಣೆಯಲ್ಲಿ ಟಿಕೆಟ್ ನೀಡಿ, ಗಲ್ಲಿಗಲ್ಲಿ ಸುತ್ತಿ ಪ್ರಚಾರ ಮಾಡಿ ನನ್ನನ್ನು ಗೆಲ್ಲಿಸಿದ್ದವರು ದೇವೇಗೌಡರು ಮತ್ತು ಸಿದ್ದರಾಮಯ್ಯನವರು. ಆಗ ಕುಮಾರಸ್ವಾಮಿ ಅಂದರೆ ಯಾರು ಅಂತಲೇ ಜನಕ್ಕೆ ಗೊತ್ತಿರಲಿಲ್ಲ. ನನ್ನ ಕ್ಷೇತ್ರದಲ್ಲಿ ಎಷ್ಟು ವಾರ್ಡ್‌ಗಳಿವೆ ಎಂದು ಈಗಲಾದರೂ ನಿಮಗೆ ಗೊತ್ತಾ ಎಚ್.ಡಿ.ಕುಮಾರಸ್ವಾಮಿ ಬ್ರದರ್?” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

“ಜಮೀರ್ ಎಂದೂ ಕೊಟ್ಟ ಹಣಕ್ಕೆ ಲೆಕ್ಕ ಇಟ್ಟವನಲ್ಲ ಆದರೆ ಪಡ್ಕೊಂಡವರು ಮರೆಯಬಾರದಲ್ವಾ ಬ್ರದರ್ ! 2004ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದ ಜೆಡಿ(ಎಸ್) ಅಭ್ಯರ್ಥಿ ಯಾರಿಂದ ಎಷ್ಟು ಪಡ್ಕೊಂಡಿದ್ದರು ಎನ್ನುವುದನ್ನು ಒಳ್ಳೆಯ ಮೂಡಿನಲ್ಲಿದ್ದಾಗ ನೆನಪು ಮಾಡಿಕೊಳ್ಳಿ ಬ್ರದರ್” ಎಂದು ಕುಮಾರಸ್ವಾಮಿ ಅವರನ್ನು ಕಿಚಾಯಿಸಿದ್ದಾರೆ.

ಜೊತೆಗೆ “ನನ್ನನ್ನು ಗೆಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಿರುವ ಜಾತ್ಯತೀತ ನಾಯಕರೇ, ಜಮೀರ್ ಅಹ್ಮದ್ ಜೆಡಿ(ಎಸ್) ಪಕ್ಷದಿಂದ ಹೊರ ಬಂದ ಮೇಲೆ ಎಷ್ಟು ಮುಸ್ಲಿಂ ನಾಯಕರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿ ಗೆಲ್ಲಿಸಿದ್ದೀರಿ? ಇಷ್ಟು ಹೇಳಿಬಿಡಿ ಸಾಕು” ಎಂದು ಸವಾಲು ಹಾಕಿದ್ದಾರೆ.

ತಮಗೆ ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಬ್ರದರ್? ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯದಲ್ಲಿ ಉಪಚುನಾವಣಾ ಕಣ ಪ್ರಚಾರದಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರು ಬ್ಯುಸಿಯಾಗಿದ್ದರೇ, ಇತ್ತ ಕುಮಾರಸ್ವಾಮಿ ಮತ್ತು ಶಾಸಕ ಜಮೀರ್‌ ಅಹ್ಮದ್ ಖಾನ್ ಹಣದ ವಿಷಯ ಮತ್ತು ಮುಸ್ಲಿಂ ಅಬ್ಯರ್ಥಿ ವಿಚಾರವಾಗಿ ಟ್ವಿಟರ್‌ ಸಮರ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...