Homeಕರ್ನಾಟಕಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ- ಜಮೀರ್‌ ಅಹ್ಮದ್ ಖಾನ್

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣಾ ಕಾವು ರಂಗೇರುತ್ತಿದೆ. ಇದೆ ಜೊತೆಗೆ ಬಸವಕಲ್ಯಾಣ ಉಪಚುನಾವಣೆಯ ಮುಸ್ಲಿಂ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಡುವಿನ ಟ್ವಿಟ್ಟರ್‌ ಸಮರ ತಾರಕಕ್ಕೆ ಏರಿದೆ.

ಬಸವಕಲ್ಯಾಣದಲ್ಲಿ ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ ಹಾಕಲು ಎಚ್.ಡಿ ಕುಮಾರಸ್ವಾಮಿಯವರು ಬಿಜೆಪಿಯಿಂದ 10 ಕೋಟಿ ಹಣ ಪಡೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆರೋಪಿಸಿದ್ದರು. ಇದಕ್ಕೆ ಬುಧವಾರ ಟ್ವಿಟರ್‌ನಲ್ಲಿ ಕುಮಾರಸ್ವಾಮಿ, ಜಮೀರ್ ಅಹ್ಮದ್‌ ಖಾನ್‌ಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದರು.

ಕುಮಾರಸ್ವಾಮಿ ಅವರ ಪ್ರಶ್ನೆಗಳಿಗೆ ಉತ್ತರ ನೀಡಿರುವ ಜಮೀರ್‌ ಅಹ್ಮದ್ ಖಾನ್, “ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?” ಎನ್ನುವ ಮೂಲಕ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಹಾಕಲು 10 ಕೋಟಿ ಹಣ ಆರೋಪ: ಜಮೀರ್ ಅಹ್ಮದ್‌ಗೆ ಪ್ರಶ್ನೆಗಳ ಸುರಿಮಳೆಗೈದ ಕುಮಾರಸ್ವಾಮಿ

“2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಎಚ್.ಡಿ.ಕುಮಾರಸ್ವಾಮಿ, ಅಡ್ಜಸ್ಟ್‌ಮೆಂಟ್ ರಾಜಕೀಯದ ಮೂಲಕ ಇವತ್ತು ತುಂಬಿದ ಕೊಡವಾಗಿದ್ದಾರೆ. ಹಾಗಾಗಿ ದುಡ್ಡಿನ ವಿಚಾರ ಮಾತಾಡ್ತಾರೆ. ಹಿಂದೆ ಯಾರು ಯಾರಿಗೆ ಎಷ್ಟು ಸಹಾಯ ಮಾಡಿದ್ದಾರೆ? ಎಂದು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನೀವು ಸಿದ್ಧರಿದ್ದೀರಾ ಬ್ರದರ್?” ಎಂದು ಪ್ರಶ್ನಿಸಿದ್ದಾರೆ.

2005ರಲ್ಲಿ SM ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್‌ ಬಿಜೆಪಿಯಿಂದ ದುಡ್ಡು ತಂದಿತ್ತೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು ಇದಕ್ಕೆ ಉತ್ತರಿಸಿಉವ ಜಮೀರ್‌ ಅಹ್ಮದ್ ಖಾನ್, “ಚಾಮರಾಜಪೇಟೆ ಉಪಚುನಾವಣೆಯಲ್ಲಿ ಟಿಕೆಟ್ ನೀಡಿ, ಗಲ್ಲಿಗಲ್ಲಿ ಸುತ್ತಿ ಪ್ರಚಾರ ಮಾಡಿ ನನ್ನನ್ನು ಗೆಲ್ಲಿಸಿದ್ದವರು ದೇವೇಗೌಡರು ಮತ್ತು ಸಿದ್ದರಾಮಯ್ಯನವರು. ಆಗ ಕುಮಾರಸ್ವಾಮಿ ಅಂದರೆ ಯಾರು ಅಂತಲೇ ಜನಕ್ಕೆ ಗೊತ್ತಿರಲಿಲ್ಲ. ನನ್ನ ಕ್ಷೇತ್ರದಲ್ಲಿ ಎಷ್ಟು ವಾರ್ಡ್‌ಗಳಿವೆ ಎಂದು ಈಗಲಾದರೂ ನಿಮಗೆ ಗೊತ್ತಾ ಎಚ್.ಡಿ.ಕುಮಾರಸ್ವಾಮಿ ಬ್ರದರ್?” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

“ಜಮೀರ್ ಎಂದೂ ಕೊಟ್ಟ ಹಣಕ್ಕೆ ಲೆಕ್ಕ ಇಟ್ಟವನಲ್ಲ ಆದರೆ ಪಡ್ಕೊಂಡವರು ಮರೆಯಬಾರದಲ್ವಾ ಬ್ರದರ್ ! 2004ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದ ಜೆಡಿ(ಎಸ್) ಅಭ್ಯರ್ಥಿ ಯಾರಿಂದ ಎಷ್ಟು ಪಡ್ಕೊಂಡಿದ್ದರು ಎನ್ನುವುದನ್ನು ಒಳ್ಳೆಯ ಮೂಡಿನಲ್ಲಿದ್ದಾಗ ನೆನಪು ಮಾಡಿಕೊಳ್ಳಿ ಬ್ರದರ್” ಎಂದು ಕುಮಾರಸ್ವಾಮಿ ಅವರನ್ನು ಕಿಚಾಯಿಸಿದ್ದಾರೆ.

ಜೊತೆಗೆ “ನನ್ನನ್ನು ಗೆಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಿರುವ ಜಾತ್ಯತೀತ ನಾಯಕರೇ, ಜಮೀರ್ ಅಹ್ಮದ್ ಜೆಡಿ(ಎಸ್) ಪಕ್ಷದಿಂದ ಹೊರ ಬಂದ ಮೇಲೆ ಎಷ್ಟು ಮುಸ್ಲಿಂ ನಾಯಕರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿ ಗೆಲ್ಲಿಸಿದ್ದೀರಿ? ಇಷ್ಟು ಹೇಳಿಬಿಡಿ ಸಾಕು” ಎಂದು ಸವಾಲು ಹಾಕಿದ್ದಾರೆ.

ತಮಗೆ ಮುಸ್ಲಿಂ ಸಮುದಾಯದ ಮೇಲೆ ನಿಜವಾಗಿ ಪ್ರೀತಿ ಇದ್ದಿದ್ದರೆ ರಾಮನಗರದಲ್ಲೋ, ಮಂಡ್ಯದಲ್ಲೋ, ಹಾಸನದಲ್ಲೋ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಬ್ರದರ್? ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯದಲ್ಲಿ ಉಪಚುನಾವಣಾ ಕಣ ಪ್ರಚಾರದಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರು ಬ್ಯುಸಿಯಾಗಿದ್ದರೇ, ಇತ್ತ ಕುಮಾರಸ್ವಾಮಿ ಮತ್ತು ಶಾಸಕ ಜಮೀರ್‌ ಅಹ್ಮದ್ ಖಾನ್ ಹಣದ ವಿಷಯ ಮತ್ತು ಮುಸ್ಲಿಂ ಅಬ್ಯರ್ಥಿ ವಿಚಾರವಾಗಿ ಟ್ವಿಟರ್‌ ಸಮರ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...