Homeಕರ್ನಾಟಕಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ- ಜಮೀರ್‌ ಅಹ್ಮದ್ ಖಾನ್

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣಾ ಕಾವು ರಂಗೇರುತ್ತಿದೆ. ಇದೆ ಜೊತೆಗೆ ಬಸವಕಲ್ಯಾಣ ಉಪಚುನಾವಣೆಯ ಮುಸ್ಲಿಂ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಡುವಿನ ಟ್ವಿಟ್ಟರ್‌ ಸಮರ ತಾರಕಕ್ಕೆ ಏರಿದೆ.

ಬಸವಕಲ್ಯಾಣದಲ್ಲಿ ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ ಹಾಕಲು ಎಚ್.ಡಿ ಕುಮಾರಸ್ವಾಮಿಯವರು ಬಿಜೆಪಿಯಿಂದ 10 ಕೋಟಿ ಹಣ ಪಡೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆರೋಪಿಸಿದ್ದರು. ಇದಕ್ಕೆ ಬುಧವಾರ ಟ್ವಿಟರ್‌ನಲ್ಲಿ ಕುಮಾರಸ್ವಾಮಿ, ಜಮೀರ್ ಅಹ್ಮದ್‌ ಖಾನ್‌ಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದರು.

ಕುಮಾರಸ್ವಾಮಿ ಅವರ ಪ್ರಶ್ನೆಗಳಿಗೆ ಉತ್ತರ ನೀಡಿರುವ ಜಮೀರ್‌ ಅಹ್ಮದ್ ಖಾನ್, “ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?” ಎನ್ನುವ ಮೂಲಕ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಹಾಕಲು 10 ಕೋಟಿ ಹಣ ಆರೋಪ: ಜಮೀರ್ ಅಹ್ಮದ್‌ಗೆ ಪ್ರಶ್ನೆಗಳ ಸುರಿಮಳೆಗೈದ ಕುಮಾರಸ್ವಾಮಿ

“2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಎಚ್.ಡಿ.ಕುಮಾರಸ್ವಾಮಿ, ಅಡ್ಜಸ್ಟ್‌ಮೆಂಟ್ ರಾಜಕೀಯದ ಮೂಲಕ ಇವತ್ತು ತುಂಬಿದ ಕೊಡವಾಗಿದ್ದಾರೆ. ಹಾಗಾಗಿ ದುಡ್ಡಿನ ವಿಚಾರ ಮಾತಾಡ್ತಾರೆ. ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?” ಎಂದು ಪ್ರಶ್ನಿಸಿದ್ದಾರೆ.

2005ರಲ್ಲಿ SM ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್‌ ಬಿಜೆಪಿಯಿಂದ ದುಡ್ಡು ತಂದಿತ್ತೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು ಇದಕ್ಕೆ ಉತ್ತರಿಸಿಉವ ಜಮೀರ್‌ ಅಹ್ಮದ್ ಖಾನ್, “ಚಾಮರಾಜಪೇಟೆ ಉಪಚುನಾವಣೆಯಲ್ಲಿ ಟಿಕೆಟ್ ನೀಡಿ, ಗಲ್ಲಿಗಲ್ಲಿ ಸುತ್ತಿ ಪ್ರಚಾರ ಮಾಡಿ ನನ್ನನ್ನು ಗೆಲ್ಲಿಸಿದ್ದವರು ದೇವೇಗೌಡರು ಮತ್ತು ಸಿದ್ದರಾಮಯ್ಯನವರು. ಆಗ ಕುಮಾರಸ್ವಾಮಿ ಅಂದರೆ ಯಾರು ಅಂತಲೇ ಜನಕ್ಕೆ ಗೊತ್ತಿರಲಿಲ್ಲ. ನನ್ನ ಕ್ಷೇತ್ರದಲ್ಲಿ ಎಷ್ಟು ವಾರ್ಡ್‌ಗಳಿವೆ ಎಂದು ಈಗಲಾದರೂ ನಿಮಗೆ ಗೊತ್ತಾ ಎಚ್.ಡಿ.ಕುಮಾರಸ್ವಾಮಿ ಬ್ರದರ್?” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

“ಜಮೀರ್ ಎಂದೂ ಕೊಟ್ಟ ಹಣಕ್ಕೆ ಲೆಕ್ಕ ಇಟ್ಟವನಲ್ಲ ಆದರೆ ಪಡ್ಕೊಂಡವರು ಮರೆಯಬಾರದಲ್ವಾ ಬ್ರದರ್ ! 2004ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದ ಜೆಡಿ(ಎಸ್) ಅಭ್ಯರ್ಥಿ ಯಾರಿಂದ ಎಷ್ಟು ಪಡ್ಕೊಂಡಿದ್ದರು ಎನ್ನುವುದನ್ನು ಒಳ್ಳೆಯ ಮೂಡಿನಲ್ಲಿದ್ದಾಗ ನೆನಪು ಮಾಡಿಕೊಳ್ಳಿ ಬ್ರದರ್” ಎಂದು ಕುಮಾರಸ್ವಾಮಿ ಅವರನ್ನು ಕಿಚಾಯಿಸಿದ್ದಾರೆ.

ಜೊತೆಗೆ “ನನ್ನನ್ನು ಗೆಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಿರುವ ಜಾತ್ಯತೀತ ನಾಯಕರೇ, ಜಮೀರ್ ಅಹ್ಮದ್ ಜೆಡಿ(ಎಸ್) ಪಕ್ಷದಿಂದ ಹೊರ ಬಂದ ಮೇಲೆ ಎಷ್ಟು ಮುಸ್ಲಿಂ ನಾಯಕರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿ ಗೆಲ್ಲಿಸಿದ್ದೀರಿ? ಇಷ್ಟು ಹೇಳಿಬಿಡಿ ಸಾಕು” ಎಂದು ಸವಾಲು ಹಾಕಿದ್ದಾರೆ.

ತಮಗೆ ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಬ್ರದರ್? ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯದಲ್ಲಿ ಉಪಚುನಾವಣಾ ಕಣ ಪ್ರಚಾರದಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರು ಬ್ಯುಸಿಯಾಗಿದ್ದರೇ, ಇತ್ತ ಕುಮಾರಸ್ವಾಮಿ ಮತ್ತು ಶಾಸಕ ಜಮೀರ್‌ ಅಹ್ಮದ್ ಖಾನ್ ಹಣದ ವಿಷಯ ಮತ್ತು ಮುಸ್ಲಿಂ ಅಬ್ಯರ್ಥಿ ವಿಚಾರವಾಗಿ ಟ್ವಿಟರ್‌ ಸಮರ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...